AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs RR, IPL 2022: ಐಪಿಎಲ್ 2022 ಫೈನಲ್ ಪಂದ್ಯ ಫಿಕ್ಸಿಂಗ್?: ಅನುಮಾನ ಹುಟ್ಟುಹಾಕಿದೆ ಫೋಟೋಗಳು ಎಂದ ಫ್ಯಾನ್ಸ್

IPL 2022 Fixing: ಗುಜರಾತ್ ಟೈಟಾನ್ಸ್ ಇಂದು ತನ್ನದೇ ಬಲದಿಂದ ಐಪಿಎಲ್ 2022ರ ಫೈನಲ್​ನಲ್ಲಿ ಗೆದ್ದು ಪ್ರಶಸ್ತಿ ಎತ್ತಿ ಹಿಡಿದಿದೆ. ಹೀಗಿದ್ದರೂ ಕೆಲ ನೆಟ್ಟಿಗರು ಮಾತ್ರ ಗುಜರಾತ್ ತಂಡದ ಈ ಗೆಲುವಿನ ವಿರುದ್ಧವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಐಪಿಎಲ್ 2022 ಫೈನಲ್ ಮ್ಯಾಚ್ ಫಿಕ್ಸಿಂಗ್ ಎಂದು ಅನೇಕರು ಟ್ವೀಟ್ ಮಾಡುತ್ತಿದ್ದಾರೆ.

GT vs RR, IPL 2022: ಐಪಿಎಲ್ 2022 ಫೈನಲ್ ಪಂದ್ಯ ಫಿಕ್ಸಿಂಗ್?: ಅನುಮಾನ ಹುಟ್ಟುಹಾಕಿದೆ ಫೋಟೋಗಳು ಎಂದ ಫ್ಯಾನ್ಸ್
gujarat titans vs RR IPL 2022 Final
TV9 Web
| Updated By: Vinay Bhat|

Updated on:May 30, 2022 | 1:39 PM

Share

ತನ್ನ ಚೊಚ್ಚಲ ಆವೃತ್ತಿಯಲ್ಲೇ ಬಲಿಷ್ಠ ತಂಡಗಳಿಗೆ ಮಣ್ಣು ಮುಕ್ಕಿಸಿ ಫೈನಲ್​ಗೇರಿದ್ದ ಗುಜರಾತ್ ಟೈಟಾನ್ಸ್ (Gujarat Titans) ತಂಡ ಇದೀಗ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಚಾಂಪಿಯನ್ ಆಗಿ ಹೊರಹೊಮ್ಮಿದೆ. ತಂಡದಲ್ಲಿ ಹೇಳಿಕೊಳ್ಳವಂತಹ ಸ್ಟಾರ್ ಆಟಗಾರರು ಇಲ್ಲದೆ ಇದ್ದರೂ ಹಾರ್ದಿಕ್ ಪಾಂಡ್ಯ (Hardik Pandya) ಪಡೆ ಫೈನಲ್ ಪಂದ್ಯದಲ್ಲೂ ರಾಜಸ್ಥಾನ್ ರಾಯಲ್ಸ್ (Rajastan Royals) ತಂಡವನ್ನ ಸೋಲಿಸಿ 7 ವಿಕೆಟ್​ಗಳ ಜಯದೊಂದಿಗೆ ಪ್ರಶಸ್ತಿ ಮಡುಗೇರಿಸಿಕೊಂಡಿತು. ಗುಜರಾತ್ ತಂಡದಲ್ಲಿದ್ದ ಮೂರು-ನಾಲ್ಕು ಬ್ಯಾಟರ್​ಗಳೇ ಆರಂಭದಿಂದ ಫೈನಲ್ ವರೆಗೆ ಮಿಂಚಿದರು. ಬೌಲಿಂಗ್​ನಲ್ಲೂ ಅದೇರೀತಿ ನಡೆಯಿತು. ಡೇವಿಡ್ ಮಿಲ್ಲರ್ ಹಾಗೂ ರಾಹುಲ್ ತೇವಾಟಿಯ ಫಿನಿಶಿಂಗ್ ಜವಾಬ್ದಾರಿ ಜಿಟಿ ತಂಡದ ಪ್ರಮುಖ ಅಸ್ತ್ರವಾಯಿತು. ಇವೆಲ್ಲದರ ನಡುವೆ ಹಾರ್ದಿಕ್ ಪಾಂಡ್ಯ ಅವರ ನಾಯಕತ್ವ, ಅವರು ಆಟಗಾರರ ಜೊತೆ ಪ್ರತಿಕ್ರಿಯಿಸುವುದು, ಹುರಿದುಂಬಿಸುವ ರೀತಿ ಇಂದು ಗುಜರಾತ್ ಕಪ್ ಗೆಲ್ಲಲು ಸಹಾಯ ಆಗಿದೆ ಎಂದರೆ ತಪ್ಪಾಗಲಾರದು.

