AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs RCB IPL 2026 Highlights: ಆರ್​​ಸಿಬಿ ವಿರುದ್ಧ ಸುಲಭವಾಗಿ ಗೆದ್ದ ಗುಜರಾತ್

Gujarat Titans vs Royal Challengers Bengaluru, IPL 2026 Highlights: ಐಪಿಎಲ್ 2026ರ 42 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿ. ಈ ಆವೃತ್ತಿಯಲ್ಲಿ ಎರಡೂ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

GT vs RCB IPL 2026 Highlights: ಆರ್​​ಸಿಬಿ ವಿರುದ್ಧ ಸುಲಭವಾಗಿ ಗೆದ್ದ ಗುಜರಾತ್
Gt Vs Rcb
ಪೃಥ್ವಿಶಂಕರ
|

Updated on:Apr 30, 2026 | 11:15 PM

Share

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯ ಸೋಲು ಅನುಭವಿಸಿತು. ಅರ್ಷದ್ ಖಾನ್, ಜೇಸನ್ ಹೋಲ್ಡರ್ ಮತ್ತು ಶುಭ್‌ಮನ್ ಗಿಲ್ ಗುಜರಾತ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾಗಿ 155 ರನ್‌ಗಳಿಗೆ ಆಲೌಟ್ ಆಯಿತು. ನಂತರ ಗುಜರಾತ್ ಟೈಟಾನ್ಸ್ ಸುಲಭವಾಗಿ ಗುರಿ ತಲುಪಿತು. ಈ ಆವೃತ್ತಿಯಲ್ಲಿ ಆಡಿರುವ ಒಂಬತ್ತು ಪಂದ್ಯಗಳಲ್ಲಿ ಗುಜರಾತ್ ಪಡೆದ ಐದನೇ ಗೆಲುವು ಇದು, ಆದರೆ ಆರ್‌ಸಿಬಿ ಒಂಬತ್ತು ಪಂದ್ಯಗಳಲ್ಲಿ ಮೂರನೇ ಸೋಲನ್ನು ಅನುಭವಿಸಿತು.

LIVE NEWS & UPDATES

The liveblog has ended.
  • 30 Apr 2026 11:12 PM (IST)

    GT vs RCB IPL 2026: ಗುಜರಾತ್​ಗೆ ಭರ್ಜರಿ ಗೆಲುವು

    ಗುಜರಾತ್ ತಂಡವು ಬೆಂಗಳೂರು ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿ, ಕೇವಲ 15.5 ಓವರ್‌ಗಳಲ್ಲಿ ಗುರಿ ಬೆನ್ನಟ್ಟಿ ಜಯ ಸಾಧಿಸಿತು. ರಶೀದ್ ಖಾನ್ 16 ನೇ ಓವರ್‌ನಲ್ಲಿ ಬೌಂಡರಿ ಬಾರಿಸಿ ತಂಡವನ್ನು ಗುರಿ ದಾಟಿಸಿದರು. ರಶೀದ್ 7 ರನ್ ಗಳಿಸಿ ಅಜೇಯರಾಗಿ ಉಳಿದರೆ, ಇಂಪ್ಯಾಕ್ಟ್ ಪ್ಲೇಯರ್ ರಾಹುಲ್ ತೆವಾಟಿಯಾ ಕೇವಲ 17 ಎಸೆತಗಳಲ್ಲಿ 27 ರನ್ ಗಳಿಸಿ ಅಜೇಯರಾಗಿ ಉಳಿದರು. ಈ ಋತುವಿನಲ್ಲಿ ಗುಜರಾತ್ ತಂಡಕ್ಕೆ ಇದು 5 ನೇ ಗೆಲುವು.

  • 30 Apr 2026 10:54 PM (IST)

    GT vs RCB IPL 2026: ಸುಂದರ್ ಕೂಡ ಔಟ್

    ಗುಜರಾತ್ ತನ್ನ ಐದನೇ ವಿಕೆಟ್ ಕಳೆದುಕೊಂಡಿದೆ. ವಾಷಿಂಗ್ಟನ್ ಸುಂದರ್ ಅವರನ್ನು ರೊಮಾರಿಯೊ ಶೆಫರ್ಡ್ ಔಟ್ ಮಾಡಿದರು.

