Hardik Pandya: ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಶಾಕ್: ಪತ್ನಿ ನತಾಶ ಜೊತೆ ಬಿರುಕು: ಡಿವೋರ್ಸ್​ಗೆ ಮುಂದಾದ ಸ್ಟಾರ್ ಆಲ್ರೌಂಡರ್?

Hardik Pandya - Natasa Stankovic divorce: ಹಾರ್ದಿಕ್ ಪಾಂಡ್ಯ ವೈಯಕ್ತಿಕ ಜೀವನದಲ್ಲಿ ದೊಡ್ಡ ಸಮಸ್ಯೆಗಳು ತಲೆದೋರಿದಂತಿದೆ. ಹಾರ್ದಿಕ್ ಮತ್ತು ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ನಡುವೆ ಎಲ್ಲವೂ ಸರಿಯಿಲ್ಲ ಎಂಬಂತೆ ಗೋಚರಿಸುತ್ತಿದೆ. ಇವರಿಬ್ಬರ ನಡುವೆ ಮನಸ್ತಾಪವಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Hardik Pandya: ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಶಾಕ್: ಪತ್ನಿ ನತಾಶ ಜೊತೆ ಬಿರುಕು: ಡಿವೋರ್ಸ್​ಗೆ ಮುಂದಾದ ಸ್ಟಾರ್ ಆಲ್ರೌಂಡರ್?
Hardik Pandya - Natasa Stankovic divorce
Follow us
|

Updated on: May 24, 2024 | 9:34 AM

ಐಪಿಎಲ್ 2024 ಮುಂಬೈ ಇಂಡಿಯನ್ಸ್ ಪಾಲಿಗೆ ಅತ್ಯಂತ ಕೆಟ್ಟ ಟೂರ್ನಿ ಎಂದೇ ಹೇಳಬಹುದು. ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದಲ್ಲಿ ಎಂಐ ಅತ್ಯಂತ ಕಳಪೆ ಪ್ರದರ್ಶನ ತೋರಿ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಸದ್ಯ ಹಾರ್ದಿಕ್ ಪಾಂಡ್ಯ ಅವರು ಕ್ರಿಕೆಟ್ ಜೀವನದಲ್ಲಿ ಕೆಟ್ಟ ಸಮಯವನ್ನು ಕಳೆದಯುತ್ತಿದ್ದಾರೆ ಎಂದೂ ಹೇಳಬಹುದು. ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ವಹಿಸಿಕೊಂಡಾಗಿನಿಂದ ಹಾರ್ದಿಕ್ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಅದು ಯಾವುದೂ ನಡೆಯಲಿಲ್ಲ. ಐದು ಬಾರಿ ಪ್ರಶಸ್ತಿ ಗೆದ್ದಿರುವ ಮುಂಬೈ ಲೀಗ್ ಸುತ್ತಿನಲ್ಲೇ ಹೊರಬಿತ್ತು. ಇವೆಲ್ಲದರ ನಡುವೆ ಪಾಂಡ್ಯಗೆ ಮತ್ತೊಂದು ಆಘಾತ ಉಂಟಾಗಿದೆ.

ಹಾರ್ದಿಕ್ ಪಾಂಡ್ಯ ವೈಯಕ್ತಿಕ ಜೀವನದಲ್ಲಿ ದೊಡ್ಡ ಸಮಸ್ಯೆಗಳು ತಲೆದೋರಿದಂತಿದೆ. ಹಾರ್ದಿಕ್ ಮತ್ತು ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ನಡುವೆ ಎಲ್ಲವೂ ಸರಿಯಿಲ್ಲ ಎಂಬಂತೆ ಗೋಚರಿಸುತ್ತಿದೆ. ಇವರಿಬ್ಬರ ನಡುವೆ ಮನಸ್ತಾಪವಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇವರಿಬ್ಬರು ಬೇರ್ಪಟ್ಟಿದ್ದಾರೆ ಎಂಬ ಸುದ್ದಿ ಕೂಡ ಕೇಳಿಬರುತ್ತಿದೆ. 2020 ರಲ್ಲಿ ವಿವಾಹವಾದ ಹಾರ್ದಿಕ್-ನತಾಶಾ ಕ್ರಿಕೆಟ್‌ ಲೋಕದಲ್ಲಿ ಹೆಚ್ಚು ಸುದ್ದಿಯಲ್ಲಿರುವ ಜೋಡಿ. ಸೋಷಿಯಲ್ ಮೀಡಿಯಾದಲ್ಲಿ ಇವರಿಬ್ಬರು ಜೊತೆಗೆ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಅಗಸ್ತ್ಯ ಎಂಬ ಮಗ ಕೂಡ ಇದ್ದಾನೆ. ಆದರೆ, ಇವರ ಸಂಬಂಧದ ಬಗ್ಗೆ ವದಂತಿಗಳು ಹಬ್ಬಿವೆ.

