VIDEO: ತವರಿಗೆ ಮರಳಿದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಡ್ಯಾನ್ಸ್

T20 World Cup 2024: ಟಿ20 ವಿಶ್ವಕಪ್ ಫೈನಲ್ ಪಂದ್ಯವು ಶನಿವಾರ ಮುಗಿದರೂ, ಭಾರತ ತಂಡವು 4 ದಿನಗಳ ಬಳಿಕ ತವರಿಗೆ ಮರಳಿದೆ. ಇದಕ್ಕೆ ಮುಖ್ಯ ಕಾರಣ ಫೈನಲ್ ಮುಕ್ತಾಯದ ಬೆನ್ನಲ್ಲೇ ಬಾರ್ಬಡೋಸ್​ನಲ್ಲಿ ಬೆರಿಲ್ ಚಂಡಮಾರುತ ಶುರುವಾಗಿದ್ದು. ಬಿರುಗಾಳಿ ಸಹಿತದ ಭಾರೀ ಮಳೆಯಿಂದಾಗಿ ವಿಮಾನಯಾನಗಳು ಬಂದ್ ಆಗಿದ್ದವು. ಹೀಗಾಗಿ ಟೀಮ್ ಇಂಡಿಯಾದ ಹಿಂತಿರುಗುವಿಕೆಯು ವಿಳಂಬವಾಗಿದೆ.

VIDEO: ತವರಿಗೆ ಮರಳಿದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಡ್ಯಾನ್ಸ್
Rohit Sharma
Follow us
|

Updated on:Jul 04, 2024 | 9:13 AM

ಟಿ20 ವಿಶ್ವಕಪ್​ನೊಂದಿಗೆ (T20 World Cup 2024) ಭಾರತ ತಂಡ ದೆಹಲಿಗೆ ಆಗಮಿಸಿದೆ. ಬುಧವಾರ ಬಾರ್ಬಡೋಸ್​ನಿಂದ ಏರ್​ ಇಂಡಿಯಾ ಚಾರ್ಟರ್ಡ್ ವಿಮಾನದಲ್ಲಿ ಹೊರಟಿದ್ದ ಟೀಮ್ ಇಂಡಿಯಾ ಆಟಗಾರರು ಇಂದು (ಜೂ.4) ಮುಂಜಾನೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ವಿಮಾನ ನಿಲ್ದಾಣದಿಂದ ವಿಶೇಷ ಬಸ್​ನಲ್ಲಿ ಟೀಮ್ ಇಂಡಿಯಾ ಆಟಗಾರರು ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ ತೆರಳಿದರು. ಈ ವೇಳೆ ವಿಶ್ವ ಚಾಂಪಿಯನ್ನರನ್ನು ಸ್ವಾಗತಿಸಲು ಡೋಲು ಡಂಗುರದ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

ಇತ್ತ ಬಸ್​ನಿಂದ ಟೀಮ್ ಇಂಡಿಯಾ ಆಟಗಾರರು ಇಳಿಯುತ್ತಿದ್ದಂತೆ ಡೋಲು ಬಜಾನ ಶುರುವಾಗಿದೆ. ಇದೇ ವೇಳೆ ಟೀಮ್ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಕುಣಿಯಲಾರಂಭಿಸಿದರು. ಆ ಬಳಿಕ ಬಂದ ಸೂರ್ಯಕುಮಾರ್ ಯಾದವ್ ಹಾಗೂ ಯಶಸ್ವಿ ಜೈಸ್ವಾಲ್ ಕೂಡ ಸ್ಟೆಪ್ಸ್ ಹಾಕುವ ಮೂಲಕ ಗಮನ ಸೆಳೆದರು.

ಇನ್ನು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಕುಣಿಯುತ್ತಾ ಆಗಮಿಸಿದ್ದು ವಿಶೇಷವಾಗಿತ್ತು. ಹಾಗೆಯೇ ಭಾರತ ತಂಡ ವಿಕೆಟ್ ಕೀಪರ್ ರಿಷಭ್ ಪಂತ್ ಹಾಗೂ ಮೊಹಮ್ಮದ್ ಸಿರಾಜ್ ಕೂಡ ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರು. ಇದೀಗ ಭಾರತೀಯ ಆಟಗಾರರ ಸಂಭ್ರಮದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ಪಡೆದುಕೊಂಡಿದೆ.

ಟೀಮ್ ಇಂಡಿಯಾ ಆಟಗಾರರ ಡ್ಯಾನ್ಸ್ ವಿಡಿಯೋ:

ಸಂಜೆ ವಿಜಯೋತ್ಸವ:

ಗುರುವಾರ ಸಂಜೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ವಿಜಯೋತ್ಸವ ಆಚರಿಸಲಿದೆ. ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್‌ನಿಂದ ಮೆರವಣಿಗೆ ಮೂಲಕ ತೆರೆದ ಬಸ್​ನಲ್ಲಿ ಟೀಮ್ ಇಂಡಿಯಾ ವಾಂಖೆಡೆ ಸ್ಟೇಡಿಯಂಗೆ ಆಗಮಿಸಲಿದ್ದು, ಈ ಬಳಿಕ ಸ್ಟೇಡಿಯಂನಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಐವರು ಆಟಗಾರರು..!

ಈ ವಿಜಯೋತ್ಸವದ ಮೆರವಣಿಗೆಯನ್ನು ಸ್ಟಾರ್ ಸ್ಪೋರ್ಟ್ಸ್​ ಮತ್ತು ಸ್ಪೋರ್ಟ್ಸ್ 18 ಚಾನೆಲ್​ನಲ್ಲಿ ನೇರ ಪ್ರಸಾರ ಇರಲಿದೆ. ಹಾಗೆಯೇ ಜಿಯೋ ಸಿನಿಮಾ ಆ್ಯಪ್​ನಲ್ಲಿ ಈ ಕಾರ್ಯಕ್ರಮವನ್ನು ಲೈವ್ ವೀಕ್ಷಿಸಬಹುದು.

Published On - 9:10 am, Thu, 4 July 24

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