AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ ಗೆದ್ದರೂ ಗಂಭೀರ್ ‘ಕೋಚ್’ ಸ್ಥಾನಕ್ಕೆ ಕುತ್ತು..!

Gautam Gambhir: ಗೌತಮ್ ಗಂಭೀರ್ ಟೀಮ್ ಇಂಡಿಯಾದ ಮುಖ್ಯ ಕೋಚ್ ಆದ ಬಳಿಕ ಭಾರತ ತಂಡವು ಏಕದಿನ ಹಾಗೂ ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಇದಾಗ್ಯೂ ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಪ್ರದರ್ಶನ ಅಷ್ಟಕ್ಕಷ್ಟೇ. ಅದರಲ್ಲೂ ಭಾರತ ತಂಡವು ಗಂಭೀರ್ ಗರಡಿಯಲ್ಲಿ ನ್ಯೂಝಿಲೆಂಡ್ ಹಾಗೂ ಸೌತ್ ಆಫ್ರಿಕಾ ವಿರುದ್ಧ ಸರಣಿ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿತ್ತು.

ಟಿ20 ವಿಶ್ವಕಪ್​ ಗೆದ್ದರೂ ಗಂಭೀರ್ 'ಕೋಚ್' ಸ್ಥಾನಕ್ಕೆ ಕುತ್ತು..!
Gautam Gambhir
ಝಾಹಿರ್ ಯೂಸುಫ್
|

Updated on: Mar 15, 2026 | 12:53 PM

Share

ವೈಟ್ ಬಾಲ್​ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಪಾರುಪತ್ಯ ಮುಂದುವರೆದಿದೆ. ಅದು ಸಹ ಗೌತಮ್ ಗಂಭೀರ್ ಕೋಚಿಂಗ್​ನಲ್ಲಿ. 2025ರಲ್ಲಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿ ಗೆದ್ದಿದ್ದ ಟೀಮ್ ಇಂಡಿಯಾ ಇದೀಗ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಈ ಎರಡು ಸಾಧನೆಗಳ ಹೊರತಾಗಿಯೂ ಗೌತಮ್ ಗಂಭೀರ್ ಅವರ ಕೋಚಿಂಗ್ ಸ್ಥಾನದ ಮೇಲೆ ತೂಗುಗತ್ತಿ ಇರುವುದು ಖಚಿತವಾಗಿದೆ. ಅಂದರೆ ಭಾರತ ಟೆಸ್ಟ್ ತಂಡದ ಕೋಚ್ ಬದಲಾಗುವ ಸಾಧ್ಯತೆಯಿದೆ.

ಜೂನ್ 2024 ರಲ್ಲಿ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅಧಿಕಾರ ವಹಿಸಿಕೊಂಡಾಗಿನಿಂದ, ಟೆಸ್ಟ್ ಕ್ರಿಕೆಟ್‌ನಲ್ಲಿ ಅವರ ಪ್ರದರ್ಶನವು ತೀವ್ರ ವಿಮರ್ಶೆಗೆ ಒಳಗಾಗಿದೆ.  ಏಕೆಂದರೆ ವೈಟ್ ಬಾಲ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡಿದರೂ ರೆಡ್ ಬಾಲ್​ನಲ್ಲಿ ಭಾರತ ತಂಡದ ಪ್ರದರ್ಶನ ಭಾರೀ ಕುಸಿತಕ್ಕೊಳಗಾಗಿದೆ. ಹೀಗಾಗಿಯೇ ಗಂಭೀರ್ ಅವರ ಟೆಸ್ಟ್ ಕೋಚಿಂಗ್ ವಿಮರ್ಶೆಗೆ ಒಳಗಾಗಿದೆ.

  • ನ್ಯೂಝಿಲೆಂಡ್ ವಿರುದ್ಧದ ಐತಿಹಾಸಿಕ ಸೋಲು: ಗಂಭೀರ್ ಅವರ ಅವಧಿಯಲ್ಲಿ ಭಾರತ ತಂಡವು ತವರಿನಲ್ಲಿ ನ್ಯೂಝಿಲೆಂಡ್ ವಿರುದ್ಧ 0-3 ಅಂತರದಿಂದ ಟೆಸ್ಟ್ ಸರಣಿಯನ್ನು ಸೋತಿದೆ. ಇದು ಕಳೆದ 12 ವರ್ಷಗಳಲ್ಲಿ ಭಾರತವು ತವರಿನಲ್ಲಿ ಅನುಭವಿಸಿದ ಮೊದಲ ಸರಣಿ ಸೋಲು ಮತ್ತು ಮೊದಲ ಬಾರಿಗೆ 3 ಪಂದ್ಯಗಳ ಸರಣಿಯಲ್ಲಿ ವೈಟ್‌ವಾಶ್ (ಸಂಪೂರ್ಣ ಸೋಲು) ಅನುಭವಿಸಿದ ಅವಮಾನಕರ ದಾಖಲೆಯಾಗಿದೆ.
  • ಬಾರ್ಡರ್-ಗವಾಸ್ಕರ್ ಟ್ರೋಫಿ (ಆಸ್ಟ್ರೇಲಿಯಾ ಪ್ರವಾಸ): 2024-25ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡವು ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ವಿಫಲವಾಗಿದೆ. ಗಂಭೀರ್ ಅವರ ಆಕ್ರಮಣಕಾರಿ ಶೈಲಿಯು ಆಸ್ಟ್ರೇಲಿಯಾದ ವೇಗದ ಪಿಚ್‌ಗಳಲ್ಲಿ ಕೆಲಸ ಮಾಡಲಿಲ್ಲ ಎಂಬ ಟೀಕೆಗಳು ಕೇಳಿಬಂದವು.
  • ತಂತ್ರಗಾರಿಕೆಯ ಕೊರತೆ: ಸ್ಪಿನ್ ಸ್ನೇಹಿ ಪಿಚ್‌ಗಳನ್ನು ಸಿದ್ಧಪಡಿಸುವ ಗಂಭೀರ್ ಅವರ ತಂತ್ರವು ನ್ಯೂಝಿಲೆಂಡ್ ಸರಣಿಯಲ್ಲಿ ತಿರುಗೇಟು ನೀಡಿತು. ಭಾರತೀಯ ಬ್ಯಾಟರ್‌ಗಳೇ ಸ್ಪಿನ್ ಎದುರಿಸಲು ಪರದಾಡಿದ್ದು ಕೋಚ್ ಮತ್ತು ಮ್ಯಾನೇಜ್‌ಮೆಂಟ್‌ನ ವೈಫಲ್ಯ ಎಂದು ವಿಶ್ಲೇಷಿಸಲಾಗಿದೆ.
  • ಹಿರಿಯ ಆಟಗಾರರ ಅನುಪಸ್ಥಿತಿ: ಗಂಭೀರ್ ಕೋಚ್ ಆದ ಬಳಿಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವಿಚಂದ್ರನ್ ಅಶ್ವಿನ್ ಏಕಾಏಕಿ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತರಾಗಿದ್ದಾರೆ. ಇದು ಭಾರತ ತಂಡದಲ್ಲಿನ ಅನುಭವದ ಕೊರತೆಯನ್ನು ಎತ್ತಿ ತೋರಿಸುತ್ತಿದೆ.

ಬಿಸಿಸಿಐ ಪ್ಲ್ಯಾನ್:

