AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್, ಜಡೇಜಾ, ಶ್ರೇಯಸ್ ಔಟ್! ಟಿ20 ವಿಶ್ವಕಪ್ ತಂಡದಲ್ಲಿ ಕನ್ನಡಿಗನಿಗೆ ಅವಕಾಶ ಕೊಡದ ಗೌತಮ್ ಗಂಭೀರ್

T20 World Cup: ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ 2022 ರ ಟಿ 20 ವಿಶ್ವಕಪ್‌ಗೆ ತಮ್ಮ ಟಾಪ್ 7 ಆಟಗಾರರನ್ನು ಆಯ್ಕೆ ಮಾಡಿದ್ದಾರೆ. ಆದರೆ ಈ ತಂಡದಲ್ಲಿ ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್‌, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್​ಗೆ ಅವಕಾಶ ನೀಡಲಿಲ್ಲ.

ರಾಹುಲ್, ಜಡೇಜಾ, ಶ್ರೇಯಸ್ ಔಟ್! ಟಿ20 ವಿಶ್ವಕಪ್ ತಂಡದಲ್ಲಿ ಕನ್ನಡಿಗನಿಗೆ ಅವಕಾಶ ಕೊಡದ ಗೌತಮ್ ಗಂಭೀರ್
ರಾಹುಲ್, ಕಿಶನ್
Follow us
TV9 Web
| Updated By: ಪೃಥ್ವಿಶಂಕರ

Updated on: Jun 13, 2022 | 6:27 PM

ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ಟಿ20 ವಿಶ್ವಕಪ್‌ (T20 World Cup)ಗೆ ತಮ್ಮ ಟಾಪ್ 7 ಆಟಗಾರರನ್ನು ಘೋಷಿಸಿದ್ದಾರೆ. ಆದರೆ ಈಗ ಗಂಭೀರ್ ಪ್ರಕಟಿಸಿರುವ ತಂಡ ನೋಡಿ ಎಲ್ಲಾ ಅಭಿಮಾನಿಗಳು ಆಶ್ಚರ್ಯಚಕಿತರಾಗಿದ್ದಾರೆ. ವಾಸ್ತವವಾಗಿ, ಗೌತಮ್ ಗಂಭೀರ್ ತಂಡದಲ್ಲಿ ಕೆಎಲ್ ರಾಹುಲ್, ರವೀಂದ್ರ ಜಡೇಜಾ (KL Rahul , Ravindra Jadeja) ಅವರಂತಹ ಟಾಪ್ ಆಟಗಾರರ ಹೆಸರುಗಳಿಲ್ಲ. ಜೊತೆಗೆ, ಗಂಬೀರ್ ತಂಡದಲ್ಲಿ ಇಬ್ಬರೂ ಹೊಸ ಮುಖಗಳಿಗೆ ಅವಕಾಶ ನೀಡಿದ್ದು, ಈ ಆಟಗಾರರು T20 ವಿಶ್ವಕಪ್‌ಗಾಗಿ ಟೀಮ್ ಇಂಡಿಯಾದ ಪ್ಲೇಯಿಂಗ್ XI ನಲ್ಲಿ ಇರುತ್ತಾರೆ ಎಂದು ಬಹುಶಃ ಯಾರು ಕೂಡ ನಂಬುವುದಿಲ್ಲ. ಗೌತಮ್ ಗಂಭೀರ್ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾಮೆಂಟರಿ ಸಮಯದಲ್ಲಿ ಟಿ20 ವಿಶ್ವಕಪ್​ಗಾಗಿ ತಮ್ಮ ಅಗ್ರ 7 ಆಟಗಾರರನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ರೋಹಿತ್ ಶರ್ಮಾ ಜೊತೆಗೆ ಇಶಾನ್ ಕಿಶನ್ ಅವರನ್ನು ಓಪನರ್ ಆಗಿ ಆಯ್ಕೆ ಮಾಡಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಅವರಿಗೆ ಗಂಭೀರ್ ತಂಡದಿಂದ ಕೋಕ್ ಸಿಕ್ಕಿದೆ. ಗೌತಮ್ ಗಂಭೀರ್ ಅವರು ಬಲ ಮತ್ತು ಎಡಗೈ ಬ್ಯಾಟ್ಸ್‌ಮನ್ ಓಪನಿಂಗ್ ನೋಡಲು ಬಯಸುವುದರಿಂದ ಜೊತೆಗೆ ನಾಯಕ ರೋಹಿತ್ ಶರ್ಮಾ ಖಚಿತವಾಗಿ ಆಡುತ್ತಾರೆ ಎಂಬ ಕಾರಣಕ್ಕಾಗಿ ಕೆಎಲ್ ರಾಹುಲ್ ಅವರನ್ನು ಹೊರಗಿಟ್ಟಿದ್ದಾರೆ ಎಂಬುದನ್ನು ಬಹಿರಂಗಗೊಳಿಸಿದ್ದಾರೆ.

