ಸಾರ್ವಕಾಲಿಕ ಎದುರಾಳಿ XI ಹೆಸರಿಸಿದ ಗೌತಮ್ ಗಂಭೀರ್

Gautam Gambhir: ಭಾರತ ತಂಡದ ಕೋಚ್ ಆಗಿ ಕಾರ್ಯಾರಂಭ ಮಾಡಿರುವ ಗೌತಮ್ ಗಂಭೀರ್ ಮೊದಲ ಸರಣಿಯಲ್ಲೇ ಸೋಲು-ಗೆಲುವಿನ ರುಚಿ ನೋಡಿದ್ದಾರೆ. ಶ್ರೀಲಂಕಾ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಗೆದ್ದರೆ, ಏಕದಿನ ಸರಣಿಯಲ್ಲಿ ಮುಗ್ಗರಿಸಿತ್ತು. ಇದೀಗ ಗೌತಮ್ ಗಂಭೀರ್ ಸಾರಥ್ಯದಲ್ಲಿ ಟೀಮ್ ಇಂಡಿಯಾ ಬಾಂಗ್ಲಾದೇಶ್ ವಿರುದ್ಧ ಟೆಸ್ಟ್ ಸರಣಿ ಆಡಲು ಸಜ್ಜಾಗುತ್ತಿದೆ.

ಸಾರ್ವಕಾಲಿಕ ಎದುರಾಳಿ XI ಹೆಸರಿಸಿದ ಗೌತಮ್ ಗಂಭೀರ್
Gautam Gambhir

Updated on: Aug 21, 2024 | 12:20 PM

ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಆಲ್​ ಟೈಮ್ ಎದುರಾಳಿ ಇಲೆವೆನ್ ಅನ್ನು ಹೆಸರಿಸಿದ್ದಾರೆ. ಗಂಭೀರ್ ಅವರ ಈ ತಂಡದಲ್ಲಿ ಪಾಕಿಸ್ತಾನ್ ಮತ್ತು ಆಸ್ಟ್ರೇಲಿಯಾದ ಮೂವರು ಆಟಗಾರರು ಸ್ಥಾನ ಪಡೆದಿರುವುದು ವಿಶೇಷ. ಇನ್ನು ಈ ತಂಡದ ಆರಂಭಿಕರಾಗಿ ಆಸ್ಟ್ರೇಲಿಯಾದ ಸಾರ್ವಕಾಲಿಕ ಬೆಸ್ಟ್ ಒಪನರ್​​ಗಳಾದ ಮ್ಯಾಥ್ಯೂ ಹೇಡನ್ ಹಾಗೂ ಆ್ಯಡಂ ಗಿಲ್​ಕ್ರಿಸ್ಟ್ ಅವರನ್ನು ಹೆಸರಿಸಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಮಿಸ್ಟರ್ 360 ಡಿಗ್ರಿ ಖ್ಯಾತಿಯ ಎಬಿ ಡಿವಿಲಿಯರ್ಸ್ ಕಾಣಿಸಿಕೊಂಡಿದ್ದಾರೆ.

ನಾಲ್ಕನೇ ಕ್ರಮಾಂಕದಲ್ಲಿ ವೆಸ್ಟ್ ಇಂಡೀಸ್​ನ ಮಾಜಿ ನಾಯಕ ಬ್ರಿಯಾನ್ ಲಾರಾ ಅವರನ್ನು ಆಯ್ಕೆ ಮಾಡಿದರೆ, ಐದನೇ ಸ್ಥಾನದಲ್ಲಿ ಆಸೀಸ್ ಆಲ್​ರೌಂಡರ್ ಆ್ಯಂಡ್ರ್ಯೂ ಸೈಮಂಡ್ಸ್ ಅವರನ್ನು ಹೆಸರಿಸಿದ್ದಾರೆ. ಆರನೇ ಕ್ರಮಾಂಕದಲ್ಲಿ ಪಾಕ್ ತಂಡದ ಮಾಜಿ ಆಟಗಾರ ಇಂಝಮಾಮ್ ಉಲ್ ಹಕ್ ಅವರನ್ನು ಆಯ್ಕೆ ಮಾಡಿದ್ದಾರೆ.

ಇದನ್ನೂ ಓದಿ: IPL 2025: ಧೋನಿ RCB ತಂಡದ ನಾಯಕರಾಗಿದ್ದರೆ 3 ಟ್ರೋಫಿ ಗೆದ್ದಿರುತ್ತಿತ್ತು..!

