AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮ್ ಗಂಭೀರ್ ಕೋಚ್ ಆಗಿ ಹೆಚ್ಚು ದಿನ ಉಳಿಯಲ್ಲ: ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಅಚ್ಚರಿಯ ಹೇಳಿಕೆ

Gautam Gambhir: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಿಂದ ರಾಹುಲ್ ದ್ರಾವಿಡ್ ಕೆಳಗಿಳಿದಿದ್ದರು. ಅವರ ಕಾರ್ಯಾವಧಿ ಮುಕ್ತಾಯದ ಕಾರಣ ಬಿಸಿಸಿಐ ಹೊಸ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ಆಯ್ಕೆ ಮಾಡಿದ್ದರು. ಇದೀಗ ಗಂಭೀರ್ ಸಾರಥ್ಯದಲ್ಲಿ ಟೀಮ್ ಇಂಡಿಯಾ ಶ್ರೀಲಂಕಾದಲ್ಲಿ ಸರಣಿ ಆಡುತ್ತಿದೆ.

ಗೌತಮ್ ಗಂಭೀರ್ ಕೋಚ್ ಆಗಿ ಹೆಚ್ಚು ದಿನ ಉಳಿಯಲ್ಲ: ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಅಚ್ಚರಿಯ ಹೇಳಿಕೆ
Gautam Gambhir
ಝಾಹಿರ್ ಯೂಸುಫ್
|

Updated on: Aug 04, 2024 | 10:58 AM

Share

ಗೌತಮ್ ಗಂಭೀರ್ ಇದೀಗ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿದ್ದಾರೆ. ಶ್ರೀಲಂಕಾ ಪ್ರವಾಸದೊಂದಿಗೆ ಅವರು ಭಾರತ ತಂಡದ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಭಾರತ ಕ್ಲೀನ್ ಸ್ವೀಪ್ ಮಾಡಿದ್ದರಿಂದ ಗೌತಮ್ ಗಂಭೀರ್ ತಮ್ಮ ಕೋಚ್ ವೃತ್ತಿಜೀವನ ಗೆಲುವಿನೊಂದಿಗೆ ಆರಂಭವಾಗಿದೆ. ಆದರೆ, ಇವೆಲ್ಲದರ ನಡುವೆ ಟೀಮ್ ಇಂಡಿಯಾ ವಿಶ್ವಕಪ್ ಗೆಲುವಿನ ಹೀರೋ ಆಗಿದ್ದ ಮಾಜಿ ಆಟಗಾರನೊಬ್ಬನ ಶಾಕಿಂಗ್ ಹೇಳಿಕೆ ವೈರಲ್ ಆಗುತ್ತಿದೆ. ಅವರ ಪ್ರಕಾರ, ಗೌತಮ್ ಗಂಭೀರ್ ಟೀಮ್ ಇಂಡಿಯಾವನ್ನು ನಿಭಾಯಿಸಬಲ್ಲರು. ಆದರೆ ಇಲ್ಲಿ ಕೋಚ್ ಆಗಿ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿಶ್ವಕಪ್ ಹೀರೋ ಅಚ್ಚರಿಯ ಹೇಳಿಕೆ:

ಗೌತಮ್ ಗಂಭೀರ್ ಅವರ ಕೋಚಿಂಗ್ ವೃತ್ತಿಜೀವನದ ಬಗ್ಗೆ ಭವಿಷ್ಯ ನುಡಿದಿರುವುದು 2007ರ ಟಿ20 ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ. ಅಂದು ಗಂಭೀರ್ ಅವರ ಸಹ ಆಟಗಾರನಾಗಿ ಜೋಗಿಂದರ್ ಇದೀಗ ಅಚ್ಚರಿಕೆಯ ಹೇಳಿಕೆಯೊಂದಿಗೆ ಗಮನ ಸೆಳೆದಿದ್ದಾರೆ.

ಜೋಗಿಂದರ್ ಶರ್ಮಾ ವಿಡಿಯೋ:

ಜೋಗಿಂದರ್ ನೀಡಿದ ಕಾರಣಗಳು:

ಗೌತಮ್ ಗಂಭೀರ್ ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ಜಾಸ್ತಿ ದಿನ ಉಳಿಯಲ್ಲ ಎನ್ನಲು ಜೋಗಿಂದರ್ ಶರ್ಮಾ ಮೂರು ಕಾರಣಗಳನ್ನು ನೀಡಿದ್ದಾರೆ. ಆ ಕಾರಣಗಳೆಂದರೆ…

  • ಗೌತಮ್ ಗಂಭೀರ್ ಅವರ ಕೆಲವು ನಿರ್ಧಾರಗಳು ಬಹುತೇಕರಿಗೆ ಇಷ್ಟವಾಗುವುದಿಲ್ಲ. ಏಕೆಂದರೆ ಅವರದ್ದು ನೇರ ನುಡಿ ಹೊಂದಿರುವ ವ್ಯಕ್ತಿತ್ವ. ನೇರವಾಗಿ ಮಾತನಾಡುವುದರಿಂದ ಸಮಸ್ಯೆಯಾಗಲಿದೆ.
  • ಗೌತಮ್ ಗಂಭೀರ್ ಯಾರ ಬಳಿಯೂ ಹೋಗುವುದಿಲ್ಲ. ಅವರಿಗೆ ಇತರೊಂದಿಗೆ ಬೆರತು ಹೋಗುವ ಅಭ್ಯಾಸವಿಲ್ಲ. ಹೀಗಾಗಿ ಇದು ಕೂಡ ಸಮಸ್ಯೆಯನ್ನು ಸೃಷ್ಟಿಸಲಿದೆ.
  • ಗೌತಮ್ ಗಂಭೀರ್ ತನ್ನ ಕೆಲಸವನ್ನು ನಂಬುತ್ತಾರೆ. ಆದರೆ ಅವರು ಅದರ ಕ್ರೆಡಿಟ್ ಪಡೆಯುವಂತಹ ವ್ಯಕ್ತಿಯಲ್ಲ. ಹೀಗಾಗಿ ಟೀಮ್ ಇಂಡಿಯಾ ಕೋಚ್ ಆಗಿ ಅವರು ಜಾಸ್ತಿ ದಿನ ಉಳಿಯುವುದಿಲ್ಲ ಎಂದು ಜೋಗಿಂದರ್ ಶರ್ಮಾ ಹೇಳಿದ್ದಾರೆ.
Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?