AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GGW vs RCB: ಮಹಿಳಾ ಪ್ರೀಮಿಯರ್​​ಲೀಗ್​ನಲ್ಲಿ ಮೊದಲ ಪಂದ್ಯ; ಇಲ್ಲಿದೆ ವಿವರ

2025ನೇ ಸಾಲಿನ ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ರೋಮಾಂಚಕಾರಿ ಪಂದ್ಯ ಇಂದು, ಫೆಬ್ರವರಿ 14ರಂದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆಯಲಿದೆ. ಪಂದ್ಯ ವಡೋದರದ ಕೋಟಂಬಿ ಕ್ರೀಡಾಂಗಣದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ. ಈ ಪಂದ್ಯವನ್ನು ಜಿಯೋ ಸಿನಿಮಾ ಮತ್ತು ಸ್ಪೋರ್ಟ್ಸ್ 18ರಲ್ಲಿ ವೀಕ್ಷಿಸಬಹುದು.

GGW vs RCB: ಮಹಿಳಾ ಪ್ರೀಮಿಯರ್​​ಲೀಗ್​ನಲ್ಲಿ ಮೊದಲ ಪಂದ್ಯ; ಇಲ್ಲಿದೆ ವಿವರ
Wpl
ರಾಜೇಶ್ ದುಗ್ಗುಮನೆ
|

Updated on: Feb 14, 2025 | 2:46 PM

Share

2025ನೇ ಸಾಲಿನ ಮಹಿಳಾ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯ ಇಂದು (ಫೆಬ್ರವರಿ 14) ನಡೆಯಲಿದೆ. ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಜಿಯಂಟ್ಸ್ ವುಮನ್ ಮುಖಾಮುಖಿ ಆಗುತ್ತಿವೆ. ಇದು ಈ ಸೀಸನ್​ನ ಮೊದಲ ಪಂದ್ಯ ಆಗಿರುವುದರಿಂದ ಸಾಕಷ್ಟು ಕುತೂಹಲ ಮೂಡಿದೆ. ಈ ಪಂದ್ಯ ಎಲ್ಲಿ ನಡೆಯಲಿದೆ? ಎಷ್ಟು ಗಂಟೆಗೆ ನಡೆಯಲಿದೆ ಮತ್ತು ಇದನ್ನು ಎಲ್ಲಿ ವೀಕ್ಷಿಸಬಹುದು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ

ಇಂದಿನ ವುಮನ್ ಪ್ರೀಮಿಯರ್ ಲೀಗ್​​ ಸಖತ್ ಥ್ರಿಲ್ಲಿಂಗ್ ಮ್ಯಾಚ್ ಆಗುವ ಎಲ್ಲಾ ಸಾಧ್ಯತೆ ಇದೆ. ಇಂದಿನ ಪಂದ್ಯ ರಾತ್ರಿ 7.30ಕ್ಕೆ ಆರಂಭ ಆಗಲಿದೆ. ವಡೋದರದ ಕೋಟಂಬಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ವಡೋದರದ ಈ ಸ್ಟೇಡಿಯಂ ಹೈ ಸ್ಕೋರ್ ಮ್ಯಾಚ್​​ಗಳಿಗೆ ಖ್ಯಾತಿ ಪಡೆದಿದೆ. ಇದು ಬ್ಯಾಟರ್​ಗಳ ಪಿಚ್ ಆಗಿರುವುದರಿಂದ ಹೆಚ್ಚಿನ ರನ್​ಗಳನ್ನು ನಿರೀಕ್ಷಿಸಬಹುದು.

ವಡೋದರದಲ್ಲಿ ವಾತಾವರಣ ಕೂಡ ಉತ್ತಮವಾಗಿದೆ. ಇಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಮಳೆ ಬರುವ ಸಾಧ್ಯತೆ ಜೀರೋ ಆಗಿರುವುದರಿಂದ, ಪಂದ್ಯ ನಿಲ್ಲಬಹುದು ಎಂಬ ಭಯ ಇಲ್ಲ.  ಇಲ್ಲಿನ ಹವಾಮಾನ 25 ಡಿಗ್ರೀ ಸೆಲ್ಸಿಯಸ್ ಇದೆ.

ಇದನ್ನೂ ಓದಿ: ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ನಿಯಮ ಉಲ್ಲಂಘನೆ: ಇಬ್ಬರು ಸ್ಟಾರ್ ಆಟಗಾರರ ವಿರುದ್ಧ ಕಠಿಣ ಕ್ರಮ

ಗುಜರಾತ್ ಜಿಯಂಟ್ಸ್ ತಂಡವನ್ನು ಆಶ್ಲೀ ಗಾರ್ಡ್ನರ್ ಅವರು ಮುನ್ನಡೆಸುತ್ತಿದ್ದಾರೆ. ಆರ್​ಸಿಬಿಗೆ ಸ್ಮೃತಿ ಮಂಧಾನ ನಾಯಕಿ. ಕಳೆದ ವರ್ಷ ಕಪ್ ಗೆದ್ದಿರುವುದರಿಂದ ಈ ಬಾರಿ ಶುಭಾರಂಭದೊಂದಿಗೆ ಪಂದ್ಯ ಆರಂಭಿಸುವ ನಿರೀಕ್ಷೆಯಲ್ಲಿ ತಂಡ ಇದೆ.

ವೀಕ್ಷಣೆ ಎಲ್ಲಿ?

ಈ ಬಾರಿಯ ಮಹಿಳಾ ಪ್ರೀಮಿಯರ್​ ಲೀಗ್​ನ ಜಿಯೋ ಸಿನಿಮಾ ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ. ಸ್ಪೋರ್ಟ್ಸ್​ 18 ಟಿವಿ ಪ್ರಸಾರ ಹಕ್ಕನ್ನು ಪಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