AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲೋಬಲ್ ಟಿ20 ಫೈನಲ್​ನಲ್ಲಿ ಜಾಗ್ವಾರ್ಸ್ vs ಟೈಗರ್ಸ್ ಮುಖಾಮುಖಿ

Global T20 Canada 2023: ಭಾನುವಾರ ಬ್ರಾಂಪ್ಟನ್​ನಲ್ಲಿ ನಡೆಯಲಿರುವ ಗ್ಲೋಬಲ್ ಟಿ20 ಲೀಗ್ ಫೈನಲ್ ಪಂದ್ಯದಲ್ಲಿ ಸರ್ರೆ ಜಾಗ್ವಾರ್ಸ್ ಹಾಗೂ ಮಾಂಟ್ರಿಯಲ್ ಟೈಗರ್ಸ್ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಸೆಣಸಲಿದೆ.

ಗ್ಲೋಬಲ್ ಟಿ20 ಫೈನಲ್​ನಲ್ಲಿ ಜಾಗ್ವಾರ್ಸ್ vs ಟೈಗರ್ಸ್ ಮುಖಾಮುಖಿ
GT20
TV9 Web
| Updated By: ಝಾಹಿರ್ ಯೂಸುಫ್|

Updated on:Aug 06, 2023 | 5:42 PM

Share

Global T20 Canada 2023: ಕೆನಡಾದಲ್ಲಿ ನಡೆಯುತ್ತಿರುವ ಗ್ಲೋಬಲ್ ಟಿ20 ಲೀಗ್ ಅಂತಿಮ ಹಂತಕ್ಕೆ ಬಂದು ನಿಂತಿದೆ. ಭಾನುವಾರ (ಆಗಸ್ಟ್ 6) ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸರ್ರೆ ಜಾಗ್ವಾರ್ಸ್ ಮತ್ತು ಮಾಂಟ್ರಿಯಲ್ ಟೈಗರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ವ್ಯಾಂಕೋವರ್ ನೈಟ್ಸ್ ತಂಡವನ್ನು 38 ರನ್​ಗಳಿಂದ ಸೋಲಿಸಿ ಸರ್ರೆ ಜಾಗ್ವಾರ್ಸ್​ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಿದೆ.

ಮತ್ತೊಂದೆಡೆ ಎಲಿಮಿನೇಟರ್ ಪಂದ್ಯದಲ್ಲಿ ಬ್ರಾಂಪ್ಟನ್ ವುಲ್ವ್ಸ್ ವಿರುದ್ಧ 9 ವಿಕೆಟ್​ಗಳಿಂದ ಗೆದ್ದು ಮಾಂಟ್ರಿಯಲ್ ಟೈಗರ್ಸ್ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿತು. ಅಲ್ಲದೆ ಎರಡನೇ ಕ್ವಾಲಿಫೈಯರ್​ನಲ್ಲಿ ವ್ಯಾಂಕೋವರ್ ನೈಟ್ಸ್ ವಿರುದ್ಧ 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿ ಮಾಂಟ್ರಿಯಲ್ ಟೈಗರ್ಸ್ ಫೈನಲ್​ಗೆ ಎಂಟ್ರಿ ಕೊಟ್ಟಿದೆ.

ಅದರಂತೆ ಭಾನುವಾರ ಬ್ರಾಂಪ್ಟನ್​ನಲ್ಲಿ ನಡೆಯಲಿರುವ ಗ್ಲೋಬಲ್ ಟಿ20 ಲೀಗ್ ಫೈನಲ್ ಪಂದ್ಯದಲ್ಲಿ ಸರ್ರೆ ಜಾಗ್ವಾರ್ಸ್ ಹಾಗೂ ಮಾಂಟ್ರಿಯಲ್ ಟೈಗರ್ಸ್ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಸೆಣಸಲಿದೆ.

ಮಾಂಟ್ರಿಯಲ್ ಟೈಗರ್ಸ್ ತಂಡ: ಮುಹಮ್ಮದ್ ವಸೀಮ್, ಕ್ರಿಸ್ ಲಿನ್ (ನಾಯಕ), ಶ್ರೀಮಂತ ವಿಜೆರತ್ನೆ (ವಿಕೆಟ್ ಕೀಪರ್), ದಿಲ್‌ಪ್ರೀತ್ ಸಿಂಗ್, ಶೆರ್ಫೇನ್ ರುದರ್‌ಫೋರ್ಡ್, ದೀಪೇಂದ್ರ ಸಿಂಗ್ ಐರಿ, ಆಂಡ್ರೆ ರಸೆಲ್, ಕಾರ್ಲೋಸ್ ಬ್ರಾಥ್‌ವೈಟ್, ಅಯಾನ್ ಅಫ್ಜಲ್ ಖಾನ್, ಅಬ್ಬಾಸ್ ಅಫ್ರಿದಿ, ಕಲೀಮ್ ಸನಾ, ಜಹೀರ್ ಖಾನ್ , ಅಕಿಫ್ ರಾಜಾ, ಅನೂಪ್ ಚಿಮಾ, ಭೂಪೇಂದ್ರ ಸಿಂಗ್.

ಇದನ್ನೂ ಓದಿ: Tilak Varma: ದಾಖಲೆಯೊಂದಿಗೆ ಹೊಸ ಇನಿಂಗ್ಸ್ ಆರಂಭಿಸಿದ ತಿಲಕ್ ವರ್ಮಾ

ಸರ್ರೆ ಜಾಗ್ವಾರ್ಸ್ ತಂಡ: ಮೊಹಮ್ಮದ್ ಹ್ಯಾರಿಸ್, ಜತೀಂದರ್ ಸಿಂಗ್, ಲಿಟ್ಟನ್ ದಾಸ್(ವಿಕೆಟ್ ಕೀಪರ್), ಪರ್ಗತ್ ಸಿಂಗ್, ಇಫ್ತಿಕಾರ್ ಅಹ್ಮದ್(ನಾಯಕ), ಅಯಾನ್ ಖಾನ್, ಮ್ಯಾಥ್ಯೂ ಫೋರ್ಡ್, ದಿಲ್ಲನ್ ಹೇಲಿಗರ್, ಸಂದೀಪ್ ಲಾಮಿಚಾನೆ, ಸ್ಪೆನ್ಸರ್ ಜಾನ್ಸನ್, ಅಮ್ಮರ್ ಖಾಲಿದ್, ಮೊಹಮ್ಮದ್ ವಾಸಿಂ ಪಟೇಲ್, ಜೂನಿಯರ್, ಶೀಲ್ ಪಟೇಲ್ ಕೈರವ್ ಶರ್ಮಾ, ಅಲೆಕ್ಸ್ ಹೇಲ್ಸ್, ಬೆನ್ ಕಟಿಂಗ್, ಸನ್ನಿ ಮಾಥರು, ಬರ್ನಾರ್ಡ್ ಸ್ಕೋಲ್ಟ್ಜ್.

Published On - 5:42 pm, Sun, 6 August 23

ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