AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಸೀನಿಯರ್ ಪ್ಲೇಯರ್ ಎಂಬ ಗೌರವ ಕೊಡದೆ ಶಮಿಗೆ ಮನಬಂದಂತೆ ಬೈದ ಹಾರ್ದಿಕ್ ಪಾಂಡ್ಯ

ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ತಾಳ್ಮೆ ಕಳೆದುಕೊಂಡ ಘಟನೆ ಕೂಡ ನಡೆದಿದೆ. ಅದುಕೂಡ ಹಿರಿಯ ಬೌಲರ್ ಮೊಹಮ್ಮದ್ ಶಮಿ ಮೇಲೆ.

Hardik Pandya: ಸೀನಿಯರ್ ಪ್ಲೇಯರ್ ಎಂಬ ಗೌರವ ಕೊಡದೆ ಶಮಿಗೆ ಮನಬಂದಂತೆ ಬೈದ ಹಾರ್ದಿಕ್ ಪಾಂಡ್ಯ
TV9 Web
| Edited By: |

Updated on: Apr 12, 2022 | 9:59 AM

Share

ಐಪಿಎಲ್ 2022 ರಲ್ಲಿ (IPL 2022) ಸೋಮವಾರ ನಡೆದ ಸನ್​​ರೈಸರ್ಸ್​ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ಸಾಕಷ್ಟು ರೋಚಕತೆಯಿಂದ ಕೂಡಿತ್ತು. ಕೊನೆಯ ಓವರ್​ ವರೆಗೂ ನಡೆದ ಕಾದಾಟದಲ್ಲಿ ಅಂತಿಮವಾಗಿ ಕೇನ್ ವಿಲಿಯಮ್ಸನ್ ಪಡೆ 8 ವಿಕೆಟ್​​ಗಳ ಗೆಲುವು ಕಂಡರೆ, ಹ್ಯಾಟ್ರಿಕ್ ಸೋಲಿನಿಂದ ಗೆದ್ದು ಬೀಗಿದ್ದ ಹಾರ್ದಿಕ್ ಪಡೆ ಟೂರ್ನಿಯಲ್ಲಿ ಮೊದಲು ಸೋಲು ಅನುಭವಿಸಿತು. ಗುಜರಾತ್ ನೀಡಿದ್ದ 163 ರನ್​ಗಳ ಟಾರ್ಗೆಟ್ ಅನ್ನು ಎಸ್​ಆರ್​ಹೆಚ್ ತಂಡ 19.1 ಓವರ್​ನಲ್ಲಿ ಗುರಿ ಮುಟ್ಟಿತು. ಕೇನ್ ವಿಲಿಯಮ್ಸನ್ ಅರ್ಧಶತಕ ಸಿಡಿಸಿ ತಂಡದ ಗೆಲುವಿಗೆ ಪ್ರಮುಖ ಕಾರಣರಾದರು. ಇದರ ನಡುವೆ ಜಿಟಿ ತಂಡ ಬೌಲಿಂಗ್ ಮಾಡುತ್ತಿದ್ದ ವೇಳೆ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ತಾಳ್ಮೆ ಕಳೆದುಕೊಂಡ ಘಟನೆ ಕೂಡ ನಡೆದಿದೆ. ಅದುಕೂಡ ಹಿರಿಯ ಬೌಲರ್ ಮೊಹಮ್ಮದ್ ಶಮಿ (Mohammed Shami) ಮೇಲೆ. ಕೋಪಗೊಂಡ ಹಾರ್ದಿಕ್ ಅವರು ಶಮಿ ಮೇಲೆ ರೇಗಾಡಿದ್ದಾರೆ.

ಕೇನ್ ವಿಲಿಯಮ್ಸನ್ ಮುಂದಾಳತ್ವದಲ್ಲಿ ಎಸ್​ಆರ್​ಹೆಚ್ 163 ರನ್​ಗಳ ಟಾರ್ಗೆಟ್ ಅನ್ನು ಬೆನ್ನಟ್ಟಲು ಶುರು ಮಾಡಿತ್ತು. ಅದು 13ನೇ ಓವರ್. ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡಲು ಬಂದರು. ಇದೇ ಓವರ್ ಅನ್ನು ಟಾರ್ಗೆಟ್ ಮಾಡಿದ ಹೈದರಾಬಾದ್ ದೊಡ್ಡ ಹೊಡೆತಕ್ಕೆ ಮುಂದಾಯಿತು. ಅದರಂತೆ ಪಾಂಡ್ಯ ಓವರ್​​ನ ಎರಡನೇ ಮತ್ತು ಮೂರನೇ ಬಾಲ್​ನಲ್ಲಿ ವಿಲಿಯಮ್ಸನ್ ಸತತ ಎರಡು ಸಿಕ್ಸರ್ ಸಿಡಿಸಿದರು. ಅದಾಗಲೇ ಕೋಗೊಂಡಿದ್ದ ಹಾರ್ದಿಕ್ ಆರನೇ ಎಸೆತವನ್ನು ರಾಹುಲ್ ತ್ರಿಪಾಠಿ ಅವರಿಗೆ ಶಾರ್ಟ್ ಎಸೆತದರು. ಇದನ್ನು ಅಪ್ಪರ್ ಕಟ್ ಮೂಲಕ ಹೊಡೆದ ತ್ರಿಪಾಠಿ, ಚೆಂಡು ಸೀದಾ ಡೀಪ್ ಥರ್ಡ್​ ಮ್ಯಾನ್ ಕಡೆ ಹೋಯಿತು.

