
ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ. ಅದು ಸಹ 12 ವರ್ಷಗಳ ಬಳಿಕ. ಈ ಗೆಲುವಿನ ಬೆನ್ನಲ್ಲೇ ಭಾರತ ತಂಡದ ಪ್ರದರ್ಶನವನ್ನು ಹಾಡಿ ಹೊಗಳಲಾಗುತ್ತಿದೆ. ಈ ಹೊಗಳುವಿಕೆಗೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಕೂಡ ಅರ್ಹರು. ಏಕೆಂದರೆ ಟೂರ್ನಿಗಾಗಿ ಗಂಭೀರ್ ತೆಗೆದುಕೊಂಡ ನಿರ್ಧಾರಗಳು ಫಲ ಕೊಟ್ಟಿದೆ. ಅದಕ್ಕೆ ಸಾಕ್ಷಿಯೇ ಟೀಮ್ ಇಂಡಿಯಾ ಚಾಂಪಿಯನ್ ಆಗಿರುವುದು. ಇಲ್ಲಿ ಗೌತಮ್ ಗಂಭೀರ್ ತೆಗೆದುಕೊಂಡ ಮಹತ್ವದ ನಿರ್ಧಾರಗಳಾವುವು ಎಂದು ನೋಡುವುದಾದರೆ….
ಇದನ್ನೂ ಓದಿ: Champions Trophy 2025: ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರು ಇವರೇ
ಗೌತಮ್ ಗಂಭೀರ್ ತೆಗೆದುಕೊಂಡ ದೃಢ ನಿರ್ಧಾರಗಳಿಂದಲೇ ಇದೀಗ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿಸಿದೆ ಎಂದರೆ ತಪ್ಪಾಗಲಾರದು. ಈ ಚಾಂಪಿಯನ್ ಪಟ್ಟದೊಂದಿಗೆ ಆಟಗಾರನಾಗಿ ಹಾಗೂ ಕೋಚ್ ಆಗಿ 3 ಐಸಿಸಿ ಟ್ರೋಫಿಗಳನ್ನು ಗೆದ್ದ ಭಾರತದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಯನ್ನು ಗೌತಮ್ ಗಂಭೀರ್ ತಮ್ಮದಾಗಿಸಿಕೊಂಡಿದ್ದಾರೆ.