  • 30 Apr 2026 10:32 PM (IST)

    GT vs RCB IPL 2026: ನಾಲ್ಕನೇ ವಿಕೆಟ್ ಪತನ

    ಗುಜರಾತ್ ಟೈಟಾನ್ಸ್ ತಂಡವು ತನ್ನ ನಾಲ್ಕನೇ ವಿಕೆಟ್ ಕಳೆದುಕೊಂಡಿದ್ದು, ಈ ಬಾರಿ ಶಾರುಖ್ ಖಾನ್ ಅವರನ್ನು ಔಟ್ ಮಾಡಿದವರು ರೊಮಾರಿಯೊ ಶೆಫರ್ಡ್.

  • 30 Apr 2026 10:13 PM (IST)

    GT vs RCB IPL 2026: 7 ಓವರ್‌ ಪೂರ್ಣ

    ಗುಜರಾತ್ ಕೇವಲ 7 ಓವರ್‌ಗಳಲ್ಲಿ 86 ರನ್ ಗಳಿಸಿ ಕೇವಲ 2 ವಿಕೆಟ್‌ಗಳನ್ನು ಮಾತ್ರ ಕಳೆದುಕೊಂಡಿತು. ಜೋಸ್ ಬಟ್ಲರ್ ಸಿಕ್ಸರ್‌ಗಳ ಮಳೆಗರೆದು ತಂಡವನ್ನು ಸುಲಭ ಗೆಲುವಿನ ಹಾದಿಯಲ್ಲಿ ಸಾಗಿಸಿದರು.

  • 30 Apr 2026 09:59 PM (IST)

    GT vs RCB IPL 2026: ಸುದರ್ಶನ್ ಔಟ್

    ಗುಜರಾತ್ ಪರ ಗಿಲ್ ತ್ವರಿತ ಆರಂಭ ನೀಡಿದರು. ಆದರೆ ಭುವನೇಶ್ವರ್ ಕುಮಾರ್ ಎಸೆದ ಮೂರನೇ ಓವರ್‌ನಲ್ಲಿ ಸಾಯಿ ಸುದರ್ಶನ್ ಅವರನ್ನು ಔಟ್ ಮಾಡುವ ಮೂಲಕ ಮೊದಲ ಶಾಕ್ ನೀಡಿದರು.

  • 30 Apr 2026 09:57 PM (IST)

    GT vs RCB IPL 2026: ಗಿಲ್ ಸ್ಫೋಟಕ ಆರಂಭ

    ಶುಭಮನ್ ಗಿಲ್ ಕೇವಲ ಎರಡು ಓವರ್‌ಗಳಲ್ಲಿ ಆರ್‌ಸಿಬಿ ಬೌಲರ್‌ಗಳನ್ನು ಚೂರುಚೂರು ಮಾಡಿದರು. ಮೊದಲ ಓವರ್‌ನಲ್ಲಿ, ಗಿಲ್ ಭುವನೇಶ್ವರ್ ಕುಮಾರ್ ಎಸೆದ ಬೌಲಿಂಗ್‌ನಲ್ಲಿ ಒಂದು ಸಿಕ್ಸರ್ ಮತ್ತು ಒಂದು ಬೌಂಡರಿ ಬಾರಿಸಿದರು. ನಂತರ, ಎರಡನೇ ಓವರ್‌ನಲ್ಲಿ, ಅವರು ಹ್ಯಾಜಲ್‌ವುಡ್ ವಿರುದ್ಧ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದರು.

  • 30 Apr 2026 09:25 PM (IST)

    GT vs RCB IPL 2026: ಆರ್​​ಸಿಬಿ ಆಲ್ ಔಟ್

    ಬೆಂಗಳೂರು ತಂಡದ ಇನ್ನಿಂಗ್ಸ್ ಕೇವಲ 155 ರನ್‌ಗಳಿಗೆ ಅಂತ್ಯವಾಯಿತು. ಪೂರ್ಣ 20 ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲರಾವಾದ ಆರ್​ಸಿಬಿ 19.2 ಓವರ್‌ಗಳಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಕಳೆದುಕೊಂಡರು. ಜೋಶ್ ಹ್ಯಾಜಲ್‌ವುಡ್ ಕೊನೆಯ ವಿಕೆಟ್ ಆಗಿ ರನ್ ಔಟ್ ಆದರು.

