AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಗೆಲ್ಲೋರು ಯಾರು? ಹೀಗಿದೆ RCB ಲೆಕ್ಕಾಚಾರ

IPL 2026 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ.

IPL 2026: ಗೆಲ್ಲೋರು ಯಾರು? ಹೀಗಿದೆ RCB ಲೆಕ್ಕಾಚಾರ
RCBImage Credit source: RCB
ಝಾಹಿರ್ ಯೂಸುಫ್
|

Updated on:May 25, 2026 | 12:54 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಆತಿಥ್ಯವಹಿಸಲು ವಿಶ್ವದ ಅತ್ಯಂತ ಸುಂದರ ಕ್ರಿಕೆಟ್ ಕ್ರೀಡಾಂಗಣಗಳಲ್ಲಿ ಒಂದಾದ ಹಿಮಾಚಲ ಪ್ರದೇಶದ ಧರ್ಮಶಾಲಾದ ಎಚ್‌ಪಿಸಿಎ (HPCA) ಸ್ಟೇಡಿಯಂ ಸಜ್ಜಾಗಿದೆ. ಈ ಮೈದಾನದಲ್ಲಿ ನಾಳೆ (ಮೇ 26) ನಡೆಯಲಿರುವ ಪ್ಲೇಆಫ್​ನ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಮುಖಾಮುಖಿಗೂ ಮುನ್ನ ಆರ್​ಸಿಬಿ ಈ ಮೈದಾನದಲ್ಲಿ ಗೆಲ್ಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕೆಂದರೆ ಹೆಚ್​ಪಿಸಿಎ ಮೈದಾನದಲ್ಲಿ ಆರ್​ಸಿಬಿ ಈವರೆಗೆ ಆಡಿರುವುದು ಕೇವಲ 3 ಪಂದ್ಯಗಳು. ಈ ಮೂರು ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡದ ಪ್ರದರ್ಶನ ಹೇಗಿತ್ತು ಎಂಬುದರ ಇಣುಕು ನೋಟ ಇಲ್ಲಿದೆ…

  •  ಮೇ 17, 2026: ಇತ್ತೀಚೆಗೆ ಈ ಮೈದಾನದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಆರ್​ಸಿಬಿ 4 ವಿಕೆಟ್‌ ಕಳೆದುಕೊಂಡು 222 ರನ್ ಕಲೆಹಾಕಿದ್ದರು. ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡವನ್ನು 199/8 ರನ್‌ಗಳಿಗೆ ನಿಯಂತ್ರಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಜಯ ಸಾಧಿಸಿತ್ತು
  • 2. ಮೇ 9, 2024: ಈ ಮೈದಾನದಲ್ಲಿ ಗರಿಷ್ಠ ಸ್ಕೋರ್​ಗಳಿಸಿದ ದಾಖಲೆ ಆರ್​ಸಿಬಿ ತಂಡದ ಹೆಸರಿನಲ್ಲಿದೆ. 2024 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಈ ಮೈದಾನದಲ್ಲಿ ಆರ್​ಸಿಬಿ 20 ಓವರ್​ಗಳಲ್ಲಿ 241 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್​ ಕೇವಲ 181 ರನ್‌ಗಳಿಗೆ ಆಲೌಟ್ ಆಗಿತ್ತು.
  • ಮೇ 17, 2011: ಧರ್ಮಶಾಲಾದಲ್ಲಿ ಆರ್‌ಸಿಬಿ ಆಡಿದ ಮೊದಲ ಪಂದ್ಯದಲ್ಲಿ ಸೋಲನುಭವಿಸಿತ್ತು. ಅದು ಕೂಡ 15 ವರ್ಷಗಳ ಹಿಂದೆ. ಅಂದು ಆ್ಯಡಮ್ ಗಿಲ್‌ಕ್ರಿಸ್ಟ್ ನೇತೃತ್ವದ ಪಂಜಾಬ್ ಕಿಂಗ್ಸ್ 20 ಓವರ್​ಗಳಲ್ಲಿ 232 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ಕೇವಲ 121 ರನ್‌ಗಳಿಗೆ ಆಲೌಟ್ ಆಗಿ ಹೀನಾಯವಾಗಿ ಸೋಲೊಪ್ಪಿಕೊಂಡಿದ್ದರು.

ಅಂದರೆ ಧರ್ಮಶಾಲಾದಲ್ಲಿ ಆರ್​ಸಿಬಿ ಆಡಿದ ಮೂರು ಮ್ಯಾಚ್​ಗಳಲ್ಲಿ 2 ಜಯ ಸಾಧಿಸಿದೆ. ಈ ಎರಡೂ ಪಂದ್ಯಗಳನ್ನು ಪಂಜಾಬ್ ಕಿಂಗ್ಸ್ ವಿರುದ್ಧದವೇ ಗೆದ್ದುಕೊಂಡಿದೆ. ಅಂದರೆ ತವರು ಪ್ರೇಕ್ಷಕರ ಎದುರಲ್ಲಿ ಪಂಜಾಬ್ ಪಡೆಯನ್ನು ಬಗ್ಗು ಬಡಿಯುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಹೀಗಾಗಿಯೇ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ತಂಡವಾಗಿ ಆರ್​ಸಿಬಿ ಗುರುತಿಸಿಕೊಂಡಿದೆ.

