Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೊಂದು ಮಗುವಿನ ನಿರೀಕ್ಷೆಯಲ್ಲಿ ಹರ್ಭಜನ್ ಸಿಂಗ್-ಗೀತಾ ಬಸ್ರಾ ದಂಪತಿ

Harbhajan Singh Geeta Basra Couple: ಗೀತಾ ಬಸ್ರಾ ಖುಷಿಯ ಸಂಗತಿಯನ್ನು ಇನ್ಸ್​ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿದ್ದಂತೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಗೆಳೆಯ ಕ್ರಿಕೆಟಿಗ ಸುರೇಶ್ ರೈನಾ ಮತ್ತು ಅವರ ಪತ್ನಿ ಭಜ್ಜಿ-ಗೀತಾ ದಂಪತಿಗಳಿಗೆ ಶುಭಹಾರೈಸಿದ್ದಾರೆ.

ಇನ್ನೊಂದು ಮಗುವಿನ ನಿರೀಕ್ಷೆಯಲ್ಲಿ ಹರ್ಭಜನ್ ಸಿಂಗ್-ಗೀತಾ ಬಸ್ರಾ ದಂಪತಿ
ಹರ್ಭಜನ್ ಸಿಂಗ್ ಮತ್ತು ಗೀತಾ ಬಸ್ರಾ ಕುಟುಂಬ
Follow us
guruganesh bhat
|

Updated on:Mar 14, 2021 | 7:21 PM

ಕ್ರಿಕೆಟಿಗ ಹರ್ಭಜನ್ ಸಿಂಗ್ ಕುಟುಂಬಕ್ಕೆ ಜುಲೈ ಹೊಸ ಅತಿಥಿಯೋರ್ವರ ಆಗಮನವಾಗಲಿದೆ. ಈ ಶುಭಸುದ್ದಿಯನ್ನು ಹರ್ಭಜನ್ ಸಿಂಗ್ ಮಡದಿ ಗೀತಾ ಬಸ್ರಾ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈಗಾಗಲೇ ಈ ತಾರಾ ಜೋಡಿಗೆ ಓರ್ವ ಮಗಳಿದ್ದು ಇದೀಗ ಇನ್ನೊಂದು ಮಗುವಿನ ಅಗಮನಕ್ಕಾಗಿ ಕಾಯುತ್ತಿದೆ. ಗೀತಾ ಬಸ್ರಾ ಖುಷಿಯ ಸಂಗತಿಯನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿದ್ದಂತೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಗೆಳೆಯ ಕ್ರಿಕೆಟಿಗ ಸುರೇಶ್ ರೈನಾ ಮತ್ತು ಅವರ ಪತ್ನಿ ಭಜ್ಜಿ-ಗೀತಾ ದಂಪತಿಗಳಿಗೆ ಶುಭ ಹಾರೈಸಿದ್ದಾರೆ.

ಬಾಲಿವುಡ್ ನಟಿ ಮತ್ತು ಕಲಾವಿದೆ ಗೀತಾ ಬಸ್ರಾ ಮತ್ತು ತಮ್ಮ ಬೌಲಿಂಗ್ ಶೈಲಿಯಿಂದಲೇ ಪ್ರಸಿದ್ಧರಾಗಿದ್ದ ಹರ್ಭಜನ್ ಸಿಂಗ್ 2015ರಲ್ಲಿ ಹಸೆಮಣೆ ಏರಿದ್ದರು. ಸಾಂಸಾರಿಕ ಬದುಕಿನ ಪ್ರತಿಫಲವಾಗಿ ಜನಿಸಿದ ಮಗಳ ಜತೆಗಿನ ಫೋಟೊವನ್ನು ಹಂಚಿಕೊಂಡಿರುವ ಗೀತಾ ಬಸ್ರಾ, ಜುಲೈನಲ್ಲಿ ತಾಯಿಯಾಗುತ್ತಿರುವ ಸುದ್ದಿಯನ್ನು ಬಹಿರಂಗಪಡಿಸಿದ್ದಾರೆ. ಅವರ ಮಗಳು ‘ಬೇಗನೆ ಅಕ್ಕನಾಗುವ ನಿರೀಕ್ಷೆಯಲ್ಲಿದ್ದೇನೆ’ ಎಂದು ಬರೆದಿರುವ ಟೀಶರ್ಟ್ ಹಿಡಿದಿರುವ ಪೋಟೊವನ್ನು ಗೀತಾ ಬಸ್ರಾ ಹಂಚಿಕೊಂಡಿದ್ದಾರೆ.

