AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ಆಟಗಾರನ ಮನೆ ಮೇಲೆ ಗುಂಡಿನ ದಾಳಿ..!

ಪಾಕಿಸ್ತಾನ್ ಮತ್ತು ಶ್ರೀಲಂಕಾ ನಡುವಣ ಏಕದಿನ ಸರಣಿಯು ಇಂದಿನಿಂದ (ನ.11) ಶುರುವಾಗಲಿದೆ. ಈ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗುತ್ತಿದ್ದ ಪಾಕ್ ತಂಡದ ಯುವ ವೇಗಿ ನಸೀಮ್​ ಶಾ ಅವರ ಮನೆ ಮೇಲೆ ಗುಂಪೊಂದು ಏಕಾಏಕಿ ದಾಳಿ ನಡೆಸಿದೆ. ಈ ದಾಳಿ ಸಂಬಂಧ ಇದೀಗ ಪೊಲೀಸರು ಐವರನ್ನು ವಶಪಡೆದಿದ್ದಾರೆ.

ಪಾಕಿಸ್ತಾನ್ ಆಟಗಾರನ ಮನೆ ಮೇಲೆ ಗುಂಡಿನ ದಾಳಿ..!
Naseem Shah House
ಝಾಹಿರ್ ಯೂಸುಫ್
|

Updated on: Nov 11, 2025 | 8:54 AM

Share

ಪಾಕಿಸ್ತಾನ್ ತಂಡದ ಯುವ ವೇಗದ ಬೌಲರ್ ನಸೀಮ್ ಶಾ ಅವರ ಮನೆಯ ಮೇಲೆ ಗುಂಡಿನ ದಾಳಿ ನಡೆದಿದೆ. ಖೈಬರ್ ಪಖ್ತೂನ್​ಖ್ವಾದ ಲೋವರ್ ದಿರ್​ನಲ್ಲಿರುವ ಅವರ ಮನೆಯ ಮೇಲೆ ಏಕಾಏಕಿ ದಾಳಿ ನಡೆದಿದ್ದು, ಇದೀಗ ಪ್ರಕರಣ ದಾಖಲಿಸಿ ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, ನಸೀಮ್ ಶಾ ಅವರ ಮನೆಯ ಮೇಲೆ ಬಹಿರಂಗವಾಗಿ ಗುಂಡು ಹಾರಿಸಲಾಗಿದ್ದು, ಹಲವಾರು ವಸ್ತುಗಳು ಹಾನಿಗೊಳಗಾಗಿವೆ. ದಾಳಿಯಲ್ಲಿ ಅವರ ಮನೆಯ ಕಿಟಕಿಗಳು, ಮುಖ್ಯ ದ್ವಾರ ಮತ್ತು ಪಾರ್ಕಿಂಗ್ ಪ್ರದೇಶವು ತೀವ್ರವಾಗಿ ಹಾನಿಗೊಂಡಿವೆ.

ಈ ದಾಳಿ ವೇಳೆ ನಸೀಮ್ ಶಾ ಅವರ ಪೋಷಕರು ಹಾಗೂ ಕೆಲ ಕುಟುಂಬಸ್ಥರು ಮಾತ್ರ ಮನೆಯಲ್ಲಿದ್ದರು. ಅದೃಷ್ಟವಶಾತ್ ಅವರ ಜೀವಗಳಿಗೆ ಯಾವುದೇ ಹಾನಿಯಾಗಿಲ್ಲ. ಅಲ್ಲದೆ ಇದೀಗ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಐವರ ಬಂಧನ:

ಪಾಕಿಸ್ತಾನ್ ಕ್ರಿಕೆಟಿಗನ ಮನೆ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ಲದೆ ನಸೀಮ್ ಶಾ ಅವರ ಮನೆಗೆ ಪೊಲೀಸರು ಹೆಚ್ಚಿನ ಭದ್ರತೆಯನ್ನು ಒದಗಿಸಿದ್ದಾರೆ. ಇದೀಗ ತನಿಖೆಯನ್ನು ಕೈಗೆತ್ತಿಕೊಂಡಿರುವ ಪೊಲೀಸರು ಪ್ರಕರಣದ ಹಿಂದಿರುವ ಉದ್ದೇಶವನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.

ರಾವಲ್ಪಿಂಡಿಯಲ್ಲಿ ನಸೀಮ್ ಶಾ:

ದಾಳಿಯ ಸಮಯದಲ್ಲಿ ನಸೀಮ್ ಶಾ ಪಾಕಿಸ್ತಾನ್ ತಂಡದೊಂದಿಗೆ ರಾವಲ್ಪಿಂಡಿಯಲ್ಲಿದ್ದರು. ನವೆಂಬರ್ 11 ರಿಂದ 15 ರವರೆಗೆ ನಡೆಯಲಿರುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ನಸೀಮ್ ಶಾ ಆಭ್ಯಾಸದಲ್ಲಿ ನಿರತರಾಗಿದ್ದಾರೆ.

ಇದನ್ನೂ ಓದಿ: Naseem Shah: 11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ

ಏಕದಿನ ಸರಣಿಯ ನಂತರ, ನಸೀಮ್ ಶಾ ಮೂರು ರಾಷ್ಟ್ರಗಳ ಟಿ20 ಸರಣಿಯಲ್ಲಿ ಪಾಕಿಸ್ತಾನ ತಂಡವನ್ನು ಪ್ರತಿನಿಧಿಸಲಿದ್ದಾರೆ. ಪಾಕಿಸ್ತಾನ ಮತ್ತು ಶ್ರೀಲಂಕಾ ಜೊತೆಗೆ ಟಿ20 ಸರಣಿಯಲ್ಲಿ ಝಿಂಬಾಬ್ವೆ ಮೂರನೇ ತಂಡವಾಗಿ ಕಣಕ್ಕಿಳಿಯಲಿದೆ. ಈ ಸರಣಿಯು ನವೆಂಬರ್ 17 ರಿಂದ 29 ರವರೆಗೆ ರಾವಲ್ಪಿಂಡಿ ಮತ್ತು ಲಾಹೋರ್‌ನಲ್ಲಿ ನಡೆಯಲಿವೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!