AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲೋಬಲ್ ಟಿ20 ಫೈನಲ್​ನಲ್ಲಿ ಜಾಗ್ವಾರ್ಸ್ vs ಟೈಗರ್ಸ್ ಮುಖಾಮುಖಿ

Global T20 Canada 2023: ಭಾನುವಾರ ಬ್ರಾಂಪ್ಟನ್​ನಲ್ಲಿ ನಡೆಯಲಿರುವ ಗ್ಲೋಬಲ್ ಟಿ20 ಲೀಗ್ ಫೈನಲ್ ಪಂದ್ಯದಲ್ಲಿ ಸರ್ರೆ ಜಾಗ್ವಾರ್ಸ್ ಹಾಗೂ ಮಾಂಟ್ರಿಯಲ್ ಟೈಗರ್ಸ್ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಸೆಣಸಲಿದೆ.

ಗ್ಲೋಬಲ್ ಟಿ20 ಫೈನಲ್​ನಲ್ಲಿ ಜಾಗ್ವಾರ್ಸ್ vs ಟೈಗರ್ಸ್ ಮುಖಾಮುಖಿ
GT20
TV9 Web
| Edited By: |

Updated on:Aug 06, 2023 | 5:42 PM

Share

Global T20 Canada 2023: ಕೆನಡಾದಲ್ಲಿ ನಡೆಯುತ್ತಿರುವ ಗ್ಲೋಬಲ್ ಟಿ20 ಲೀಗ್ ಅಂತಿಮ ಹಂತಕ್ಕೆ ಬಂದು ನಿಂತಿದೆ. ಭಾನುವಾರ (ಆಗಸ್ಟ್ 6) ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸರ್ರೆ ಜಾಗ್ವಾರ್ಸ್ ಮತ್ತು ಮಾಂಟ್ರಿಯಲ್ ಟೈಗರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ವ್ಯಾಂಕೋವರ್ ನೈಟ್ಸ್ ತಂಡವನ್ನು 38 ರನ್​ಗಳಿಂದ ಸೋಲಿಸಿ ಸರ್ರೆ ಜಾಗ್ವಾರ್ಸ್​ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಿದೆ.

ಮತ್ತೊಂದೆಡೆ ಎಲಿಮಿನೇಟರ್ ಪಂದ್ಯದಲ್ಲಿ ಬ್ರಾಂಪ್ಟನ್ ವುಲ್ವ್ಸ್ ವಿರುದ್ಧ 9 ವಿಕೆಟ್​ಗಳಿಂದ ಗೆದ್ದು ಮಾಂಟ್ರಿಯಲ್ ಟೈಗರ್ಸ್ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿತು. ಅಲ್ಲದೆ ಎರಡನೇ ಕ್ವಾಲಿಫೈಯರ್​ನಲ್ಲಿ ವ್ಯಾಂಕೋವರ್ ನೈಟ್ಸ್ ವಿರುದ್ಧ 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿ ಮಾಂಟ್ರಿಯಲ್ ಟೈಗರ್ಸ್ ಫೈನಲ್​ಗೆ ಎಂಟ್ರಿ ಕೊಟ್ಟಿದೆ.

ಅದರಂತೆ ಭಾನುವಾರ ಬ್ರಾಂಪ್ಟನ್​ನಲ್ಲಿ ನಡೆಯಲಿರುವ ಗ್ಲೋಬಲ್ ಟಿ20 ಲೀಗ್ ಫೈನಲ್ ಪಂದ್ಯದಲ್ಲಿ ಸರ್ರೆ ಜಾಗ್ವಾರ್ಸ್ ಹಾಗೂ ಮಾಂಟ್ರಿಯಲ್ ಟೈಗರ್ಸ್ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಸೆಣಸಲಿದೆ.

ಮಾಂಟ್ರಿಯಲ್ ಟೈಗರ್ಸ್ ತಂಡ: ಮುಹಮ್ಮದ್ ವಸೀಮ್, ಕ್ರಿಸ್ ಲಿನ್ (ನಾಯಕ), ಶ್ರೀಮಂತ ವಿಜೆರತ್ನೆ (ವಿಕೆಟ್ ಕೀಪರ್), ದಿಲ್‌ಪ್ರೀತ್ ಸಿಂಗ್, ಶೆರ್ಫೇನ್ ರುದರ್‌ಫೋರ್ಡ್, ದೀಪೇಂದ್ರ ಸಿಂಗ್ ಐರಿ, ಆಂಡ್ರೆ ರಸೆಲ್, ಕಾರ್ಲೋಸ್ ಬ್ರಾಥ್‌ವೈಟ್, ಅಯಾನ್ ಅಫ್ಜಲ್ ಖಾನ್, ಅಬ್ಬಾಸ್ ಅಫ್ರಿದಿ, ಕಲೀಮ್ ಸನಾ, ಜಹೀರ್ ಖಾನ್ , ಅಕಿಫ್ ರಾಜಾ, ಅನೂಪ್ ಚಿಮಾ, ಭೂಪೇಂದ್ರ ಸಿಂಗ್.

ಇದನ್ನೂ ಓದಿ: Tilak Varma: ದಾಖಲೆಯೊಂದಿಗೆ ಹೊಸ ಇನಿಂಗ್ಸ್ ಆರಂಭಿಸಿದ ತಿಲಕ್ ವರ್ಮಾ

ಸರ್ರೆ ಜಾಗ್ವಾರ್ಸ್ ತಂಡ: ಮೊಹಮ್ಮದ್ ಹ್ಯಾರಿಸ್, ಜತೀಂದರ್ ಸಿಂಗ್, ಲಿಟ್ಟನ್ ದಾಸ್(ವಿಕೆಟ್ ಕೀಪರ್), ಪರ್ಗತ್ ಸಿಂಗ್, ಇಫ್ತಿಕಾರ್ ಅಹ್ಮದ್(ನಾಯಕ), ಅಯಾನ್ ಖಾನ್, ಮ್ಯಾಥ್ಯೂ ಫೋರ್ಡ್, ದಿಲ್ಲನ್ ಹೇಲಿಗರ್, ಸಂದೀಪ್ ಲಾಮಿಚಾನೆ, ಸ್ಪೆನ್ಸರ್ ಜಾನ್ಸನ್, ಅಮ್ಮರ್ ಖಾಲಿದ್, ಮೊಹಮ್ಮದ್ ವಾಸಿಂ ಪಟೇಲ್, ಜೂನಿಯರ್, ಶೀಲ್ ಪಟೇಲ್ ಕೈರವ್ ಶರ್ಮಾ, ಅಲೆಕ್ಸ್ ಹೇಲ್ಸ್, ಬೆನ್ ಕಟಿಂಗ್, ಸನ್ನಿ ಮಾಥರು, ಬರ್ನಾರ್ಡ್ ಸ್ಕೋಲ್ಟ್ಜ್.

Published On - 5:42 pm, Sun, 6 August 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್