AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಎರಡೆರಡು ವಿಶ್ವಕಪ್‌ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಗಂಭೀರ್​ಗೆ ಇಂದು 41ನೇ ಹುಟ್ಟುಹಬ್ಬ

Happy Birthday Gautam Gambhir: ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ಗೌತಮ್ ಗಂಭೀರ್ ಇಂದು ತಮ್ಮ (ಅಕ್ಟೋಬರ್ 14, ಶುಕ್ರವಾರ) 41ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 2000 ರ ದಶಕದ ಆರಂಭದಲ್ಲಿ ಟೀಂ ಇಂಡಿಯಾಕ್ಕೆ ಪಾದರ್ಪಣೆ ಮಾಡಿದ ಗಂಭೀರ್, ಕ್ರಿಕೆಟ್​ನ ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತದ ಪರ ಹಲವಾರು ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದ್ದಾರೆ.

ಭಾರತ ಎರಡೆರಡು ವಿಶ್ವಕಪ್‌ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಗಂಭೀರ್​ಗೆ ಇಂದು 41ನೇ ಹುಟ್ಟುಹಬ್ಬ
ಗಂಭೀರ್
TV9 Web
| Edited By: |

Updated on: Oct 14, 2022 | 10:48 AM

Share

ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ಗೌತಮ್ ಗಂಭೀರ್ (Gautam Gambhir) ಇಂದು ತಮ್ಮ (ಅಕ್ಟೋಬರ್ 14, ಶುಕ್ರವಾರ) 41ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 2000 ರ ದಶಕದ ಆರಂಭದಲ್ಲಿ ಟೀಂ ಇಂಡಿಯಾಕ್ಕೆ ಪಾದರ್ಪಣೆ ಮಾಡಿದ ಗಂಭೀರ್, ಕ್ರಿಕೆಟ್​ನ ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತದ ಪರ ಹಲವಾರು ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದ್ದಾರೆ. ಇದರಲ್ಲಿ ಪ್ರಮುಖವಾದದ್ದು, 2007 ರ ಚೊಚ್ಚಲ ಟಿ20 ವಿಶ್ವಕಪ್. ಪಾಕಿಸ್ತಾನ ವಿರುದ್ಧದ ಫೈನಲ್ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಗಂಭಿರ್ ತಂಡಕ್ಕೆ ಅಮೂಲ್ಯ 75 ರನ್​ಗಳ ಕೊಡುಗೆ ನೀಡಿದ್ದರು. ಇದರ ಫಲವಾಗಿ ಟೀಂ ಇಂಡಿಯಾ ನಿಗಧಿತ 20 ಓವರ್​ಗಳಲ್ಲಿ 157 ರನ್ ಗಳಿಸಿತ್ತು. ಬಳಿಕ ಗುರಿ ಬೆನ್ನಟ್ಟಿದ ಪಾಕಿಸ್ತಾನ 152 ರನ್​ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಭಾರತ ಚೊಚ್ಚಲ ಟಿ20 ವಿಶ್ವಕಪ್​ನ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

2009 ರಲ್ಲಿ ಫಾರ್ಮ್​ನ ಉತ್ತುಂಗದಲ್ಲಿದ್ದ ಗಂಭೀರ್ ಟೆಸ್ಟ್ ಕ್ರಿಕೆಟ್‌ನಲ್ಲಿ ನಂ.1 ಬ್ಯಾಟರ್ ಆಗಿದ್ದರು. ಆ ಬಳಿಕ 2011 ರಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಭಾರತ ಮತ್ತೊಮ್ಮೆ ಚಾಂಪಿಯನ್ ಆಗಲು ಗಂಭೀರ್ ಪ್ರಮುಖ ಕೊಡುಗೆ ನೀಡಿದ್ದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಕದಿನ ವಿಶ್ವಕಪ್​ನಲ್ಲಿ ಗಂಭೀರ್ 97 ರನ್​ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದ್ದರು.

ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಜಯವರ್ಧನೆ ಅವರ ಅಜೇಯ ಶತಕದ ನೆರವಿನಿಂದ ಭಾರತಕ್ಕೆ 274 ರನ್​ಗಳ ಟಾರ್ಗೆಟ್ ನೀಡಿತ್ತು. ಇದಕ್ಕುತ್ತರವಾಗಿ ಗುರಿ ಬೆನ್ನಟ್ಟಿದ ಭಾರತ ಆರಂಭದಲ್ಲೇ ಸಚಿನ್ ತೆಂಡೂಲ್ಕರ್ ಮತ್ತು ವೀರೇಂದ್ರ ಸೆಹ್ವಾಗ್ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇಲ್ಲಿಂದೀಚೆಗೆ ತಂಡದ ಇನ್ನಿಂಗ್ಸ್ ಜವಬ್ದಾರಿವಹಸಿಕೊಂಡಿದ್ದ ಗಂಭೀರ್ ಮೈದಾನದಲ್ಲಿ ಹೆಚ್ಚು ನಿಲ್ಲುವುದರೊಂದಿಗೆ ತಂಡದ ಮೊತ್ತವನ್ನು ಹೆಚ್ಚಿಸಿದರು.

ಎರಡನೇ ಕ್ರಮಾಂಗದಲ್ಲಿ ಕಣಕ್ಕಿಳಿದು 122 ಎಸೆತಗಳನ್ನು ಎದುರಿಸಿದ ಗಂಭೀರ್, 9 ಬೌಂಡರಿಗಳ ನೆರವಿನಿಂದ 97 ರನ್ ಗಳಿಸಿದರು. ಮೊದಲಿಗೆ, ಅವರು ವಿರಾಟ್ ಕೊಹ್ಲಿಯೊಂದಿಗೆ 83 ರನ್‌ಗಳ ಜೊತೆಯಾಟವನ್ನು ಮಾಡಿದರು. ನಂತರ ಅವರು MS ಧೋನಿಯೊಂದಿಗೆ 109 ರನ್‌ಗಳ ಜೊತೆಯಾಟವನ್ನು ನಡೆಸಿದರು. ಆ ಬಳಿಕ 42ನೇ ಓವರ್‌ನಲ್ಲಿ ತಿಸಾರ ಪೆರೇರಾ ಗಂಭೀರ್ ಅವರನ್ನು ಔಟ್ ಮಾಡಿದರು, ಆದರೆ ಆ ವೇಳೆಗಾಗಲೇ ಭಾರತ ಡ್ರೈವಿಂಗ್ ಸೀಟಿನಲ್ಲಿತ್ತು. ಈ ಮೂವರ ನಡುವಿನ ಅದ್ಭುತ ಜೊತೆಯಾಟದಿಂದಾಗಿ ಟೀಂ ಇಂಡಿಯಾ 6 ವಿಕೆಟ್​ಗಳಿಂದ ಪಂದ್ಯ ಗೆಲ್ಲುವುದರೊಂದಿಗೆ ಎರಡನೇ ಬಾರಿಗೆ ಏಕದಿನ ವಿಶ್ವಕಪ್ ಚಾಂಪಿಯನ್ ಆಯಿತು.

2018 ಡಿಸೆಂಬರ್​ನಲ್ಲಿ ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತರಾದ ಗಂಭೀರ್, ಆ ಬಳಿಕ ಐಪಿಎಲ್​ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕತ್ವವಹಿಸಿಕೊಂಡು 2012 ಮತ್ತು 2014 ರಲ್ಲಿ ತಂಡವನ್ನು ಕ್ರಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಚಾಂಪಿಯನ್ ಮಾಡುವಲ್ಲಿ ಯಶಸ್ವಿಯಾದರು. ಸದ್ಯ ಗಂಭೀರ್ ಎನ್​ಡಿಎ ಸರ್ಕಾರದಲ್ಲಿ ಸಂಸದನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!