AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs SRH: ಸತತ ಸೋಲುಗಳಿಂದ ಕಂಗೆಟ್ಟು 7 ವರ್ಷಗಳ ಇತಿಹಾಸ ಬದಲಿಸಿದ ಹಾರ್ದಿಕ್ ಪಾಂಡ್ಯ

MI vs SRH:ಐಪಿಎಲ್ 2026 ರಲ್ಲಿ ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನ ನೀಡಿದ್ದು, ಏಳು ಪಂದ್ಯಗಳಲ್ಲಿ ಐದು ಸೋತಿದೆ. ತಂಡದ ನಾಯಕ ಹಾರ್ದಿಕ್ ಪಾಂಡ್ಯ ಸನ್‌ರೈಸರ್ಸ್ ವಿರುದ್ಧ ಟಾಸ್ ಗೆದ್ದು ಏಳು ವರ್ಷಗಳ ನಂತರ ವಾಂಖೆಡೆಯಲ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ರೋಹಿತ್ ಶರ್ಮಾ ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ, ಮುಂದಿನ ಎರಡು ಪಂದ್ಯಗಳಲ್ಲಿ ಅವರು ಆಡದಿರುವುದು ಖಚಿತವಾಗಿದೆ.

MI vs SRH: ಸತತ ಸೋಲುಗಳಿಂದ ಕಂಗೆಟ್ಟು 7 ವರ್ಷಗಳ ಇತಿಹಾಸ ಬದಲಿಸಿದ ಹಾರ್ದಿಕ್ ಪಾಂಡ್ಯ
Hardik Pandya
ಪೃಥ್ವಿಶಂಕರ
|

Updated on:Apr 29, 2026 | 8:13 PM

Share

ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ 2026 ರ ಐಪಿಎಲ್​ನಲ್ಲಿ (IPL 2026) ಒಂದೇ ಒಂದು ಗೆಲುವು ಸಾಧಿಸುವುದು ಕಷ್ಟಕರವಾದ ಕೆಲಸವಾಗಿದೆ. ಹಾರ್ದಿಕ್ ಪಾಂಡ್ಯ (Hardik Pandya) ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಈ ಆವೃತ್ತಿಯ ಮೊದಲಾರ್ಧದಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ಏಳು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಸೋತಿದೆ. ಪರಿಣಾಮವಾಗಿ, ತಂಡವು ಗೆಲ್ಲಲು ಎಲ್ಲಾ ಪ್ರಯತ್ನಗಳನ್ನು ಮಾಡಬೇಕಾಗಿರುವುದರ ಜೊತೆಗೆ, ತಂಡದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗಿದೆ. ಅದರಂತೆ ಸನ್‌ರೈಸರ್ಸ್ ವಿರುದ್ಧದ ಪಂದ್ಯಕ್ಕೆ ಮುಂಬೈ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಇದರ ಜೊತೆಗೆ ಈ ಪಂದ್ಯದಲ್ಲಿ ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಅಚ್ಚರಿಯ ನಿರ್ಧಾರ ತೆಗೆದುಕೊಳ್ಳುವ ಮೂಲಕ ಏಳು ವರ್ಷಗಳ ಇತಿಹಾಸ ಬದಲಿಸಿದ್ದಾರೆ.

7 ವರ್ಷಗಳ ನಂತರ ಅಚ್ಚರಿಯ ನಿರ್ಧಾರ

ಏಪ್ರಿಲ್ 29 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಪಾಂಡ್ಯ ಅವರ ಈ ನಿರ್ಧಾರ ಎಲ್ಲರನ್ನು ಅಚ್ಚರಿಗೊಳಿಸಿತು. ಏಕೆಂದರೆ ವಾಂಖೆಡೆ ಮೈದಾನದಲ್ಲಿ ಟಾಸ್ ಗೆದ್ದ ನಾಯಕನೊಬ್ಬ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವುದು ಬಹಳ ಅಪರೂಪ. ಆದಾಗ್ಯೂ, ಮುಂಬೈ ವಿಷಯದಲ್ಲಿ, ಇದು ಏಳು ವರ್ಷಗಳ ನಂತರ ಸಂಭವಿಸಿದೆ. ಮುಂಬೈ ತಂಡವು ಕೊನೆಯ ಬಾರಿಗೆ ವಾಂಖೆಡೆಯಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು ಐಪಿಎಲ್ 2019 ರಲ್ಲಿ.

ಹಾರ್ದಿಕ್ ನಿರ್ಧಾರ ಎಷ್ಟು ಸರಿ ಎಂಬುದು ಪಂದ್ಯದ ನಂತರವೇ ತಿಳಿಯಲಿದೆ. ಮುಂಬೈ ತಂಡವು ತವರಿನಲ್ಲಿ ಸತತ ಮೂರು ಸೋಲುಗಳನ್ನು ಅನುಭವಿಸಿದೆ. ಇಲ್ಲಿ ಕೊನೆಯ ಸೋಲು ಮುಂಬೈಗೆ ಅತ್ಯಂತ ಆಘಾತಕಾರಿ ಮತ್ತು ನಿರಾಶಾದಾಯಕವಾಗಿತ್ತು. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದಿದ್ದ ಹಿಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಚೆನ್ನೈ 207 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ್ದ ಮುಂಬೈ ಕೇವಲ 104 ರನ್‌ಗಳಿಗೆ ಆಲೌಟ್ ಆಗಿತ್ತು. ಇದು ಮುಂಬೈ ತಂಡದ ತವರಿನಲ್ಲಿ ಅತ್ಯಂತ ಹೀನಾಯ ಸೋಲಾಗಿತ್ತು.

ರೋಹಿತ್ ಇನ್ನೆಷ್ಟು ಪಂದ್ಯಗಳಿಗೆ ಅಲಭ್ಯ?

ಟಾಸ್ ಬಳಿಕ ಮಾತನಾಡಿದ ಹಾರ್ದಿಕ್ ಪಾಂಡ್ಯ, ರೋಹಿತ್ ಕಂಬ್ಯಾಕ್ ಬಗ್ಗೆ ಅಚ್ಚರಿಯ ಮಾಹಿತಿ ನೀಡಿದರು. ರೋಹಿತ್ ಶರ್ಮಾ ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ. ಅವರು ತಂಡಕ್ಕೆ ಮರಳಲು ಕನಿಷ್ಠ ಎರಡು ಪಂದ್ಯಗಳು ಬೇಕಾಗಬಹುದು ಎಂದರು. ಇದರರ್ಥ ರೋಹಿತ್ ಶರ್ಮಾ ಮೇ 10 ರಂದು ಆರ್​ಸಿಬಿ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಇದರ ನಡುವೆ ಮುಂಬೈ, ಸಿಎಸ್​ಕೆ ಹಾಗೂ ಲಕ್ನೋ ವಿರುದ್ಧ ಪಂದ್ಯಗಳನ್ನಾಡಲಿದೆ. ಆ ಪಂದ್ಯಗಳಲ್ಲಿ ರೋಹಿತ್ ಆಡದಿರುವುದು ಖಚಿತವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:12 pm, Wed, 29 April 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!