AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT Retention List for IPL 2025: ಐವರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡ ಗುಜರಾತ್

Gujarat Titans Retention Players List for IPL 2025: ತನ್ನ ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್ ಪಟ್ಟಕ್ಕೇರಿ, ನಂತರದ ಸೀಸನ್​ನಲ್ಲೂ ಫೈನಲ್​ಗೇರಿದ್ದ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯ ಕಳೆದ ಆವೃತ್ತಿಯ ಪ್ರದರ್ಶನ ಅಷ್ಟಕಷ್ಟೆ. ಹೀಗಾಗಿ ಮುಂದಿನ ಆವೃತ್ತಿಗೆ ಬಲಿಷ್ಠ ತಂಡವನ್ನು ಕಟ್ಟಲು ಸಿದ್ದವಾಗಿರುವ ಗುಜರಾತ್, ಮೆಗಾ ಹರಾಜಿಗೂ ಮುನ್ನ ಐವರು ಆಟಗಾರರನ್ನು ತನ್ನಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ.

GT Retention List for IPL 2025: ಐವರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡ ಗುಜರಾತ್
ಗುಜರಾತ್ ತಂಡ
ಪೃಥ್ವಿಶಂಕರ
|

Updated on:Oct 31, 2024 | 8:46 PM

Share

ತನ್ನ ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್ ಪಟ್ಟಕ್ಕೇರಿ, ನಂತರದ ಸೀಸನ್​ನಲ್ಲೂ ಫೈನಲ್​ಗೇರಿದ್ದ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯ ಕಳೆದ ಆವೃತ್ತಿಯ ಪ್ರದರ್ಶನ ಅಷ್ಟಕಷ್ಟೆ. ಹೀಗಾಗಿ ಮುಂದಿನ ಆವೃತ್ತಿಗೆ ಬಲಿಷ್ಠ ತಂಡವನ್ನು ಕಟ್ಟಲು ಸಿದ್ದವಾಗಿರುವ ಗುಜರಾತ್, ಮೆಗಾ ಹರಾಜಿಗೂ ಮುನ್ನ ಐವರು ಆಟಗಾರರನ್ನು ತನ್ನಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಅವರಲ್ಲಿ ನಾಯಕ ಶುಭ್​ಮನ್ ಗಿಲ್, ರಶೀದ್ ಖಾನ್, ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ ಮತ್ತು ಶಾರುಖ್ ಖಾನ್ ಸೇರಿದರೆ, ಉಳಿದಂತೆ ಅನುಭವಿ ಆಟಗಾರರಾದ ಮೊಹಮ್ಮದ್ ಶಮಿ, ಡೇವಿಡ್ ಮಿಲ್ಲರ್, ಉಮೇಶ್ ಯಾದವ್, ಕೇನ್ ವಿಲಿಯಮ್ಸನ್ ಅವರನ್ನು ತಂಡದಿಂದ ಬಿಡುಗಡೆ ಮಾಡಿದೆ.

ಯಾರಿಗೆ ಎಷ್ಟು ಮೊತ್ತ?

ಗುಜರಾತ್ ಟೈಟಾನ್ಸ್ ಒಟ್ಟು 5 ಆಟಗಾರರನ್ನು ಉಳಿಸಿಕೊಂಡಿದೆ. ಅದರಲ್ಲಿ ಅಫ್ಘಾನಿಸ್ತಾನದ ಸ್ಟಾರ್ ಪ್ಲೇಯರ್ ರಶೀದ್ ಖಾನ್​ರನ್ನು ಗರಿಷ್ಠ 18 ಕೋಟಿ ರೂ.ಗೆ ಉಳಿಸಿಕೊಂಡರೆ ನಾಯಕ ಶುಭ್‌ಮನ್ ಗಿಲ್​ಗೆ 16.5 ಕೋಟಿ ನೀಡಿ ಎರಡನೇ ಆಯ್ಕೆಯಾಗಿ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ. ಹಾಗೆಯೇ ಆರಂಭಿಕ ಬ್ಯಾಟರ್ ಸಾಯಿ ಸುದರ್ಶನ್ ಅವರನ್ನು 8.5 ಕೋಟಿ ರೂ.ಗೆ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ. ಈ ಮೂವರನ್ನು ಹೊರತುಪಡಿಸಿ ರಾಹುಲ್ ತೆವಾಟಿಯಾ ಮತ್ತು ಶಾರುಖ್ ಖಾನ್ ಅವರನ್ನು ತಲಾ 4 ಕೋಟಿ ರೂ.ಗೆ ಅನ್‌ಕ್ಯಾಪ್ಡ್ ಆಟಗಾರರಾಗಿ ಉಳಿಸಿಕೊಳ್ಳಲಾಗಿದೆ.

