VIDEO: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಮಧ್ಯದ ಬೆರಳು ತೋರಿಸಿದ ಗೌತಮ್ ಗಂಭೀರ್

Gautam Gambhir vs Virat Kohli: ಐಪಿಎಲ್ 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ಆರ್​ಸಿಬಿ ವಿರುದ್ಧದ ಪಂದ್ಯವನ್ನು ಗೆದ್ದ ಬಳಿಕ ಅಭಿಮಾನಿಗಳಿಗೆ ಬಾಯಿ ಮುಚ್ಕೊಂಡು ಇರಬೇಕೆಂದು ಸೂಚಿಸಿದ್ದರು. ಆ ನಂತರ ಲಕ್ನೋನಲ್ಲಿ ನಡೆದ ಆರ್​ಸಿಬಿ-ಎಲ್​ಎಸ್​ಜಿ ನಡುವಣ ಪಂದ್ಯವು ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವಣ ಮಾತಿನ ಚಕಮಕಿಗೆ ಕಾರಣವಾಗಿತ್ತು.

VIDEO: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಮಧ್ಯದ ಬೆರಳು ತೋರಿಸಿದ ಗೌತಮ್ ಗಂಭೀರ್
Gautam Gambhir
Follow us
| Updated By: ಝಾಹಿರ್ ಯೂಸುಫ್

Updated on: Sep 04, 2023 | 9:12 PM

ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ (Gautam Gambhir) ವಿರಾಟ್ ಕೊಹ್ಲಿ ಅಭಿಮಾನಿಗಳತ್ತ ಮಧ್ಯದ ಬೆರಳನ್ನು ತೋರಿಸಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಏಷ್ಯಾ ಕಪ್ 2023 ರಲ್ಲಿ ನಡೆಯುತ್ತಿರುವ ಭಾರತ ಮತ್ತು ನೇಪಾಳ ಪಂದ್ಯದ ವೇಳೆ ಈ ಘಟನೆ ನಡೆದಿದ್ದು, ಇದೀಗ ಈ ಅನುಚಿತ ವರ್ತನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪ್ರಸ್ತುತ ನಡೆಯುತ್ತಿರುವ ಏಷ್ಯಾ ಕಪ್​ನಲ್ಲಿ ಗೌತಮ್ ಗಂಭೀರ್ ಪ್ಯಾನೆಲಿಸ್ಟ್ ಮತ್ತು ಕಾಮೆಂಟೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನೇಪಾಳ ವಿರುದ್ಧದ ಪಂದ್ಯದ ವೇಳೆ ಮೈದಾನದಲ್ಲಿ ಕಾಣಿಸಿಕೊಂಡಿದ್ದ ಗಂಭೀರ್ ಸ್ಟೇಡಿಯಂಗೆ ಹಿಂತಿರುಗುತ್ತಿದ್ದಾಗ ಅಭಿಮಾನಿಗಳು ಕೊಹ್ಲಿ-ಕೊಹ್ಲಿ ಎಂದು ಘೋಷಣೆ ಕೂಗಿದರು.

ಇದರಿಂದ ಕುಪಿತಗೊಂಡ ಗಂಭೀರ್ ಅಭಿಮಾನಿಗಳತ್ತ ಮಧ್ಯದ ಬೆರಳನ್ನು ತೋರಿಸಿ ನಡೆದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಗಂಭೀರ್ ವರ್ತನೆಗೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ.

ಐಪಿಎಲ್ 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ಆರ್​ಸಿಬಿ ವಿರುದ್ಧದ ಪಂದ್ಯವನ್ನು ಗೆದ್ದ ಬಳಿಕ ಅಭಿಮಾನಿಗಳಿಗೆ ಬಾಯಿ ಮುಚ್ಕೊಂಡು ಇರಬೇಕೆಂದು ಸೂಚಿಸಿದ್ದರು. ಆ ನಂತರ ಲಕ್ನೋನಲ್ಲಿ ನಡೆದ ಆರ್​ಸಿಬಿ-ಎಲ್​ಎಸ್​ಜಿ ನಡುವಣ ಪಂದ್ಯವು ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವಣ ಮಾತಿನ ಚಕಮಕಿಗೆ ಕಾರಣವಾಗಿತ್ತು.

ಅಷ್ಟೇ ಅಲ್ಲದೆ ಮೈದಾನದಲ್ಲೇ ಗಂಭೀರ್ ಹಾಗೂ ಕೊಹ್ಲಿ ಜಗಳಕ್ಕಿಳಿದಿದ್ದರು. ಈ ಅಹಿತಕರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಐಪಿಎಲ್ ಆಡಳಿತ ಮಂಡಳಿ ಇಬ್ಬರಿಗೆ ಪಂದ್ಯದ ಶೇ.100 ರಷ್ಟು ದಂಡ ವಿಧಿಸಿದ್ದರು.

ಇದನ್ನೂ ಓದಿ: Virat Kohli: ಕ್ಯಾಚ್ ಹಿಡಿದು ಹಲವು ದಾಖಲೆ ಬರೆದ ವಿರಾಟ್ ಕೊಹ್ಲಿ

ಇದೀಗ ಮತ್ತೊಮ್ಮೆ ವಿರಾಟ್ ಕೊಹ್ಲಿಯ ಹೆಸರು ಕೇಳುತ್ತಿದ್ದಂತೆ ಗಂಭೀರ್ ಕೆಂಡಮಂಡಲರಾಗಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಘನತೆಯನ್ನು ಮರೆತು ವರ್ತಿಸಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