AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Points Table 2023: ಸೋತರೂ ಅಂಕಪಟ್ಟಿಯಲ್ಲಿ ಅಲ್ಲಾಡದ ಗುಜರಾತ್: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?

IPL 2023 Orange-Purple Cap: ಐಪಿಎಲ್ 2023 ಪಾಯಿಂಟ್ಸ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

IPL Points Table 2023: ಸೋತರೂ ಅಂಕಪಟ್ಟಿಯಲ್ಲಿ ಅಲ್ಲಾಡದ ಗುಜರಾತ್: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?
Gujarat Titans
Follow us
Vinay Bhat
|

Updated on: May 13, 2023 | 9:40 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್ (IPL 2023) ಟೂರ್ನಿಯಲ್ಲಿ 57 ಪಂದ್ಯಗಳು ಮುಕ್ತಾಯಗೊಂಡಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಸುಲಭವಾಗಿ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಹೆಚ್ಚಾಗುತ್ತಿವೆ. ಶುಕ್ರವಾರ ನಡೆದ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಮುಖಾಮುಖಿಯಲ್ಲಿ ಮುಂಬೈ 27 ರನ್​ಗಳ ಭರ್ಜರಿ ಜಯ ಕಂಡಿತು. ಇಂದು ಐಪಿಎಲ್​ನಲ್ಲಿ ಹೈದರಾಬಾದ್-ಲಖನೌ ಮತ್ತು ಡೆಲ್ಲಿ-ಪಂಜಾಬ್ ನಡುವೆ ಒಟ್ಟು ಎರಡು ಪಂದ್ಯಗಳು ನಡೆಯಲಿದೆ. ಸದ್ಯ ಐಪಿಎಲ್ 2023 ಪಾಯಿಂಟ್ಸ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

  • ಗುಜರಾತ್ ಟೈಟಾನ್ಸ್ ತಂಡ ಶುಕ್ರಾವರದ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತರೂ ಅಗ್ರಸ್ಥಾನದಲ್ಲಿ ಭದ್ರವಾಗಿದ್ದು ಪ್ಲೇ ಆಫ್​ಗೆ ಬಹುತೇಕ ಕಾಲಿಟ್ಟಿದೆ. ಆಡಿದ 12 ಪಂದ್ಯಗಳಲ್ಲಿ ಎಂಟು ಗೆಲುವು, ನಾಲ್ಕು ಸೋಲುಂಡು +0.761 ರನ್​ರೇಟ್​ನೊಂದಿಗೆ 16 ಅಂಕ ಸಂಪಾದಿಸಿದೆ.
  • ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎರಡನೇ ಸ್ಥಾನದಲ್ಲಿದೆ. ಆಡಿದ 12 ಪಂದ್ಯಗಳ ಪೈಕಿ ಏಳರಲ್ಲಿ ಗೆಲುವು ನಾಲ್ಕರಲ್ಲಿ ಸೋಲು ಕಂಡು ಒಟ್ಟು 15 ಅಂಕ ಸಂಪಾದಿಸಿದೆ. +0.493 ರನ್​ರೇಟ್ ಹೊಂದಿದೆ.
  • ಜಿಟಿ ವಿರುದ್ಧ ಗೆದ್ದು ಮುಂಬೈ ಇಂಡಿಯನ್ಸ್ ತಂಡ ಮೂರನೇ ಸ್ಥಾನಕ್ಕೆ ಜಿಗಿದಿದೆ. ಇವರು ಆಡಿದ 12 ಪಂದ್ಯದಲ್ಲಿ 5 ಸೋಲು, ಏಳು ಗೆಲುವು ಕಂಡು 14 ಅಂಕ ಸಂಪಾದಿಸಿ -0.117 ರನ್​ರೇಟ್ ಹೊಂದಿದೆ.
  • ರಾಜಸ್ಥಾನ್ ರಾಯಲ್ಸ್ ತಂಡ ಪಾಯಿಂಟ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಆಡಿದ 12 ಪಂದ್ಯಗಳಲ್ಲಿ ಆರು ಗೆಲುವು, ಆರು ಸೋಲುಂಡು +0.633ರನ್​ರೇಟ್​ನೊಂದಿಗೆ 12 ಅಂಕ ಸಂಪಾದಿಸಿದೆ.
  • ಲಖನೌ ಸೂಪರ್ ಜೇಂಟ್ಸ್ ತಂಡ ಐದನೇ ಸ್ಥಾನದಲ್ಲಿದೆ. ಆಡಿದ ಹನ್ನೊಂದು ಪಂದ್ಯಗಳಲ್ಲಿ ಐದು ಗೆಲುವು, ಐದು ಸೋಲು ಕಂಡು 11 ಅಂಕ ಸಂಪಾದಿಸಿ +0.294 ರನ್​ರೇಟ್​ ಹೊಂದಿದೆ.
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರನೇ ಸ್ಥಾನದಲ್ಲಿದೆ. ಆಡಿದ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್​ರೇಟ್ ಹೊಂದಿದೆ.
  • ಕೆಕೆಆರ್ ಪಾಯಿಂಟ್ ಟೇಬಲ್​ನಲ್ಲಿ ಏಳನೇ ಸ್ಥಾನಕ್ಕೆ ಕುಸಿದಿದೆ. ಆಡಿದ 12 ಪಂದ್ಯಗಳಲ್ಲಿ ಐದು ಗೆಲುವು, ಏಳು ಪಂದ್ಯಗಳಲ್ಲಿ ಸೋಲುಂಡು -0.357ರನ್​ರೇಟ್​ನೊಂದಿಗೆ 10 ಅಂಕ ಸಂಪಾದಿಸಿದೆ.
  • ಪಂಜಾಬ್ ಕಿಂಗ್ಸ್ ಆಡಿದ 11 ಪಂದ್ಯಗಳಲ್ಲಿ ಆರು ಸೋಲು- ಐದು ಜಯ ಕಂಡು 10 ಅಂಕ ಹೊಂದಿ -0.441ರನ್​ರೇಟ್​ನೊಂದಿಗೆ ಎಂಟನೇ ಸ್ಥಾನಲ್ಲಿದೆ.
  • ಸನ್​ರೈಸರ್ಸ್ ಹೈದರಾಬಾದ್ ತಂಡ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ 10 ಪಂದ್ಯದಲ್ಲಿ ಆರರಲ್ಲಿ ಸೋಲು ನಾಲ್ಕರಲ್ಲಿ ಜಯ ಕಂಡು 8 ಅಂಕ ಸಂಪಾದಿಸಿ -0.472 ರನ್​ರೇಟ್ ಹೊಂದಿದೆ.
  • ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಆಡಿದ 11 ಪಂದ್ಯಗಳ ಪೈಕಿ ನಾಲ್ಕರಲ್ಲಿ ಜಯ ಸಾಧಿಸಿ, ಏಳು ಪಂದ್ಯಗಳಲ್ಲಿ ಸೋಲುಂಡು 8 ಅಂಕ ಸಂಪಾದಿಸಿ -0.605 ರನ್​ರೇಟ್ ಹೊಂದಿದೆ.