ಗುಜರಾತ್ ಟೈಟಾನ್ಸ್ ಇಂದು ತನ್ನದೇ ಬಲದಿಂದ ಐಪಿಎಲ್ 2022ರ ಫೈನಲ್​ನಲ್ಲಿ ಗೆದ್ದು ಪ್ರಶಸ್ತಿ ಎತ್ತಿ ಹಿಡಿದಿದೆ. ಹೀಗಿದ್ದರೂ ಕೆಲ ನೆಟ್ಟಿಗರು ಮಾತ್ರ ಗುಜರಾತ್ ತಂಡದ ಈ ಗೆಲುವಿನ ವಿರುದ್ಧವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಫೈನಲ್ ಪಂದ್ಯದಲ್ಲಿ ಜಿಟಿ ತಂಡವೇ ಗೆಲ್ಲಬೇಕೆಂದು ಮೊದಲೇ ಫಿಕ್ಸ್ ಆಗಿತ್ತು ಎಂದು ಅನೇಕರು ಟ್ವೀಟ್ ಮಾಡುತ್ತಿದ್ದು Fixing ಎಂಬ ಪದ ಟ್ವಿಟರ್​​ನಲ್ಲಿ ಸಖತ್ ಟ್ರೆಂಡ್ ಆಗುತ್ತಿದೆ. ಕೆಲವು ಫೋಟೋಗಳನ್ನು ಹಂಚಿಕೊಂಡು ಫಿಕ್ಸಿಂಗ್ ಎಂದು ಅನುಮಾನ ಮೂಡಿಸುತ್ತದೆ ಎನ್ನುತ್ತಿದ್ದಾರೆ.

ಇದನ್ನೂ ಓದಿ
Image
IPL 2022 Award Winners: ಐಪಿಎಲ್ 2022 ಎಮರ್ಜಿಂಗ್ ಪ್ಲೇಯರ್, ಸೂಪರ್ ಸ್ಟ್ರೈಕರ್ ಯಾರು?; ಇಲ್ಲಿದೆ ಎಲ್ಲ ಪ್ರಶಸ್ತಿಯ ಸಂಪೂರ್ಣ ಮಾಹಿತಿ
Image
Hardik Pandya: ಇದು ಪ್ರಪಂಚಕ್ಕೆ ಒಂದು ಸಂದೇಶ: ಪಂದ್ಯ ಮುಗಿದ ಬಳಿಕ ಹಾರ್ದಿಕ್ ಪಾಂಡ್ಯ ಹೀಗೆ ಹೇಳಿದ್ದೇಕೆ?
Image
GT vs RR, IPL 2022 Final: ಫೈನಲ್​ನಲ್ಲಿ ಗೆದ್ದ ತಕ್ಷಣ ಗುಜರಾತ್ ಟೈಟಾನ್ಸ್ ಆಟಗಾರರು ಮಾಡಿದ್ದೇನು ನೋಡಿ
Image
IPL 2022: ಐಪಿಎಲ್​ ಫೈನಲ್​ ವೇದಿಕೆಯಲ್ಲೂ ‘ಕೆಜಿಎಫ್’ ಹವಾ; ರಾಕಿ ಭಾಯ್ ಅವತಾರ ತಾಳಿದ ರಣವೀರ್ ಸಿಂಗ್- ವಿಡಿಯೋ ಇಲ್ಲಿದೆ

Hardik Pandya: ಗುಜರಾತ್ ಗೆದ್ದ ತಕ್ಷಣ ಹಾರ್ದಿಕ್ ಪಾಂಡ್ಯ ಬಳಿ ಅಳುತ್ತಾ ಓಡಿ ಬಂದ ನತಾಶ: ವಿಡಿಯೋ

