AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಜಸ್​ಪ್ರೀತ್ ಬುಮ್ರಾ ಶೈಲಿಯಲ್ಲಿ ಹಾರ್ದಿಕ್ ಪಾಂಡ್ಯ ಬೌಲಿಂಗ್​..!

Asia Cup 2022: ಏಷ್ಯಾಕಪ್ ಟೂರ್ನಿಯಿಂದ ಟೀಮ್ ಇಂಡಿಯಾ ವೇಗಿಗಳಾದ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಗಾಯದ ಕಾರಣ ಹೊರಗುಳಿದಿದ್ದಾರೆ.

Hardik Pandya: ಜಸ್​ಪ್ರೀತ್ ಬುಮ್ರಾ ಶೈಲಿಯಲ್ಲಿ ಹಾರ್ದಿಕ್ ಪಾಂಡ್ಯ ಬೌಲಿಂಗ್​..!
Hardik Pandya-Jasprit Bumrah
TV9 Web
| Updated By: ಝಾಹಿರ್ ಯೂಸುಫ್|

Updated on: Aug 24, 2022 | 3:56 PM

Share

ಏಷ್ಯಾ ಕಪ್ 2022 (Asia Cup 2022) ಪಂದ್ಯಾವಳಿಗೆ ವೇದಿಕೆ ಸಿದ್ಧವಾಗಿದೆ. ಶನಿವಾರದಿಂದ ಆರಂಭವಾಗಲಿರುವ ಟೂರ್ನಿಯ 2ನೇ ಪಂದ್ಯದಲ್ಲಿ ಭಾರತ-ಪಾಕ್ (India vs Pakistan) ಮುಖಾಮುಖಿಯಾಗಲಿದೆ. ಆಗಸ್ಟ್ 28 ರಂದು ನಡೆಯಲಿರುವ ಈ ಪಂದ್ಯಕ್ಕೆ ಟೀಮ್ ಇಂಡಿಯಾ (Team india) ವೇಗಿ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಿದ್ದಾರೆ. ಅಂದರೆ ಬೆನ್ನು ನೋವಿನ ಕಾರಣ ಬುಮ್ರಾ ಏಷ್ಯಾಕಪ್​ನಿಂದ ಹೊರಗುಳಿದಿದ್ದಾರೆ. ಇತ್ತ ಟೀಮ್ ಇಂಡಿಯಾ ಪರ ವೇಗಿಗಳಾಗಿ ಭುವನೇಶ್ವರ್ ಕುಮಾರ್, ಅವೇಶ್ ಖಾನ್ ಹಾಗೂ ಅರ್ಷದೀಪ್ ಸಿಂಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ವೇಗದ ಬೌಲಿಂಗ್ ಆಲ್​ರೌಂಡರ್ ಆಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ.

ಇತ್ತ ಬುಮ್ರಾ ಹೊರಗುಳಿಯುತ್ತಿದ್ದಂತೆ ಅತ್ತ ಹಾರ್ದಿಕ್ ಪಾಂಡ್ಯ ಬೌಲಿಂಗ್ ಕಡೆ ಹೆಚ್ಚಿನ ಗಮನಹರಿಸುತ್ತಿದ್ದಾರೆ. ಏಕೆಂದರೆ ಅನುಭವಿ ವೇಗಿಗಳ ಅನುಪಸ್ಥಿತಿಯಲ್ಲಿ ಪಾಂಡ್ಯ ಪ್ರಮುಖ ಬೌಲರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಅತ್ತ ನೆಟ್ಸ್​ನಲ್ಲಿ ಹಾರ್ದಿಕ್ ಪಾಂಡ್ಯ ಜಸ್​ಪ್ರೀತ್ ಬುಮ್ರಾ ಶೈಲಿಯನ್ನು ಅನುಕರಿಸುತ್ತಿರುವುದು ಕಂಡು ಬಂದಿದೆ.

ಅಂದರೆ ಬುಮ್ರಾ ಬೌಲಿಂಗ್​ ಶೈಲಿಯನ್ನು ಅನುಕರಿಸಿ ಬೌಲಿಂಗ್ ಮಾಡಿದ ಪಾಂಡ್ಯ, ಯಾರ್ಕರ್ ಕಿಂಗ್ ವಿಕೆಟ್ ಸಿಕ್ಕಾಗ ಸಂಭ್ರಮಿಸುವಂತೆ ಕೈ ತೋರಿಸಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಏಷ್ಯಾಕಪ್​ನಲ್ಲಿ ಜಸ್​ಪ್ರೀತ್ ಬುಮ್ರಾ ಅವರ ಸ್ಥಾನವನ್ನು ನೀವು ತುಂಬಬೇಕೆಂದು ಹಲವು ಅಭಿಮಾನಿಗಳು ಹಾರೈಸಿದ್ದಾರೆ.

ಪ್ರಸ್ತುತ ಸನ್ನಿವೇಶದಲ್ಲಿ ಪಾಕಿಸ್ತಾನ್ ವಿರುದ್ದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಭುವನೇಶ್ವರ್ ಕುಮಾರ್ ಜೊತೆ ಪವರ್​ಪ್ಲೇ ಓವರ್ ಎಸೆಯುವ ಸಾಧ್ಯತೆಯಿದೆ. ಇದೇ ಕಾರಣಕ್ಕಾಗಿ ಪಾಂಡ್ಯ ಬೌಲಿಂಗ್ ಅಭ್ಯಾಸದಲ್ಲಿ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ.

ಟೀಮ್ ಇಂಡಿಯಾಗೆ ಬೌಲಿಂಗ್ ಸಮಸ್ಯೆ:

ಏಷ್ಯಾಕಪ್ ಟೂರ್ನಿಯಿಂದ ಟೀಮ್ ಇಂಡಿಯಾ ವೇಗಿಗಳಾದ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಗಾಯದ ಕಾರಣ ಹೊರಗುಳಿದಿದ್ದಾರೆ. ಇನ್ನು ಹಿರಿಯ ವೇಗಿ ಮೊಹಮ್ಮದ್ ಶಮಿಯನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಇತ್ತ ತಂಡಕ್ಕೆ ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಹಾಗೂ ಅವೇಶ್ ಖಾನ್ ಆಯ್ಕೆಯಾಗಿದ್ದಾರೆ. ಆದರೆ ಇಲ್ಲಿ ಭುವಿಯನ್ನು ಹೊರತುಪಡಿಸಿ ಇಬ್ಬರು ವೇಗಿಗಳು ಅನಾನುಭವಿಗಳು ಎಂಬುದು ವಿಶೇಷ. ಹೀಗಾಗಿಯೇ ಟೀಮ್ ಇಂಡಿಯಾ ವೇಗದ ಬೌಲಿಂಗ್ ಲೈನಪ್​ ಬಲಿಷ್ಠವಾಗಿಲ್ಲ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

ಏಷ್ಯಾಕಪ್​ಗೆ ಟೀಮ್ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಮೀಸಲು ಆಟಗಾರರು: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್ ಹಾಗೂ ದೀಪಕ್ ಚಹರ್.

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್