AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Points Table: ಅಗ್ರಸ್ಥಾನದಲ್ಲಿ ಗುಜರಾತ್ ಭದ್ರ: ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿ ಮುಂಬೈ-ಚೆನ್ನೈ

IPL 2022 Orange Cap and Purple Cap: ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಸಿಎಸ್​ಕೆ ವಿರುದ್ಧದ ರೋಚಕ ಗೆಲುವಿನ ಬಳಿಕ ಆಡಿದ ಆರು ಪಂದ್ಯದಲ್ಲಿ ಒಂದರಲ್ಲಿ ಸೋಲು ಐದರಲ್ಲಿ ಗೆದ್ದು ಬೀಗಿದೆ.

IPL 2022 Points Table: ಅಗ್ರಸ್ಥಾನದಲ್ಲಿ ಗುಜರಾತ್ ಭದ್ರ: ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿ ಮುಂಬೈ-ಚೆನ್ನೈ
IPL 2022 Points Table
TV9 Web
| Updated By: Vinay Bhat|

Updated on:Apr 18, 2022 | 10:38 AM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15ನೇ ಆವೃತ್ತಿಯ ಅಸಲಿ ಆಟ ಈಗ ಶುರುವಾಗಿದೆ. ಒಂದು ತಂಡದ ಸೋಲು-ಗೆಲುವು ಇನ್ನೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಆರಂಭವಾಗಿದೆ. ಈ ಬಾರಿ ಹಿಂದಿನ ಸೀಸನ್​ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಗೆಲುವಿಗಾಗಿ ಹಾತೊರೆಯುತ್ತಿದೆ. ಕಳೆದ ಬಾರಿಯ ವಿನ್ನರ್ ಚೆನ್ನೈ ಸೂಪರ್ ಕಿಂಗ್ಸ್ ಐದು ಪಂದ್ಯಗಳಲ್ಲಿ ಸೋಲುಂಡರೆ ಮಾಜಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಆಡಿದ ಆರೂ ಪಂದ್ಯಗಳಲ್ಲಿಯು ಸೋಲು ಅನುಭವಿಸಿ ಕೆಟ್ಟ ದಾಖಲೆ ಬರೆದಿದೆ. ಇದರ ನಡುವೆ ಎರಡು ಹೊಸ ತಂಡಗಳಾದ ಗುಜರಾತ್ ಮತ್ತು ಲಖನೌ ಕೂಡ ನಿರೀಕ್ಷೆ ಹುಟ್ಟಿಸಿದೆ. ಈ ಬಾರಿ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

ಪಾಯಿಂಟ್ ಟೇಬಲ್:

  • ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಸಿಎಸ್​ಕೆ ವಿರುದ್ಧದ ರೋಚಕ ಗೆಲುವಿನ ಬಳಿಕ ಆಡಿದ ಆರು ಪಂದ್ಯದಲ್ಲಿ ಒಂದರಲ್ಲಿ ಸೋಲು ಐದರಲ್ಲಿ ಗೆದ್ದು ಬೀಗಿದೆ. 10 ಅಂಕದೊಂದಿಗೆ ಗುಜರಾತ್ ನಿವ್ವಳ ರನ್ ರೇಟ್ +0.395 ಆಗಿದೆ.
  • ಮತ್ತೊಂದು ಹೊಸ ತಂಡವಾದ ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ತಂಡ ಎರಡನೇ ಸ್ಥಾನದಲ್ಲಿದೆ. ಒಟ್ಟು 8 ಅಂಕದೊಂದಿಗೆ ಲಖನೌದ ನಿವ್ವಳ ರನ್ ರೇಟ್ 0.296.
  • ಇತ್ತ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನದಲ್ಲಿದ್ದು, ಎಂಟು ಅಂಕದೊಂದಿಗೆ RCB ನಿವ್ವಳ ರನ್ ರೇಟ್ 0.142 ಆಗಿದೆ.
  • ಏಳನೇ ಸ್ಥಾನದಲ್ಲಿದ್ದ ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಪಂಜಾಬ್ ವಿರುದ್ಧದ ಗೆಲುವಿನ ಬಳಿಕ ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ಆಡಿದ ಆರು ಪಂದ್ಯಗಳಲ್ಲಿ ನಾಲ್ಕರಲ್ಲಿ ಜಯ ಸಾಧಿಸಿದ್ದು 8 ಅಂಕ ಸಂಪಾದಿಸಿ -0.077 ರನ್ ರೇಟ್ ಹೊಂದಿದೆ.
  • ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಆಡಿದ ಐದು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು ಎರಡರಲ್ಲಿ ಸೋಲುಂಡು ಒಟ್ಟು 6 ಅಂಕದೊಂದಿಗೆ ಐದನೇ ಸ್ಥಾನದಲ್ಲಿದೆ. ಆರ್​ಆರ್​ +0.389 ರನ್​​ರೇಟ್ ಹೊಂದಿದೆ.
  • ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರನೇ ಸ್ಥಾನದಲ್ಲಿದೆ. ಆಡಿದ ಆರು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು, ಮೂರರಲ್ಲಿ ಸೋಲು ಕಂಡು ಒಟ್ಟು 6 ಅಂಕದೊಂದಿಗೆ +0.223 ರನ್​​ರೇಟ್​ನೊಂದಿಗೆ 4ನೇ ಸ್ಥಾನದಲ್ಲಿದೆ.
  • ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಏಳನೇ ಸ್ಥಾನಕ್ಕೆ ಕುಸಿದಿದೆ. 6 ಅಂಕದೊಂದಿಗೆ ಪಂಜಾಬ್ ನಿವ್ವಳ ರನ್ ರೇಟ್ 0.109 ಆಗಿದೆ.
  • ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಡೆಲ್ಲಿಯ ನಿವ್ವಳ ರನ್ ರೇಟ್ 0.219 ಆಗಿದೆ.
  • ಇತ್ತ ಆಡಿದ ನಾಲ್ಕು ಪಂದ್ಯಗಳಲ್ಲಿ ಆರು ಪಂದ್ಯಗಳಲ್ಲಿ ಪೈಕಿ 5 ರಲ್ಲಿ ಸೋಲು ಒಂದರಲ್ಲಿ ಗೆಲುವು ಕಂಡಿರುವ ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 2 ಅಂಕದೊಂದಿಗೆ -0.638 ರನ್​ರೇಟ್​​ ಹೊಂದಿ ಒಂಬತ್ತನೇ ಸ್ಥಾನದಲ್ಲಿದೆ.
  • ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಆಡಿದ ಆರೂ ಪಂದ್ಯದಲ್ಲಿ ಸೋಲುಂಡಿದೆ. ಮುಂಬೈ ನಿವ್ವಳ ರನ್ ರೇಟ್ -1.048.

