AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಅದನ್ನ ಹೇಳೋಕೆ ನೀನ್ಯಾರು… ಇಂಗ್ಲೆಂಡ್​ನಲ್ಲಿ ಗೌತಮ್ ಗಂಭೀರ್ ಕಿರಿಕ್

India vs England 5th Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ಗುರುವಾರದಿಂದ (ಜುಲೈ 31) ಶುರುವಾಗಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಸರಣಿಯನ್ನು 2-2 ಸಮಬಲದಲ್ಲಿ ಡ್ರಾಗೊಳಿಸಬಹುದು.

IND vs ENG: ಅದನ್ನ ಹೇಳೋಕೆ ನೀನ್ಯಾರು... ಇಂಗ್ಲೆಂಡ್​ನಲ್ಲಿ ಗೌತಮ್ ಗಂಭೀರ್ ಕಿರಿಕ್
Gautam Gambhir
ಝಾಹಿರ್ ಯೂಸುಫ್
|

Updated on: Jul 30, 2025 | 7:57 AM

Share

ಭಾರತ – ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವಿವಾದ ಸೃಷ್ಟಿಯಾಗಿದೆ. ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ಕೆನ್ಸಿಂಗ್ಟನ್ ಓವಲ್ ಮೈದಾನ ಕ್ಯುರೇಟರ್ ಲೀ ಫೋರ್ಟೀಸ್ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವಾಗ್ವಾದ ನಡುವೆ ಗಂಭೀರ್ ಅಶ್ಲೀಲ ಪದಗಳನ್ನು ಪ್ರಯೋಗಿಸಿದ ಗಂಭೀರ ಆರೋಪ ಕೇಳಿಬಂದಿದೆ.

ಮಾತಿನ ಚಕಮಕಿಗೆ ಕಾರಣವೇನು?

ಮಂಗಳವಾರ ಟೀಮ್ ಇಂಡಿಯಾ ಆಟಗಾರರು ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಅಭ್ಯಾಸ ಆರಂಭಿಸಿದ್ದರು. ಈ ವೇಳೆ ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ಇತರೆ ಸಿಬ್ಬಂದಿಗಳು ಪಿಚ್ ನೋಡಲು ತೆರಳಿದ್ದಾರೆ. ಅತ್ತ ಪಿಚ್ ಸಿದ್ಧಪಡಿಸುವಲ್ಲಿ ನಿರತರಾಗಿದ್ದ ಲೀ ಫೋರ್ಟಿಸ್ 2.5 ಮೀಟರ್‌ ದೂರ ನಿಲ್ಲುವಂತೆ ಸೂಚಿಸಿದ್ದಾರೆ. ಅಲ್ಲದೆ ಪಿಚ್​ ಬಳಿ ಹಾಕಿದ್ದ ಹಗ್ಗವನ್ನು ದಾಟಿ ಬರದಂತೆ ತಿಳಿಸಿದ್ದಾರೆ.

ಗಂಭೀರ್ ಗರಂ:

ಲೀ ಫೋರ್ಟಿಸ್ ಸೂಚನೆಯಿಂದ ಗೌತಮ್ ಗಂಭೀರ್ ಕೆರಳಿದ್ದು, ಕ್ಯುರೇಟ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದೇ ವೇಳೆ ಇಬ್ಬರು ನಡುವೆ ವಾಗ್ವಾದ ಶುರುವಾಗಿದ್ದು, ಈ ವೇಳೆ ಮೈದಾನ ಸಿಬ್ಬಂದಿ ಕಡೆ ಬೆರಳು ತೋರಿಸಿ  ನಾವೇನು ಮಾಡಬೇಕೆಂದು ನೀ ಹೇಳಬೇಕಿಲ್ಲ‌. ನೀನು ಕೇವಲ ಮೈದಾನದ ಸಿಬ್ಬಂದಿ ಅಷ್ಟೇ. ಅದಕ್ಕಿಂತ ದೊಡ್ಡ ವ್ಯಕ್ತಿಯೇನಲ್ಲ ಎಂದು ಗಂಭೀರ್ ತರಾಟೆಗೆ ತೆಗೆದುಕೊಂಡಿದ್ದಾರೆ. 

