AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಗರ್ಲ್​​ ಫ್ರೆಂಡ್ ಎಂಟ್ರಿ… ಜೀವಕ್ಕೆ ಜೀವದಂತಿದ್ದ ಅಣ್ಣನೇ ದೂರ..!

Hardik Pandya vs Krunal Pandya: ಪಾಂಡ್ಯ ಸಹೋದರರು ಮೊದಲಿನಿಂದಲೂ ಅತ್ಯಂತ ಆತ್ಮೀಯರಾಗಿದ್ದವರು. ಆದರೆ ಈಗ ಹಾರ್ದಿಕ್ ಅವರ ವೈಯಕ್ತಿಕ ಜೀವನದ ಬದಲಾವಣೆಗಳು ಅವರ ನಡುವಿನ ಅಂತರಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಅಂದರೆ ಹಾರ್ದಿಕ್ ಪಾಂಡ್ಯ ಸ್ವಂತ ಅಣ್ಣ ಕೃನಾಲ್ ಪಾಂಡ್ಯರಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಹೊಸ ಗರ್ಲ್​​ ಫ್ರೆಂಡ್ ಎಂಟ್ರಿ... ಜೀವಕ್ಕೆ ಜೀವದಂತಿದ್ದ ಅಣ್ಣನೇ ದೂರ..!
Hardik Pandya - Krunal Pandya
ಝಾಹಿರ್ ಯೂಸುಫ್
|

Updated on: Mar 11, 2026 | 8:53 AM

Share

ಭಾರತದ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ಮತ್ತು ಅವರ ಅಣ್ಣ ಕೃನಾಲ್ ಪಾಂಡ್ಯ ನಡುವೆ ಬಿರುಕು ಮೂಡಿದೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಬೆಳವಣಿಗೆಗೆ ಹಾರ್ದಿಕ್ ಅವರ ಹೊಸ ಗರ್ಲ್​ ಫ್ರೆಂಡ್ ಮಾಡೆಲ್ ಮಹಿಕಾ ಶರ್ಮಾ ಕಾರಣ ಎನ್ನಲಾಗುತ್ತಿದೆ. ಭಾರತ ತಂಡವು 2026ರ ಟಿ20 ವಿಶ್ವಕಪ್ ಗೆದ್ದಾಗ ಅಹಮದಾಬಾದ್‌ನಲ್ಲಿ ನಡೆದ ಭರ್ಜರಿ ಸಂಭ್ರಮಾಚರಣೆಯಲ್ಲಿ ಕೃನಾಲ್ ಪಾಂಡ್ಯ ಮತ್ತು ಅವರ ಪತ್ನಿ ಪಂಖುರಿ ಶರ್ಮಾ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.

ಅತ್ತ ಹಾರ್ದಿಕ್ ಪಾಂಡ್ಯ ಅವರ ಸಾಧನೆಯನ್ನು ಅಭಿನಂದಿಸಿ ಕೃನಾಲ್ ಸಹ ಒಂದೇ ಒಂದು ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿಲ್ಲ. ಇವೆಲ್ಲವೂ ಇದೀಗ ಅಣ್ಣ-ತಮ್ಮ ದೂರವಾಗಿದ್ದಾರೆ ಎಂಬ ವದಂತಿಗೆ ವದಂತಿಗೆ ಪುಷ್ಟಿ ನೀಡಿದೆ.

ಮಹಿಕಾ ಶರ್ಮಾ ಕಾರಣ?

ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ದೂರವಾಗಲು ಮಹಿಕಾ ಶರ್ಮಾ ಕಾರಣ ಎನ್ನಲಾಗುತ್ತಿದೆ. ಮಹಿಕಾ ಹಾರ್ದಿಕ್ ಲೈಫ್​ಗೆ ಎಂಟ್ರಿ ಕೊಟ್ಟ ಬಳಿಕವಷ್ಟೇ ಅಣ್ತಂಮ್ಮದಿರುವ ಎಲ್ಲೂ ಜೊತೆಯಾಗಿ ಕಾಣಿಸಿಕೊಂಡಿಲ್ಲ. ಹೀಗಾಗಿಯೇ ಪಾಂಡ್ಯ ಬ್ರದರ್ಸ್ ದೂರವಾಗಲು ಮಹಿಕಾ ಶರ್ಮಾ ಕಾರಣ ಎನ್ನಲಾಗುತ್ತಿದೆ.

