Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾಗೆ ಕೊಕ್‌: ಹಾರ್ದಿಕ್ ಪಾಂಡ್ಯಗೆ ಒಲಿದ ಮುಂಬೈ ಇಂಡಿಯನ್ಸ್‌ ತಂಡದ ನಾಯಕತ್ವ

Hardik Pandya: ಮುಂಬೈ ತಂಡದ ನಾಯಕತ್ವದ ಸ್ಥಾನದಿಂದ ರೋಹಿತ್ ಶರ್ಮಾಗೆ ಕೊಕ್‌ ನೀಡಿದ್ದು, ಆ ಮೂಲಕ ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್‌ ತಂಡದ ನಾಯಕತ್ವ ಒಲಿದಿದೆ. ಇನ್ಮುಂದೆ ಐಪಿಎಲ್‌ನಲ್ಲಿ ಮುಂಬೈ ತಂಡವನ್ನು ಹಾರ್ದಿಕ್‌ ಪಾಂಡ್ಯಾ ಮುನ್ನಡೆಸಲಿದ್ದಾರೆ. 

ರೋಹಿತ್ ಶರ್ಮಾಗೆ ಕೊಕ್‌: ಹಾರ್ದಿಕ್ ಪಾಂಡ್ಯಗೆ ಒಲಿದ ಮುಂಬೈ ಇಂಡಿಯನ್ಸ್‌ ತಂಡದ ನಾಯಕತ್ವ
ಹಾರ್ದಿಕ್‌ ಪಾಂಡ್ಯ, ರೋಹಿತ್ ಶರ್ಮಾ
Follow us
ಗಂಗಾಧರ​ ಬ. ಸಾಬೋಜಿ
|

Updated on:Dec 15, 2023 | 7:04 PM

ಮುಂಬೈ ತಂಡದ ನಾಯಕತ್ವದ ಸ್ಥಾನದಿಂದ ರೋಹಿತ್ ಶರ್ಮಾಗೆ ಕೊಕ್‌ ನೀಡಿದ್ದು, ಆ ಮೂಲಕ ಹಾರ್ದಿಕ್ ಪಾಂಡ್ಯ (Hardik Pandya) ಗೆ ಮುಂಬೈ ಇಂಡಿಯನ್ಸ್‌ ತಂಡದ ನಾಯಕತ್ವ ಒಲಿದಿದೆ. ಇನ್ಮುಂದೆ ಐಪಿಎಲ್‌ನಲ್ಲಿ ಮುಂಬೈ ತಂಡವನ್ನು ಹಾರ್ದಿಕ್‌ ಪಾಂಡ್ಯ ಮುನ್ನಡೆಸಲಿದ್ದಾರೆ. ಮುಂಬೈ ಇಂಡಿಯನ್ಸ್‌ ಗ್ಲೋಬಲ್ ಹೆಡ್ ಆಫ್ ಪರ್ಫಾರ್ಮೆನ್ಸ್ ಮಹೇಲಾ ಜಯವರ್ಧನೆ ಅವರು ಹಾರ್ದಿಕ್ ಪಾಂಡ್ಯ ಅವರ ನೇಮಕಾತಿ ಬಗ್ಗೆ ‘ಭವಿಷ್ಯದ ಸಿದ್ಧತೆ’ ಎಂದು ಹೇಳಿದ್ದಾರೆ.

ಮುಂಬೈ ಇಂಡಿಯನ್ಸ್​​ ಕ್ರಿಕೆಟ್​ ದಂತಕತೆ ಸಚಿನ್ ತೆಂಡೂಲ್ಕರ್​ರಿಂದ ಹಿಡಿದು ಹರ್ಭಜನ್ ಸಿಂಗ್​​ವರೆಗೆ ಮತ್ತು ರಿಕಿಯಿಂದ ರೋಹಿತ್‌ ಶರ್ಮಾವರೆಗೂ ತಮ್ಮ ಅಸಾಧಾರಣ ನಾಯಕತ್ವವನ್ನು ಪ್ರದರ್ಶಿಸಿದ್ದಾರೆ. ತಮ್ಮ ತಂಡದ ಯಶಸ್ಸಿಗೆ ಕೊಡುಗೆ ನೀಡುತ್ತ ಭವಿಷ್ಯದಲ್ಲಿ ತಂಡವನ್ನು ಬಲಪಡಿಸುವತ್ತ ಯಾವಾಗಲು ಗುರಿ ಹೊಂದಿದ್ದರು. ಸದ್ಯ ಇದಕ್ಕೆ ಅನುಗುಣವಾಗಿ ಹಾರ್ದಿಕ್ ಪಾಂಡ್ಯ ಅವರು ಐಪಿಎಲ್ 2024 ರ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಮಹೇಲಾ ಅಧಿಕೃತವಾಗಿ ಹೇಳಿದ್ದಾರೆ.

ರೋಹಿತ್ ಶರ್ಮಾ ಅವರು ನಾಯಕತ್ವ ಹೊಂದಿದ್ದ ಸಮಯದಲ್ಲಿ ಅವರ ಅಸಾಧಾರಣ ನಾಯಕತ್ವಕ್ಕಾಗಿ ಮಹೇಲಾ ಜಯವರ್ಧನೆ ಅವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. 2013 ರಿಂದ ಮುಂಬೈ ಇಂಡಿಯನ್ಸ್‌ ತಂಡದ ನಾಯಕನಾಗಿದ್ದು ಅಸಾಮಾನ್ಯವಾದುದು. ಅವರ ನಾಯಕತ್ವ ತಂಡಕ್ಕೆ ಸಾಕಷ್ಟು ಯಶಸ್ಸನ್ನು ತಂದುಕೊಟ್ಟಿದೆ. ಜೊತೆಗೆ ಐಪಿಎಲ್ ಇತಿಹಾಸದಲ್ಲಿ ಅತ್ಯುತ್ತಮ ನಾಯಕರಲ್ಲಿ ರೋಹಿತ್ ಶರ್ಮಾ ಕೂಡ  ಒಬ್ಬರಾಗಿದ್ದು, ಅವರ ಸ್ಥಾನ ಗಟ್ಟಿಗೊಳಿಸಿದೆ ಎಂದಿದ್ದಾರೆ.

ಇದನ್ನೂ ಓದಿ: ಟಿ20 ಮಾದರಿಯಲ್ಲಿ ಮೌನಕ್ಕೆ ಶರಣಾದ ಗಿಲ್ ಬ್ಯಾಟ್; ಆಯ್ಕೆ ಮಂಡಳಿಗೆ ಹೊಸ ಟೆನ್ಷನ್

ಅವರ ಮಾರ್ಗದರ್ಶನದಲ್ಲಿ, ಮುಂಬೈ ಇಂಡಿಯನ್ಸ್‌ ಅತ್ಯಂತ ಯಶಸ್ವಿ ಮತ್ತು ಪ್ರೀತಿಪಾತ್ರ ತಂಡಗಳಲ್ಲಿ ಒಂದಾಗಿದೆ. ಮುಂಬೈ ಇಂಡಿಯನ್ಸ್‌ ತಂಡವನ್ನು ಮತ್ತಷ್ಟು ಬಲಪಡಿಸಲು ಮೈದಾನದಲ್ಲಿ ಮತ್ತು ಹೊರಗೆ ಅವರ ಮಾರ್ಗದರ್ಶನ ಮತ್ತು ಅನುಭವವನ್ನು ನಾವು ಎದುರು ನೋಡುತ್ತೇವೆ. ಜೊತೆಗೆ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ತಂಡದ ನಾಯಕರಾಗಿ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

2015 ರಲ್ಲಿ ಕ್ರಿಕೆಟ್ ಪ್ರಯಾಣ ಆರಂಭಿಸಿದ್ದ ಹಾರ್ದಿಕ್ ಪಾಂಡ್ಯ, ಈ ತಿಂಗಳ ಆರಂಭದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್‌ ನಡುವಿನ ಎಲ್ಲಾ ನಗದು ವಹಿವಾಟಿನ ನಂತರ ಹಾರ್ದಿಕ್ ಪಾಂಡ್ಯ ಅವರು ಮುಂಬೈ ಇಂಡಿಯನ್ಸ್‌ಗೆ ಮರಳಿದ್ದರು. ಪಾಂಡ್ಯ ಅವರ ಲೀಗ್ ಶುಲ್ಕ 15 ಕೋಟಿ ರೂ. ಭರಿಸುವ ಪರ್ಸ್ ಹೊಂದಿರದ ಮುಂಬೈ ಇಂಡಿಯನ್ಸ್, ಸಾಕಷ್ಟು ಆಟಗಾರರನ್ನು ಬಿಡುಗಡೆ ಮಾಡಿತ್ತು.

ಮತ್ತಷ್ಟು ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:33 pm, Fri, 15 December 23

ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?