ಆಲ್​ರೌಂಡರ್ ಆಗಿ ಪಾಕಿಸ್ತಾನದ ಮಾಜಿ ಆಟಗಾರ ಅಬ್ದುಲ್ ರಝಾಕ್ ಅವರನ್ನು ಗಂಭೀರ್ ಆರಿಸಿದ್ದಾರೆ. ಅಲ್ಲದೆ ಸ್ಪಿನ್ನರ್​ ಆಗಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್​ಗೆ ಸ್ಥಾನ ನೀಡಿದ್ದಾರೆ. ಹಾಗೆಯೇ ವೇಗಿಯಾಗಿ ರಾವಲ್ಪಿಂಡಿ ಎಕ್ಸ್​ಪ್ರೆಸ್ ಖ್ಯಾತಿಯ ಶೊಯೇಬ್ ಅಖ್ತರ್ ಅವರನ್ನು ಆಯ್ಕೆ ಮಾಡಿದ್ದಾರೆ. ಇವರ ಜೊತೆಗೆ ಸೌತ್ ಆಫ್ರಿಕಾ ವೇಗಿ ಮೊರ್ನೆ ಮಾರ್ಕೆಲ್ ಹಾಗೂ ಇಂಗ್ಲೆಂಡ್​ನ ಮಾಜಿ ಆಲ್​ರೌಂಡರ್ ಆ್ಯಂಡ್ರೂ ಫಿಟ್ಲಾಂಫ್ ಅವರನ್ನು ಆಯ್ಕೆ ಮಾಡಿದ್ದಾರೆ. ಅದರಂತೆ ಗಂಭೀರ್ ಎದುರಿಸಿದ ಸಾರ್ವಕಾಲಿಕ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

  1. ಆ್ಯಡಮ್ ಗಿಲ್​ಕ್ರಿಸ್ಟ್ (ಆಸ್ಟ್ರೇಲಿಯಾ)
  2. ಮ್ಯಾಥ್ಯೂ ಹೇಡನ್ (ಆಸ್ಟ್ರೇಲಿಯಾ)
  3. ಎಬಿ ಡಿವಿಲಿಯರ್ಸ್ (ಸೌತ್ ಆಫ್ರಿಕಾ)
  4. ಬ್ರಿಯಾನ್ ಲಾರಾ (ವೆಸ್ಟ್ ಇಂಡೀಸ್)
  5. ಆಂಡ್ರ್ಯೂ ಸೈಮಂಡ್ಸ್ (ಆಸ್ಟ್ರೇಲಿಯಾ)
  6. ಇಂಝಮಾಮ್ ಉಲ್ ಹಕ್ (ಪಾಕಿಸ್ತಾನ್)
  7. ಅಬ್ದುಲ್ ರಝಾಕ್ (ಪಾಕಿಸ್ತಾನ್)
  8. ಮುತ್ತಯ್ಯ ಮುರಳೀಧರನ್ (ಶ್ರೀಲಂಕಾ)
  9. ಶೊಯೇಬ್ ಅಖ್ತರ್ (ಪಾಕಿಸ್ತಾನ್)
  10. ಮೊರ್ನೆ ಮೊರ್ಕೆಲ್ (ಸೌತ್ ಆಫ್ರಿಕಾ)
  11. ಆ್ಯಂಡ್ರ್ಯೂ ಫಿಟ್ಲಾಂಪ್ (ಇಂಗ್ಲೆಂಡ್)

ಟೀಮ್ ಇಂಡಿಯಾಗೆ ವಿಶ್ರಾಂತಿ:

ಶ್ರೀಲಂಕಾ ವಿರುದ್ಧದ ಸರಣಿಯ ಬಳಿಕ ಟೀಮ್ ಇಂಡಿಯಾ ಆಟಗಾರರಿಗೆ ದೀರ್ಘಾವಧಿಯ ವಿಶ್ರಾಂತಿ ಸಿಕ್ಕಿದೆ. ಈ ವಿಶ್ರಾಂತಿಯ ಬಳಿಕ ಭಾರತೀಯ ಆಟಗಾರರು ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶ್ ವಿರುದ್ಧ ಟೆಸ್ಟ್ ಸರಣಿ ಆಡಲಿದೆ. ಇದು ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಅವರ ಮೊದಲ ಟೆಸ್ಟ್ ಸರಣಿ ಎಂಬುದು ವಿಶೇಷ.

 

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us