AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಸೀನಿಯರ್ ಪ್ಲೇಯರ್ ಎಂಬ ಗೌರವ ಕೊಡದೆ ಶಮಿಗೆ ಮನಬಂದಂತೆ ಬೈದ ಹಾರ್ದಿಕ್ ಪಾಂಡ್ಯ

ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ತಾಳ್ಮೆ ಕಳೆದುಕೊಂಡ ಘಟನೆ ಕೂಡ ನಡೆದಿದೆ. ಅದುಕೂಡ ಹಿರಿಯ ಬೌಲರ್ ಮೊಹಮ್ಮದ್ ಶಮಿ ಮೇಲೆ.

Hardik Pandya: ಸೀನಿಯರ್ ಪ್ಲೇಯರ್ ಎಂಬ ಗೌರವ ಕೊಡದೆ ಶಮಿಗೆ ಮನಬಂದಂತೆ ಬೈದ ಹಾರ್ದಿಕ್ ಪಾಂಡ್ಯ
TV9 Web
| Updated By: Vinay Bhat|

Updated on: Apr 12, 2022 | 9:59 AM

Share

ಐಪಿಎಲ್ 2022 ರಲ್ಲಿ (IPL 2022) ಸೋಮವಾರ ನಡೆದ ಸನ್​​ರೈಸರ್ಸ್​ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ಸಾಕಷ್ಟು ರೋಚಕತೆಯಿಂದ ಕೂಡಿತ್ತು. ಕೊನೆಯ ಓವರ್​ ವರೆಗೂ ನಡೆದ ಕಾದಾಟದಲ್ಲಿ ಅಂತಿಮವಾಗಿ ಕೇನ್ ವಿಲಿಯಮ್ಸನ್ ಪಡೆ 8 ವಿಕೆಟ್​​ಗಳ ಗೆಲುವು ಕಂಡರೆ, ಹ್ಯಾಟ್ರಿಕ್ ಸೋಲಿನಿಂದ ಗೆದ್ದು ಬೀಗಿದ್ದ ಹಾರ್ದಿಕ್ ಪಡೆ ಟೂರ್ನಿಯಲ್ಲಿ ಮೊದಲು ಸೋಲು ಅನುಭವಿಸಿತು. ಗುಜರಾತ್ ನೀಡಿದ್ದ 163 ರನ್​ಗಳ ಟಾರ್ಗೆಟ್ ಅನ್ನು ಎಸ್​ಆರ್​ಹೆಚ್ ತಂಡ 19.1 ಓವರ್​ನಲ್ಲಿ ಗುರಿ ಮುಟ್ಟಿತು. ಕೇನ್ ವಿಲಿಯಮ್ಸನ್ ಅರ್ಧಶತಕ ಸಿಡಿಸಿ ತಂಡದ ಗೆಲುವಿಗೆ ಪ್ರಮುಖ ಕಾರಣರಾದರು. ಇದರ ನಡುವೆ ಜಿಟಿ ತಂಡ ಬೌಲಿಂಗ್ ಮಾಡುತ್ತಿದ್ದ ವೇಳೆ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ತಾಳ್ಮೆ ಕಳೆದುಕೊಂಡ ಘಟನೆ ಕೂಡ ನಡೆದಿದೆ. ಅದುಕೂಡ ಹಿರಿಯ ಬೌಲರ್ ಮೊಹಮ್ಮದ್ ಶಮಿ (Mohammed Shami) ಮೇಲೆ. ಕೋಪಗೊಂಡ ಹಾರ್ದಿಕ್ ಅವರು ಶಮಿ ಮೇಲೆ ರೇಗಾಡಿದ್ದಾರೆ.