ಹಾರ್ದಿಕ್ ಪಾಂಡ್ಯ ಅವರು ಮಾಜಿ ಪತ್ನಿ ನತಾಶಾ ಅವರಿಂದ ದೂರಾದ ನಂತರ, ಮಾಡೆಲ್ ಮತ್ತು ನಟಿ ಮಹಿಕಾ ಶರ್ಮಾ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ. 2025ರ ಅಕ್ಟೋಬರ್‌ನಲ್ಲಿ ಹಾರ್ದಿಕ್ ಈ ಸಂಬಂಧವನ್ನು ಅಧಿಕೃತಗೊಳಿಸಿದ್ದರು.

ವಿಶ್ವಕಪ್ ಪಂದ್ಯಗಳ ಸಮಯದಲ್ಲಿ ಮಹಿಕಾ ಮೈದಾನದಲ್ಲಿ ಹಾರ್ದಿಕ್ ಅವರಿಗೆ ಬೆಂಬಲವಾಗಿ ನಿಂತಿದ್ದರು. ಕುಟುಂಬದ ಆಪ್ತ ಮೂಲಗಳ ಪ್ರಕಾರ, ಹಾರ್ದಿಕ್ ಅವರ ಈ ಹೊಸ ಜೀವನದ ಆಯ್ಕೆಯು ಕುಟುಂಬದ ಸದಸ್ಯರಲ್ಲಿ, ವಿಶೇಷವಾಗಿ ಕೃನಾಲ್ ಮತ್ತು ಪಂಖುರಿ ಅವರಲ್ಲಿ ಅಸಮಾಧಾನ ಮೂಡಿಸಿರುವ ಸಾಧ್ಯತೆಯಿದೆ.

ಅತ್ತ ಹಾರ್ದಿಕ್ ಅವರ ಮಾಜಿ ಪತ್ನಿ ನತಾಶಾ ಸ್ಟಾಂಕೋವಿಚ್ ಮತ್ತು ಅವರ ಮಗ ಅಗಸ್ತ್ಯ ಅವರೊಂದಿಗೆ ಕೃನಾಲ್ ದಂಪತಿ ಈಗಲೂ ಆತ್ಮೀಯವಾಗಿದ್ದಾರೆ. ಇದು ಹಾರ್ದಿಕ್ ಮತ್ತು ಕೃನಾಲ್ ನಡುವೆ ಅಂತರ ಉಂಟುಮಾಡಿರಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: IPL 2026: RCB ತಂಡದ ಮೊದಲ ಎದುರಾಳಿ ಫಿಕ್ಸ್​?

ಇದಾಗ್ಯೂ ಅಣ್ಣನ ನಡುವಿನ ಸಂಬಂಧದ ಬಗ್ಗೆ ಹಾರ್ದಿಕ್ ಇದುವರೆಗೆ ಯಾವುದೇ ನೇರ ಪ್ರತಿಕ್ರಿಯೆ ನೀಡಿಲ್ಲ. ಆದರೆ ಪ್ರಸ್ತುತ ಸನ್ನಿವೇಶಗಳನ್ನು ಗಮನಿಸಿದರೆ ಪಾಂಡ್ಯ ಬ್ರದರ್ಸ್ ದೂರವಾಗಿರುವುದು ಖಚಿತ. ಏಕೆಂದರೆ ಜೀವದಂತಿದ್ದ ತಮ್ಮ ಎರಡನೇ ಬಾರಿ ಟಿ20 ವಿಶ್ವಕಪ್ ಗೆದ್ದರೂ ಕೃನಾಲ್ ಪಾಂಡ್ಯ ಸೋಷಿಯಲ್ ಮೀಡಿಯಾ ಮೂಲಕ ಒಂದೇ ಒಂದು ಪೋಸ್ಟ್ ಹಂಚಿಕೊಂಡಿಲ್ಲ ಎಂಬುದೇ ಇದಕ್ಕೆ ಸಾಕ್ಷಿ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?