ಗುಜರಾತ್ ಈ ಪಂದ್ಯವನ್ನು ಗೆಲ್ಲಬೇಕೆಂದು ಮೊದಲೇ ಫಿಕ್ಸ್ ಆಗಿತ್ತು ಎಂದು ಅನೇಕರು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಫೈನಲ್ ಪಂದ್ಯ ಆಯೋಜನೆಯಾಗಿರುವುದು ಅಹ್ಮದಾಬಾದ್​ನಲ್ಲಿ ಹೀಗಿರುವಾಗ ಗುಜರಾತ್ ಗೆಲ್ಲದೆ ಇರಲು ಸಾಧ್ಯವೇ ಎಂದು ಕೆಲವು ಹೇಳಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಬದಲು ಬ್ಯಾಟಿಂಗ್ ಸೆಲೆಕ್ಟ್ ಮಾಡಿದರು. ಗುಜರಾತ್ ಚೇಸಿಂಗ್​ನಲ್ಲಿ ಕಿಂಗ್ ಎಂದು ತಿಳಿದಿದ್ದರೂ ಆರ್ ಆರ್ ತೆಗೆದುಕೊಂಡ ಈ ನಿರ್ಧಾರ ಎಲ್ಲರ ಅಚ್ಚರಿಗೆ ಕಾರಣವಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿರುವ ಇಬ್ಬರು, ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಫೀಲ್ಡಿಂಗ್ ಆಯ್ದುಕೊಳ್ಳದೆ ಮೊದಲು ಬ್ಯಾಟಿಂಗ್ ಆಯ್ದುಕೊಂಡಾಗಲೇ ಪಂದ್ಯ ಫಿಕ್ಸ್ ಆಗಿದೆ ಎಂಬುದು ಅರ್ಥವಾಗಿತ್ತು ಎಂದು ಬರೆದುಕೊಂಡಿದ್ದಾರೆ. ಹೀಗೆ ಅನೇಕ ಮಂದಿ ಇದು ಫಿಕ್ಸಿಂಗ್ ಪಂದ್ಯ ಎಂದು ಹೇಳಿಕೊಳ್ಳುತ್ತಿದ್ದಾರೆ.

ಭಾರೀ ನಿರೀಕ್ಷೆ ಹುಟ್ಟಿಸಿದ್ದು ಗುಜರಾತ್-ರಾಜಸ್ಥಾನ್ ನಡುವಣ ಫೈನಲ್ ಫೈಟ್ ಅಂದುಕೊಂಡಷ್ಟು ಮಟ್ಟಿಗೆ ರೋಚಕತೆ ಪಡೆಯಲಿಲ್ಲ. ಬಹುತೇಕ ಒನ್​ಸೈಡ್ ಎಂಬಂತೆ ಪಂದ್ಯ ಸಾಗಿತು. ಬ್ಯಾಟಿಂಗ್​ಗೆ ಇಳಿದ ಸ್ಯಾಮ್ಸನ್ ಪಡೆ ಮೊದಲ 5 ಓವರ್​ನಲ್ಲಿ ಅಬ್ಬರಿಸಿದ್ದು ಬಿಟ್ಟರೆ ಬಳಿಕ ರನ್ ಕಲೆಹಾಕಲು ಪರದಾಡಿತು, ಜೊತೆಗೆ ವಿಕೆಟ್​ಗಳನ್ನೂ ಕಳೆದುಕೊಂಡಿತು.

ಆರ್ ಆರ್ ತಂಡಕ್ಕೆ ಪ್ರತಿಬಾರಿ ಆಧಾರವಾಗುತ್ತಿದ್ದ ಆರೆಂಜ್ ಕ್ಯಾಪ್ ವಿನ್ನರ್ ಜೋಸ್ ಬಟ್ಲರ್ ಕೂಡ 35 ಎಸೆತಗಳಲ್ಲಿ 39 ರನ್ ಗಳಿಸಿ ಹಾರ್ದಿಕ್​ಗೆ ವಿಕೆಟ್ ಒಪ್ಪಿಸಿದರು. ಔಟಾದ ಸಿಟ್ಟಿನಲ್ಲಿ ಬಟ್ಲರ್ ಡಗೌಟ್​ಗೆ ತೆರಳಿ ತಮ್ಮ ಹೆಲ್ಮೆಟ್, ಗ್ಲೌಸ್​ಗಳನ್ನು ಬಿಸಾಕಿದ ಘಟನೆ ಕೂಡ ನಡೆಯಿತು. ರಾಜಸ್ಥಾನ ರಾಯಲ್ಸ್ ತಂಡ 9 ವಿಕೆಟ್‌ಗೆ 130 ರನ್ ಪೇರಿಲಸಷ್ಟೇ ಶಕ್ತವಾಯಿತು. ಪ್ರತಿಯಾಗಿ ಗುಜರಾತ್ ಟೈಟಾನ್ಸ್ 18.1 ಓವರ್‌ಗಳಲ್ಲಿ 3 ವಿಕೆಟ್‌ಗೆ 133 ರನ್‌ಗಳಿಸಿ ಗೆಲುವಿನ ನಗೆ ಬೀರಿತು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:36 pm, Mon, 30 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