AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ತವರಿಗೆ ಮರಳಿದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಡ್ಯಾನ್ಸ್

T20 World Cup 2024: ಟಿ20 ವಿಶ್ವಕಪ್ ಫೈನಲ್ ಪಂದ್ಯವು ಶನಿವಾರ ಮುಗಿದರೂ, ಭಾರತ ತಂಡವು 4 ದಿನಗಳ ಬಳಿಕ ತವರಿಗೆ ಮರಳಿದೆ. ಇದಕ್ಕೆ ಮುಖ್ಯ ಕಾರಣ ಫೈನಲ್ ಮುಕ್ತಾಯದ ಬೆನ್ನಲ್ಲೇ ಬಾರ್ಬಡೋಸ್​ನಲ್ಲಿ ಬೆರಿಲ್ ಚಂಡಮಾರುತ ಶುರುವಾಗಿದ್ದು. ಬಿರುಗಾಳಿ ಸಹಿತದ ಭಾರೀ ಮಳೆಯಿಂದಾಗಿ ವಿಮಾನಯಾನಗಳು ಬಂದ್ ಆಗಿದ್ದವು. ಹೀಗಾಗಿ ಟೀಮ್ ಇಂಡಿಯಾದ ಹಿಂತಿರುಗುವಿಕೆಯು ವಿಳಂಬವಾಗಿದೆ.

VIDEO: ತವರಿಗೆ ಮರಳಿದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಡ್ಯಾನ್ಸ್
Rohit Sharma
ಝಾಹಿರ್ ಯೂಸುಫ್
|

Updated on:Jul 04, 2024 | 9:13 AM

Share

ಟಿ20 ವಿಶ್ವಕಪ್​ನೊಂದಿಗೆ (T20 World Cup 2024) ಭಾರತ ತಂಡ ದೆಹಲಿಗೆ ಆಗಮಿಸಿದೆ. ಬುಧವಾರ ಬಾರ್ಬಡೋಸ್​ನಿಂದ ಏರ್​ ಇಂಡಿಯಾ ಚಾರ್ಟರ್ಡ್ ವಿಮಾನದಲ್ಲಿ ಹೊರಟಿದ್ದ ಟೀಮ್ ಇಂಡಿಯಾ ಆಟಗಾರರು ಇಂದು (ಜೂ.4) ಮುಂಜಾನೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ವಿಮಾನ ನಿಲ್ದಾಣದಿಂದ ವಿಶೇಷ ಬಸ್​ನಲ್ಲಿ ಟೀಮ್ ಇಂಡಿಯಾ ಆಟಗಾರರು ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ ತೆರಳಿದರು. ಈ ವೇಳೆ ವಿಶ್ವ ಚಾಂಪಿಯನ್ನರನ್ನು ಸ್ವಾಗತಿಸಲು ಡೋಲು ಡಂಗುರದ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

ಇತ್ತ ಬಸ್​ನಿಂದ ಟೀಮ್ ಇಂಡಿಯಾ ಆಟಗಾರರು ಇಳಿಯುತ್ತಿದ್ದಂತೆ ಡೋಲು ಬಜಾನ ಶುರುವಾಗಿದೆ. ಇದೇ ವೇಳೆ ಟೀಮ್ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಕುಣಿಯಲಾರಂಭಿಸಿದರು. ಆ ಬಳಿಕ ಬಂದ ಸೂರ್ಯಕುಮಾರ್ ಯಾದವ್ ಹಾಗೂ ಯಶಸ್ವಿ ಜೈಸ್ವಾಲ್ ಕೂಡ ಸ್ಟೆಪ್ಸ್ ಹಾಕುವ ಮೂಲಕ ಗಮನ ಸೆಳೆದರು.

ಇನ್ನು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಕುಣಿಯುತ್ತಾ ಆಗಮಿಸಿದ್ದು ವಿಶೇಷವಾಗಿತ್ತು. ಹಾಗೆಯೇ ಭಾರತ ತಂಡ ವಿಕೆಟ್ ಕೀಪರ್ ರಿಷಭ್ ಪಂತ್ ಹಾಗೂ ಮೊಹಮ್ಮದ್ ಸಿರಾಜ್ ಕೂಡ ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರು. ಇದೀಗ ಭಾರತೀಯ ಆಟಗಾರರ ಸಂಭ್ರಮದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ಪಡೆದುಕೊಂಡಿದೆ.

ಟೀಮ್ ಇಂಡಿಯಾ ಆಟಗಾರರ ಡ್ಯಾನ್ಸ್ ವಿಡಿಯೋ:

ಸಂಜೆ ವಿಜಯೋತ್ಸವ:

ಗುರುವಾರ ಸಂಜೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ವಿಜಯೋತ್ಸವ ಆಚರಿಸಲಿದೆ. ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್‌ನಿಂದ ಮೆರವಣಿಗೆ ಮೂಲಕ ತೆರೆದ ಬಸ್​ನಲ್ಲಿ ಟೀಮ್ ಇಂಡಿಯಾ ವಾಂಖೆಡೆ ಸ್ಟೇಡಿಯಂಗೆ ಆಗಮಿಸಲಿದ್ದು, ಈ ಬಳಿಕ ಸ್ಟೇಡಿಯಂನಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಐವರು ಆಟಗಾರರು..!

ಈ ವಿಜಯೋತ್ಸವದ ಮೆರವಣಿಗೆಯನ್ನು ಸ್ಟಾರ್ ಸ್ಪೋರ್ಟ್ಸ್​ ಮತ್ತು ಸ್ಪೋರ್ಟ್ಸ್ 18 ಚಾನೆಲ್​ನಲ್ಲಿ ನೇರ ಪ್ರಸಾರ ಇರಲಿದೆ. ಹಾಗೆಯೇ ಜಿಯೋ ಸಿನಿಮಾ ಆ್ಯಪ್​ನಲ್ಲಿ ಈ ಕಾರ್ಯಕ್ರಮವನ್ನು ಲೈವ್ ವೀಕ್ಷಿಸಬಹುದು.

Published On - 9:10 am, Thu, 4 July 24

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!