AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs SRH, IPL 2026: 243 ರನ್‌ಗಳಿಸಿದರೂ ಸೋತಿದ್ದೇಕೆ?: ಹಾರ್ದಿಕ್ ನೀಡಿದ ಕಾರಣಕ್ಕೆ ಇಡೀ ಸ್ಟೇಡಿಯಂ ಸ್ತಬ್ಧ

Hardik Pandya Post Match Statement: ಐಪಿಎಲ್ 2026 ರಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಸೋಲಿಗೆ ಕಳಪೆ ಬೌಲಿಂಗ್ ಮತ್ತು ಆರಂಭಿಕ ಓವರ್‌ಗಳಲ್ಲಿ ರನ್‌ಗಳ ಸುರಿಮಳೆಯೇ ಕಾರಣ ಎಂದು ಹಾರ್ದಿಕ್ ಪಾಂಡ್ಯ ನೇರವಾಗಿ ಹೇಳಿದ್ದಾರೆ. ಈ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ತಮ್ಮ ಘಟನೆತೆಗೆ ತಕ್ಕಂತೆ ಆಡಿಲ್ಲ ಎಂಬ ನೈಜ್ಯತೆಯನ್ನೂ ಪಾಂಡ್ಯ ಒಪ್ಪಿಕೊಂಡಿದ್ದಾರೆ.

MI vs SRH, IPL 2026: 243 ರನ್‌ಗಳಿಸಿದರೂ ಸೋತಿದ್ದೇಕೆ?: ಹಾರ್ದಿಕ್ ನೀಡಿದ ಕಾರಣಕ್ಕೆ ಇಡೀ ಸ್ಟೇಡಿಯಂ ಸ್ತಬ್ಧ
Hardik Pandya Post Match Statement
ಸಾಯಿನಂದಾ
| Edited By: |

Updated on: Apr 30, 2026 | 7:43 AM

Share

ಬೆಂಗಳೂರು (ಏ. 30): ಐಪಿಎಲ್ 2026 ರಲ್ಲಿ ಮುಂಬೈ ಇಂಡಿಯನ್ಸ್ ಸ್ಥಿತಿ ತುಂಬಾ ಕೆಟ್ಟದಾಗಿದೆ. ಬುಧವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ 243 ರನ್‌ಗಳ ಬೃಹತ್ ಸ್ಕೋರ್ ಅನ್ನೂ ರಕ್ಷಿಸುವಲ್ಲಿ ಮುಂಬೈ ಇಂಡಿಯನ್ಸ್ ವಿಫಲವಾಯಿತು. ಈ ಸೋಲಿನಿಂದ ಎಂಐ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ತೀವ್ರ ನಿರಾಶೆಗೊಂಡಂತೆ ಕಂಡುಬಂದರು. ಸೋಲಿನ ನಂತರ ಹಾರ್ದಿಕ್ ತಮ್ಮ ಹೇಳಿಕೆಯಲ್ಲಿ, ಸೋಲಿಗೆ ಕಾರಣಗಳು ಮತ್ತು ತಂಡದ ಸ್ಥಿತಿಯ ಬಗ್ಗೆ ಬಹಿರಂಗವಾಗಿ ಮಾತನಾಡಿದರು. ಮುಂಬೈ 243 ರನ್‌ಗಳ ಬೆಟ್ಟದಂತಹ ಸ್ಕೋರ್ ಗಳಿಸಿದರೂ ಸನ್‌ರೈಸರ್ಸ್ 8 ಎಸೆತಗಳು ಬಾಕಿ ಇರುವಾಗಲೇ ಈ ಗುರಿಯನ್ನು ಸಾಧಿಸಿತು. ಇದು ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಅತಿದೊಡ್ಡ ರನ್-ಚೇಸ್ ಆಗಿದೆ.

ಹೈದರಾಬಾದ್ ವಿರುದ್ಧದ ಸೋಲಿಗೆ ಹಾರ್ದಿಕ್ ಹೇಳಿದ್ದೇನು?

ಪಂದ್ಯದಲ್ಲಿ ಇಬ್ಬನಿ ಪ್ರಮುಖ ಪಾತ್ರ ವಹಿಸಲಿಲ್ಲ ಎಂದು ಹಾರ್ದಿಕ್ ಪಾಂಡ್ಯ ಸ್ಪಷ್ಟಪಡಿಸಿದರು. ಸೋಲಿಗೆ ಕೆಟ್ಟ ಚೆಂಡುಗಳು ಪ್ರಮುಖ ಪಾತ್ರ ವಹಿಸಿವೆ ಎಂದು ಅವರು ದೂಷಿಸಿದರು. ಇದನ್ನು ಕೇಳಿ ಅಭಿಮಾನಿಗಳು ಶಾಕ್ ಆದರು. “ಇಬ್ಬನಿ ಪ್ರಮುಖ ಪಾತ್ರ ವಹಿಸಿದೆ ಎಂದು ನಾನು ಭಾವಿಸುವುದಿಲ್ಲ. ಅವರು (ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್) ಕೆಲವು ಉತ್ತಮ ಹೊಡೆತಗಳನ್ನು ಆಡಿದರು ಮತ್ತು ನಾವು ಕೆಲವು ಕೆಟ್ಟ ಚೆಂಡುಗಳನ್ನು ಬೌಲ್ ಮಾಡಿದ್ದೇವೆ. ಅವರು ಉತ್ತಮ ಆರಂಭ ಪಡೆದರು. ನಾವು ಪುನರಾಗಮನ ಮಾಡಲು ಪ್ರಯತ್ನಿಸಿದೆವು, ಆದರೆ ಅದು ಸಾಧ್ಯವಾಗಲಿಲ್ಲ” ಎಂದು ಹಾರ್ದಿಕ್ ಹೇಳಿದರು.

ಬೌಲಿಂಗ್‌ನಲ್ಲಿ ಇನ್ನೂ ವಿಶ್ವಾಸವಿದೆ

ಇಷ್ಟು ಹೆಚ್ಚಿನ ಮೊತ್ತವನ್ನು ರಕ್ಷಿಸುವಲ್ಲಿ ವಿಫಲವಾದರೂ, ಹಾರ್ದಿಕ್ ತಮ್ಮ ಬೌಲರ್‌ಗಳನ್ನು ಸಮರ್ಥಿಸಿಕೊಂಡರು. ಸೋಲಿಗೆ ಬೌಲರ್​ಗನ್ನು ಮಾತ್ರ ದೂಷಿಸುವುದಿಲ್ಲ ಮತ್ತು ಅವರ ಮೇಲೆ ಒತ್ತಡ ಹೇರುವುದಿಲ್ಲ ಎಂದು ಹೇಳಿದರು. ಹಾರ್ದಿಕ್ ಪ್ರಕಾರ, “ನಾನು ನನ್ನ ಬೌಲರ್‌ಗಳನ್ನು ದೂಷಿಸುವುದಿಲ್ಲ. 244 ಸ್ಕೋರ್ ಅನ್ನು ರಕ್ಷಿಸಬಹುದೆಂದು ನನಗೆ ವಿಶ್ವಾಸವಿತ್ತು, ಆದರೆ ಇಂದು ನಮ್ಮ ಎಕ್ಸಿಕ್ಯೂಷನ್ ಪರಿಪೂರ್ಣವಾಗಿರಲಿಲ್ಲ. ಒಂದು ಘಟಕವಾಗಿ, ಮುಂಬೈ ಇಂಡಿಯನ್ಸ್‌ಗೆ ಹೆಸರುವಾಸಿಯಾದದ್ದನ್ನು ನಾವು ಸಾಧಿಸಲಿಲ್ಲ.” ಎಂದರು.

MI vs SRH: ಅತ್ಯಧಿಕ ಮೊತ್ತ ಕಲೆಹಾಕಿಯೂ ಸೋತ ಮುಂಬೈ ಇಂಡಿಯನ್ಸ್

ಪಂದ್ಯದಲ್ಲಿ ಟ್ರಾವಿಸ್ ಹೆಡ್ ಕ್ಯಾಚ್ ಕೈಬಿಟ್ಟಿದ್ದು ಅಥವಾ ವಿಫಲವಾದ ಮನವಿ ಮುಂಬೈಗೆ ದುಬಾರಿಯಾಗಿ ಪರಿಣಮಿಸಿತು. ಅವಕಾಶಗಳನ್ನು ಬಳಸಿಕೊಳ್ಳುವಾಗ ವೇಗ ಬದಲಾಗುತ್ತದೆ, ಆದರೆ ಹಾಗೆ ಮಾಡದಿದ್ದರೆ ನೋವುಂಟಾಗುತ್ತದೆ ಎಂದು ಹಾರ್ದಿಕ್ ಹೇಳಿದರು. ಈ ಋತುವಿನಲ್ಲಿ ಅದೃಷ್ಟ ಮತ್ತು ಅವಕಾಶ ತನ್ನ ಕಡೆ ಇರಲಿಲ್ಲ ಎಂದು ಅವರು ಒಪ್ಪಿಕೊಂಡರು.

ವಾಂಖೆಡೆಯಲ್ಲಿ ನಡೆದ ಪಂದ್ಯದ ವೇಳೆ ಎದುರಾಳಿ ತಂಡಕ್ಕೆ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದ ಬಗ್ಗೆ ಹಾರ್ದಿಕ್ ತಮ್ಮ ನೋವನ್ನು ವ್ಯಕ್ತಪಡಿಸಿದರು. “ವಿರೋಧಿ ತಂಡ ಬಂದಾಗ ಅಭಿಮಾನಿಗಳು ಅವರ ಹೆಸರು ಜಪಿಸಿದಾಗ ಕೆಲವೊಮ್ಮೆ ದುಃಖವಾಗುತ್ತದೆ. ನಮ್ಮ ಅಭಿಮಾನಿಗಳು ತುಂಬಾ ನಿಷ್ಠಾವಂತರು, ಆದರೆ ನಾವು ಅವರನ್ನು ಮನರಂಜಿಸಬೇಕು ಮತ್ತು ಅವರ ವಿಶ್ವಾಸವನ್ನು ಮರಳಿ ಗಳಿಸಬೇಕು” ಎಂದು ಹೇಳಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ರೇವತಿ ನಕ್ಷತ್ರಕ್ಕೆ ಶನಿ ಎಂಟ್ರಿ!
ರೇವತಿ ನಕ್ಷತ್ರಕ್ಕೆ ಶನಿ ಎಂಟ್ರಿ!
ಇಂದು ಹನುಮನಿಗೆ ಬೆಲ್ಲದ ದೀಪ ಹಚ್ಚಿದರೆ ಈ ರಾಶಿಯವರಿಗೆ ಭರ್ಜರಿ ಅದೃಷ್ಟ!
ಇಂದು ಹನುಮನಿಗೆ ಬೆಲ್ಲದ ದೀಪ ಹಚ್ಚಿದರೆ ಈ ರಾಶಿಯವರಿಗೆ ಭರ್ಜರಿ ಅದೃಷ್ಟ!
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