AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs CSK: ಪಂದ್ಯದ ಆರಂಭದಲ್ಲೇ ಗಾಯಗೊಂಡು ಮೈದಾನದಿಂದ ಹೊರ ನಡೆದ ಸಂಜು

Sanju Samson Injury: ಐಪಿಎಲ್ 2026 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗಾಯದ ಸಮಸ್ಯೆ ಬೆನ್ನಟ್ಟಿದೆ. ಪ್ರಮುಖ ಆಟಗಾರರು ಹೊರಗುಳಿದಿರುವಾಗಲೇ, ಇದೀಗ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಬೆರಳಿಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಇದರಿಂದ ಅವರು ಮೈದಾನ ತೊರೆದಿದ್ದು, ಸಿಎಸ್‌ಕೆ ಪ್ಲೇಆಫ್ ಕನಸು ಮತ್ತಷ್ಟು ಮಂಕಾಗಿದೆ. ಸಂಜು ಬ್ಯಾಟಿಂಗ್ ಮಾಡುತ್ತಾರಾ ಎಂಬ ಆತಂಕ ಅಭಿಮಾನಿಗಳಲ್ಲಿ ಮನೆ ಮಾಡಿದೆ.

GT vs CSK: ಪಂದ್ಯದ ಆರಂಭದಲ್ಲೇ ಗಾಯಗೊಂಡು ಮೈದಾನದಿಂದ ಹೊರ ನಡೆದ ಸಂಜು
Sanju Samson
ಪೃಥ್ವಿಶಂಕರ
|

Updated on:May 21, 2026 | 8:41 PM

Share

ಐಪಿಎಲ್ 2026 (IPL 2026) ರ ಲೀಗ್ ಹಂತದಲ್ಲೇ ಪಯಣ ಮುಗಿಸುವ ಹಂತದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಈ ಹಂತದಲ್ಲೂ ಆಟಗಾರರ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅನೇಕ ಪ್ರಮುಖ ಆಟಗಾರರು ಈಗಾಗಲೇ ಗಾಯಗಳಿಂದಾಗಿ ಪಂದ್ಯಾವಳಿಯಿಂದ ಹೊರಗುಳಿದಿದ್ದರು. ಈಗ ತಂಡದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ (Sanju Samson) ಕೂಡ ಆ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯುತ್ತಿರುವ ತಂಡದ ಕೊನೆಯ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ಬೆರಳಿಗೆ ಗಂಭೀರ ಗಾಯವಾಗಿದೆ. ಹೀಗಾಗಿ ವಿಕೆಟ್‌ಕೀಪಿಂಗ್ ಮಾಡುತ್ತಿದ್ದ ಸಂಜು ನೋವಿನಿಂದ ನರಳುತ್ತ್ತಲೇ ಮೈದಾನ ತೊರೆದಿದ್ದಾರೆ.

ಎಡಗೈ ಕಿರುಬೆರಳಿಗೆ ಗಾಯ

ಗುಜರಾತ್ ಟೈಟಾನ್ಸ್ ಇನ್ನಿಂಗ್ಸ್​ನ ಆರಂಭದಲ್ಲೇ ಸಂಜು ಗಾಯಕ್ಕೆ ತುತ್ತಾದರು. ಸಿಎಸ್‌ಕೆ ಬೌಲರ್ ಸ್ಪೆನ್ಸರ್ ಜಾನ್ಸನ್ ಎಸೆದ ಚೆಂಡನ್ನು ಸಂಜು ಸ್ಯಾಮ್ಸನ್ ಹಿಡಿಯಲು ಪ್ರಯತ್ನಿಸಿದರು. ಆದರೆ, 144 ಕಿ.ಮೀ ವೇಗದಲ್ಲಿ ಬಂದ ಚೆಂಡು ಅನಿರೀಕ್ಷಿತವಾಗಿ ಸ್ವಿಂಗ್ ಆಯಿತು. ಅದನ್ನು ಹಿಡಿಯುವ ಯತ್ನದಲ್ಲಿ ಸಂಜು ಅವರ ಎಡಗೈ ಕಿರುಬೆರಳಿಗೆ ಚೆಂಡು ರಬಸವಾಗಿ ಬಡಿಯಿತು. ಇದರಿಂದ ಸಂಜು ತೀವ್ರ ನೋವಿನಿಂದ ನರಳಲಾರಂಭಿಸಿದರು. ಕೂಡಲೇ ತಂಡದ ಫಿಸಿಯೋ ಮೈದಾನಕ್ಕೆ ಬಂದು ಚಿಕಿತ್ಸೆ ನೀಡಿದರು, ಆದರೆ ನೋವು ಕಡಿಮೆಯಾಗಲಿಲ್ಲ. ಆದ್ದರಿಂದ ಸಂಜು ಸ್ಯಾಮ್ಸನ್ ಮೈದಾನವನ್ನು ತೊರೆದು ಪೆವಿಲಿಯನ್ ಕಡೆಗೆ ನಡೆದರು. ಸಂಜು ಬದಲಿಗೆ ಉರ್ವಿಲ್ ಪಟೇಲ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾರೆ.