IPL 2023: RCB ಪಾಲಿಗೆ ಮುಂದಿನ ಪಂದ್ಯ ಯಾಕೆ ಅಷ್ಟೊಂದು ಮುಖ್ಯ ಗೊತ್ತಾ?

ಆರೆಂಜ್ ಕ್ಯಾಪ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ 11 ಪಂದ್ಯಗಳಲ್ಲಿ ಆರು ಅರ್ಧಶತಕ ಸಿಡಿಸಿ ಒಟ್ಟು 576 ರನ್ ಗಳಿಸಿದ್ದಾರೆ. ರಾಜಸ್ಥಾನ್ ತಂಡದ ಯಶಸ್ವಿ ಜೈಸ್ವಾಲ್ ದ್ವಿತೀಯ ಸ್ಥಾನದಲ್ಲಿದ್ದು ಫಾಫ್​ಗಿಂತ 1 ರನ್ ಹಿಂದೆಯಿದ್ದಾರಷ್ಟೆ. ಇವರು ಆಡಿದ 12 ಪಂದ್ಯಗಳಲ್ಲಿ ನಾಲ್ಕು ಅರ್ಧಶತಕ, 1 ಶತಕ ಸಿಡಿಸಿ ಒಟ್ಟು 575 ರನ್ ಕಲೆಹಾಕಿದ್ದಾರೆ. ಗುಜರಾತ್ ತಂಡದ ಶುಭ್​ಮನ್ ಗಿಲ್ ಮೂರನೇ ಸ್ಥಾನಕ್ಕೆ ಜಿಗಿದಿದ್ದು 12 ಪಂದ್ಯಗಳಿಂದ 475 ರನ್ ಗಳಿಸಿದ್ದಾರೆ.

ಇದನ್ನೂ ಓದಿ
Image
Suryakumar Yadav: ಸೂರ್ಯಕುಮಾರ್ ಕೊನೆಯ ಎಸೆತದಲ್ಲಿ ಸಿಕ್ಸ್ ಸಿಡಿಸಿ ಶತಕ ಬಾರಿಸಿದಾಗ ಸಚಿನ್, ರೋಹಿತ್ ಏನು ಮಾಡಿಡ್ರು ನೋಡಿ
Image
SRH vs LSG: ಐಪಿಎಲ್​ನಲ್ಲಿಂದು ಡಬಲ್ ಧಮಾಕ: ಕುತೂಹಲ ಕೆರಳಿಸಿದ ಎಸ್​ಆರ್​ಹೆಚ್-ಲಖನೌ ಕದನ
Image
IPL 2023: ಎಬಿ ಡಿವಿಲಿಯರ್ಸ್​ ದಾಖಲೆ ಮುರಿದ ರೋಹಿತ್ ಶರ್ಮಾ
Image
Suryakumar Yadav: ಸೂರ್ಯನ ಪ್ರತಾಪಕ್ಕೆ ಹಳೆಯ ದಾಖಲೆಗಳು ಉಡೀಸ್

ಪರ್ಪಲ್ ಕ್ಯಾಪ್:

ಗುಜರಾತ್ ಟೈಟಾನ್ಸ್ ತಂಡದ ರಶೀದ್ ಖಾನ್ ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ 12 ಪಂದ್ಯಗಳಲ್ಲಿ 23 ವಿಕೆಟ್ ಪಡೆದುಕೊಂಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ 12 ಪಂದ್ಯಗಳಿಂದ 21 ವಿಕೆಟ್ ಪಡೆದು ದ್ವಿತೀಯ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಪಿಯೂಷ್ ಚಾವ್ಲಾ ತೃತೀಯ ಸ್ಥಾನದಲ್ಲಿದ್ದು ಹನ್ನೆರಡು ಪಂದ್ಯಗಳಲ್ಲಿ 19 ವಿಕೆಟ್ ಪಡೆದುಕೊಂಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು