AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಾಕ್ ಸೋಲನ್ನು ಸಂಭ್ರಮಿಸಿದ ಗೌತಮ್ ಗಂಭೀರ್: ಹೊಸ ವಿವಾದ ಶುರು..!

Gautam Gambhir's video: ಏಷ್ಯಾಕಪ್​ನ ಫೈನಲ್​ ಪಂದ್ಯದಲ್ಲಿ  ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಭಾನುಕಾ ರಾಜಪಕ್ಸೆ (71) ಅವರ ಅಜೇಯ ಅರ್ಧಶತಕದ ನೆರವಿನಿಂದ 170 ರನ್​ ಕಲೆಹಾಕಿತು.

Viral Video: ಪಾಕ್ ಸೋಲನ್ನು ಸಂಭ್ರಮಿಸಿದ ಗೌತಮ್ ಗಂಭೀರ್: ಹೊಸ ವಿವಾದ ಶುರು..!
Gautam Gambhir
TV9 Web
| Updated By: ಝಾಹಿರ್ ಯೂಸುಫ್|

Updated on:Sep 12, 2022 | 2:27 PM

Share

ದುಬೈ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯಾಕಪ್​ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಶ್ರೀಲಂಕಾ ತಂಡವು ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಲಂಕಾ ತಂಡವು ಏಷ್ಯನ್ ಕ್ರಿಕೆಟ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಶ್ರೀಲಂಕಾದ ಈ ಗೆಲುವನ್ನು ಟೀಮ್ ಇಂಡಿಯಾ ಆಟಗಾರ ಗೌತಮ್ ಗಂಭೀರ್ ಕೂಡ ಸಂಭ್ರಮಿಸಿದ್ದರು. ಅಷ್ಟೇ ಅಲ್ಲದೆ ಇದೇ ವೇಳೆ ಶ್ರೀಲಂಕಾ ಧ್ವಜ ಹಿಡಿದುಕೊಂಡಿದ್ದ ಗಂಭೀರ್ ವಿಡಿಯೋ ಇದೀಗ ವೈರಲ್ ಆಗಿದೆ. ಇದರೊಂದಿಗೆ ಮತ್ತೊಂದು ವಿವಾದ ಕೂಡ ಶುರುವಾಗಿದೆ.

ಏಕೆಂದರೆ ಗೌತಮ್ ಗಂಭೀರ್ ಯಾವುದೇ ತಂಡದ ಬೆಂಬಲಿಗನಾಗಿ ಮೈದಾನದಲ್ಲಿ ಕಾಣಿಸಿಕೊಂಡಿರಲಿಲ್ಲ. ಬದಲಾಗಿ ಕ್ರಿಕೆಟ್ ಕಾಮೆಂಟರಿ ಮಾಡಲು ಬಂದಿದ್ದರು. ಇದಾಗ್ಯೂ ಒಂದು ತಂಡವನ್ನು ಬೆಂಬಲಿಸಿ ಮೈದಾನದಲ್ಲಿ ಧ್ವಜ ಹಿಡಿದು ಸಂಭ್ರಮಿಸಿರುವುದಕ್ಕೆ ಹಲವು ಕ್ರಿಕೆಟ್ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದರಲ್ಲೂ ಪಾಕಿಸ್ತಾನ್ ತಂಡದ ವಿರುದ್ದ ಲಂಕಾ ಗೆದ್ದಿದ್ದನ್ನು ಗೌತಮ್ ಗಂಭೀರ್ ಬೇಕೆಂದೇ ಸಂಭ್ರಮಿಸಿದ್ದಾರೆ ಎಂದು ಅನೇಕ ಪಾಕ್ ಕ್ರಿಕೆಟ್​ ಪ್ರೇಮಿಗಳು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಪಾಕಿಸ್ತಾನ್ ವಿರುದ್ದದ ಆಟಗಾರರೊಂದಿಗೆ ಸದಾ ದ್ವೇಷಕಾರು ಗಂಭೀರ್, ಇದೀಗ ಲಂಕಾ ಜಯವನ್ನೂ ಕೂಡ ಬಳಸಿಕೊಳ್ಳಲು ಮುಂದಾಗಿದ್ದಾರೆ ಎಂದು ಪಾಕ್ ಕ್ರಿಕೆಟ್​ ಪ್ರೇಮಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದಾಗ್ಯೂ ಭಾರತೀಯ ಕ್ರಿಕೆಟಿಗನಿಗೆ ಶ್ರೀಲಂಕಾ ಅಭಿಮಾನಿಗಳಿಂದ ಭರಪೂರ ಬೆಂಬಲ ವ್ಯಕ್ತವಾಗುತ್ತಿದೆ. ಒಟ್ಟಿನಲ್ಲಿ ಗೌತಮ್ ಗಂಭೀರ್ ಕಾಮೆಂಟ್ರಿ ಮಾಡುವುದರ ಜೊತೆಗೆ ಶ್ರೀಲಂಕಾ ತಂಡ ಧ್ವಜವನ್ನು ಹಾರಿಸುವ ಮೂಲಕ ಮೈದಾನದಲ್ಲಿ ಕಾಣಿಸಿಕೊಂಡು ಇದೀಗ ಹೊಸ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಈ ವಿವಾದ ಮತ್ತಷ್ಟು ಮಹತ್ವ ಪಡೆದುಕೊಂಡರೆ ಮುಂದಿನ ದಿನಗಳಲ್ಲಿ ಗೌತಮ್ ಗಂಭೀರ್ ಕಾಮೆಂಟ್ರಿ ಪ್ಯಾನೆಲ್​ನಿಂದ ಹೊರಬಿದ್ದರೂ ಅಚ್ಚರಿಪಡಬೇಕಿಲ್ಲ.

ಏಷ್ಯಾಕಪ್​ನ ಫೈನಲ್​ ಪಂದ್ಯದಲ್ಲಿ  ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಭಾನುಕಾ ರಾಜಪಕ್ಸೆ (71) ಅವರ ಅಜೇಯ ಅರ್ಧಶತಕದ ನೆರವಿನಿಂದ 170 ರನ್​ ಕಲೆಹಾಕಿತು. 171 ರನ್​ಗಳ ಟಾರ್ಗೆಟ್ ಪಡೆದ ಪಾಕಿಸ್ತಾನ್ ತಂಡವನ್ನು 147 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಶ್ರೀಲಂಕಾ ತಂಡವು 23 ರನ್​ಗಳ ಭರ್ಜರಿ ಜಯ ಸಾಧಿಸಿತ್ತು.

Published On - 2:06 pm, Mon, 12 September 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್