View this post on Instagram

A post shared by Geeta Basra (@geetabasra)

ಹರ್ಭಜನ್ ಸಿಂಗ್ ಭಾರತ ಕಂಡ ಅತ್ಯುತ್ತಮ ಸ್ಪಿನ್ ಎಸೆತಗಾರ ಎಂಬುದರಲ್ಲಿ ಎರಡು ಮಾತಿಲ್ಲ. ಕೈ ಅಗಲವಾಗಿಸಿ, ಒಂದು ನೆಗೆತ ಹಾಕಿ ಕೈ ತಿರುಗಿಸುತ್ತಾ ಬೌಲ್ ಮಾಡುವ ತಮ್ಮ ವಿಶಿಷ್ಟ ಶೈಲಿಯ ಮೂಲಕ ಭಾರತದ ಕ್ರಿಕೆಟ್ ಅಭಿಮಾನಿಗಳ ಮನದಲ್ಲಿ ಅಚ್ಚಳಿಯದೆ ಉಳಿದ ಆಟಗಾರ ಇವರು. ಭಾರತೀಯ ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪೈಕಿ ಮೂರನೇ ಸ್ಥಾನದಲ್ಲಿ ಹರ್ಭಜನ್ ಇದ್ದಾರೆ.

ಹರ್ಭಜನ್ ಸಿಂಗ್ 103 ಟೆಸ್ಟ್ ಪಂದ್ಯಗಳನ್ನಾಡಿ 417 ವಿಕೆಟ್ ಕಬಳಿಸಿದ್ದಾರೆ. ಏಕದಿನ ಪಂದ್ಯಾಟದಲ್ಲಿ ಹರ್ಭಜನ್ ಭಾರತದ 5ನೇ ಅತಿ ಹೆಚ್ಚು ವಿಕೆಟ್ ಟೇಕರ್ ಆಗಿದ್ದಾರೆ. 236 ಪಂದ್ಯಗಳಲ್ಲಿ 269 ವಿಕೆಟ್ ಪಡೆದಿದ್ದಾರೆ. ಹರ್ಭಜನ್ ಸಿಂಗ್ 2007ರಲ್ಲಿ ಟಿ20 ವಿಶ್ವಕಪ್ (ICC WT20) ಗೆದ್ದ ತಂಡದಲ್ಲಿ ಹಾಗೂ 2011 ವಿಶ್ವಕಪ್ (ICC World Cup) ಗೆದ್ದ ತಂಡದ ಸದಸ್ಯರಾಗಿದ್ದರು. 2000ದ ಮೊದಲ ಭಾಗದಲ್ಲಿ ಭಾರತದ ಟೆಸ್ಟ್ ಕ್ರಿಕೆಟ್ ತಂಡ ನಂಬರ್ 1 ರ್ಯಾಂಕಿಂಗ್ ಪಡೆದಿತ್ತು. ಆ ಪ್ರಶಂಸೆಗೆ ಪಾತ್ರವಾಗಲು ಕೂಡ ಹರ್ಭಜನ್ ಸಿಂಗ್ ಕಾರಣರಾಗಿದ್ದರು.

ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಹಿಂದೆ ಸರಿದ ಬಳಿಕ ಕಮೆಂಟೇಟರ್ ಆಗಿ ಹರ್ಭಜನ್ ಮಿಂಚಿದ್ದರು. ಈ ಬಾರಿಯ ಐಪಿಎಲ್​ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಹರ್ಭಜನ್ ಆಯ್ಕೆಯಾಗಿದ್ದಾರೆ. ಕೇವಲ ಕ್ರಿಕೆಟ್​ನಲ್ಲಿ ಮಾತ್ರವಲ್ಲ, ಸಿನಿಮಾ ವಿಭಾಗದಲ್ಲಿ ಕೂಡ ಹರ್ಭಜನ್ ತಮ್ಮ ಛಾಪು ಮೂಡಿಸಿದ್ದಾರೆ. ಸೋಮವಾರ (ಮಾರ್ಚ್ 1) ತಮ್ಮ ಮುಂದಿನ ಸಿನಿಮಾ ಫ್ರೆಂಡ್​ಶಿಪ್ (Friendship) ಟೀಸರ್ ಹಂಚಿಕೊಂಡಿದ್ದಾರೆ. ಹಿಂದಿ ಭಾಷೆಯ ಫ್ರೆಂಡ್​ಶಿಪ್ ಸಿನಿಮಾದಲ್ಲಿ ಹರ್ಭಜನ್ ಮಿಂಚಿದ್ದಾರೆ.

ಇದನ್ನೂ ಓದಿ: ತಾನು ಮಹಿಳಾ ಕ್ರಿಕೆಟ್​ನ ಸಚಿನ್ ತೆಂಡೂಲ್ಕರ್ ಎನ್ನುವುದನ್ನು ಸಾಬೀತು ಮಾಡಿದ ಮಿಥಾಲಿ ರಾಜ್!

ಇದನ್ನೂ ಓದಿ: ರಣ್​ಬೀರ್ ಕಪೂರ್​ನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದ ಬಾಲಿವುಡ್ ಬೆಡಗಿ ಆಲಿಯಾ ಭಟ್

Published On - 7:10 pm, Sun, 14 March 21

ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