AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

254 ರನ್​​ಗಳನ್ನು ನೋಡಿ ಸೋಲೊಪ್ಪಿಕೊಂಡ್ರಾ? ಕಿಡಿಕಾರಿದ ಗ್ಲೆನ್ ಫಿಲಿಪ್ಸ್​

IPL 2026 RCB vs GT: ಐಪಿಎಲ್​ನ ಕ್ವಾಲಿಫೈಯರ್-1 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 254 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡ 19.3 ಓವರ್​ಗಳಲ್ಲಿ 162 ರನ್​​ಗಳಿಗೆ ಆಲೌಟ್ ಆಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 92 ರನ್​ಗಳ ಭರ್ಜರಿ ಜಯ ಸಾಧಿಸಿದೆ.

254 ರನ್​​ಗಳನ್ನು ನೋಡಿ ಸೋಲೊಪ್ಪಿಕೊಂಡ್ರಾ? ಕಿಡಿಕಾರಿದ ಗ್ಲೆನ್ ಫಿಲಿಪ್ಸ್​
Glenn PhillipsImage Credit source: IPL
ಝಾಹಿರ್ ಯೂಸುಫ್
|

Updated on: May 27, 2026 | 2:13 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಚಂಡ ಜಯ ಸಾಧಿಸಿದೆ. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಗುಜರಾತ್ ಟೈಟಾನ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ ಬರೋಬ್ಬರಿ 254 ರನ್ ಕಲೆಹಾಕಿದ್ದರು.

ಈ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 162 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬರೋಬ್ಬರಿ 92 ರನ್​ಗಳ ಅಂತರದಿಂದ ಹೀನಾಯವಾಗಿ ಸೋಲೊಪ್ಪಿಕೊಂಡಿದೆ. ಈ ಸೋಲಿನ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​​ಮನ್ ಗಿಲ್ ಆಗಲಿ ಅಥವಾ ಮುಖ್ಯ ಕೋಚ್ ಆಶಿಶ್ ನೆಹ್ರಾ ಕಾಣಿಸಿಕೊಂಡಿರಲಿಲ್ಲ. ಬದಲಿಗೆ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಿರ ಗ್ಲೆನ್ ಫಿಲಿಪ್ಸ್ ಅವರನ್ನು ಕಳುಹಿಸಲಾಗಿತ್ತು.

ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಗ್ಲೆನ್ ಫಿಲಿಪ್ಸ್​​ಗೆ ವರದಿಗಾರರೊಬ್ಬರು, ಆರ್​ಸಿಬಿ ನೀಡಿದ 254 ರನ್​ಗಳ ಕಠಿಣ ಗುರಿ ನೋಡಿ ಗುಜರಾತ್ ಟೈಟಾನ್ಸ್ ಆಟಗಾರರು ಮಾನಸಿಕವಾಗಿಯೇ ಸೋಲು ಒಪ್ಪಿಕೊಂಡ್ರಾ? ಎಂದು ಪ್ರಶ್ನೆ ಮುಂದಿಟ್ಟಿದ್ದರು.

ಈ ಪ್ರಶ್ನೆ ಕೇಳುತ್ತಿರುವಂತೆ ಅಸಮಾಧಾನ ಹೊರಹಾಕಿದ ಗ್ಲೆನ್ ಫಿಲಿಪ್ಸ್, ಇದು ತಂಡದ ವೃತ್ತಿಪರತೆಗೆ ಧಕ್ಕೆ ತರುವಂತಹ ಪ್ರಶ್ನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ನೀವು ಕೇಳಿರುವುದು ಅತ್ಯಂತ ಮೂರ್ಖತನದ ಪ್ರಶ್ನೆ. ನಿಜಕ್ಕೂ ಇಂತಹ ಪ್ರಶ್ನೆಗಳೇ ಮೂರ್ಖತನದ್ದು! ಯಾವೊಬ್ಬರ ವೃತ್ತಿಪರ ಕ್ರಿಕೆಟಿಗನೂ ಕೂಡ ಹೀಗೆ ಯೋಚಿಸಲ್ಲ. ಯಾರೂ ಸಹ ಸ್ಕೋರ್ ನೋಡಿ, ಈ ಪಂದ್ಯವನ್ನು ಇಲ್ಲೇ ಕೈ ಬಿಡುತ್ತಿದ್ದೇವೆ ಎಂದು ಮೈದಾನಕ್ಕೆ ಇಳಿಯುವುದಿಲ್ಲ. ಪಂದ್ಯವಾಡಲು ಬಂದವರು ಹಾಗೆ ಏಕೆ ಯೋಚಿಸುತ್ತಾರೆ ಹೇಳಿ”.

