AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs CSK: ಚೆನ್ನೈ ತಂಡದಲ್ಲಿ ಹೊಸಬ; ಮೊದಲ ಪಂದ್ಯಕ್ಕೆ ಉಭಯ ತಂಡಗಳು ಹೀಗಿವೆ

GT vs CSK: ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಚೆನ್ನೈ ಮೊದಲು ಬ್ಯಾಟಿಂಗ್ ಮಾಡಲಿದೆ.

GT vs CSK: ಚೆನ್ನೈ ತಂಡದಲ್ಲಿ ಹೊಸಬ; ಮೊದಲ ಪಂದ್ಯಕ್ಕೆ ಉಭಯ ತಂಡಗಳು ಹೀಗಿವೆ
ಮೊದಲ ಪಂದ್ಯ
ಪೃಥ್ವಿಶಂಕರ
|

Updated on:Mar 31, 2023 | 7:53 PM

Share

ಐಪಿಎಲ್ 16ನೇ (IPL 2023) ಸೀಸನ್​ಗೆ ಅದ್ಧೂರಿ ಆರಂಭ ಸಿಕ್ಕಿದೆ. ಮೊದಲ ಪಂದ್ಯ ಆರಂಭಕ್ಕೂ ಮುನ್ನ ನಡೆದ ಉದ್ಘಾಟನಾ ಸಮಾರಂಭ ಕೂಡ ಅದ್ಧೂರಿಯಾಗಿ ನಡೆಯಿತು. ಈ ಸಮಾರಂಭದಲ್ಲಿ ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ (Arijit Singh) ಮೊದಲು ಸಂಗೀತ ಕಾರ್ಯಕ್ರಮ ನೀಡಿದರು. ನಂತರ ಸೌತ್ ಇಂಡಿಯನ್ ಸಿನಿಮಾ ನಟಿಯರಾದ ತಮ್ಮನಾ ಭಾಟಿಯಾ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna and Tamannaah Bhatia) ಸೊಂಟ ಬಳುಕಿಸಿದರು. ಇದಾದ ನಂತರ ಉಭಯ ತಂಡದ ನಾಯಕರು ಸೇರಿದಂತೆ, ಬಿಸಿಸಿಐನ (BCCI) ಗಣ್ಯರು ಕೂಡ ವೇದಿಕೆ ಮೇಲೆ ಉಪಸ್ಥಿತರಿದ್ದು, ಐಪಿಎಲ್​ಗೆ ಅದ್ಧೂರಿ ಚಾಲನೆ ನೀಡಿದರು. ಆನಂತರ ಮೊದಲ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಚೆನ್ನೈ ಮೊದಲು ಬ್ಯಾಟಿಂಗ್ ಮಾಡಲಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಮೊದಲ ಪಂದ್ಯಕ್ಕೆ ಉಭಯ ತಂಡಗಳು ಬಲಿಷ್ಠ ಆಡುವ ಇಲೆವೆನ್ ಪ್ರಕಟಿಸಿವೆ. ಇನ್ನು ಈ ಉಭಯ ತಂಡಗಳ ನಡುವಿನ ಮುಖಾಮುಖಿ ನೋಡಿದರೆ, ಸದ್ಯಕ್ಕೆ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಪ್ರಾಬಲ್ಯ ಹೊಂದಿದೆ. ಎರಡು ತಂಡಗಳ ನಡುವೆ ಕೇವಲ 2 ಪಂದ್ಯಗಳು ಮಾತ್ರ ನಡೆದಿವೆ. ಎರಡೂ ಪಂದ್ಯಗಳ ಗೆಲುವು ಗುಜರಾತ್ ಖಾತೆಯಲ್ಲಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆದ್ದರೆ ಗುಜರಾತ್ ಹ್ಯಾಟ್ರಿಕ್ ಗೆಲುವು ಸಾಧಿಸಿದ ದಾಖಲೆ ಬರೆಯಲಿದೆ. ಮತ್ತೊಂದೆಡೆ, ಹೆಚ್ಚಿನ ಐಪಿಎಲ್ ತಂಡಗಳ ವಿರುದ್ಧ ಅದ್ಭುತ ದಾಖಲೆಯನ್ನು ಹೊಂದಿರುವ ಧೋನಿಯ ಚೆನ್ನೈ, ಈ ತಂಡದ ವಿರುದ್ಧ ತನ್ನ ಮೊದಲ ಗೆಲುವು ದಾಖಲಿಸಲು ಉತ್ಸುಕವಾಗಿದೆ.

IPL 2023 Opening Ceremony Live: ಚೆನ್ನೈ ಬ್ಯಾಟಿಂಗ್ ಆರಂಭ; ಕಾನ್ವೇ ಔಟ್

ಉಭಯ ತಂಡಗಳು

ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಅಂಬಟಿ ರಾಯುಡು, ಬೆನ್ ಸ್ಟೋಕ್ಸ್, ಮೊಯಿನ್ ಅಲಿ, ರವೀಂದ್ರ ಜಡೇಜಾ, ಮಿಚೆಲ್ ಸ್ಯಾಂಟ್ನರ್, ಶಿವಂ ದುಬೆ, ದೀಪಕ್ ಚಹಾರ್, ರಾಜವರ್ಧನ್ ಹಂಗರ್ಗೇಕರ್

ಗುಜರಾತ್ ಟೈಟಾನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭ್​ಮನ್ ಗಿಲ್, ಕೇನ್ ವಿಲಿಯಮ್ಸನ್, ವೃದ್ಧಿಮಾನ್ ಸಹಾ, ವಿಜಯ್ ಶಂಕರ್, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ರಾಹುಲ್ ತೆವಾಟಿಯಾ, ಯಶ್ ದಯಾಲ್ ಮತ್ತು ಜೋಶ್ ಲಿಟಲ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:32 pm, Fri, 31 March 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್