ಥರ್ಡ್​ ಮ್ಯಾನ್ ಫೀಲ್ಡಿಂಗ್​ನಲ್ಲಿ ಮೊಹಮ್ಮದ್ ಶಮಿ ಇದ್ದರು. ಓಡಿ ಬಂದರೂ ಶಮಿಗೆ ಆ ಕ್ಯಾಚ್ ಅನ್ನು ಹಿಡಿಯಲು ಸಾಧ್ಯವಾಗಲಿಲ್ಲ. ಹೀಗಾಗಿ ಸ್ವಲ್ಪ ಹಿಂದೆ ಹೋಗಿ ಚೆಂಡು ನೆಲಕ್ಕೆ ತಾಗಿದ ಮೇಲೆ ಹಿಡಿದರು. ಇದರಿಂದ ಕೋಪಗೊಂಡ ಹಾರ್ದಿಕ್ ಪಾಂಡ್ಯ ಅವರು ಫೀಲ್ಡಿಂಗ್ ವಿಚಾರವಾಗಿ ಶಮಿ ಮೇಲೆ ಕಿರುಚಾಡಿದರು. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ ಒಬ್ಬ ಹಿರಿಯ ಆಟಗಾರನ ಜೊತೆ ಹೇಗೆ ಮಾತನಾಡಬೇಕು ಎಂಬುದು ಗೊತ್ತಿಲ್ಲವೇ ಎಂದು ಕಿಡಿ ಕಾಡುತ್ತಿದ್ದಾರೆ. ಶಮಿ ಟೀಮ್ ಇಂಡಿಯಾಕ್ಕೆ ಎಷ್ಟು ಕೊಡುಗೆ ನೀಡಿದ್ದಾರೆಂದು ಎಲ್ಲರಿಗೂ ತಿಳಿದಿದೆ. ಇಂತಹ ಶ್ರೇಷ್ಠ ಪ್ಲೇಯರ್​ಗೆ ಹಾರ್ದಿಕ್ ಈರೀತಿ ರಿಯಾಕ್ಟ್ ಮಾಡಿದ್ದು ಎಷ್ಟು ಸರಿ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಹಾರ್ದಿಕ್ ಪಾಂಡ್ಯ ಈ ಬಾರಿಯ ಐಪಿಎಲ್​ನಲ್ಲಿ ನಾಯಕನಾದ ಮೇಲೆ ಸಹ ಆಟಗಾರರ ಜೊತೆ ಈರೀತಿ ನಡೆದುಕೊಳ್ಳುತ್ತಿರುವುದು ಇದೇ ಮೊದಲ ಬಾರಿಯೇನಲ್ಲ. ಕಳೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲೂ ಡೇವಿಡ್ ಮಿಲ್ಲರ್ ಮೇಲೆ ರೇಗಾಡಿದ್ದರು. ಗುಜರಾತ್ ಗೆಲುವಿಗೆ ಕೊನೆಯ 6 ಎಸೆತಗಳಲ್ಲಿ 19 ರನ್​​ಗಳ ಅವಶ್ಯಕತೆಯಿತ್ತು. ಮಿಲ್ಲರ್ ಕ್ರೀಸ್​ನಲ್ಲಿದ್ದರು. ಈ ಹಂತದಲ್ಲಿ ಒಡಿಯನ್‌ ಸ್ಮಿತ್‌ ಬೌಲಿಂಗ್​ನ ಮೊದಲ ಎಸೆತದಲ್ಲಿ ಮಿಲ್ಲರ್ ಬ್ಯಾಟ್ ಬೀಸಿದರಾದರೂ ಚೆಂಡು ಬ್ಯಾಟ್​ಗೆ ತಾಗದೆ ಕೀಪರ್ ಕೈ ಸೇರಿತು. ಮಿಲ್ಲರ್ ಕನಿಷ್ಠ ಒಂದು ರನ್ ಗಳಿಸೋಣ ಎಂದು ಓಡಿದರು. ಅತ್ತ ನಾನ್​​ಸ್ಟ್ರೈಕರ್​​ನಲ್ಲಿದ್ದ ಹಾರ್ದಿಕ್ ಕೂಡ ಓಡಿ ಬಂದರು. ಆದರೆ, ಚೆಂಡು ಕೀಪರ್ ಬೈರ್​​ಸ್ಟೋ ಕೈಯಲ್ಲೇ ಇತ್ತು. ಅದು ಸುಲಭವಾದ ರನೌಟ್ ಎಂಬುದು ಹಾರ್ದಿಕ್​​ಗೆ ತಿಳಿದಿತ್ತು. ಆದರೂ ಮಿಲ್ಲರ್ ಓಡಿ ಬಂದ ಕಾರಣ ಹಾರ್ದಿಕ್ ಕೂಡ ಓಡಿದರು. ಆದರೆ, ಹಾರ್ದಿಕ್ ಗೆರೆ ಮುಟ್ಟುವ ಮೊದಲೇ ಬೈರ್​​​ಸ್ಟೋ ಸುಲಭವಾಗಿ ರನೌಟ್ ಮಾಡಿಬಿಟ್ಟರು. ಇದರಿಂದ ಸಿಟ್ಟಾದ ಪಾಂಡ್ಯ ಅವರು ಮಿಲ್ಲರ್ ಕಡೆ ತಿರುಗಿ ಕೋಪದಿಂದ ಗದರಿದರು.

CSK vs RCB, IPL 2022: ಬೆಂಗಳೂರು vs ಚೆನ್ನೈ: ಐಪಿಎಲ್​​ನಲ್ಲಿಂದು ರಣ ರೋಚಕ ಕದನ

SRH vs GT: ಐಪಿಎಲ್ 2022 ರಲ್ಲಿ ಮೊದಲ ಸೋಲು ಕಂಡ ಹಾರ್ದಿಕ್ ಪಡೆ: ಬಲಿಷ್ಠವಾಗುತ್ತಿದೆ ಎಸ್​ಆರ್​​ಹೆಚ್

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!