AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs RCB Playing 11, IPL 2022: RCB ತಂಡದಲ್ಲಿ ಒಂದು ಬದಲಾವಣೆ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

GT vs RCB Playing 11: ಉಭಯ ತಂಡಗಳು ಇದೇ ಮೊದಲ ಬಾರಿ ಆಡುತ್ತಿರುವ ಕಾರಣ ಯಾರು ಬಲಿಷ್ಠ ಎಂದು ಹೇಳಲಾಗುವುದಿಲ್ಲ. ಹೀಗಾಗಿ ಎರಡೂ ತಂಡಗಳು ಮೊದಲ ಮುಖಾಮುಖಿಯಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ.

GT vs RCB Playing 11, IPL 2022: RCB ತಂಡದಲ್ಲಿ ಒಂದು ಬದಲಾವಣೆ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
GT vs RCB
TV9 Web
| Edited By: |

Updated on:Apr 30, 2022 | 3:08 PM

Share

IPL 2022: ಐಪಿಎಲ್​ನ 43ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ಟೈಟನ್ಸ್ (RCB vs GT) ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್​ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಉಭಯ ತಂಡಗಳು ಇದೇ ಮೊದಲ ಬಾರಿ ಆಡುತ್ತಿರುವ ಕಾರಣ ಯಾರು ಬಲಿಷ್ಠ ಎಂದು ಹೇಳಲಾಗುವುದಿಲ್ಲ. ಹೀಗಾಗಿ ಎರಡೂ ತಂಡಗಳು ಮೊದಲ ಮುಖಾಮುಖಿಯಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ. ಇನ್ನು ಈ ಪಂದ್ಯದಲ್ಲಿ ಏನೇ ಮಾಡಿದ್ರೂ ಅದು ವಿಶೇಷ ದಾಖಲೆಯಾಗಲಿದೆ. ಏಕೆಂದರೆ ಎರಡೂ ತಂಡಗಳು ಮೊದಲ ಬಾರಿಗೆ ಆಡುತ್ತಿರುವ ಕಾರಣ, ಗುಜರಾತ್ ಟೈಟನ್ಸ್ ವಿರುದ್ದ ಮೊದಲ ಶತಕ ಅಥವಾ ಅರ್ಧಶತಕ ಬಾರಿಸುವ ಆರ್​ಸಿಬಿ ಆಟಗಾರ ಯಾರು, ಹಾಗೆಯೇ ಬೌಲಿಂಗ್​ನಲ್ಲಿ ದಾಖಲೆ ಬರೆಯುವ ಬೌಲರ್ ಯಾರು ಎಂಬುದನ್ನು ಕಾದು ನೋಡಬೇಕಿದೆ. ಇನ್ನು ಆರ್​ಸಿಬಿ ವಿರುದ್ದ ಗುಜರಾತ್ ಆಟಗಾರರು ಕೂಡ ಬ್ಯಾಟಿಂಗ್ ಮತ್ತು ಮೂಲಕ ಬೌಲಿಂಗ್ ಮೂಲಕ ದಾಖಲೆ ಬರೆಯಬಹುದು. ಹೀಗಾಗಿ ಈ ಪಂದ್ಯವು ಉಭಯ ತಂಡಗಳಿಗೂ ವಿಶೇಷ ಪಂದ್ಯವಾಗಿರಲಿದೆ.

ಇನ್ನು ಈ ಪಂದ್ಯಕ್ಕಾಗಿ ಗುಜರಾತ್ ಟೈಟನ್ಸ್ ತಂಡದಲ್ಲಿ 2  ಬದಲಾವಣೆ ಮಾಡಲಾಗಿದೆ. ಯಶ್ ದಯಾಳ್ ಬದಲಿಗೆ ಪ್ರದೀಪ್ ಸಾಂಗ್ವಾನ್ ಹಾಗೂ ಅಭಿನವ್ ಮನೋಹರ್ ಜಾಗದಲ್ಲಿ ಸಾಯಿ ಸುದರ್ಶನ್ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆ ಆರ್​ಸಿಬಿ ತಂಡವು ಒಂದು ಬದಲಾವಣೆ ಮಾಡಿಕೊಂಡಿದೆ. ಅದರಂತೆ ಸುಯಶ್ ಪ್ರಭುದೇಸಾಯಿ ಬದಲಿಗೆ ಮಹಿಪಾಲ್ ಲೊಮ್ರೊರ್ ಅವಕಾಶ ಪಡೆದಿದ್ದಾರೆ.

ಆರ್​ಸಿಬಿ ಪ್ಲೇಯಿಂಗ್ XI: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್​​ ಲೊಮ್ರೊರ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್​​ ಹ್ಯಾಜಲ್​​ವುಡ್, ಮೊಹಮ್ಮದ್ ಸಿರಾಜ್.

ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ XI: ಶುಭಮನ್ ಗಿಲ್, ವೃದ್ಧಿಮಾನ್ ಸಹಾ, ಹಾರ್ದಿಕ್ ಪಾಂಡ್ಯ(ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಪ್ರದೀಪ್ ಸಾಂಗ್ವಾನ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:04 pm, Sat, 30 April 22

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್