AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ಟೈಟಾನ್ಸ್​ ಬೆಂಕಿ ಬೌಲಿಂಗ್: ಎಲ್ಲರ ಲೆಕ್ಕಾಚಾರ ಉಲ್ಟಾ ಪಲ್ಟಾ!

ಐಪಿಎಲ್ ಕಣದಲ್ಲಿ ಈಗ ಗುಜರಾತ್ ಟೈಟಾನ್ಸ್ ಬೌಲರ್‌ಗಳದ್ದೇ ಅಬ್ಬರ! ಎದುರಾಳಿ ಯಾರೇ ಇರಲಿ, ಪಿಚ್ ಎಂತಹುದೇ ಇರಲಿ—ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಅಟ್ಟುವುದೇ ಇವರ ಏಕೈಕ ಗುರಿಯಾದಂತಿದೆ. ಕಳೆದ ಮೂರು ಪಂದ್ಯಗಳಲ್ಲಿ ಸಿಎಸ್‌ಕೆ, ಆರ್‌ಸಿಬಿ ಮತ್ತು ಪಂಜಾಬ್‌ನಂತಹ ಬಲಿಷ್ಠ ತಂಡಗಳನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿರುವ ಜಿಟಿ ಬೌಲಿಂಗ್ ಪಡೆ, ಈಗ ಟೂರ್ನಿಯ ಅತ್ಯಂತ ಅಪಾಯಕಾರಿ ಡಿಫೆನ್ಸಿವ್ ಯುನಿಟ್ ಆಗಿ ಹೊರಹೊಮ್ಮಿದೆ.

ಗುಜರಾತ್ ಟೈಟಾನ್ಸ್​ ಬೆಂಕಿ ಬೌಲಿಂಗ್: ಎಲ್ಲರ ಲೆಕ್ಕಾಚಾರ ಉಲ್ಟಾ ಪಲ್ಟಾ!
Gujarat Titans
ಝಾಹಿರ್ ಯೂಸುಫ್
|

Updated on: May 04, 2026 | 8:56 AM

Share

ಐಪಿಎಲ್ 2026ರ ಸೀಸನ್‌ನಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವು ತನ್ನ ಬೌಲಿಂಗ್ ಶಕ್ತಿಯ ಮೂಲಕ ಪಂದ್ಯಾವಳಿಯಲ್ಲಿ ಹೊಸ ಸಂಚಲನ ಮೂಡಿಸಿದೆ. ಬ್ಯಾಟಿಂಗ್‌ ಸ್ನೇಹಿ ಪಿಚ್‌ಗಳ ನಡುವೆಯೂ, ಜಿಟಿ ಬೌಲರ್‌ಗಳು ಶಿಸ್ತುಬದ್ಧ ದಾಳಿ ನಡೆಸಿ ಬಲಿಷ್ಠ ತಂಡಗಳನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ ಮೂರು ಪಂದ್ಯಗಳಲ್ಲಿನ ಫಲಿತಾಂಶ.

  •  ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಜಯ: ಚೆನ್ನೈನ ತವರು ನೆಲದಲ್ಲೇ ನಡೆದ ಈ ಪಂದ್ಯದಲ್ಲಿ ಸಿಎಸ್‌ಕೆ ಬ್ಯಾಟರ್‌ಗಳನ್ನು ಕಟ್ಟಿಹಾಕಿದ ಜಿಟಿ ಬೌಲರ್‌ಗಳು, ಅವರನ್ನು ಕೇವಲ 158/7 ರನ್‌ಗಳಿಗೆ ನಿಯಂತ್ರಿಸಿದರು. ಈ ಮೊತ್ತವನ್ನು ಬೆನ್ನಟ್ಟಿದ ಗುಜರಾತ್, 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು.
  •  ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಜಯ: ಆರ್​ಸಿಬಿ ಸ್ಫೋಟಕ ಬ್ಯಾಟಿಂಗ್ ಪಡೆಯನ್ನು ಗುಜರಾತ್ ಟೈಟಾನ್ಸ್​ ಬೌಲರ್‌ಗಳು ಸಂಪೂರ್ಣವಾಗಿ ಕಟ್ಟಿ ಹಾಕಿದ್ದರು. ಅರ್ಶದ್ ಖಾನ್ (3/22) ಮತ್ತು ರಶೀದ್ ಖಾನ್ (2/19) ಅವರ ಮಾರಕ ದಾಳಿಗೆ ತತ್ತರಿಸಿದ ಆರ್‌ಸಿಬಿ ಕೇವಲ 155 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ 4 ವಿಕೆಟ್‌ಗಳ ಜಯ ಸಾಧಿಸಿತು.
  • ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಜಯ: ನಿನ್ನೆ ನಡೆದ ಪಂದ್ಯದಲ್ಲೂ ತನ್ನ ಬೌಲಿಂಗ್ ವೈಭವವನ್ನು ಮುಂದುವರಿಸಿದ ಗುಜರಾತ್ ಟೈಟಾನ್ಸ್, ಪಂಜಾಬ್ ಕಿಂಗ್ಸ್ ತಂಡವನ್ನು 163/9 ರನ್‌ಗಳಿಗೆ ನಿಯಂತ್ರಿಸಿತು. ಪಂಜಾಬ್ ಪಡೆಯ ಪ್ರಮುಖ ವಿಕೆಟ್‌ಗಳನ್ನು ನಿಯಮಿತವಾಗಿ ಪಡೆಯುವ ಮೂಲಕ ದೊಡ್ಡ ಮೊತ್ತ ಗಳಿಸಲು ಅವಕಾಶ ನೀಡಲಿಲ್ಲ. ಈ ಪಂದ್ಯವನ್ನು ಗುಜರಾತ್ ಟೈಟಾನ್ಸ್ 4 ವಿಕೆಟ್​ಗಳಿಂದ ಗೆದ್ದುಕೊಂಡಿತು.

