AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಸಿಬಿಗೆ ಬರ್ತಾರೆ ಪಾಂಡ್ಯ? ದಿನೇಶ್ ಕಾರ್ತಿಕ್ ಜೊತೆಗಿನ ಫೋಟೋದ ಅಸಲಿ ಕಥೆಯೇ ಬೇರೆ

ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ RCB ಕೋಚ್‌ಗಳೊಂದಿಗಿನ ವೈರಲ್ ಫೋಟೋದಿಂದ ಕ್ರಿಕೆಟ್ ವಲಯದಲ್ಲಿ ಭಾರಿ ಸಂಚಲನ ಮೂಡಿದೆ. ಇದು ಹಾರ್ದಿಕ್ RCB ಸೇರಲು ಸಿದ್ಧರಾಗಿದ್ದಾರೆಯೇ ಎಂಬ ಅನುಮಾನಗಳಿಗೆ ಕಾರಣವಾಗಿದೆ. ಆದರೆ, ಈ ಫೋಟೋ AI ಸೃಷ್ಟಿಯೇ ಅಥವಾ ಹಳೆಯ ಚಿತ್ರವೇ ಎಂಬ ಚರ್ಚೆಗಳು ನಡೆದಿವೆ. ಮುಂಬೈನಲ್ಲಿ ಹಾರ್ದಿಕ್ ಕಳಪೆ ಪ್ರದರ್ಶನ ನೀಡಿದ ಕಾರಣ ತಂಡ ತೊರೆಯುವ ವದಂತಿಗಳೂ ಇವೆ.

ಆರ್‌ಸಿಬಿಗೆ ಬರ್ತಾರೆ ಪಾಂಡ್ಯ? ದಿನೇಶ್ ಕಾರ್ತಿಕ್ ಜೊತೆಗಿನ ಫೋಟೋದ ಅಸಲಿ ಕಥೆಯೇ ಬೇರೆ
ಹಾರ್ದಿಕ್​, ಆ್ಯಂಡಿ, ದಿನೇಶ್
ರಾಜೇಶ್ ದುಗ್ಗುಮನೆ
|

Updated on: Jun 04, 2026 | 11:05 AM

Share

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ  ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಹಾಗೂ ಬ್ಯಾಟಿಂಗ್ ಕೋಚ್, ಮೆಂಟರ್ ದಿನೇಶ್ ಕಾರ್ತಿಕ್ ಅವರೊಂದಿಗೆ ಮಾತನಾಡುತ್ತಿರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ಆರ್‌ಸಿಬಿ ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದ ಕೆಲವೇ ದಿನಗಳಲ್ಲಿ ಈ ಫೋಟೋ ಹೊರಬಂದಿರುವುದರಿಂದ, ಹಾರ್ದಿಕ್ ಪಾಂಡ್ಯ ಮುಂದಿನ ಸೀಸನ್‌ಗೆ ಬೆಂಗಳೂರು ತಂಡ ಸೇರಲಿದ್ದಾರಾ ಎಂಬ ದೊಡ್ಡ ಮಟ್ಟದ ಚರ್ಚೆ ಮತ್ತು ವದಂತಿಗಳು ಕ್ರಿಕೆಟ್ ವಲಯದಲ್ಲಿ ಶುರುವಾಗಿವೆ.

ಹಾರ್ದಿಕ್ ಪಾಂಡ್ಯ ಮುಂಬೈನಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ಕ್ಯಾಪ್ಟನ್ ಆಗಿಯೂ ವಿಫಲರಾಗಿದ್ದಾರೆ. ಅವರು ಮುಂಬೈ ತಂಡ ತೊರೆಯುತ್ತಾರೆ ಎನ್ನಲಾಗಿದೆ. ಹೀಗಿರುವಾಗಲೇ ಈ ಫೋಟೋ ವೈರಲ್ ಆಗಿದೆ. ಆದರೆ, ಈ ಭೇಟಿಗೂ, ಐಪಿಎಲ್ ಟ್ರೇಡಿಂಗ್​ಗೆ ಯಾವುದೇ ಸಂಬಂಧವಿಲ್ಲ ಎನ್ನಲಾಗಿದೆ. ಈ ಫೋಟೋದ ಬಗ್ಗೆ ಎರಡು ಪ್ರಮುಖ ಅನುಮಾನಗಳು ವ್ಯಕ್ತವಾಗಿವೆ.

ಇದು AI ಫೋಟೋ?