ಬಲಗೈ ಬ್ಯಾಟ್ಸ್‌ಮನ್ ಅದ್ಭುತ ಟಿ20 ದಾಖಲೆಯನ್ನು ಹೊಂದಿರುವುದರಿಂದ ಗೌತಮ್ ಗಂಭೀರ್ ಕೆಎಲ್ ರಾಹುಲ್ ಬದಲಿಗೆ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಿರುವುದು ನಿಜಕ್ಕೂ ಆಘಾತಕಾರಿಯಾಗಿದೆ. ಅಲ್ಲದೆ ಸದ್ಯಕ್ಕೆ ಭಾರತ ತಂಡದಲ್ಲಿ ಅವರಂತೆ ದೊಡ್ಡ ಇನ್ನಿಂಗ್ಸ್ ಆಡುವವರು ಯಾರೂ ಇಲ್ಲ. ಜೊತೆಗೆ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಅವರೊಂದಿಗೆ ಓಪನಿಂಗ್ ಮಾಡುವ ಬಗ್ಗೆ ಯೋಚಿಸುವುದಿಲ್ಲ ಎಂದು ಸ್ವತಃ ಇಶಾನ್ ಕಿಶನ್ ಹೇಳಿದ್ದರು.

ಇದನ್ನೂ ಓದಿ:IND vs SA T20 Match Live Streaming: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲ್ಲುತ್ತಾ ಭಾರತ? ಪಂದ್ಯದ ಬಗ್ಗೆ ಮಾಹಿತಿ ಹೀಗಿದೆ

ಇದನ್ನೂ ಓದಿ
Image
ICC ODI Rankings: ಐಸಿಸಿ ಏಕದಿನ ರ‍್ಯಾಂಕಿಂಗ್ ಪ್ರಕಟ: ಭಾರತವನ್ನು ಹಿಂದಿಕ್ಕಿ ಮೇಲಕ್ಕೇರಿದ ಪಾಕಿಸ್ತಾನ..!
Image
IND vs SA T20 Match Live Streaming: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲ್ಲುತ್ತಾ ಭಾರತ? ಪಂದ್ಯದ ಬಗ್ಗೆ ಮಾಹಿತಿ ಹೀಗಿದೆ
Image
SL vs AUS: ಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟ; ಯಾರಿಗೆಲ್ಲ ಅವಕಾಶ?