  • ಸುದೀರ್ಘ ಸಭೆ: ನ್ಯೂಝಿಲೆಂಡ್ ಸರಣಿಯ ಸೋಲಿನ ನಂತರ, ಬಿಸಿಸಿಐ ಗಂಭೀರ್ ಅವರೊಂದಿಗೆ ಸುಮಾರು 6 ಗಂಟೆಗಳ ಕಾಲ ಸುದೀರ್ಘ ಸಭೆ ನಡೆಸಿತ್ತು. ಇದರಲ್ಲಿ ತಂಡದ ಆಯ್ಕೆ ಮತ್ತು ಪಿಚ್ ತಯಾರಿಕೆಯ ಬಗ್ಗೆ ವಿವರಣೆ ಕೇಳಲಾಗಿತ್ತು.
  • ಸ್ಪ್ಲಿಟ್ ಕೋಚಿಂಗ್: ಟೆಸ್ಟ್ ಕ್ರಿಕೆಟ್‌ನಲ್ಲಿ ಸತತ ಹಿನ್ನಡೆಯಾಗುತ್ತಿರುವುದರಿಂದ, ಟೆಸ್ಟ್ ಪಂದ್ಯಗಳಿಗೆ ಪ್ರತ್ಯೇಕ ಕೋಚ್ ಮತ್ತು ಸೀಮಿತ ಓವರ್‌ಗಳ ಕ್ರಿಕೆಟ್‌ಗೆ (ODI & T20) ಗಂಭೀರ್ ಅವರನ್ನು ಮುಂದುವರಿಸುವ ‘ಸ್ಪ್ಲಿಟ್ ಕೋಚಿಂಗ್’ ಪದ್ಧತಿಯನ್ನು ಜಾರಿಗೆ ತರುವ ಬಗ್ಗೆ ಬಿಸಿಸಿಐ ಗಂಭೀರವಾಗಿ ಆಲೋಚಿಸುತ್ತಿದೆ ಎಂದು ವರದಿಗಳು ತಿಳಿಸಿವೆ.
  • ಲಕ್ಷ್ಮಣ್ ಅವರ ಹೆಸರು: ಒಂದು ವೇಳೆ ಟೆಸ್ಟ್ ಕೋಚ್ ಬದಲಾವಣೆಯಾದರೆ, ವಿವಿಎಸ್ ಲಕ್ಷ್ಮಣ್ ಅವರಿಗೆ ಆ ಜವಾಬ್ದಾರಿ ನೀಡುವ ಸಾಧ್ಯತೆ ಇದೆ.

ಅಂದರೆ ಬಿಸಿಸಿಐ ಸ್ಪಿಟ್ಲ್​ ಕೋಚಿಂಗ್ ಬಗ್ಗೆ ಈಗಲೂ ಆಸಕ್ತಿ ಹೊಂದಿದೆ. ಅಂದರೆ ಗಂಭೀರ್ ಅವರನ್ನು ಏಕದಿನ ಹಾಗೂ ಟಿ20 ಕ್ರಿಕೆಟ್​ಗೆ ಸೀಮಿತಗೊಳಿಸಿ, ಟೆಸ್ಟ್ ಕ್ರಿಕೆಟ್​ಗೆ ಮತ್ತೋರ್ವ ಕೋಚ್ ಅನ್ನು ಪರಿಚಯಿಸಲು ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.

ಏಕೆಂದರೆ ಮುಂಬರುವ ನ್ಯೂಝಿಲೆಂಡ್ ಪ್ರವಾಸ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್ ಹಂತದವರೆಗಿನ ಪ್ರದರ್ಶನವು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು.

ಇದನ್ನೂ ಓದಿ: ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ

ಹೀಗಾಗಿ ಅಫ್ಗಾನಿಸ್ತಾನ್ ಹಾಗೂ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗಳು ಗೌತಮ್ ಗಂಭೀರ್ ಅವರ ಟೆಸ್ಟ್ ಕೋಚಿಂಗ್ ಭವಿಷ್ಯವನ್ನು ನಿರ್ಧರಿಸಲಿದೆ. ಒಂದು ವೇಳೆ ಈ ಸರಣಿಯಲ್ಲಿ ಟೀಮ್ ಇಂಡಿಯಾ ನಿರೀಕ್ಷಿತ ಪ್ರದರ್ಶನ ನೀಡದಿದ್ದರೆ ನ್ಯೂಝಿಲೆಂಡ್ ವಿರುದ್ಧದ ಸರಣಿಗೂ ಮುನ್ನ ಭಾರತ ಟೆಸ್ಟ್ ತಂಡಕ್ಕೆ ಹೊಸ ಕೋಚ್ ನೇಮಕವಾಗಲಿದ್ದಾರೆ.

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು