AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಬಾಂಬ್ ಎಕ್ಸ್​ಪರ್ಟ್ ಪಾಂಡ್ಯ​! ಐಪಿಎಲ್ ಆರಂಭಕ್ಕೂ ಮುನ್ನ ಹೊಸ ಅವತಾರ ತಾಳಿದ ಹಾರ್ದಿಕ್; ವಿಡಿಯೋ

IPL 2022: ಐಪಿಎಲ್ 2022 ರ ಹೊಸ ಪ್ರೋಮೋ ವೀಡಿಯೊ ಇದೀಗ ಹೊರಹೊಮ್ಮಿದೆ, ಇದರಲ್ಲಿ ಹಾರ್ದಿಕ್ ಪಾಂಡ್ಯ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

IPL 2022: ಬಾಂಬ್ ಎಕ್ಸ್​ಪರ್ಟ್ ಪಾಂಡ್ಯ​! ಐಪಿಎಲ್ ಆರಂಭಕ್ಕೂ ಮುನ್ನ ಹೊಸ ಅವತಾರ ತಾಳಿದ ಹಾರ್ದಿಕ್; ವಿಡಿಯೋ
ಹಾರ್ದಿಕ್ ಪಾಂಡ್ಯ
TV9 Web
| Edited By: |

Updated on: Mar 12, 2022 | 5:43 PM

Share

ಭಾರತದಲ್ಲಿ ಕ್ರೀಡೆಯ ಅತಿದೊಡ್ಡ ಹಬ್ಬವೆಂದು ಪರಿಗಣಿಸಲಾದ ಇಂಡಿಯನ್ ಪ್ರೀಮಿಯರ್ ಲೀಗ್ 2022 (IPL 2022) ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಈ ಕ್ರಿಕೆಟ್ ಲೀಗ್‌ಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಮಾರ್ಚ್ 26ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಈಗಾಗಲೇ ಪ್ರೇಕ್ಷಕರಲ್ಲಿ ಭಾರೀ ಕ್ರೇಜ್ ಹುಟ್ಟಿಕೊಂಡಿದೆ. ಇದರ ಅಂತಿಮ ಪಂದ್ಯ ಮೇ 29 ರಂದು ನಡೆಯಲಿದೆ. ಈ ಟೂರ್ನಿಯಲ್ಲಿ ಸಾಕಷ್ಟು ಹೊಸತನಗಳನ್ನು ಕಾನಲಿದ್ದು, ಈ ವರ್ಷ ಎರಡು ಹೊಸ ತಂಡಗಳು ಐಪಿಎಲ್‌ನಲ್ಲಿ ಆಡುವುದನ್ನು ಕಾಣಬಹುದು.

ಅದಾಗ್ಯೂ, ಈ ಮಧ್ಯೆ ಐಪಿಎಲ್ 2022 ರ ಹೊಸ ಪ್ರೋಮೋ ವೀಡಿಯೊ ಇದೀಗ ಹೊರಹೊಮ್ಮಿದೆ, ಇದರಲ್ಲಿ ಹಾರ್ದಿಕ್ ಪಾಂಡ್ಯ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ದೇಶದ ಮೊದಲ ಬಹುಭಾಷಾ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಕೂ ಅಪ್ಲಿಕೇಶನ್‌ನಲ್ಲಿನ ವೀಡಿಯೊ ಕಡಿಮೆ ಸಮಯದಲ್ಲೇ ಸಾಕಷ್ಟು ಸದ್ದು ಮಾಡುತ್ತಿದೆ. #pandyapromo ಮತ್ತು #iplpromo ಎಂಬ ಹ್ಯಾಶ್ಟ್ಯಾಗ್ ನಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.

ಈ ವೀಡಿಯೊದಲ್ಲಿ, ಹಾರ್ದಿಕ್ ಪಾಂಡ್ಯರನ್ನು ಬಾಂಬ್ ತಜ್ಞರಾಗಿ ತೋರಿಸಲಾಗಿದೆ. ವಾಸ್ತವವಾಗಿ, ಈ ವೀಡಿಯೊ ಐಪಿಎಲ್‌ನ ಪ್ರೋಮೋ ಆಗಿದ್ದು, ಇದರಲ್ಲಿ ಎರಡು ಹೊಸ ತಂಡಗಳನ್ನು ಸೇರಿಸಿದ ನಂತರ ಈಗ ಅದು 10 ತಂಡಗಳಾಗಿ ಮಾರ್ಪಟ್ಟಿದೆ. ಈ ಎರಡು ಹೊಸ ತಂಡಗಳ ಸೇರ್ಪಡೆಯೊಂದಿಗೆ, ಐಪಿಎಲ್‌ನ ಹೊಸ ಋತುವಿನಲ್ಲಿ ಏನು ಸ್ಫೋಟಗೊಳ್ಳಲಿದೆ ಎಂಬುದನ್ನು ಪಾಂಡ್ಯ ವಿವರಿಸಿದ್ದಾರೆ. ಸ್ಥಳೀಯ ಸಾಮಾಜಿಕ ಜಾಲತಾಣ ಕೂ ಆಪ್‌ನಲ್ಲಿ ವೈರಲ್ ಆಗಿರುವ ಈ ವೀಡಿಯೊದಲ್ಲಿ ಹೇಳಲಾದ ಮುಖ್ಯ ವಿಷಯವೆಂದರೆ, ಈಗ ಎಂಟು ತಂಡಗಳ ಬದಲಿಗೆ 10 ತಂಡಗಳನ್ನು ಸೇರಿಸಲಾಗಿದ್ದು, ಈ ಚುಟುಕು ಆಟದ ರೋಮಾಂಚನವು ತುಂಬಾ ವೇಗವಾಗಿರುತ್ತದೆ.

ಇದನ್ನೂ ಓದಿ:IND vs WI, WWC 2022: ಸ್ಮೃತಿ- ಹರ್ಮನ್‌ಪ್ರೀತ್ ಶತಕ! ಪಾಯಿಂಟ್ ಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದ ಭಾರತ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್