ಕಳೆದ ಸೀಸನ್​ನಲ್ಲಿ ಗುಜರಾತ್ ಪ್ರದರ್ಶನ ಅಷ್ಟಕಷ್ಟೆ

ಶುಬ್‌ಮನ್ ಗಿಲ್ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ತಂಡ ಕೊನೆಯ ಸೀಸನ್​ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಗುಜರಾತ್ ಟೈಟಾನ್ಸ್ ತಂಡ ಆಡಿದ 14 ಪಂದ್ಯಗಳಲ್ಲಿ 5ರಲ್ಲಿ ಮಾತ್ರ ಗೆದ್ದಿದ್ದರೆ, 7 ಪಂದ್ಯಗಳಲ್ಲಿ ಸೋಲು ಅನುಭವಿಸಬೇಕಾಯಿತು. ಆದಾಗ್ಯೂ, ಇದರ ಹೊರತಾಗಿಯೂ, ಫ್ರಾಂಚೈಸ್ ತನ್ನ ಇಬ್ಬರು ಸ್ಟಾರ್ ಆಟಗಾರರಾದ ನಾಯಕ ಶುಭ್​ಮನ್ ಗಿಲ್ ಮತ್ತು ರಶೀದ್ ಖಾನ್ ಅವರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ. ಗುಜರಾತ್ ತಂಡದಲ್ಲಿ ಅನೇಕ ಅತ್ಯುತ್ತಮ ಆಟಗಾರರು ಇದ್ದು, ಅವರೆಲ್ಲರು ಈಗ ಮೆಗಾ ಹರಾಜಿನ ಭಾಗವಾಗಲಿದ್ದಾರೆ.

ಬಿಡುಗಡೆಯಾದ ಆಟಗಾರರು

ಮ್ಯಾಥ್ಯೂ ವೇಡ್, ಡೇವಿಡ್ ಮಿಲ್ಲರ್, ನೂರ್ ಅಹ್ಮದ್, ಉಮೇಶ್ ಯಾದವ್, ಮೋಹಿತ್ ಶರ್ಮಾ, ಕಾರ್ತಿಕ್ ತ್ಯಾಗಿ, ಸಂದೀಪ್ ವಾರಿಯರ್, ಅಭಿನವ್ ಮನೋಹರ್, ಶರತ್ ಬಿಆರ್, ದರ್ಶನ್ ನಲ್ಕಂಡೆ , ಜಯಂತ್ ಯಾದವ್, ವೃದ್ಧಿಮಾನ್ ಸಹಾ, ಕೇನ್ ವಿಲಿಯಮ್ಸನ್, ವಿಜಯ್ ಶಂಕರ್, ಜೋಶುವಾ ಲಿಟಲ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಸ್ಪೆನ್ಸರ್ ಜಾನ್ಸನ್, ಅಜ್ಮತುಲ್ಲಾ ಒಮರ್ಜಾಯ್, ಮಾನವ್ ಸುತಾರ್, ಗುರ್ನೂರ್ ಬ್ರಾರ್ ತಂಡದಿಂದ ಹೊರಬಿದ್ದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:59 pm, Thu, 31 October 24

TV9 Network ನ್ಯೂಸ್ ಡೈರೆಕ್ಟರ್​​ಗೆ ವಾಯ್ಸ್ ಆಪ್ ದ ಪೀಪಲ್ ಅವಾರ್ಡ್‌
TV9 Network ನ್ಯೂಸ್ ಡೈರೆಕ್ಟರ್​​ಗೆ ವಾಯ್ಸ್ ಆಪ್ ದ ಪೀಪಲ್ ಅವಾರ್ಡ್‌
ಕೆಂಪೇಗೌಡ ಏರ್ಪೋಟ್​​ನಲ್ಲೇ ಲಾಂಗ್ ಹಿಡಿದು ಅಟ್ಟಾಡಿಸಿದ ವಿಡಿಯೋ ಸೆರೆ
ಕೆಂಪೇಗೌಡ ಏರ್ಪೋಟ್​​ನಲ್ಲೇ ಲಾಂಗ್ ಹಿಡಿದು ಅಟ್ಟಾಡಿಸಿದ ವಿಡಿಯೋ ಸೆರೆ
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