ಶ್ರೇಯಸ್ ಅಯ್ಯರ್-ಜಡೇಜಾ ಕೂಡ ಗಂಭೀರ್ ಆಡುವ XI ನಲ್ಲಿಲ್ಲ

ಗೌತಮ್ ಗಂಭೀರ್ ಕೂಡ ತಮ್ಮ ಟಾಪ್ 7 ಆಟಗಾರರಲ್ಲಿ ರವೀಂದ್ರ ಜಡೇಜಾ ಮತ್ತು ಶ್ರೇಯಸ್ ಅಯ್ಯರ್‌ಗೆ ಸ್ಥಾನ ನೀಡಿಲ್ಲ. ಮಧ್ಯಮ ಕ್ರಮಾಂಕದಲ್ಲಿ ವೇಗದ ಬ್ಯಾಟಿಂಗ್‌ ಜೊತೆಗೆ ಬೌಲಿಂಗ್‌ ಮಾಡುವ ಅಯ್ಯರ್‌ ಬದಲಿಗೆ ದೀಪಕ್‌ ಹೂಡಾ ಅವರನ್ನು ಕಣಕ್ಕಿಳಿಸಿದ್ದಾರೆ. ಅಲ್ಲದೆ ಗೌತಮ್ ಗಂಭೀರ್ ಅವರ ಆಡುವ XI ನಲ್ಲಿ ರವೀಂದ್ರ ಜಡೇಜಾ ಕೂಡ ಇಲ್ಲ.

T20 ವಿಶ್ವಕಪ್ 2022 ಗಾಗಿ ಗೌತಮ್ ಗಂಭೀರ್ ಅವರ ಟಾಪ್ 7 ಆಟಗಾರರು

ಗೌತಮ್ ಗಂಭೀರ್ 2022 ರ T20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ-ಇಶಾನ್ ಕಿಶನ್ ಆರಂಭಿಕರಾಗಿ ಸೂರ್ಯಕುಮಾರ್ ಯಾದವ್ ಅವರನ್ನು 3 ನೇ ಸ್ಥಾನದಲ್ಲಿ ಇರಿಸಿದ್ದಾರೆ. ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, ದೀಪಕ್ ಹೂಡಾ ಐದನೇ ಸ್ಥಾನದಲ್ಲಿದ್ದಾರೆ. ಗಂಭೀರ್ ಆರನೇ ಸ್ಥಾನಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆ ಮಾಡಿದ್ದಾರೆ. ಜೊತೆಗೆ ರಿಷಬ್ ಪಂತ್ ಅವರನ್ನು 7ನೇ ಸ್ಥಾನದಲ್ಲಿ ಇರಿಸಿದ್ದಾರೆ.

ಆಫ್ರಿಕಾ ವಿರುದ್ಧ ಭಾರತ ತಂಡದ ಹೀನಾಯ ಪ್ರದರ್ಶನ

ಗೌತಮ್ ಗಂಭೀರ್ ಪ್ರಸ್ತುತ ಭಾರತ-ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಕಾಮೆಂಟರಿ ಮಾಡುತ್ತಿದ್ದಾರೆ. ಇದರಲ್ಲಿ ಆತಿಥೇಯ ತಂಡದ ಸ್ಥಿತಿ ಕೆಟ್ಟದಾಗಿದೆ. ದೆಹಲಿಯ ನಂತರ ಟೀಂ ಇಂಡಿಯಾ ಕಟಕ್ ಟಿ20ಯಲ್ಲೂ ಸೋತಿದೆ. ಕಟಕ್‌ನಲ್ಲಿ ಭಾರತ ತಂಡ 4 ವಿಕೆಟ್‌ಗಳಿಂದ ಸೋತಿತ್ತು. ಹೆನ್ರಿಕ್ ಕ್ಲಾಸೆನ್ ಅವರ ಅರ್ಧಶತಕದ ಇನ್ನಿಂಗ್ಸ್ ಅವರಿಗೆ ಭಾರವಾಗಿತ್ತು. ಇದೀಗ ಟೀಂ ಇಂಡಿಯಾ ಸರಣಿಯಲ್ಲಿ 0-2 ಹಿನ್ನಡೆಯಲ್ಲಿದ್ದು, ವಿಶಾಖಪಟ್ಟಣಂನಲ್ಲಿ ನಡೆಯಲಿರುವ ಪಂದ್ಯ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ಏಕೆಂದರೆ ಸೋಲಿನೊಂದಿಗೆ ಸರಣಿಯೂ ಅವರ ಕೈ ತಪ್ಪಲಿದೆ.

ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