AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

07:07: CSK ತಂಡಕ್ಕೆ ಹಾರ್ದಿಕ್ ಪಾಂಡ್ಯ?

Hardik Pandya: ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಕಣಕ್ಕಿಳಿದ ಮುಂಬೈ ಇಂಡಿಯನ್ಸ್ ತಂಡವು ಈ ಬಾರಿಯ ಐಪಿಎಲ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಆಡಿದ 14 ಪಂದ್ಯಗಳಲ್ಲಿ ಕೇವಲ 4 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು ಅಂಕ ಪಟ್ಟಿಯಲ್ಲಿ 9ನೇ ಸ್ಥಾನವನ್ನು ಅಲಂಕರಿಸಿದೆ. 

07:07: CSK ತಂಡಕ್ಕೆ ಹಾರ್ದಿಕ್ ಪಾಂಡ್ಯ?
Hardik Pandya Image Credit source: Thread.com
ಝಾಹಿರ್ ಯೂಸುಫ್
|

Updated on:May 26, 2026 | 8:58 AM

Share

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಲಿದ್ದಾರಾ? ಈ ಮಿಲಿಯನ್ ಡಾಲರ್ ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪಾಂಡ್ಯ ಹಂಚಿಕೊಂಡ ಒಂದು ಪೋಸ್ಟ್​. ಈ ಪೋಸ್ಟ್ ಬೆನ್ನಲ್ಲೇ ಹಾರ್ದಿಕ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಯೊಂದು ಹುಟ್ಟಿಕೊಂಡಿದೆ. ಇದರೊಂದಿಗೆ ಅವರು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸೋಷಿಯಲ್ ಮೀಡಿಯಾ ಪೋಸ್ಟ್​​ಗಳು ಹರಿದಾಡುತ್ತಿದೆ.

ಅಷ್ಟಕ್ಕೂ ಹಾರ್ದಿಕ್ ಹಂಚಿಕೊಂಡ ಪೋಸ್ಟ್ ಯಾವುದು?

ಸೋಮವಾರ (ಮೇ 25) ಹಾರ್ದಿಕ್ ಪಾಂಡ್ಯ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಒಂದು ಫೋಟೋವನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಲ್ಯಾಪ್ ಟಾಪ್, ಮೊಬೈಲ್ ಇತ್ತು. ಆ ಮೊಬೈಲ್ ಸ್ಕ್ರೀನ್ ಮೇಲೆ ಸಮಯ 07:07 ಎಂದು ತೋರಿಸಲಾಗಿತ್ತು. ಕ್ರಿಕೆಟ್ ಲೋಕದಲ್ಲಿ ‘7’ ಎಂದರೆ ಅದು ಎಂ.ಎಸ್. ಧೋನಿ.

ಹೀಗಾಗಿ, ಹಾರ್ದಿಕ್ ಪಾಂಡ್ಯ ಬೇಕೆಂದೇ ಧೋನಿ ಅವರ ನಂಬರ್ ಇರುವ ಸಮಯದ ಫೋಟೋ ಹಾಕಿ, ತಾವು CSK ಸೇರುವ ಬಗ್ಗೆ ಸುಳಿವು ನೀಡಿದ್ದಾರೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಲಾರಂಭಿಸಿದ್ದಾರೆ.

ಕುತೂಹಲಕಾರಿ ವಿಷಯ ಎಂದರೆ ಈ ಬಾರಿಯ ಐಪಿಎಲ್​ ನಡುವೆ  ಹಾರ್ದಿಕ್ ಪಾಂಡ್ಯ ಚೆನ್ನೈ ಸೂಪರ್ ಕಿಂಗ್ಸ್​ಗೆ ಟ್ರೇಡ್ ಆಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಇದೀಗ ಪಾಂಡ್ಯ ಹಂಚಿಕೊಂಡಿರುವ ಪೋಸ್ಟ್​ನಿಂದಾಗಿ ಈ ಸುದ್ದಿಯು ಮಹತ್ವ ಪಡೆದುಕೊಂಡಿದೆ.

;

ಮುಂಬೈ ನಾಯಕನ ಮೇಲೆ ಸಿಎಸ್​ಕೆ ಕಣ್ಣು?

ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಳೆದ ಎರಡು ಸೀಸನ್​ಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವು ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಹೀಗಾಗಿಯೇ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕೈ ಬಿಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

ಇದರ ನಡುವೆ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಸಿಎಸ್​ಕೆ ಸಿಇಒ ಕಾಸಿ ವಿಶ್ವನಾಥನ್ ಅವರೊಂದಿಗೆ ಮೈದಾನದಲ್ಲಿ ಸುದೀರ್ಘ ಚರ್ಚೆ ನಡೆಸುತ್ತಿರುವುದು ಕಂಡುಬಂದಿತ್ತು.

ಈ ಮಾತುಕತೆ ಬೆನ್ನಲ್ಲೇ ಸಿಎಸ್​ಕೆ ರುತುರಾಜ್ ಗಾಯಕ್ವಾಡ್ ಅಥವಾ ಶಿವಂ ದುಬೆಯನ್ನು ನೀಡಿ ಹಾರ್ದಿಕ್ ಪಾಂಡ್ಯರನ್ನು ಟ್ರೇಡ್ ಮಾಡಲಿದ್ದಾರೆ ಎಂಬ ಸುದ್ದಿಗಳು ಹುಟ್ಟಿಕೊಂಡಿತ್ತು. ಇದೀಗ ಹಾರ್ದಿಕ್ ಪಾಂಡ್ಯ ಹಂಚಿಕೊಂಡ ಒಂದೇ ಒಂದು ಪೋಸ್ಟ್​ನಿಂದ ಈ ಸುದ್ದಿಗಳು ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ: RCB ಪರ ಇನಿಂಗ್ಸ್ ಆರಂಭಿಸುವವರು ಯಾರು?

ಇದಾಗ್ಯೂ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕಡೆಯಿಂದಾಗಲಿ, ಅಥವಾ ಚೆನ್ನೈ ಸೂಪರ್ ಕಿಂಗ್ಸ್ ಕಡೆಯಿಂದಾಗಲಿ ಈ ಟ್ರೇಡಿಂಗ್ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಹೀಗಾಗಿ ಹಾರ್ದಿಕ್ ಪಾಂಡ್ಯ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎಂಟ್ರಿ ಕೊಡುವ ಬಗ್ಗೆ ಖಚಿತತೆ ಸಿಗಲು ಮತ್ತೊಂದಷ್ಟು ದಿನಗಳವರೆಗೆ ಕಾಯಲೇಬೇಕಾಗುತ್ತದೆ.

Published On - 8:11 am, Tue, 26 May 26

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರೇವತಿ ನಕ್ಷತ್ರಕ್ಕೆ ಶನಿ ಎಂಟ್ರಿ!
ರೇವತಿ ನಕ್ಷತ್ರಕ್ಕೆ ಶನಿ ಎಂಟ್ರಿ!
ಇಂದು ಹನುಮನಿಗೆ ಬೆಲ್ಲದ ದೀಪ ಹಚ್ಚಿದರೆ ಈ ರಾಶಿಯವರಿಗೆ ಭರ್ಜರಿ ಅದೃಷ್ಟ!
ಇಂದು ಹನುಮನಿಗೆ ಬೆಲ್ಲದ ದೀಪ ಹಚ್ಚಿದರೆ ಈ ರಾಶಿಯವರಿಗೆ ಭರ್ಜರಿ ಅದೃಷ್ಟ!
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