AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs SRH, IPL 2023: ಐಪಿಎಲ್​ನಲ್ಲಿಂದು ಗುಜರಾತ್-ಹೈದರಾಬಾದ್ ಮುಖಾಮುಖಿ: ಯಾವ ತಂಡ ಗೆದ್ದರೆ ಆರ್​ಸಿಬಿಗೆ ಸಹಕಾರಿ?

IPL 2023: ಇಂದು ಐಪಿಎಲ್ 2023 ರಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಮತ್ತು ಆ್ಯಡಂ ಮರ್ಕ್ರಮ್ ಅವರ ಸನ್​ರೈಸರ್ಸ್ ಹೈದರಾಬಾದ್ (GT vs SRH) ಮುಖಾಮುಖಿ ಆಗುತ್ತಿದೆ.

GT vs SRH, IPL 2023: ಐಪಿಎಲ್​ನಲ್ಲಿಂದು ಗುಜರಾತ್-ಹೈದರಾಬಾದ್ ಮುಖಾಮುಖಿ: ಯಾವ ತಂಡ ಗೆದ್ದರೆ ಆರ್​ಸಿಬಿಗೆ ಸಹಕಾರಿ?
GT vs SRH
Follow us
Vinay Bhat
|

Updated on:May 15, 2023 | 6:55 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ರೋಚಕ ಘಟ್ಟಕ್ಕೆ ಬಂದು ನಿಂತಿದೆ. ಪ್ಲೇ ಆಫ್ ಲೆಕ್ಕಚಾರ ಆರಂಭವಾಗಿದ್ದು ಒಂದು ಪಂದ್ಯದ ಸೋಲು-ಗೆಲುವು ಮೂರನೇ ತಂಡಕ್ಕೆ ವರದಾನವಾಗುತ್ತಿದೆ. ಇದರ ನಡುವೆ ಇಂದು ಐಪಿಎಲ್ 2023 ರಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಮತ್ತು ಆ್ಯಡಂ ಮರ್ಕ್ರಮ್ ಅವರ ಸನ್​ರೈಸರ್ಸ್ ಹೈದರಾಬಾದ್ (GT vs SRH) ಮುಖಾಮುಖಿ ಆಗುತ್ತಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ. ಈ ಪಂದ್ಯದಲ್ಲಿ ಗುಜರಾತ್ ಗೆದ್ದರೆ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಆಗಲಿದೆ. ಎಸ್​ಆರ್​ಹೆಚ್ ಸೋತರೆ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ. ಇವರಿಬ್ಬರ ನಡುವಣ ಸೋಲು-ಗೆಲುವು ಆರ್​ಸಿಬಿಗೆ (RCB) ಆಗಲಿ ಅಥವಾ ಇತರೆ ಯಾವ ತಂಡದ ಮೇಲೂ ಪರಿಣಾಮ ಬೀರಿವುದಿಲ್ಲ.

ಗುಜರಾತ್:

ಜಿಟಿ ತಂಡ ಆಡಿರುವ 12 ಪಂದ್ಯಗಳಲ್ಲಿ ಎಂಟು ಗೆಲುವು 4 ಸೋಲು ಕಂಡು 16 ಅಂಕ ಪಡೆದುಕೊಂಡಿದ್ದು ಟಾಪ್​ನಲ್ಲಿದೆ. ಹಾರ್ದಿಕ್ ಪಡೆ ಹಿಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತಿತ್ತು. ಹೀಗಿದ್ದರೂ ಪ್ಲೇಯರ್ಸ್ ಭರ್ಜರಿ ಪ್ರದರ್ಶನ ತೋರುತ್ತಿದ್ದಾರೆ. ಬ್ಯಾಟಿಂಗ್- ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬಲಿಷ್ಠವಾಗಿದೆ. ನಾಯಕ ಹಾರ್ದಿಕ್ ಪಾಂಡ್ಯ ಕಡೆಯಿಂದ ಒಂದು ಉತ್ತಮ ಆಟ ಬರಬೇಕಿದೆ.

ವೃದ್ದಿಮಾನ್ ಸಾಹ ಹಾಗೂ ಶುಭ್​ಮನ್ ಗಿಲ್ ಸ್ಫೋಟಕ ಆರಂಭ ಒದಗಿಸಿದ್ದಾರೆ. ಡೇವಿಡ್ ಮಿಲ್ಲರ್, ವಿಜಯ್ ಶಂಕರ್ ಹಾಗೂ ರಾಹುಲ್ ತೇವಾಟಿಯ ಫಿನಿಶರ್​ಗಳಾಗಿದ್ದಾರೆ. ಹಿಂದಿನ ಪಂದ್ಯದಲ್ಲಿ 32 ಎಸೆತಗಳಲ್ಲಿ 10 ಸಿಕ್ಸರ್ ಸಿಡಿಸಿ ಅಜೇಯ 79 ರನ್ ಚಚ್ಚುದ ಮೂಲಕ ರಶೀದ್ ಖಾನ್ ಆಲ್ರೌಂಡರ್ ಆಗಿ ಕಾಣಿಸಿಕೊಂಡಿದ್ದಾರೆ. ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಜೋಶ್ವಾ ಲಿಟಲ್ ಹಾಗೂ ನೂರ್ ಅಹ್ಮದ್ ಮಾರಕವಾಗಿದ್ದಾರೆ.

