AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಮಧ್ಯದ ಬೆರಳು ತೋರಿಸಿದ ಗೌತಮ್ ಗಂಭೀರ್

Gautam Gambhir vs Virat Kohli: ಐಪಿಎಲ್ 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ಆರ್​ಸಿಬಿ ವಿರುದ್ಧದ ಪಂದ್ಯವನ್ನು ಗೆದ್ದ ಬಳಿಕ ಅಭಿಮಾನಿಗಳಿಗೆ ಬಾಯಿ ಮುಚ್ಕೊಂಡು ಇರಬೇಕೆಂದು ಸೂಚಿಸಿದ್ದರು. ಆ ನಂತರ ಲಕ್ನೋನಲ್ಲಿ ನಡೆದ ಆರ್​ಸಿಬಿ-ಎಲ್​ಎಸ್​ಜಿ ನಡುವಣ ಪಂದ್ಯವು ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವಣ ಮಾತಿನ ಚಕಮಕಿಗೆ ಕಾರಣವಾಗಿತ್ತು.

VIDEO: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಮಧ್ಯದ ಬೆರಳು ತೋರಿಸಿದ ಗೌತಮ್ ಗಂಭೀರ್
Gautam Gambhir
TV9 Web
| Edited By: |

Updated on: Sep 04, 2023 | 9:12 PM

Share

ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ (Gautam Gambhir) ವಿರಾಟ್ ಕೊಹ್ಲಿ ಅಭಿಮಾನಿಗಳತ್ತ ಮಧ್ಯದ ಬೆರಳನ್ನು ತೋರಿಸಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಏಷ್ಯಾ ಕಪ್ 2023 ರಲ್ಲಿ ನಡೆಯುತ್ತಿರುವ ಭಾರತ ಮತ್ತು ನೇಪಾಳ ಪಂದ್ಯದ ವೇಳೆ ಈ ಘಟನೆ ನಡೆದಿದ್ದು, ಇದೀಗ ಈ ಅನುಚಿತ ವರ್ತನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪ್ರಸ್ತುತ ನಡೆಯುತ್ತಿರುವ ಏಷ್ಯಾ ಕಪ್​ನಲ್ಲಿ ಗೌತಮ್ ಗಂಭೀರ್ ಪ್ಯಾನೆಲಿಸ್ಟ್ ಮತ್ತು ಕಾಮೆಂಟೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನೇಪಾಳ ವಿರುದ್ಧದ ಪಂದ್ಯದ ವೇಳೆ ಮೈದಾನದಲ್ಲಿ ಕಾಣಿಸಿಕೊಂಡಿದ್ದ ಗಂಭೀರ್ ಸ್ಟೇಡಿಯಂಗೆ ಹಿಂತಿರುಗುತ್ತಿದ್ದಾಗ ಅಭಿಮಾನಿಗಳು ಕೊಹ್ಲಿ-ಕೊಹ್ಲಿ ಎಂದು ಘೋಷಣೆ ಕೂಗಿದರು.

ಇದರಿಂದ ಕುಪಿತಗೊಂಡ ಗಂಭೀರ್ ಅಭಿಮಾನಿಗಳತ್ತ ಮಧ್ಯದ ಬೆರಳನ್ನು ತೋರಿಸಿ ನಡೆದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಗಂಭೀರ್ ವರ್ತನೆಗೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ.

ಐಪಿಎಲ್ 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ಆರ್​ಸಿಬಿ ವಿರುದ್ಧದ ಪಂದ್ಯವನ್ನು ಗೆದ್ದ ಬಳಿಕ ಅಭಿಮಾನಿಗಳಿಗೆ ಬಾಯಿ ಮುಚ್ಕೊಂಡು ಇರಬೇಕೆಂದು ಸೂಚಿಸಿದ್ದರು. ಆ ನಂತರ ಲಕ್ನೋನಲ್ಲಿ ನಡೆದ ಆರ್​ಸಿಬಿ-ಎಲ್​ಎಸ್​ಜಿ ನಡುವಣ ಪಂದ್ಯವು ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವಣ ಮಾತಿನ ಚಕಮಕಿಗೆ ಕಾರಣವಾಗಿತ್ತು.

ಅಷ್ಟೇ ಅಲ್ಲದೆ ಮೈದಾನದಲ್ಲೇ ಗಂಭೀರ್ ಹಾಗೂ ಕೊಹ್ಲಿ ಜಗಳಕ್ಕಿಳಿದಿದ್ದರು. ಈ ಅಹಿತಕರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಐಪಿಎಲ್ ಆಡಳಿತ ಮಂಡಳಿ ಇಬ್ಬರಿಗೆ ಪಂದ್ಯದ ಶೇ.100 ರಷ್ಟು ದಂಡ ವಿಧಿಸಿದ್ದರು.

ಇದನ್ನೂ ಓದಿ: Virat Kohli: ಕ್ಯಾಚ್ ಹಿಡಿದು ಹಲವು ದಾಖಲೆ ಬರೆದ ವಿರಾಟ್ ಕೊಹ್ಲಿ

ಇದೀಗ ಮತ್ತೊಮ್ಮೆ ವಿರಾಟ್ ಕೊಹ್ಲಿಯ ಹೆಸರು ಕೇಳುತ್ತಿದ್ದಂತೆ ಗಂಭೀರ್ ಕೆಂಡಮಂಡಲರಾಗಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಘನತೆಯನ್ನು ಮರೆತು ವರ್ತಿಸಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ
ಕುಡಿದ ಮತ್ತಲ್ಲಿ ಅಪಘಾತ ಮಾಡಿ ನಟ ಮಯೂರ್ ಪಟೇಲ್ ಹೇಳಿದ್ದೇನು?
ಕುಡಿದ ಮತ್ತಲ್ಲಿ ಅಪಘಾತ ಮಾಡಿ ನಟ ಮಯೂರ್ ಪಟೇಲ್ ಹೇಳಿದ್ದೇನು?