  • 30 Apr 2026 09:11 PM (IST)

    GT vs RCB IPL 2026: ಪಡಿಕ್ಕಲ್ ಮತ್ತು ಶೆಫರ್ಡ್ ಕೂಡ ಔಟ್

    ಎಂಟು ವಿಕೆಟ್‌ಗಳನ್ನು ಕಳೆದುಕೊಂಡು ಬೆಂಗಳೂರು ತಂಡದ ದೊಡ್ಡ ಮೊತ್ತದ ಕನಸು ಭಗ್ನವಾಯಿತು. 14ನೇ ಓವರ್‌ನಲ್ಲಿ ರಶೀದ್ ದೇವದತ್ ಪಡಿಕ್ಕಲ್ (40) ಅವರನ್ನು ಔಟ್ ಮಾಡಿದರೆ, ಮುಂದಿನ ಓವರ್‌ನಲ್ಲಿ ಹೋಲ್ಡರ್ ಶೆಫರ್ಡ್ (17) ಅವರನ್ನು ಔಟ್ ಮಾಡಿದರು.

  • 30 Apr 2026 08:36 PM (IST)

    GT vs RCB IPL 2026: ಕೃನಾಲ್ ಪಾಂಡ್ಯ ಔಟ್

    ಹಾಲಿ ಚಾಂಪಿಯನ್ ಬೆಂಗಳೂರು ತಂಡ ಕೇವಲ 11 ಓವರ್‌ಗಳಲ್ಲಿ 96 ರನ್‌ಗಳಿಗೆ ಆರು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದೆ. ಅರ್ಷದ್ ಖಾನ್ ಕೃನಾಲ್ ಪಾಂಡ್ಯ ಅವರನ್ನು ಔಟ್ ಮಾಡುವ ಮೂಲಕ ತಮ್ಮ ಎರಡನೇ ವಿಕೆಟ್ ಪಡೆದರು. ಜೇಸನ್ ಹೋಲ್ಡರ್ ಸತತ ಮೂರನೇ ಕ್ಯಾಚ್ ಪಡೆದರು.

  • 30 Apr 2026 08:25 PM (IST)

    GT vs RCB IPL 2026: ಪಾಟಿದಾರ್ ಔಟ್

    ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ (19) ಕೂಡ ಅರ್ಷದ್ ಖಾನ್ ಬೌಲಿಂಗ್​ನಲ್ಲಿ ಔಟ್ ಆದರು. ಆದಾಗ್ಯೂ, ಜೇಸನ್ ಹೋಲ್ಡರ್ ಹಿಡಿದ ಕ್ಯಾಚ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಏಕೆಂದರೆ ಹೋಲ್ಡರ್ ಚೆಂಡನ್ನು ಹಿಡಿದು ಅದನ್ನು ನೆಲಕ್ಕೆ ತಾಗಿಸಿದ್ದು ಸ್ಪಷ್ಟವಾಗಿ ಗೋಚರಿಸುತಿತ್ತು. ಆದರೆ ಅಂಪೈರ್ ಅದನ್ನು ಔಟ್ ಎಂದು ತೀರ್ಪು ನೀಡಿದರು.

  • 30 Apr 2026 08:00 PM (IST)

    GT vs RCB IPL 2026: ವಿರಾಟ್ ಕೊಹ್ಲಿ ಔಟ್

    ವಿರಾಟ್ ಕೊಹ್ಲಿ (28) ಅವರ ಸಣ್ಣ ಆದರೆ ವೇಗದ ಇನ್ನಿಂಗ್ಸ್ ಕೊನೆಗೊಂಡಿತು. ಕಗಿಸೊ ರಬಾಡ ತಮ್ಮ ಮುಂದಿನ ಓವರ್‌ನಲ್ಲಿ ಕೊಹ್ಲಿ ವಿಕೆಟ್ ಪಡೆಯುವ ಮೂಲಕ ಸೇಡು ತೀರಿಸಿಕೊಂಡರು.

  • 30 Apr 2026 07:51 PM (IST)

    GT vs RCB IPL 2026: ಬೆಥೆಲ್ ಔಟ್

    ಉತ್ತಮ ಆರಂಭದ ನಂತರ ಬೆಂಗಳೂರು ತಂಡ ಮೊದಲ ವಿಕೆಟ್ ಕಳೆದುಕೊಂಡಿತು. ಮೂರನೇ ಓವರ್‌ನಲ್ಲಿ ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಜಾಕೋಬ್ ಬೆಥೆಲ್ (5) ಅವರನ್ನು ಮಿಡ್ ವಿಕೆಟ್‌ನಲ್ಲಿ ಕ್ಯಾಚ್ ನೀಡಿ ಔಟ್ ಮಾಡಿದರು.