ಸಾಮಾಜಿಕ ಜಾಲತಾಣಗಳಲ್ಲಿ ಹಲವು ಬಳಕೆದಾರರು ಈ ಫೋಟೋದಲ್ಲಿರುವ ಹಲವಾರು ತಪ್ಪುಗಳನ್ನು ಎತ್ತಿ ತೋರಿಸಿದ್ದಾರೆ. ಇದು ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಲಾದ ನಕಲಿ ಫೋಟೋ ಇರಬಹುದು ಎಂದು ಶಂಕಿಸಲಾಗಿದೆ. ಫೋಟೋದಲ್ಲಿ ಹಾರ್ದಿಕ್ ಪಾಂಡ್ಯ ಅವರ ಹೇರ್‌ಸ್ಟೈಲ್ ಇತ್ತೀಚಿನ ಐಪಿಎಲ್ ಪಂದ್ಯಗಳಲ್ಲಿದ್ದ ಶೈಲಿಗಿಂತ ಸಂಪೂರ್ಣ ಭಿನ್ನವಾಗಿದೆ. ಇದರ ಜೊತೆಗೆ, ಈ ಫೋಟೋ ವೈರಲ್ ಆದ ದಿನವೇ ಹಾರ್ದಿಕ್ ಪಾಂಡ್ಯ ಅವರ ಗರ್ಲ್‌ಫ್ರೆಂಡ್ ಮಹಿಹಿಕಾ ಶರ್ಮಾ ಅವರು ಫ್ರಾನ್ಸ್ ಪ್ರವಾಸದ ಫೋಟೋಗಳನ್ನು ಹಂಚಿಕೊಂಡಿದ್ದರು. ಮೇ 24 ರಂದೇ ಹಾರ್ದಿಕ್ ಮುಂಬೈ ಬಿಟ್ಟು ಹೊರಟಿದ್ದರಿಂದ, ಅವರು ಆರ್‌ಸಿಬಿ ಕೋಚ್‌ಗಳನ್ನು ಭೇಟಿಯಾಗಿರುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.

ಇದು ಹಳೆಯ ಫೋಟೋ ಇರಬಹುದು!

ಈ ವೈರಲ್ ಫೋಟೋ ಕುರಿತು ಮತ್ತೊಂದು ಆಸಕ್ತಿದಾಯಕ ಆ್ಯಂಗಲ್ ಕೂಡ ಕೇಳಿಬರುತ್ತಿದೆ. ಫೋಟೋದಲ್ಲಿ ಆರ್‌ಸಿಬಿ ಹೆಡ್ ಕೋಚ್ ಆ್ಯಂಡಿ ಫ್ಲವರ್ ಅವರ ತಲೆಯಲ್ಲಿ ದಟ್ಟವಾದ ಕೂದಲು ಕಾಣಿಸುತ್ತಿದೆ. ಆದರೆ, ಪ್ರಸ್ತುತ ಆ್ಯಂಡಿ ಫ್ಲವರ್ ಅವರ ತಲೆಯಲ್ಲಿ ಕೂದಲು ತೀರಾ ಕಡಿಮೆ ಇದೆ. ಈ ಪ್ರಮುಖ ವ್ಯತ್ಯಾಸವನ್ನು ಗಮನಿಸಿರುವ ಕ್ರಿಕೆಟ್ ಪ್ರೇಮಿಗಳು, ಇದು ಈಗಿನ ಫೋಟೋ ಅಲ್ಲವೇ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕಪ್ ಗೆದ್ದ ಖುಷಿಯಲ್ಲಿದ್ದ ರಜತ್​​ಗೆ ಹೊಸ ಲೀಗ್​​ನ ಮೊದಲ ಪಂದ್ಯದಲ್ಲೇ ಹೀನಾಯ ಸೋಲಿನಾಘಾತ

ಮುಂಬೈ ಇಂಡಿಯನ್ಸ್‌ನಿಂದ ಹೊರನಡೆಯಲಿರುವ ಹಾರ್ದಿಕ್?

ಫೋಟೋ ವದಂತಿ ಏನೇ ಇರಲಿ, ಮುಂಬೈ ಇಂಡಿಯನ್ಸ್ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಅವರ ನಾಯಕತ್ವದ ದಿನಗಳು ಮುಗಿಯುತ್ತಾ ಬಂದಿರುವುದು ಮಾತ್ರ ನಿಜ ಎನ್ನಲಾಗುತ್ತಿದೆ. ಈ ಸೀಸನ್‌ನಲ್ಲಿ ಮುಂಬೈ ಪ್ಲೇಆಫ್ ತಲುಪಲು ವಿಫಲವಾಗಿತ್ತು. ಡ್ರೆಸ್ಸಿಂಗ್ ರೂಮ್‌ನಲ್ಲಿ ಹಿರಿಯ ಆಟಗಾರರ ಬೆಂಬಲ ಸಿಗದ ಕಾರಣ, ಸೀಸನ್‌ನ ಮಧ್ಯದಲ್ಲೇ ಹಾರ್ದಿಕ್ ತಾವು ಮುಂಬೈ ಫ್ರಾಂಚೈಸಿಯಿಂದ ಹೊರನಡೆಯುವ ನಿರ್ಧಾರವನ್ನು ಮ್ಯಾನೇಜ್‌ಮೆಂಟ್‌ಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಹೆಚ್ಚಿನ ಕ್ರೀಡಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