GT vs RCB Prediction Playing XI: ಸೋಲಿನ ಸುಳಿಯಲ್ಲಿರುವ ಆರ್​ಸಿಬಿಯಲ್ಲಿ ಬದಲಾವಣೆ ಖಚಿತ! ಕೊಹ್ಲಿಗೆ ಕೋಕ್?

GT vs RCB Prediction Playing XI: ತಂಡವು ಬ್ಯಾಟಿಂಗ್‌ನಲ್ಲಿ ಒಂದೇ ಒಂದು ಬದಲಾವಣೆಯನ್ನು ಮಾಡುವ ಸಾಧ್ಯತೆಗಳಿದ್ದು, ಯುವ ಬ್ಯಾಟ್ಸ್‌ಮನ್ ಸುಯಶ್ ಪ್ರಭುದೇಸಾಯಿ ಹೊರಗುಳಿಯಬೇಕಾಗಬಹುದು

GT vs RCB Prediction Playing XI: ಸೋಲಿನ ಸುಳಿಯಲ್ಲಿರುವ ಆರ್​ಸಿಬಿಯಲ್ಲಿ ಬದಲಾವಣೆ ಖಚಿತ! ಕೊಹ್ಲಿಗೆ ಕೋಕ್?
GT Vs RCB
Follow us
| Updated By: ಪೃಥ್ವಿಶಂಕರ

Updated on: Apr 29, 2022 | 6:50 PM

ಒಂದೆಡೆ ಸತತ ಎರಡು ಸೋಲಿನ ಟೆನ್ಶನ್, ಇನ್ನೊಂದೆಡೆ ವಿರಾಟ್ ಕೊಹ್ಲಿ (Virat Kohli)ಯ ಕಳಪೆ ಫಾರ್ಮ್. ಎರಡು ದೊಡ್ಡ ಸಮಸ್ಯೆಗಳನ್ನು ಏಕಕಾಲದಲ್ಲಿ ಪರಿಹರಿಸಲು ಆಶಿಸುತ್ತಾ, ಫಾಫ್ ಡು ಪ್ಲೆಸಿಸ್ (Faf du Plessis) ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ಶನಿವಾರ ಏಪ್ರಿಲ್ 30 ರಂದು ಮತ್ತೊಮ್ಮೆ ಮೈದಾನಕ್ಕಿಳಿಯಲಿದೆ. ಇಲ್ಲಿಯವರೆಗಿನ ಅತ್ಯಂತ ಯಶಸ್ವಿ ತಂಡವೆಂದರೆ ಗುಜರಾತ್ ಟೈಟಾನ್ಸ್. ಒಂದೇ ಗುಂಪಿನಲ್ಲಿರುವ ಈ ಎರಡು ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗಲಿವೆ. ಗುಜರಾತ್ ಒಂದು ರೀತಿಯಲ್ಲಿ ಅಜೇಯವಾಗಿದ್ದು, ಅವರ ಪ್ರಸ್ತುತ ತಂಡದಲ್ಲಿರುವ ಎಲ್ಲರೂ ಮ್ಯಾಚ್ ವಿನ್ನರ್‌ಗಳಾಗಿ ಹೊರಬರುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಅವರ ಕೊರತೆಯಿದೆ ಮತ್ತು ಅದರ ಹುಡುಕಾಟದಲ್ಲಿ ಆಡುವ XI ನಲ್ಲಿ ಬದಲಾವಣೆಯ ಸಾಧ್ಯತೆಯಿದೆ.

ಉಭಯ ತಂಡಗಳು ಶನಿವಾರ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗುಜರಾತ್ ಸತತ 4 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯಲಿದೆ. ಅದೇ ಹೊತ್ತಿಗೆ ಸತತ ಎರಡು ಸೋಲಿನೊಂದಿಗೆ ಬೆಂಗಳೂರು ಈ ಪಂದ್ಯದಲ್ಲಿ ಗೆಲುವಿನ ಭರವಸೆ ಮೂಡಿಸಲಿದೆ. ಕೇವಲ ಒಂದು ಅಥವಾ ಎರಡು ಪಂದ್ಯಗಳನ್ನು ಹೊರತುಪಡಿಸಿ ಈ ಋತುವಿನಲ್ಲಿ ಹೆಚ್ಚಾಗಿ ಆರ್​ಸಿಬಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. ಹಾಗಾಗಿ ಇಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ.

ಮಹಿಪಾಲ್ ಲೊಮೊರ್ಡ್‌ಗೆ ಅವಕಾಶ ಸಿಗಲಿದೆ! ಕಳೆದ ಪಂದ್ಯದಲ್ಲಿ ಬೆಂಗಳೂರು ಅನುಜ್ ರಾವತ್ ಅವರನ್ನು ಬದಲಾವಣೆ ಮಾಡಿ ರಜತ್ ಪಾಟಿದಾರ್ ಅವರನ್ನು ಸೇರಿಸಿಕೊಂಡಿತ್ತು. ಕೊಹ್ಲಿ ಆರಂಭಿಕರಾಗಿ ಬಂದರು, ರಜತ್ ಮೂರನೇ ಸ್ಥಾನದಲ್ಲಿ ಆಡಿದ್ದರು. ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ ಮತ್ತು ಇಬ್ಬರೂ ಬ್ಯಾಟ್ಸ್‌ಮನ್‌ಗಳು ವಿಫಲರಾದರು. ಇದರ ಹೊರತಾಗಿಯೂ ಗುಜರಾತ್ ವಿರುದ್ಧವೂ ಇದೇ ಕ್ರಮಾಂಕ ಮುಂದುವರಿಯಲಿದೆ.

