Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ರೋಚಕ ಪಂದ್ಯ ಮುಗಿದ ಬಳಿಕ ಹಾರ್ದಿಕ್-ರಶೀದ್ ಖಾನ್ ಆಡಿದ ಮಾತುಗಳೇನು ಕೇಳಿ

GT vs SRH, IPL 2022: ಐಪಿಎಲ್ 2022 ರಲ್ಲಿ ಜಿಟಿ ಹಾಗೂ ಸನ್​ರೈಸರ್ಸ್​​ ಹೈದರಾಬಾದ್ ನಡುವಣ ಪಂದ್ಯ ಮುಗಿದ ಬಳಿಕ ಮಾತನಾಡಿದ ಗುಜರಾತ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಹಾಗೂ ರಶೀದ್ ಖಾನ್ ಏನು ಹೇಳಿದರು ಎಂಬುದನ್ನು ಕೇಳಿ.

Hardik Pandya: ರೋಚಕ ಪಂದ್ಯ ಮುಗಿದ ಬಳಿಕ ಹಾರ್ದಿಕ್-ರಶೀದ್ ಖಾನ್ ಆಡಿದ ಮಾತುಗಳೇನು ಕೇಳಿ
hardik pandya post-match presentation GT vs SRH
Follow us
TV9 Web
| Updated By: Vinay Bhat

Updated on: Apr 28, 2022 | 8:54 AM

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಗುಜರಾತ್ ಟೈಟಾನ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ (GT vs SRH) ನಡುವಣ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು. ಕೊನೆಯ ಎಸೆತದ ವರೆಗೂ ರೋಚಕತೆ ಸೃಷ್ಟಿಸಿದ್ದು ಪಂದ್ಯದಲ್ಲಿ ಜಿಟಿ ತಂಡ 5 ವಿಕೆಟ್​ಗಳ ಜಯ ಸಾಧಿಸಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಮತ್ತಷ್ಟು ಭದ್ರ ಪಡಿಸಿಕೊಂಡಿದೆ. ಸನ್‌ರೈಸರ್ಸ್‌ ತಂಡ ಯುವ ಆರಂಭಿಕ ಅಭಿಷೇಕ್ ಶರ್ಮ ಮತ್ತು ಏಡನ್ ಮಾರ್ಕ್ರಮ್ ಅರ್ಧಶತಕಗಳ ನೆರವಿನಿಂದ 6 ವಿಕೆಟ್‌ಗೆ 195 ರನ್ ಪೇರಿಸಿತು. ಗುಜರಾತ್ ತಂಡ ವೃದ್ಧಿಮಾನ್ ಸಾಹ ಬಿರುಸಿನ ಆಟದಿಂದ ಉತ್ತಮ ಆರಂಭ ಪಡೆಯಿತು. ಕೊನೆಯಲ್ಲಿ ತೆವಾಟಿಯ-ರಶೀದ್ ಖಾನ್ (Rashid Khan) ಸ್ಫೋಟಕ ಆಟವಾಡಿ ಗೆಲುವಿನ ದಡ ಸೇರಿದರು. ಪಂದ್ಯ ಮುಗಿದ ಬಳಿಕ ಮಾತನಾಡಿದ ಗುಜರಾತ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಹಾಗೂ ರಶೀದ್ ಖಾನ್ ಏನು ಹೇಳಿದರು ಎಂಬುದನ್ನು ಕೇಳಿ.

ನಾಯಕ ಹಾರ್ದಿಕ್ ಪಾಂಡ್ಯ ಮಾತನಾಡಿ, “ನಾನು ಡ್ರೆಸ್ಸಿಂಗ್ ರೂಮ್​​ನಲ್ಲಿ ತಮಾಷೆಗೆ, ನೀವು ತುಂಬಾ ಒಳ್ಳೆಯವರು ನಾನು ನಿಮಗೆ ಸಹಾಯ ಮಾಡುತ್ತೇನೆಂದು ದೇವರು ನಮ್ಮ ಬಳಿ ಹೇಳಿದ್ದಾನೆ ಎನ್ನುತ್ತಿದ್ದೆ. ನಮ್ಮ ತಂಡ ಸದಾ ಉತ್ಸಾಹದಿಂದ ಇರುತ್ತದೆ. ಆಟಗಾರರಿಗೆ ಏನು ಅಗತ್ಯವೊ ಅದನ್ನು ನೀಡುತ್ತಿದ್ದೇವೆ. ಇಲ್ಲಿ ಯಾರಿಗೂ ಯಾವುದೆ ಒತ್ತಡವಿಲ್ಲ. ಎಲ್ಲ ಕ್ರೆಡಿಟ್ ನಮ್ಮ ಸ್ಟಾಫ್ ಸಿಬ್ಬಂದಿಗಳಿಗೆ ಹೋಗಬೇಕು. ಅವರು ನಮ್ಮ ಆಟಗಾರನ್ನು ಉತ್ತಮವಾಗಿ ಸಂಬಾಳಿಸುತ್ತಿದ್ದಾರೆ. ನಮ್ಮ ಕ್ಯಾಂಪ್​ನಲ್ಲಿ ಉತ್ತಮ ವೈಬ್ ಇದೆ. ಇದು ದೊಡ್ಡ ಟೂರ್ನಮೆಂಟ್ ಆಗಿರುವುದರಿಂದ ತಂಡಕ್ಕೆ ಎಲ್ಲಿ ನನ್ನ ಬೌಲಿಂಗ್​ನ ಅಗತ್ಯವಿದೆಯೊ ಅಲ್ಲಿ ನಾನು ಬೌಲಿಂಗ್ ಮಾಡ್ತೇನೆ,” ಎಂದು ಹೇಳಿದ್ದಾರೆ.

