IPL 2025: ಗೆದ್ದ ಬಳಿಕ ಕನ್ನಡಿಗನನ್ನು ಹಾಡಿ ಹೊಗಳಿದ ಹಾರ್ದಿಕ್ ಪಾಂಡ್ಯ

|

Updated on: Apr 14, 2025 | 1:24 PM

IPL 2025 MI vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 29ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 205 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 19 ಓವರ್​ಗಳಲ್ಲಿ 193 ರನ್​ಗಳಿಸಿ ಆಲೌಟ್ ಆಗಿದೆ.

IPL 2025: ಗೆದ್ದ ಬಳಿಕ ಕನ್ನಡಿಗನನ್ನು ಹಾಡಿ ಹೊಗಳಿದ ಹಾರ್ದಿಕ್ ಪಾಂಡ್ಯ
Hardik Pandya
Follow us on

IPL 2025: ಐಪಿಎಲ್ ಸೀಸನ್-18 ರಲ್ಲಿ ಮುಂಬೈ ಇಂಡಿಯನ್ಸ್ ತಂಡವು 2ನೇ ಗೆಲುವು ದಾಖಲಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಡೆಲ್ಲಿ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಮುಂಬೈ ಇಂಡಿಯನ್ಸ್ ತಂಡವು ತಿಲಕ್ ವರ್ಮಾ (59) ಅವರ ಅರ್ಧಶತಕದ ನೆರವಿನಿಂದ 20 ಓವರ್​ಗಳಲ್ಲಿ 205 ರನ್​ ಕಲೆಹಾಕಿತು.

206 ರನ್​ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆದರೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕನ್ನಡಿಗ ಕರುಣ್ ನಾಯರ್ ವಿಸ್ಪೋಟಕ ಇನಿಂಗ್ಸ್ ಆಡಿದರು. ಕೇವಲ 40 ಎಸೆತಗಳನ್ನು ಎದುರಿಸಿದ ಕರುಣ್ 5 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 89 ರನ್ ಚಚ್ಚಿದರು.

ಪರಿಣಾಮ ಡೆಲ್ಲಿ ಕ್ಯಾಪಿಟಲ್ಸ್ ತಂಡವು 14 ಓವರ್​ಗಳಲ್ಲೇ 150 ರನ್​ಗಳ ಗಡಿದಾಟಿತು. ಆದರೆ ಆ ಬಳಿಕ ನಾಟಕೀಯ ಕುಸಿತಕ್ಕೊಳಗಾಗಿ 19 ಓವರ್​ಗಳಲ್ಲಿ 193 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 12 ರನ್​ಗಳ ರೋಚಕ ಜಯ ಸಾಧಿಸಿದೆ.

ಇದನ್ನೂ ಓದಿ
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಈ ಗೆಲುವಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ತಂಡದ ಯಶಸ್ಸಿಗೆ ಸಂತಸ ವ್ಯಕ್ತಪಡಿಸಿದರು. ಗೆಲುವು ಯಾವಾಗಲೂ ವಿಶೇಷ, ವಿಶೇಷವಾಗಿ ಈ ರೀತಿಯ ಗೆಲುವುಗಳು ತುಂಬಾ ಖುಷಿ ನೀಡುತ್ತದೆ. ಏಕೆಂದರೆ ಒಂದು ಹಂತದಲ್ಲಿ ನಾವು ಪಂದ್ಯವನ್ನು ಕಳೆದುಕೊಂಡಿದ್ದೆವೆ.

ಕರುಣ್ ನಾಯರ್ ಬ್ಯಾಟಿಂಗ್ ಮಾಡಿದ ರೀತಿ ಅದ್ಭುತವಾಗಿತ್ತು. ಅವರ ಸಿಡಿಲಬ್ಬರದಿಂದಾಗಿ ಪಂದ್ಯವೇ ಕೈ ತಪ್ಪಿ ಹೋಯಿತು ಎಂದೇ ಭಾವಿಸಿದ್ದೆ. ಅಂತಹದೊಂದು ಇನಿಂಗ್ಸ್ ಅವರು ಆಡಿದ್ದರು ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಇದಾಗ್ಯೂ ಕರ್ಣ್ ಶರ್ಮಾ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದರು. ಬೌಂಡರಿ ಲೈನ್​ಗಳು ಕೇವಲ 60 ಮೀಟರ್​ ಉದ್ದವಿರುವಾಗ ಕೆಲ ಎಸೆತಗಳನ್ನು ಎಸೆಯಲು ದೈರ್ಯ ಬೇಕಿರುತ್ತದೆ. ಅದನ್ನು ಕರ್ಣ್ ಶರ್ಮಾ ಮಾಡಿ ತೋರಿಸಿದರು. ಇದರಿಂದಾಗಿ ನಾವು ಕಂಬ್ಯಾಕ್ ಮಾಡಲು ಸಾಧ್ಯವಾಯಿತು.

ಇದನ್ನೂ ಓದಿ: ಮೋಸದಾಟದ ಡೌಟ್… ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್

ಒಂದೆರಡು ವಿಕೆಟ್‌ಗಳು ಪಂದ್ಯದ ಚಿತ್ರಣ ಬದಲಾಯಿಸುತ್ತವೆ ಎಂದು ನಮಗೆ ತಿಳಿದಿತ್ತು. ಇದು ಈ ಪಂದ್ಯದಲ್ಲೂ ಸಂಭವಿಸಿದೆ. ಇಂತಹ ಗೆಲುವುಗಳು ಇಡೀ ತಂಡದ ಮನಸ್ಥಿತಿಯನ್ನು ಬದಲಿಸುತ್ತದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ ಭರ್ಜರಿ ಪ್ರದರ್ಶನ ನೀಡುವ ವಿಶ್ವಾಸವಿದೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

 

Published On - 1:23 pm, Mon, 14 April 25