ಗುಜರಾತ್ ಟೈಟಾನ್ಸ್​ ಪಡೆಯ ಶಕ್ತಿ ಏನು?

  •  ಸಿರಾಜ್, ರಬಾಡ ಮಿಂಚಿಂಗ್: ಈ ಸೀಸನ್​ನಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಕಗಿಸೊ ರಬಾಡ ಪವರ್‌ಪ್ಲೇನಲ್ಲಿ ವಿಕೆಟ್ ಪಡೆಯುವ ಮೂಲಕ ತಂಡಕ್ಕೆ ಆರಂಭಿಕ ಯಶಸ್ಸು ತಂದುಕೊಡುತ್ತಿದ್ದಾರೆ.
  • ರಶೀದ್ ಖಾನ್ ಮ್ಯಾಜಿಕ್: ಮಧ್ಯದ ಓವರ್‌ಗಳಲ್ಲಿ ರಶೀದ್ ಖಾನ್ ರನ್ ವೇಗಕ್ಕೆ ಬ್ರೇಕ್ ಹಾಕುವುದಲ್ಲದೆ, ಎದುರಾಳಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ.
  • ಜೇಸನ್ ಹೋಲ್ಡರ್ ಅನುಭವ: ಡೆತ್ ಓವರ್‌ಗಳಲ್ಲಿ ಜೇಸನ್ ಹೋಲ್ಡರ್ ಅವರ ವೈವಿಧ್ಯಮಯ ಬೌಲಿಂಗ್ ಎದುರಾಳಿಗಳಿಗೆ ರನ್ ಗಳಿಸಲು ಕಷ್ಟವಾಗುವಂತೆ ಮಾಡುತ್ತಿದೆ.

ಇದನ್ನೂ ಓದಿ: 15,660 ಕೋಟಿ ರೂ.ಗೆ ರಾಜಸ್ಥಾನ್ ರಾಯಲ್ಸ್​ನ 3 ತಂಡಗಳು ಮಾರಾಟ..!

ಫಲಿತಾಂಶ ಮತ್ತು ಅಂಕಪಟ್ಟಿ:

ಈ ಸತತ ಮೂರು ಜಯಗಳೊಂದಿಗೆ ಗುಜರಾತ್ ಟೈಟಾನ್ಸ್ ಪ್ಲೇ-ಆಫ್ ರೇಸ್‌ನಲ್ಲಿ ಬಲಿಷ್ಠವಾಗಿ ಗುರುತಿಸಿಕೊಂಡಿದೆ. ಬೌಲರ್‌ಗಳ ಈ ಸಾಂಘಿಕ ಪ್ರದರ್ಶನವು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದ್ದು, ಮುಂಬರುವ ಪಂದ್ಯಗಳಲ್ಲಿ ಎದುರಾಳಿಗಳಿಗೆ ನಡುಕ ಹುಟ್ಟಿಸಿದೆ. ಇದೇ ಸಾಂಘಿಕ ಪ್ರದರ್ಶನವನ್ನು ಮುಂದುವರೆಸಿದರೆ ಗುಜರಾತ್ ಟೈಟಾನ್ಸ್ ತಂಡವು ಪ್ಲೇಆಫ್​ಗೇರುವುದನ್ನು ಎದುರು ನೋಡಬಹುದು.

Follow Us
ತಮಿಳುನಾಡು: ಡಿಎಂಕೆ ಕಚೇರಿಗೆ ಭೇಟಿ ನೀಡಿದ ಪನ್ನೀರ್​​ಸೆಲ್ವಂ
ತಮಿಳುನಾಡು: ಡಿಎಂಕೆ ಕಚೇರಿಗೆ ಭೇಟಿ ನೀಡಿದ ಪನ್ನೀರ್​​ಸೆಲ್ವಂ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ಮನೆ ಬಳಿಯೇ ಬಾಂಬ್​​ ಸ್ಫೋಟ
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ಮನೆ ಬಳಿಯೇ ಬಾಂಬ್​​ ಸ್ಫೋಟ
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ಡಿಕೆಶಿ​ಗೆ ಶುಭಸುದ್ದಿ ಸಿಗುತ್ತೆ ಎಂಬ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು?
ಡಿಕೆಶಿ​ಗೆ ಶುಭಸುದ್ದಿ ಸಿಗುತ್ತೆ ಎಂಬ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು?
‘ಸೆಟ್​​ನಲ್ಲಿ ಮೋನಿಷಾನ ಮಗಳು ಅಂತ ನಾನು ಯಾವಾಗಲೂ ನೋಡಿಲ್ಲ’; ದುನಿಯಾ ವಿಜಯ್
‘ಸೆಟ್​​ನಲ್ಲಿ ಮೋನಿಷಾನ ಮಗಳು ಅಂತ ನಾನು ಯಾವಾಗಲೂ ನೋಡಿಲ್ಲ’; ದುನಿಯಾ ವಿಜಯ್