“250 ಕ್ಕೂ ಹೆಚ್ಚಿನ ಬೃಹತ್ ಮೊತ್ತವನ್ನು ಬೆನ್ನಟ್ಟುವಾಗ ಪ್ರತಿ ಹಂತದಲ್ಲೂ ನಾವು ಪಾಸಿಟಿವ್ ಆಗಿಯೇ ಯೋಚಿಸಬೇಕಾಗುತ್ತದೆ. ಆದರೆ ಕೆಲವೊಮ್ಮೆ ನಮ್ಮ ಪ್ಲ್ಯಾನ್​ಗಳು ವರ್ಕ್​ ಆಗಲ್ಲ. ಅದೇ ರೀತಿ ಈ ಮ್ಯಾಚ್​ನಲ್ಲಿ ನಾವು ಅಂದುಕೊಂಡಂತೆ ನಡೆದಿಲ್ಲ ಅಷ್ಟೇ” ಎಂದು ಗ್ಲೆನ್ ಫಿಲಿಪ್ಸ್ ಗುಜರಾತ್ ಟೈಟಾನ್ಸ್ ತಂಡದ ಆಟಗಾರರ ಪ್ರದರ್ಶನವನ್ನು ಸಮರ್ಥಿಸಿಕೊಂಡಿದ್ದಾರೆ.

ಫೈನಲ್​ ಮೇಲೆ ಗುಜರಾತ್ ಕಣ್ಣು:

ಈ ಬಾರಿಯ ಐಪಿಎಲ್​ನ ಫೈನಲ್ ಪಂದ್ಯ ನಡೆಯುವುದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ. ಈ ಸ್ಟೇಡಿಯಂ ಗುಜರಾತ್ ಟೈಟಾನ್ಸ್ ತಂಡದ ತವರು ಮೈದಾನ. ಹೀಗಾಗಿ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಜಯಗಳಿಸುವ ಮೂಲಕ ಗುಜರಾತ್ ಟೈಟಾನ್ಸ್ ತಂಡವು ಫೈನಲ್​ಗೇರಲು ಪ್ಲ್ಯಾನ್ ರೂಪಿಸುತ್ತಿದೆ.

ಇದನ್ನೂ ಓದಿ: ಈ ಸಲನೂ ಕಪ್ ನಮ್ದೆ: ಈ ಲೆಕ್ಕಾಚಾರಕ್ಕಿದೆ ಬಲವಾದ ಕಾರಣ!

ಇಲ್ಲಿ ಗುಜರಾತ್ ಟೈಟಾನ್ಸ್ ತಂಡದ ಮುಂದಿನ ಎದುರಾಳಿಯಾಗಿ ಸನ್​ರೈಸರ್ಸ್ ಹೈದರಾಬಾದ್ ಅಥವಾ ರಾಜಸ್ಥಾನ್ ರಾಯಲ್ಸ್ ಕಣಕ್ಕಿಳಿಯಲಿದೆ. ಅಂದರೆ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ಗುಜರಾತ್ ಟೈಟಾನ್ಸ್​ ತಂಡಕ್ಕೆ ಫೈನಲ್​ಗೇರಲು ಅವಕಾಶವಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು
ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು
ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು
ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್
ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್
ಹೀಗೆ ಔಟಾಗಿ, ಹೀಗೊಂದು ದಾಖಲೆ ಬರೆದ ಸಾಯಿ ಸುದರ್ಶನ್
ಹೀಗೆ ಔಟಾಗಿ, ಹೀಗೊಂದು ದಾಖಲೆ ಬರೆದ ಸಾಯಿ ಸುದರ್ಶನ್
ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ವಿಜಯೇಂದ್ರ ಸ್ಫೋಟಕ ಭವಿಷ್ಯ!
ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ವಿಜಯೇಂದ್ರ ಸ್ಫೋಟಕ ಭವಿಷ್ಯ!
ಗುರು ಸಂಚಾರ ಮಕರ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಮಕರ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
Video: ಪವರ್ ಕೇಬಲ್ ಕದಿಯಲು ಹೋಗಿ ಕಳ್ಳನಿಗೆ ಎಂಥಾ ಪರಿಸ್ಥಿತಿ ಬಂತು ನೋಡಿ
Video: ಪವರ್ ಕೇಬಲ್ ಕದಿಯಲು ಹೋಗಿ ಕಳ್ಳನಿಗೆ ಎಂಥಾ ಪರಿಸ್ಥಿತಿ ಬಂತು ನೋಡಿ
ಪತಿಯ ಎದುರೇ ಸಮಂತಾಗೆ ಪ್ರಪೋಸ್ ಮಾಡಿದ ಅಭಿಮಾನಿ; ರಾಜ್ ರಿಯಾಕ್ಷನ್ ಏನು?
ಪತಿಯ ಎದುರೇ ಸಮಂತಾಗೆ ಪ್ರಪೋಸ್ ಮಾಡಿದ ಅಭಿಮಾನಿ; ರಾಜ್ ರಿಯಾಕ್ಷನ್ ಏನು?
ಕೂದಲೆಳೆ ಅಂತರದಲ್ಲಿ ತಪ್ಪಿದ ಅಪಘಾತ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೂದಲೆಳೆ ಅಂತರದಲ್ಲಿ ತಪ್ಪಿದ ಅಪಘಾತ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