ಕೇನ್ ವಿಲಿಯಮ್ಸನ್ ಮುಂದಾಳತ್ವದಲ್ಲಿ ಎಸ್​ಆರ್​ಹೆಚ್ 163 ರನ್​ಗಳ ಟಾರ್ಗೆಟ್ ಅನ್ನು ಬೆನ್ನಟ್ಟಲು ಶುರು ಮಾಡಿತ್ತು. ಅದು 13ನೇ ಓವರ್. ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡಲು ಬಂದರು. ಇದೇ ಓವರ್ ಅನ್ನು ಟಾರ್ಗೆಟ್ ಮಾಡಿದ ಹೈದರಾಬಾದ್ ದೊಡ್ಡ ಹೊಡೆತಕ್ಕೆ ಮುಂದಾಯಿತು. ಅದರಂತೆ ಪಾಂಡ್ಯ ಓವರ್​​ನ ಎರಡನೇ ಮತ್ತು ಮೂರನೇ ಬಾಲ್​ನಲ್ಲಿ ವಿಲಿಯಮ್ಸನ್ ಸತತ ಎರಡು ಸಿಕ್ಸರ್ ಸಿಡಿಸಿದರು. ಅದಾಗಲೇ ಕೋಗೊಂಡಿದ್ದ ಹಾರ್ದಿಕ್ ಆರನೇ ಎಸೆತವನ್ನು ರಾಹುಲ್ ತ್ರಿಪಾಠಿ ಅವರಿಗೆ ಶಾರ್ಟ್ ಎಸೆತದರು. ಇದನ್ನು ಅಪ್ಪರ್ ಕಟ್ ಮೂಲಕ ಹೊಡೆದ ತ್ರಿಪಾಠಿ, ಚೆಂಡು ಸೀದಾ ಡೀಪ್ ಥರ್ಡ್​ ಮ್ಯಾನ್ ಕಡೆ ಹೋಯಿತು.