  • 30 Apr 2026 07:46 PM (IST)

    GT vs RCB IPL 2026: ಬೌಂಡರಿಗಳ ಮಳೆ

    ಎರಡನೇ ಓವರ್‌ನಲ್ಲಿ ವಿರಾಟ್ ಕೊಹ್ಲಿ ಬೌಂಡರಿಗಳ ಮಳೆಗರೆದರು. ಕಗಿಸೊ ರಬಾಡ ಅವರ ಓವರ್‌ನ ಐದು ಸತತ ಎಸೆತಗಳಲ್ಲಿ ಐದು ಬೌಂಡರಿಗಳನ್ನು ಬಾರಿಸಿದರು. ಆರನೇ ಎಸೆತದಲ್ಲಿ ಕೊಹ್ಲಿ ಸಿಂಗಲ್ ಪಡೆದರು.

  • 30 Apr 2026 07:43 PM (IST)

    GT vs RCB IPL 2026: ಬ್ಯಾಟಿಂಗ್ ಆರಂಭ

    ವಿರಾಟ್ ಕೊಹ್ಲಿ ಮತ್ತು ಜಾಕೋಬ್ ಬೆಥೆಲ್ ಬ್ಯಾಟಿಂಗ್ ಆರಂಭಿಸಿದರು. ಗುಜರಾತ್ ಪರ ಮೊಹಮ್ಮದ್ ಸಿರಾಜ್ ಮೊದಲ ಓವರ್ ಎಸೆದು ಕೇವಲ ಆರು ರನ್‌ಗಳನ್ನು ನೀಡಿದರು.

  • 30 Apr 2026 07:36 PM (IST)

    GT vs RCB IPL 2026: ಆರ್​ಸಿಬಿ

    ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಾಶ್ ಶರ್ಮಾ, ರಸಿಖ್ ಸಲಾಂ.

    ಇಂಪ್ಯಾಕ್ಟ್ ಪ್ಲೇಯರ್: ಜಾಕೋಬ್ ಬೆಥೆಲ್, ಜೋರ್ಡಾನ್ ಕಾಕ್ಸ್, ಮಂಗೇಶ್ ಯಾದವ್, ವಿಕಿ ಓಸ್ಟ್ವಾಲ್ ಮತ್ತು ವೆಂಕಟೇಶ್ ಅಯ್ಯರ್

  • 30 Apr 2026 07:35 PM (IST)

    GT vs RCB IPL 2026: ಗುಜರಾತ್ ಟೈಟಾನ್ಸ್

    ಶುಭಮನ್ ಗಿಲ್(ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್(ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ಶಾರುಖ್ ಖಾನ್, ವಾಷಿಂಗ್ಟನ್ ಸುಂದರ್, ಅರ್ಷದ್ ಖಾನ್, ರಶೀದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಮಾನವ್ ಸುತಾರ್.

    ಇಂಪ್ಯಾಕ್ಟ್ ಪ್ಲೇಯರ್: ರಾಹುಲ್ ತೆವಾಟಿಯಾ, ಗ್ಲೆನ್ ಫಿಲಿಪ್ಸ್, ಅನುಜ್ ರಾವತ್, ನಿಶಾಂತ್ ಸಿಂಧು,ಕುಲ್ವಂತ್ ಖೆಜ್ರೋಲಿಯಾ.

Published On - Apr 30,2026 7:02 PM

Follow Us
ರೇವತಿ ನಕ್ಷತ್ರಕ್ಕೆ ಶನಿ ಎಂಟ್ರಿ!
ರೇವತಿ ನಕ್ಷತ್ರಕ್ಕೆ ಶನಿ ಎಂಟ್ರಿ!
ಇಂದು ಹನುಮನಿಗೆ ಬೆಲ್ಲದ ದೀಪ ಹಚ್ಚಿದರೆ ಈ ರಾಶಿಯವರಿಗೆ ಭರ್ಜರಿ ಅದೃಷ್ಟ!
ಇಂದು ಹನುಮನಿಗೆ ಬೆಲ್ಲದ ದೀಪ ಹಚ್ಚಿದರೆ ಈ ರಾಶಿಯವರಿಗೆ ಭರ್ಜರಿ ಅದೃಷ್ಟ!
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