ಏಕೆಂದರೆ ಗುಜರಾತ್ ಟೈಟಾನ್ಸ್ ತಂಡವು ಧರ್ಮಶಾಲಾ ಮೈದಾನದಲ್ಲಿ ಈವರೆಗೆ ಒಂದೇ ಒಂದು ಪಂದ್ಯವಾಡಿಲ್ಲ. ಅಂದರೆ ಇದೇ ಮೊದಲ ಬಾರಿಗೆ ಕಣಕ್ಕಿಳಿಯಲು ಸಜ್ಜಾಗಿದೆ. ಅತ್ತ ಮೂರು ಪಂದ್ಯಗಳನ್ನಾಡಿರುವ ಅನುಭವ ಹೊಂದಿರುವ, ಅದರಲ್ಲೂ ಈ ಬಾರಿ ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೆಚ್​ಪಿಸಿಎ ಮೈದಾನದ ಪಿಚ್​ ಬಗ್ಗೆ ಸ್ಪಷ್ಟತೆ ಇದೆ. ಹೀಗಾಗಿಯೇ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಪ್ರಚಂಡ ಪ್ರದರ್ಶನ ನೀಡುವುದನ್ನು ಎದುರು ನೋಡಬಹುದು.

ಧರ್ಮಶಾಲಾದಲ್ಲಿ ಮಿಂಚಿದ ಆರ್‌ಸಿಬಿ ಸ್ಟಾರ್ಸ್:

  •  ವಿರಾಟ್ ಕೊಹ್ಲಿ: ಹೆಚ್​ಪಿಸಿಎ ಗ್ರೌಂಡ್ ವಿರಾಟ್ ಕೊಹ್ಲಿಯ ನೆಚ್ಚಿನ ಮೈದಾನಗಳಲ್ಲಿ ಒಂದು. ಇಲ್ಲಿ ಆಡಿದ ಪಂದ್ಯಗಳಲ್ಲಿ ಕೊಹ್ಲಿ 92 (2024) ಮತ್ತು 58 (2026) ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
  •  ವೆಂಕಟೇಶ್ ಅಯ್ಯರ್: ಈ ಬಾರಿಯ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್​ ವಿರುದ್ಧ ಕೇವಲ 40 ಎಸೆತಗಳಲ್ಲಿ ಅಜೇಯ 73 ರನ್ ಚಚ್ಚಿ ವೆಂಕಟೇಶ್ ಅಯ್ಯರ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.
  • ರಾಸಿಖ್ ಸಲಾಮ್: ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಡೆತ್ ಓವರ್‌ಗಳಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ್ದ ರಾಸಿಖ್  3 ವಿಕೆಟ್ ಕಬಳಿಸಿ ಮಿಂಚಿದ್ದರು.

ಇದನ್ನೂ ಓದಿ: 2 ತಂಡಗಳನ್ನು ಗಂಟು ಮೂಟೆ ಕಟ್ಟುವಂತೆ ಮಾಡಿದ 1 ರನ್, 1 ಅಂಕ..!

ಅಂದರೆ ಈ ಬ್ಯಾಟಿಂಗ್ ಸ್ನೇಹಿ ಪಿಚ್​ನಲ್ಲಿ ವಿರಾಟ್ ಕೊಹ್ಲಿ ಕಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಇವರೊಂದಿಗೆ ವೆಂಕಟೇಶ್ ಅಯ್ಯರ್, ರಜತ್ ಪಾಟಿದಾರ್ ಹಾಗೂ ಟಿಮ್ ಡೇವಿಡ್ ಅಬ್ಬರಿಸಿದರೆ ಗುಜರಾತ್ ಟೈಟಾನ್ಸ್ ವಿರುದ್ಧ ಬೃಹತ್ ಮೊತ್ತದ ಸ್ಕೋರ್ ಎದುರು ನೋಡಬಹುದು.

Published On - 12:53 pm, Mon, 25 May 26

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಕಾಂಗ್ರೆಸ್ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಕಾಂಗ್ರೆಸ್ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ
ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿಕೆಶಿ ಏನಂದ್ರು?
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿಕೆಶಿ ಏನಂದ್ರು?
ಮಹಾರಾಷ್ಟ್ರದ ರಾಯಗಢದಲ್ಲಿ ಕಂದಕಕ್ಕೆ ಉರುಳಿದ ಕಾರು, ಎಂಟು ಮಂದಿ ಸಾವು
ಮಹಾರಾಷ್ಟ್ರದ ರಾಯಗಢದಲ್ಲಿ ಕಂದಕಕ್ಕೆ ಉರುಳಿದ ಕಾರು, ಎಂಟು ಮಂದಿ ಸಾವು