ಇದೇ ವೇಳೆ ಲೀ ಫೋರ್ಟಿಸ್ ಈ ಬಗ್ಗೆ ನಾನು ದೂರು ನೀಡುತ್ತೇನೆ ಎಂದು ತಿಳಿಸಿದ್ದಾರೆ. ಇದರಿಂದ ಮತ್ತಷ್ಟು ಕೆರಳಿದ ಗಂಭೀರ್, ಅಶ್ಲೀಲ ಪದ ಪ್ರಯೋಗದೊಂದಿಗೆ ದೂರು ದಾಖಲಿಸುವಂತೆ ಸೂಚಿಸಿದ್ದಾರೆ. ಇದೀಗ ಗಂಭೀರ್ ಹಾಗೂ ಫೋರ್ಟಿಸ್ ನಡುವಣ ವಾಕ್ಸಮರದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಗಂಭೀರ್ ವಿರುದ್ಧ ದೂರು:

ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಅಲ್ಲದೆ ಅಶ್ಲೀಲ ಪದ ಪ್ರಯೋಗಗಳೊಂದಿಗೆ ನನ್ನ ಕೆಲಸಕ್ಕೆ ಅಡ್ಡಿಪಡಿಸಿ ಬೆದರಿಕೆಯೊಡ್ಡಿದ್ದಾರೆ ಎಂದು ಕ್ಯುರೇಟರ್ ಲೀ ಫೋರ್ಟೀಸ್ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ಗೆ ದೂರು ಸಲ್ಲಿಸಿದ್ದಾರೆ. ಹೀಗಾಗಿ ಗಂಭೀರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಸಿಬಿ ಬಿಸಿಸಿಐಗೆ ಮನವಿ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ: ಜಯ ಜಯ ಜಯ ಜಯ ಜಯಯೇ… ಆಸ್ಟ್ರೇಲಿಯಾ ದಾಖಲೆಯ ಜಯಭೇರಿ

ಸಿತಾಂಶು ಕೊಟಕ್ ಸ್ಪಷ್ಟನೆ:

ಈ ಘಟನೆ ಬಗ್ಗೆ ಮಾತನಾಡಿದ ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ಸೀತಾಂಶು ಕೊಟಕ್, ‘ನಾವು ಪಿಚ್ ಅನ್ನು ಪರಿಶೀಲಿಸಲು ತೆರಳಿದಾಗ, ಮೈದಾನದ ಸಿಬ್ಬಂದಿ ಬಂದು ವಿಕೆಟ್‌ನಿಂದ 2.5 ಮೀಟರ್ ದೂರದಲ್ಲಿ ನಿಂತು ಹಗ್ಗದ ಹೊರಗಿನಿಂದ ವಿಕೆಟ್ ಅನ್ನು ನೋಡಬೇಕೆಂದು ತಿಳಿಸಿದರು. ಆದರೆ ಭಾರತೀಯ ತಂಡದ ಸದಸ್ಯರು ಸ್ಪೈಕ್‌ ಶೂಗಳನ್ನು ಧರಿಸಿರಲಿಲ್ಲ. ಹೀಗಾಗಿ ನಾವು ಪಿಚ್​ಗೆ ತೆರಳಿದ್ದರೂ ಯಾವುದೇ ಅಪಾಯವಿರಲಿಲ್ಲ. ಇದಾಗ್ಯೂ ಕ್ಯುರೇಟರ್ ನಮ್ಮನ್ನು ತಡೆದರು. ಇದರಿಂದ ಮಾತಿನ ಚಕಮಕಿ ನಡೆದಿದೆ ಎಂದು ಸ್ಪಷ್ಪಪಡಿಸಿದ್ದಾರೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?