ರಶೀದ್ ಖಾನ್ ಮಾತನಾಡಿ, “ಗೆಲುವು ಸಾಧಿಸಿದ್ದು ಖುಷಿಯಿದೆ. ಇದೊಂದು ಉತ್ತಮ ಭಾವನೆ. ಸನ್​ರೈಸರ್ಸ್ ತಂಡಕ್ಕೆ ಬೌಲಿಂಗ್ ಮಾಡಿದ್ದು ಸಂತಸ ತಂದಿದೆ. ನಾನು ನನ್ನ ಆಟವನ್ನು ಆಡಿದೆಯಷ್ಟೆ. ನಾನು ಕಳೆದ ಎರಡು ವರ್ಷಗಳಿಂದ ಬ್ಯಾಟಿಂಗ್​ನಲ್ಲಿ ಸಾಕಷ್ಟು ಅಭ್ಯಾಸ ನಡೆಸುತ್ತಿದ್ದೆ. ಕೊನೆಯ ಓವರ್​ನಲ್ಲಿ 22 ರನ್​ಗಳು ಬೇಕಾಗಿದ್ದವು. ಆಗ ನಾನು ತೇವಾಟಿಯ ಬಳಿ ಹೇಳಿದೆ ನಾವು ಕೊನೆಯ ಓವರ್​ನಲ್ಲಿ ಎದುರಾಳಿಗೆ 25 ರನ್ ಬಿಟ್ಟುಕೊಟ್ಟಿದ್ದೆವು. ಯಾವುದೇ ಕಾರಣಕ್ಕೂ ಧೃತಿಗೆಡಬೇಡ. ಯಾವುದೂ ಅಸಾಧ್ಯವಲ್ಲ. ನಿನ್ನ ಪೊಸಿಶನ್​ಗೆ ಬಂದು ಜೋರಾಗಿ ಹೊಡಿ ಎಂಬುದು ನಮ್ಮ ಪ್ಲಾನ್ ಆಗಿತ್ತು. ನಾನು 4-5 ಕೆಟ್ಟ ಬೌಲಿಂಗ್ ಮಾಡಿದೆ. ಅದು ನನ್ನ ತಲೆಯಲ್ಲಿತ್ತು. ಈರೀತಿಯ ಸಂದರ್ಭದಲ್ಲಿ ನೀವು ಲೈನ್-ಲೆಂತ್ ಅನ್ನು ಮಿಸ್ ಮಾಡಬಾರದು,” ಎಂದು ಹೇಳಿದ್ದಾರೆ.

ಮಾತು ಮುಂದುವರೆಸಿದ ಅವರು, “ಈ ಪಂದ್ಯದಿಂದ ಕೆಲವೊಂದು ಪಾಠ ಕಲಿತಿದ್ದೇವೆ. ಮುಂದಿನ ಪಂದ್ಯದಲ್ಲಿ ತಪ್ಪುಗಳು ಮರುಕಳಿಸಬಾರದು. ನಮ್ಮ ಟೀಮ್​ನಲ್ಲಿ ಆರಂಭದ ದಿನಗಳಿಂದಲೂ ಉತ್ತಮ ವಾತಾವರಣವಿದೆ. ಎಲ್ಲ ಆಟಗಾರರು ಜವಾಬ್ದಾರಿ ತೆಗೆದುಕೊಂಡು ಕಾರ್ಯನಿರ್ವಹಿಸುತ್ತಾರೆ. ನಾಯಕನಿಂದ ಹಾಗೂ ತಂಡದ ಕೋಚ್ ಆಶೀಶ್ ನೆಹ್ರಾ ಅವರಿಂದ ಕೂಡ ಒಳ್ಳೆಯ ಬೆಂಬಲ ಸಿಗುತ್ತಿದೆ. ಈ ತಂಡದಲ್ಲಿರುವುದು ಅದೃಷ್ಟ. ಈ ಗೆಲುವಿನಿಂದ ಸಿಕ್ಕ ಎರಡು ಅಂಕ ಸಹಾಯವಾಗಿದೆ,” ಎಂಬುದು ರಶೀದ್ ಖಾನ್ ಮಾತು.

ಇನ್ನು ಸೋತ ತಂಡದ ನಾಯಕ ಕೇನ್ ವಿಲಿಯಮ್ಸನ್ ಮಾತನಾಡಿ, “ಇದೊಂದು ಅದ್ಭುತ ಪಂದ್ಯ. ಎರಡೂ ತಂಡಗಳು ಒಟ್ಟು 40 ಓವರ್​ಗಳನ್ನು ಆಡಿವೆ. ಇದೊಂದು ನಮಗೆ ಉತ್ತಮ ಪಾಠ. ಶಶಾಂಕ್ ಸಿಂಗ್ ಉತ್ತಮ ಬ್ಯಾಟಿಂಗ್ ನಡೆಸಿದರು. ಉಮ್ರಾನ್ ಮಲಿಕ್ ತುಂಬಾ ಚೆನ್ನಾಗಿ ಬೌಲಿಂಗ್ ಮಾಡಿದರು. ಕ್ರೆಡಿಟ್ ಗುಜರಾತ್​ಗೆ ಸಲ್ಲಬೇಕು. ರಶೀದ್ ಖಾನ್ ಬ್ಯಾಟಿಂಗ್ ಅತ್ಯುತ್ತಮವಾಗಿತ್ತು,” ಎಂದು ಹೇಳಿದ್ದಾರೆ.

Rashid Khan: 6 ಎಸೆತಗಳಲ್ಲಿ 22 ರನ್: GT vs SRH ನಡುವಣ ಕೊನೆಯ ರೋಚಕ ಓವರ್ ಹೇಗಿತ್ತು ನೋಡಿ

ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