ತಂಡವು ಬ್ಯಾಟಿಂಗ್‌ನಲ್ಲಿ ಒಂದೇ ಒಂದು ಬದಲಾವಣೆಯನ್ನು ಮಾಡುವ ಸಾಧ್ಯತೆಗಳಿದ್ದು, ಯುವ ಬ್ಯಾಟ್ಸ್‌ಮನ್ ಸುಯಶ್ ಪ್ರಭುದೇಸಾಯಿ ಹೊರಗುಳಿಯಬೇಕಾಗಬಹುದು. ತಮ್ಮ ಚೊಚ್ಚಲ ಪಂದ್ಯದಲ್ಲಿ ಸುಯಶ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು, ಆದರೆ ಆ ಪಂದ್ಯದ ನಂತರ ಯಾವುದೇ ಪರಿಣಾಮಕಾರಿ ಆಟ ಪ್ರದರ್ಶಿಸಲು ಸಾಧ್ಯವಾಗಲಿಲ್ಲ.

ಅಂತಹ ಪರಿಸ್ಥಿತಿಯಲ್ಲಿ, ಆಕ್ರಮಣಕಾರಿ ಬ್ಯಾಟಿಂಗ್ ಮಾಡುವ ಯುವ ಎಡಗೈ ಬ್ಯಾಟ್ಸ್‌ಮನ್ ಮಹಿಪಾಲ್ ಲೊಮೊರ್ಡ್ ಅವರನ್ನು ಬದಲಾಯಿಸಬಹುದು. ತಂಡದ ಬೌಲಿಂಗ್ ಉತ್ತಮವಾಗಿದೆ ಮತ್ತು ಫಿಟ್ನೆಸ್ ಸಮಸ್ಯೆ ಇಲ್ಲದೇ ಇದ್ದರೆ ಇಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಗುಜರಾತ್‌ನಲ್ಲೂ ಸಮಸ್ಯೆ ಇದೆ, ಆದರೆ ಬದಲಾವಣೆ ಇಲ್ಲ ಗುಜರಾತ್ ಮಟ್ಟಿಗೆ ಈ ತಂಡ ನಿರಂತರವಾಗಿ ಗೆಲುವು ಸಾಧಿಸುತ್ತಿದೆ. ಬೌಲಿಂಗ್‌ನಿಂದ ಬ್ಯಾಟಿಂಗ್‌ವರೆಗೆ, ಪ್ರತಿ ಮುಂಭಾಗದಲ್ಲಿ ಮತ್ತು ಪ್ರತಿ ಪಂದ್ಯದಲ್ಲೂ ಕೆಲವು ಆಟಗಾರರು ತಂಡವನ್ನು ಕಠಿಣ ಪರಿಸ್ಥಿತಿಗಳಿಂದ ಹೊರತೆಗೆಯುವ ಮೂಲಕ ಪಂದ್ಯಗಳನ್ನು ಗೆಲ್ಲುತ್ತಿದ್ದಾರೆ. ಆದಾಗ್ಯೂ, ತಂಡಕ್ಕೆ, ಆರಂಭಿಕ ಆಟಗಾರ ಶುಭಮನ್ ಗಿಲ್ ಸತತ ಐದು ಇನ್ನಿಂಗ್ಸ್‌ಗಳಲ್ಲಿ ವಿಫಲವಾಗಿರುವುದರಿಂದ ಅವರ ಪ್ರದರ್ಶನ ಸ್ವಲ್ಪ ತೊಂದರೆಗೀಡಾಗಿರಬಹುದು. ಆದರೆ, ಹೈದರಾಬಾದ್ ವಿರುದ್ಧ ವೃದ್ಧಿಮಾನ್ ಸಹಾ ಅರ್ಧಶತಕ ಸಿಡಿಸಿರುವುದು ತಂಡಕ್ಕೆ ಕೊಂಚ ನೆಮ್ಮದಿ ತಂದಿತ್ತು. ತಂಡದ ಬೌಲಿಂಗ್ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿದೆ. ಲಾಕಿ ಫರ್ಗುಸನ್ ಅವರ ಪ್ರದರ್ಶನವು ಏರಿಳಿತವಾಗಿದ್ದರೂ, ಅವರು ಇನ್ನೂ ತಂಡದ ಪ್ರಮುಖ ಅಸ್ತ್ರವಾಗಿದ್ದಾರೆ.

GT vs RCB: ಸಂಭಾವ್ಯ ಪ್ಲೇಯಿಂಗ್ XI ಗುಜರಾತ್: ಹಾರ್ದಿಕ್ ಪಾಂಡ್ಯ (ನಾಯಕ), ಶುಬ್ಮನ್ ಗಿಲ್, ವೃದ್ಧಿಮಾನ್ ಸಹಾ, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಲಾಕಿ ಫರ್ಗುಸನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ ಮತ್ತು ಯಶ್ ದಯಾಲ್.

ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮೊರರ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್

ಇದನ್ನೂ ಓದಿ:IPL 2022: ಕಳೆದ ಐಪಿಎಲ್​ನ ಫ್ಲಾಪ್ ಸ್ಟಾರ್​ಗಳೇ ಈ ಆವೃತ್ತಿಯ ಮ್ಯಾಚ್​ ವಿನ್ನರ್​ಗಳು! ಇಲ್ಲಿದೆ ನೋಡಿ ವಿವರ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