AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GGW vs RCB: ಮಹಿಳಾ ಪ್ರೀಮಿಯರ್​​ಲೀಗ್​ನಲ್ಲಿ ಮೊದಲ ಪಂದ್ಯ; ಇಲ್ಲಿದೆ ವಿವರ

2025ನೇ ಸಾಲಿನ ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ರೋಮಾಂಚಕಾರಿ ಪಂದ್ಯ ಇಂದು, ಫೆಬ್ರವರಿ 14ರಂದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆಯಲಿದೆ. ಪಂದ್ಯ ವಡೋದರದ ಕೋಟಂಬಿ ಕ್ರೀಡಾಂಗಣದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ. ಈ ಪಂದ್ಯವನ್ನು ಜಿಯೋ ಸಿನಿಮಾ ಮತ್ತು ಸ್ಪೋರ್ಟ್ಸ್ 18ರಲ್ಲಿ ವೀಕ್ಷಿಸಬಹುದು.

GGW vs RCB: ಮಹಿಳಾ ಪ್ರೀಮಿಯರ್​​ಲೀಗ್​ನಲ್ಲಿ ಮೊದಲ ಪಂದ್ಯ; ಇಲ್ಲಿದೆ ವಿವರ
Wpl
ರಾಜೇಶ್ ದುಗ್ಗುಮನೆ
|

Updated on: Feb 14, 2025 | 2:46 PM

Share

2025ನೇ ಸಾಲಿನ ಮಹಿಳಾ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯ ಇಂದು (ಫೆಬ್ರವರಿ 14) ನಡೆಯಲಿದೆ. ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಜಿಯಂಟ್ಸ್ ವುಮನ್ ಮುಖಾಮುಖಿ ಆಗುತ್ತಿವೆ. ಇದು ಈ ಸೀಸನ್​ನ ಮೊದಲ ಪಂದ್ಯ ಆಗಿರುವುದರಿಂದ ಸಾಕಷ್ಟು ಕುತೂಹಲ ಮೂಡಿದೆ. ಈ ಪಂದ್ಯ ಎಲ್ಲಿ ನಡೆಯಲಿದೆ? ಎಷ್ಟು ಗಂಟೆಗೆ ನಡೆಯಲಿದೆ ಮತ್ತು ಇದನ್ನು ಎಲ್ಲಿ ವೀಕ್ಷಿಸಬಹುದು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ

ಇಂದಿನ ವುಮನ್ ಪ್ರೀಮಿಯರ್ ಲೀಗ್​​ ಸಖತ್ ಥ್ರಿಲ್ಲಿಂಗ್ ಮ್ಯಾಚ್ ಆಗುವ ಎಲ್ಲಾ ಸಾಧ್ಯತೆ ಇದೆ. ಇಂದಿನ ಪಂದ್ಯ ರಾತ್ರಿ 7.30ಕ್ಕೆ ಆರಂಭ ಆಗಲಿದೆ. ವಡೋದರದ ಕೋಟಂಬಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ವಡೋದರದ ಈ ಸ್ಟೇಡಿಯಂ ಹೈ ಸ್ಕೋರ್ ಮ್ಯಾಚ್​​ಗಳಿಗೆ ಖ್ಯಾತಿ ಪಡೆದಿದೆ. ಇದು ಬ್ಯಾಟರ್​ಗಳ ಪಿಚ್ ಆಗಿರುವುದರಿಂದ ಹೆಚ್ಚಿನ ರನ್​ಗಳನ್ನು ನಿರೀಕ್ಷಿಸಬಹುದು.

ವಡೋದರದಲ್ಲಿ ವಾತಾವರಣ ಕೂಡ ಉತ್ತಮವಾಗಿದೆ. ಇಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಮಳೆ ಬರುವ ಸಾಧ್ಯತೆ ಜೀರೋ ಆಗಿರುವುದರಿಂದ, ಪಂದ್ಯ ನಿಲ್ಲಬಹುದು ಎಂಬ ಭಯ ಇಲ್ಲ.  ಇಲ್ಲಿನ ಹವಾಮಾನ 25 ಡಿಗ್ರೀ ಸೆಲ್ಸಿಯಸ್ ಇದೆ.

ಇದನ್ನೂ ಓದಿ: ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ನಿಯಮ ಉಲ್ಲಂಘನೆ: ಇಬ್ಬರು ಸ್ಟಾರ್ ಆಟಗಾರರ ವಿರುದ್ಧ ಕಠಿಣ ಕ್ರಮ

ಗುಜರಾತ್ ಜಿಯಂಟ್ಸ್ ತಂಡವನ್ನು ಆಶ್ಲೀ ಗಾರ್ಡ್ನರ್ ಅವರು ಮುನ್ನಡೆಸುತ್ತಿದ್ದಾರೆ. ಆರ್​ಸಿಬಿಗೆ ಸ್ಮೃತಿ ಮಂಧಾನ ನಾಯಕಿ. ಕಳೆದ ವರ್ಷ ಕಪ್ ಗೆದ್ದಿರುವುದರಿಂದ ಈ ಬಾರಿ ಶುಭಾರಂಭದೊಂದಿಗೆ ಪಂದ್ಯ ಆರಂಭಿಸುವ ನಿರೀಕ್ಷೆಯಲ್ಲಿ ತಂಡ ಇದೆ.

ವೀಕ್ಷಣೆ ಎಲ್ಲಿ?

ಈ ಬಾರಿಯ ಮಹಿಳಾ ಪ್ರೀಮಿಯರ್​ ಲೀಗ್​ನ ಜಿಯೋ ಸಿನಿಮಾ ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ. ಸ್ಪೋರ್ಟ್ಸ್​ 18 ಟಿವಿ ಪ್ರಸಾರ ಹಕ್ಕನ್ನು ಪಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್