ಚೆನ್ನೈ ವಿರುದ್ಧ ಗೆದ್ದ ಬಳಿಕ ಆರ್​ಸಿಬಿಯಿಂದ ಬೆಳಗಿನ ಜಾವ 5 ಗಂಟೆವರೆಗೆ ಪಾರ್ಟಿ: ಶಾಕಿಂಗ್

ನತಾಶ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡ ಫೋಟೋ:

View this post on Instagram

A post shared by @natasastankovic__

View this post on Instagram

A post shared by @natasastankovic__

ಐಪಿಎಲ್ 2024 ರ ಸಂಪೂರ್ಣ ಋತುವಿನಲ್ಲಿ ನತಾಶಾ ಮೈದಾನದಲ್ಲಿ ಕಾಣಿಸಿಕೊಂಡಿರಲಿಲ್ಲ. ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ನಾಯಕತ್ವ ವಹಿಸಿದ್ದರೂ, ನತಾಶಾ ಒಂದೇ ಒಂದು ಪಂದ್ಯ ವೀಕ್ಷಣೆಗೆ ಬಂದಿಲ್ಲ. ನತಾಶಾ ಏಕೆ ಮೈದಾನಕ್ಕೆ ಬಂದಿಲ್ಲ ಎಂಬ ಪ್ರಶ್ನೆಗಳಿವೆ. ಮಾರ್ಚ್ 4 ನತಾಶಾ ಅವರ ಜನ್ಮದಿನ. ಆಗ ಹಾರ್ದಿಕ್ ಪಾಂಡ್ಯ ಸೋಷಿಯಲ್ ಮೀಡಿಯಾದಲ್ಲೂ ಪತ್ನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿರಲಿಲ್ಲ. ಇದು ಬ್ರೇಕಪ್ ವದಂತಿಗಳಿಗೆ ಮತ್ತಷ್ಟು ಬಲ ನೀಡಿದೆ.

ಪೋಸ್ಟ್ ಮ್ಯಾಚ್​ನಲ್ಲಿ ಆರ್​ಸಿಬಿ ಸೋಲಿಗೆ ನಾಯಕ ಡುಪ್ಲೆಸಿಸ್ ದೂರಿದ್ದು ಯಾರನ್ನ?

View this post on Instagram

A post shared by @natasastankovic__

ಮತ್ತೊಂದೆಡೆ, ನತಾಶಾ ತನ್ನ ಇನ್​ಸ್ಟಾಗ್ರಾಮ್ ಬಯೋದಿಂದ ಪಾಂಡ್ಯ ಉಪನಾಮವನ್ನು ತೆಗೆದುಹಾಕಿದ್ದಾರೆ. ಅಲ್ಲದೇ ಕಳೆದ ಕೆಲವು ದಿನಗಳಿಂದ ಹಾರ್ದಿಕ್ ಜೊತೆಗಿನ ಫೋಟೋಗಳು ಶೇರ್ ಆಗುತ್ತಿಲ್ಲ. ಹೀಗಾಗಿ ಇವರಿಬ್ಬರು ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಆದರೆ, ಈ ಬಗ್ಗೆ ಇಬ್ಬರೂ ಅಧಿಕೃತ ಮಾಹಿತಿ ನೀಡಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