ಆರೆಂಜ್ ಕ್ಯಾಪ್:

ಅತಿ ಹೆಚ್ಚು ರನ್ ಗಳಿಸಿದವರ ಮೊದಲ ಸ್ಥಾನದಲ್ಲಿ ಆರ್​ ಆರ್​ ತಂಡದ ಜೋಸ್ ಬಟ್ಲರ್ ಇದ್ದು ಇವರು ಐದು ಪಂದ್ಯಗಳಿಂದ 272 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಎರಡನೇ ಸ್ಥಾನಕ್ಕೆ ಲಖನೌ ತಂಡದ ನಾಯಕ ಕೆಎಲ್ ರಾಹುಲ್ ಜಿಗಿದಿದ್ದಾರೆ. ಶತಕದ ಮೂಲಕ ಇವರು 235 ರನ್ ಸಿಡಿಸಿದ್ದಾರೆ. ಗುಜರಾತ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೂರನೇ ಸ್ಥಾನದಲ್ಲಿದ್ದು ಇವರು ಐದು ಪಂದ್ಯಗಳಿಂದ 228 ರನ್ ಸಿಡಿಸಿದ್ದಾರೆ. ಸಿಎಸ್​ಕೆ ತಂಡದ ಶಿವಂ ದುಬೆ ನಾಲ್ಕನೇ ಸ್ಥಾನದಲ್ಲಿದ್ದು, 6 ಪಂದ್ಯಗಳಲ್ಲಿ 226 ರನ್ ಗಳಿಸಿದ್ದಾರೆ. ಪಂಜಾಬ್ ತಂಡದ ಲಿಯಾಮ್ ಲಿವಿಂಗ್​ಸ್ಟೋನ್ ಆರು ಪಂದ್ಯಗಳಲ್ಲಿ 224 ರನ್ ಸಿಡಿಸಿ ಐದನೇ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್:

ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಯುಜ್ವೇಂದ್ರ ಚಹಲ್ ಟಾಪ್​ನಲ್ಲಿದ್ದಾರೆ. ಇವರು ಆಡಿದ ಐದು ಪಂದ್ಯಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 12 ವಿಕೆಟ್ ಕಬಳಿಸಿದ್ದಾರೆ. ಎರಡನೇ ಸ್ಥಾನಕ್ಕೆ ಟಿ. ನಟರಾಜನ್ ಜಿಗಿಇದ್ದು ಇವರುಕೂಡ ಆರು ಪಂದ್ಯಗಳಿಂದ 12 ಕಿತ್ತಿದ್ದಾರೆ. ನಂತರದ ಮೂರು ಸ್ಥಾನದಲ್ಲಿ ಕುಲ್ದೀಪ್ ಯಾದವ್ 5 ಪಂದ್ಯಗಳಿಂದ 11 ವಿಕೆಟ್, ಆವೇಶ್ ಖಾನ್ ಕೂಡ 11 ವಿಕೆಟ್​ನೊಂದಿಗೆ ನಾಲ್ಕನೇ ಸ್ಥಾನ, ವನಿಂದು ಹಸರಂಗ ಕೂಡ 11 ವಿಕೆಟ್​ನೊಂದಿಗೆ 5ನೇ ಸ್ಥಾನದಲ್ಲಿದ್ದಾರೆ.

Ravindra Jadeja: ಐದನೇ ಸೋಲು: ಪಂದ್ಯ ಮುಗಿದ ಬಳಿಕ ರವೀಂದ್ರ ಜಡೇಜಾ ಹೇಳಿದ್ದೇನು ನೋಡಿ

RR vs KKR: ಐಪಿಎಲ್​ನಲ್ಲಿಂದು ಹೈವೋಲ್ಟೇಜ್ ಪಂದ್ಯ: ಗೆಲ್ಲಲೇ ಬೇಕಾದ ಒತ್ತಡದಲ್ಲಿ ರಾಜಸ್ತಾನ್-ಕೋಲ್ಕತ್ತಾ

Published On - 10:36 am, Mon, 18 April 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?