AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಮಧ್ಯದ ಬೆರಳು ತೋರಿಸಿದ ಗೌತಮ್ ಗಂಭೀರ್

Gautam Gambhir vs Virat Kohli: ಐಪಿಎಲ್ 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ಆರ್​ಸಿಬಿ ವಿರುದ್ಧದ ಪಂದ್ಯವನ್ನು ಗೆದ್ದ ಬಳಿಕ ಅಭಿಮಾನಿಗಳಿಗೆ ಬಾಯಿ ಮುಚ್ಕೊಂಡು ಇರಬೇಕೆಂದು ಸೂಚಿಸಿದ್ದರು. ಆ ನಂತರ ಲಕ್ನೋನಲ್ಲಿ ನಡೆದ ಆರ್​ಸಿಬಿ-ಎಲ್​ಎಸ್​ಜಿ ನಡುವಣ ಪಂದ್ಯವು ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವಣ ಮಾತಿನ ಚಕಮಕಿಗೆ ಕಾರಣವಾಗಿತ್ತು.

VIDEO: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಮಧ್ಯದ ಬೆರಳು ತೋರಿಸಿದ ಗೌತಮ್ ಗಂಭೀರ್
Gautam Gambhir
TV9 Web
| Edited By: |

Updated on: Sep 04, 2023 | 9:12 PM

Share

ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ (Gautam Gambhir) ವಿರಾಟ್ ಕೊಹ್ಲಿ ಅಭಿಮಾನಿಗಳತ್ತ ಮಧ್ಯದ ಬೆರಳನ್ನು ತೋರಿಸಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಏಷ್ಯಾ ಕಪ್ 2023 ರಲ್ಲಿ ನಡೆಯುತ್ತಿರುವ ಭಾರತ ಮತ್ತು ನೇಪಾಳ ಪಂದ್ಯದ ವೇಳೆ ಈ ಘಟನೆ ನಡೆದಿದ್ದು, ಇದೀಗ ಈ ಅನುಚಿತ ವರ್ತನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪ್ರಸ್ತುತ ನಡೆಯುತ್ತಿರುವ ಏಷ್ಯಾ ಕಪ್​ನಲ್ಲಿ ಗೌತಮ್ ಗಂಭೀರ್ ಪ್ಯಾನೆಲಿಸ್ಟ್ ಮತ್ತು ಕಾಮೆಂಟೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನೇಪಾಳ ವಿರುದ್ಧದ ಪಂದ್ಯದ ವೇಳೆ ಮೈದಾನದಲ್ಲಿ ಕಾಣಿಸಿಕೊಂಡಿದ್ದ ಗಂಭೀರ್ ಸ್ಟೇಡಿಯಂಗೆ ಹಿಂತಿರುಗುತ್ತಿದ್ದಾಗ ಅಭಿಮಾನಿಗಳು ಕೊಹ್ಲಿ-ಕೊಹ್ಲಿ ಎಂದು ಘೋಷಣೆ ಕೂಗಿದರು.

ಇದರಿಂದ ಕುಪಿತಗೊಂಡ ಗಂಭೀರ್ ಅಭಿಮಾನಿಗಳತ್ತ ಮಧ್ಯದ ಬೆರಳನ್ನು ತೋರಿಸಿ ನಡೆದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಗಂಭೀರ್ ವರ್ತನೆಗೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ.

ಐಪಿಎಲ್ 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ಆರ್​ಸಿಬಿ ವಿರುದ್ಧದ ಪಂದ್ಯವನ್ನು ಗೆದ್ದ ಬಳಿಕ ಅಭಿಮಾನಿಗಳಿಗೆ ಬಾಯಿ ಮುಚ್ಕೊಂಡು ಇರಬೇಕೆಂದು ಸೂಚಿಸಿದ್ದರು. ಆ ನಂತರ ಲಕ್ನೋನಲ್ಲಿ ನಡೆದ ಆರ್​ಸಿಬಿ-ಎಲ್​ಎಸ್​ಜಿ ನಡುವಣ ಪಂದ್ಯವು ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವಣ ಮಾತಿನ ಚಕಮಕಿಗೆ ಕಾರಣವಾಗಿತ್ತು.

ಅಷ್ಟೇ ಅಲ್ಲದೆ ಮೈದಾನದಲ್ಲೇ ಗಂಭೀರ್ ಹಾಗೂ ಕೊಹ್ಲಿ ಜಗಳಕ್ಕಿಳಿದಿದ್ದರು. ಈ ಅಹಿತಕರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಐಪಿಎಲ್ ಆಡಳಿತ ಮಂಡಳಿ ಇಬ್ಬರಿಗೆ ಪಂದ್ಯದ ಶೇ.100 ರಷ್ಟು ದಂಡ ವಿಧಿಸಿದ್ದರು.

ಇದನ್ನೂ ಓದಿ: Virat Kohli: ಕ್ಯಾಚ್ ಹಿಡಿದು ಹಲವು ದಾಖಲೆ ಬರೆದ ವಿರಾಟ್ ಕೊಹ್ಲಿ

ಇದೀಗ ಮತ್ತೊಮ್ಮೆ ವಿರಾಟ್ ಕೊಹ್ಲಿಯ ಹೆಸರು ಕೇಳುತ್ತಿದ್ದಂತೆ ಗಂಭೀರ್ ಕೆಂಡಮಂಡಲರಾಗಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಘನತೆಯನ್ನು ಮರೆತು ವರ್ತಿಸಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Follow Us
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