ಇದನ್ನೂ ಓದಿ
Image
IPL 2023 Points Table: RCBಗೆ ಭರ್ಜರಿ ಜಯ, CSKಗೆ ಸೋಲು: ಹೊಸ ಪಾಯಿಂಟ್ಸ್​ ಟೇಬಲ್ ಹೀಗಿದೆ
Image
IPL 2023: ಐಪಿಎಲ್​ನಲ್ಲಿ ಅತೀ ಕಡಿಮೆ ಮೊತ್ತಕ್ಕೆ ಆಲೌಟ್​ ಆದ ಟಾಪ್-5 ತಂಡಗಳಾವುವು ಗೊತ್ತಾ?
Image
KL Rahul: ಕೆಎಲ್ ರಾಹುಲ್ ಫೋಟೋ ವೈರಲ್: ಕಂಬ್ಯಾಕ್ ಯಾವಾಗ?
Image
IPL 2023: ಮುಂಬೈ ಇಂಡಿಯನ್ಸ್​ ಕೈಯಲ್ಲಿದೆ RCB ತಂಡದ ಪ್ಲೇಆಫ್ ಭವಿಷ್ಯ

IPL 2023: ರಾಜಸ್ಥಾನ್ ರಾಯಲ್ಸ್​ನ ಹಿಂದಿಕ್ಕಿದ RCB: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

ಹೈದರಾಬಾದ್​:

ಸನ್​ರೈಸರ್ಸ್ ಹೈದರಾಬಾದ್ ತಂಡ ಪಾಯಿಂಟ್ ಟೇಬಲ್​ನಲ್ಲಿ ಒಂಬತ್ತನೇ ಸ್ಥಾನದಲ್ಲಿದ್ದು ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ತಂಡದಿಂದ ಸಂಘಟಿತ ಪ್ರದರ್ಶನ ಬರುತ್ತಿಲ್ಲ. ಅಭಿಷೇಕ್ ಶರ್ಮಾ, ಅನ್ಮೋಲ್​ಪ್ರೀತ್ ಸಿಂಗ್, ರಾಹುಲ್ ತ್ರಿಪಾಠಿ, ನಾಯಕ ಮರ್ಕ್ರಮ್, ಹೆನ್ರಿಚ್ ಕ್ಲಾಸೆನ್, ಗ್ಲೆನ್ ಪಿಲಿಪ್ಸ್ ಕೆಲ ಪಂದ್ಯ ಆಡಿದರೆ ಉಳಿದ ಪಂದ್ಯದಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ್ದರು. ಬೌಲಿಂಗ್​ನಲ್ಲಿ ಹೈದರಬಾದ್ ಪರ ಭುವನೇಶ್ವರ್ ಕುಮಾರ್ ಬಿಟ್ಟರೆ ಮತ್ಯಾರು ಮಾರಕವಾಗಿ ಗೋಚರಿಸುತ್ತಿಲ್ಲ. ಮಾರ್ಕೊ ಜಾನ್ಸೆನ್, ವಾಷಿಂಗ್ಟನ್ ಸುಂದರ್, ಟಿ. ನಟರಾಜನ್ ಲಯಕಂಡುಕೊಳ್ಳಬೇಕಿದೆ. ಮಯಾಂಕ್ ಮಾರ್ಕಂಡೆ ಸ್ಪಿನ್ ಕೆಲಬಾರಿಯಷ್ಟೆ ಕೆಲಸ ಮಾಡಿದೆ.

ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ, ಶುಭ್​ಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಜೋಶ್ವಾ ಲಿಟಲ್, ಮೋಹಿತ್ ಶರ್ಮಾ, ಸಾಯಿ ಸುದರ್ಶನ್, ಶ್ರೀಕರ್ ಭರತ್, ಶಿವಂ ಮಾವಿ, ರವಿಶ್ರೀನಿವಾಸನ್ ಸಾಯಿ ಕಿಶೋರ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ದಾಸುನ್ ಶಾನಕ, ಓಡನ್ ಸ್ಮಿತ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್.

ಸನ್‌ರೈಸರ್ಸ್ ಹೈದರಾಬಾದ್: ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಆ್ಯಡಂ ಮರ್ಕ್ರಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್, ಅಬ್ದುಲ್ ಸಮದ್, ಮಯಾಂಕ್ ಮಾರ್ಕಂಡೆ, ಭುವನೇಶ್ವರ್ ಕುಮಾರ್, ಅಕೇಲ್ ಹೊಸೈನ್, ಉಮ್ರಾನ್ ಮಲಿಕ್, ಮಾರ್ಕೊ ಜಾನ್ಸೆನ್, ಟಿ ನಟರಾಜನ್, ವಿವ್ರಾಂತ್ ಶರ್ಮಾ, ಗ್ಲೆನ್ ಫಿಲಿಪ್ಸ್, ಮಯಾಂಕ್ ಡಾಗರ್, ಸಮರ್ಥ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಆದಿಲ್ ರಶೀದ್, ಕಾರ್ತಿಕ್ ತ್ಯಾಗಿ, ಉಪೇಂದ್ರ ಯಾದವ್, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ನಿತೀಶ್ ರೆಡ್ಡಿ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:55 am, Mon, 15 May 23

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