ಗಾಯದ ಸುಳಿಯಲ್ಲಿ ಸಿಎಸ್​ಕೆ

ಮೇಲೆ ಹೇಳಿದಂತೆ ಈ ಸೀಸನ್ ಆರಂಭದಿಂದಲೂ ಚೆನ್ನೈ ತಂಡ ಉತ್ತಮ ಪ್ರದರ್ಶನ ನೀಡುತ್ತಿಲ್ಲ. ಈಗಾಗಲೇ, ಎಂಎಸ್ ಧೋನಿ ಮತ್ತು ನಾಥನ್ ಎಲ್ಲಿಸ್ ಅವರಂತಹ ಸ್ಟಾರ್ ಆಟಗಾರರು ವಿವಿಧ ಗಾಯಗಳಿಂದ ಬಳಲುತ್ತಿದ್ದಾರೆ. ಕೆಲವರು ಇಡೀ ಟೂರ್ನಿಯಿಂದಲೇ ಹೊರಗುಳಿದಿದ್ದಾರೆ. ಇಂತಹ ಕಠಿಣ ಸಮಯದಲ್ಲಿ ತಂಡಕ್ಕೆ ಬೆನ್ನೆಲುಬಾಗಿದ್ದ ಸಂಜು ಸ್ಯಾಮ್ಸನ್ ಕೂಡ ಇದೀಗ ಗಾಯಕ್ಕೆ ತುತ್ತಾಗಿದ್ದಾರೆ.

GT vs CSK IPL 2026 Live Score: ವಿಕೆಟ್ ಹುಡುಕಾಟದಲ್ಲಿ ಸಿಎಸ್​ಕೆ

ಬ್ಯಾಟಿಂಗ್‌ ಮಾಡ್ತಾರಾ ಸಂಜು?

ಸಂಜು ಸ್ಯಾಮ್ಸನ್ ಪ್ರಸ್ತುತ ಚೆನ್ನೈ ತಂಡದ ಫಿಸಿಯೋಗಳ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆರಳಿನ ಗಾಯದಿಂದಾಗಿ ಕೀಪಿಂಗ್ ಕಷ್ಟವಾಗಿದ್ದರೂ, ಅವರು ಬ್ಯಾಟಿಂಗ್ ಮಾಡಬಹುದು ಎಂಬ ನಿರೀಕ್ಷೆ ಇದೆ. ಚೆನ್ನೈ ತಂಡಕ್ಕೆ ಬ್ಯಾಟಿಂಗ್ ಪ್ರಾರಂಭಿಸಲು ಇನ್ನೂ ಸಮಯವಿರುವುದರಿಂದ, ಸಂಜು ಸ್ಯಾಮ್ಸನ್ ನೋವು ನಿವಾರಕಗಳನ್ನು ತೆಗೆದುಕೊಂಡರೂ ಸಹ ಈ ನಿರ್ಣಾಯಕ ರನ್ ಚೇಸ್‌ನಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ಸಿಗುತ್ತದೆ ಎಂದು ಅಭಿಮಾನಿಗಳು ಆಶಿಸಿದ್ದಾರೆ. ಸಂಜು ಬ್ಯಾಟಿಂಗ್ ಮಾಡಲು ಬಾರದಿದ್ದರೆ, ಅದು ಚೆನ್ನೈ ತಂಡದ ಗೆಲುವಿನ ಸಾಧ್ಯತೆಗಳಿಗೆ ಧಕ್ಕೆ ತರಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:38 pm, Thu, 21 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್