ಥರ್ಡ್​ ಮ್ಯಾನ್ ಫೀಲ್ಡಿಂಗ್​ನಲ್ಲಿ ಮೊಹಮ್ಮದ್ ಶಮಿ ಇದ್ದರು. ಓಡಿ ಬಂದರೂ ಶಮಿಗೆ ಆ ಕ್ಯಾಚ್ ಅನ್ನು ಹಿಡಿಯಲು ಸಾಧ್ಯವಾಗಲಿಲ್ಲ. ಹೀಗಾಗಿ ಸ್ವಲ್ಪ ಹಿಂದೆ ಹೋಗಿ ಚೆಂಡು ನೆಲಕ್ಕೆ ತಾಗಿದ ಮೇಲೆ ಹಿಡಿದರು. ಇದರಿಂದ ಕೋಪಗೊಂಡ ಹಾರ್ದಿಕ್ ಪಾಂಡ್ಯ ಅವರು ಫೀಲ್ಡಿಂಗ್ ವಿಚಾರವಾಗಿ ಶಮಿ ಮೇಲೆ ಕಿರುಚಾಡಿದರು. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ ಒಬ್ಬ ಹಿರಿಯ ಆಟಗಾರನ ಜೊತೆ ಹೇಗೆ ಮಾತನಾಡಬೇಕು ಎಂಬುದು ಗೊತ್ತಿಲ್ಲವೇ ಎಂದು ಕಿಡಿ ಕಾಡುತ್ತಿದ್ದಾರೆ. ಶಮಿ ಟೀಮ್ ಇಂಡಿಯಾಕ್ಕೆ ಎಷ್ಟು ಕೊಡುಗೆ ನೀಡಿದ್ದಾರೆಂದು ಎಲ್ಲರಿಗೂ ತಿಳಿದಿದೆ. ಇಂತಹ ಶ್ರೇಷ್ಠ ಪ್ಲೇಯರ್​ಗೆ ಹಾರ್ದಿಕ್ ಈರೀತಿ ರಿಯಾಕ್ಟ್ ಮಾಡಿದ್ದು ಎಷ್ಟು ಸರಿ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಹಾರ್ದಿಕ್ ಪಾಂಡ್ಯ ಈ ಬಾರಿಯ ಐಪಿಎಲ್​ನಲ್ಲಿ ನಾಯಕನಾದ ಮೇಲೆ ಸಹ ಆಟಗಾರರ ಜೊತೆ ಈರೀತಿ ನಡೆದುಕೊಳ್ಳುತ್ತಿರುವುದು ಇದೇ ಮೊದಲ ಬಾರಿಯೇನಲ್ಲ. ಕಳೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲೂ ಡೇವಿಡ್ ಮಿಲ್ಲರ್ ಮೇಲೆ ರೇಗಾಡಿದ್ದರು. ಗುಜರಾತ್ ಗೆಲುವಿಗೆ ಕೊನೆಯ 6 ಎಸೆತಗಳಲ್ಲಿ 19 ರನ್​​ಗಳ ಅವಶ್ಯಕತೆಯಿತ್ತು. ಮಿಲ್ಲರ್ ಕ್ರೀಸ್​ನಲ್ಲಿದ್ದರು. ಈ ಹಂತದಲ್ಲಿ ಒಡಿಯನ್‌ ಸ್ಮಿತ್‌ ಬೌಲಿಂಗ್​ನ ಮೊದಲ ಎಸೆತದಲ್ಲಿ ಮಿಲ್ಲರ್ ಬ್ಯಾಟ್ ಬೀಸಿದರಾದರೂ ಚೆಂಡು ಬ್ಯಾಟ್​ಗೆ ತಾಗದೆ ಕೀಪರ್ ಕೈ ಸೇರಿತು. ಮಿಲ್ಲರ್ ಕನಿಷ್ಠ ಒಂದು ರನ್ ಗಳಿಸೋಣ ಎಂದು ಓಡಿದರು. ಅತ್ತ ನಾನ್​​ಸ್ಟ್ರೈಕರ್​​ನಲ್ಲಿದ್ದ ಹಾರ್ದಿಕ್ ಕೂಡ ಓಡಿ ಬಂದರು. ಆದರೆ, ಚೆಂಡು ಕೀಪರ್ ಬೈರ್​​ಸ್ಟೋ ಕೈಯಲ್ಲೇ ಇತ್ತು. ಅದು ಸುಲಭವಾದ ರನೌಟ್ ಎಂಬುದು ಹಾರ್ದಿಕ್​​ಗೆ ತಿಳಿದಿತ್ತು. ಆದರೂ ಮಿಲ್ಲರ್ ಓಡಿ ಬಂದ ಕಾರಣ ಹಾರ್ದಿಕ್ ಕೂಡ ಓಡಿದರು. ಆದರೆ, ಹಾರ್ದಿಕ್ ಗೆರೆ ಮುಟ್ಟುವ ಮೊದಲೇ ಬೈರ್​​​ಸ್ಟೋ ಸುಲಭವಾಗಿ ರನೌಟ್ ಮಾಡಿಬಿಟ್ಟರು. ಇದರಿಂದ ಸಿಟ್ಟಾದ ಪಾಂಡ್ಯ ಅವರು ಮಿಲ್ಲರ್ ಕಡೆ ತಿರುಗಿ ಕೋಪದಿಂದ ಗದರಿದರು.

CSK vs RCB, IPL 2022: ಬೆಂಗಳೂರು vs ಚೆನ್ನೈ: ಐಪಿಎಲ್​​ನಲ್ಲಿಂದು ರಣ ರೋಚಕ ಕದನ

SRH vs GT: ಐಪಿಎಲ್ 2022 ರಲ್ಲಿ ಮೊದಲ ಸೋಲು ಕಂಡ ಹಾರ್ದಿಕ್ ಪಡೆ: ಬಲಿಷ್ಠವಾಗುತ್ತಿದೆ ಎಸ್​ಆರ್​​ಹೆಚ್

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?