Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಟೀಮ್ ಇಂಡಿಯಾದಿಂದ ಔಟ್: ಐಪಿಎಲ್​ಗೆ ಫಿಟ್​

Hardik Pandya: ಈ ಬಾರಿಯ ಐಪಿಎಲ್​ನಲ್ಲಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದೆರಡು ಸೀಸನ್​ಗಳಲ್ಲಿ ಗುಜರಾತ್ ಟೈಟಾನ್ಸ್​ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಪಾಂಡ್ಯರನ್ನು ಟ್ರೇಡ್ ವಿಂಡೋ ಮೂಲಕ ಮುಂಬೈ ಇಂಡಿಯನ್ಸ್ ಖರೀದಿಸಿದೆ.

Hardik Pandya: ಟೀಮ್ ಇಂಡಿಯಾದಿಂದ ಔಟ್: ಐಪಿಎಲ್​ಗೆ ಫಿಟ್​
Hardik Pandya
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 28, 2023 | 6:32 AM

ಭಾರತ-ಅಫ್ಘಾನಿಸ್ತಾನ್ (India vs Afghanistan) ನಡುವಣ ಟಿ20 ಸರಣಿಯಿಂದ ಟೀಮ್ ಇಂಡಿಯಾದ ಸ್ಟಾರ್​​ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಹೊರಗುಳಿಯಲಿದ್ದಾರೆ. ಫಿಟ್​ನೆಸ್ ಸಮಸ್ಯೆಯ ಕಾರಣ ಮುಂಬರುವ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಇದಾಗ್ಯೂ ಐಪಿಎಲ್​ನಲ್ಲಿ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯುವುದು ಖಚಿತ ಎಂದು ವರದಿಯಾಗಿದೆ.

ಈ ಬಾರಿ ಏಕದಿನ ವಿಶ್ವಕಪ್​ನಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಪಾದದ ಗಾಯಕ್ಕೆ ತುತ್ತಾಗಿದ್ದ ಪಾಂಡ್ಯ ಆ ಬಳಿಕ ಯಾವುದೇ ಪಂದ್ಯವಾಡಿಲ್ಲ. ಇದೇ ಕಾರಣದಿಂದಾಗಿ ಆಸ್ಟ್ರೇಲಿಯಾ, ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು.

ಇದಾಗ್ಯೂ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೂಲಕ ಅವರು ಕಂಬ್ಯಾಕ್ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೀಗ ಟಿ20 ಸರಣಿಯಿಂದ ಹೊರಗುಳಿಯಲು ಪಾಂಡ್ಯ ನಿರ್ಧರಿಸಿದ್ದಾರೆ. ಅಲ್ಲದೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲು ಬಯಸಿದ್ದಾರೆ.

ಮತ್ತೊಂದೆಡೆ ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿ ವೇಳೆ ಗಾಯಗೊಂಡಿದ್ದರು. ಮೊಣಕಾಲಿನ ಗಾಯದ ಸಮಸ್ಯೆಗೆ ಒಳಗಾಗಿರುವ ಸೂರ್ಯ ಕೂಡ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹಾಗೆಯೇ ಹೆಬ್ಬೆರಳಿನ ಗಾಯಕ್ಕೆ ತುತ್ತಾಗಿರುವ ರುತುರಾಜ್ ಗಾಯಕ್ವಾಡ್ ಫಿಟ್​ನೆಸ್ ಹೊಂದಿದ್ದರೆ ಮಾತ್ರ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಲಿದ್ದಾರೆ.

ಭಾರತ-ಅಫ್ಘಾನಿಸ್ತಾನ್ ಸರಣಿ ವೇಳಾಪಟ್ಟಿ:

ಭಾರತ-ಅಫ್ಘಾನಿಸ್ತಾನ್ ನಡುವಣ ಟಿ20 ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯನ್ನು ಮೊಹಾಲಿ, ಇಂದೋರ್ ಹಾಗೂ ಬೆಂಗಳೂರಿನಲ್ಲಿ ಆಡಲಾಗುತ್ತದೆ. ಅದರಂತೆ ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…

ಜನವರಿ 11- ಮೊದಲ ಟಿ20 ಪಂದ್ಯ (ಮೊಹಾಲಿ) ಜನವರಿ 14- ಎರಡನೇ ಟಿ20 ಪಂದ್ಯ (ಇಂದೋರ್) ಜನವರಿ 17- ಮೂರನೇ ಟಿ20 ಪಂದ್ಯ (ಬೆಂಗಳೂರು)

ಹಾರ್ದಿಕ್ ಪಾಂಡ್ಯ ಕ್ಯಾಪ್ಟನ್:

ಈ ಬಾರಿಯ ಐಪಿಎಲ್​ನಲ್ಲಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದೆರಡು ಸೀಸನ್​ಗಳಲ್ಲಿ ಗುಜರಾತ್ ಟೈಟಾನ್ಸ್​ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಪಾಂಡ್ಯರನ್ನು ಟ್ರೇಡ್ ವಿಂಡೋ ಮೂಲಕ ಮುಂಬೈ ಇಂಡಿಯನ್ಸ್ ಖರೀದಿಸಿದೆ.

ಅಷ್ಟೇ ಅಲ್ಲದೆ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾರನ್ನು ಕೆಳಗಿಳಿಸಿ ಕ್ಯಾಪ್ಟನ್ ಪಟ್ಟ ನೀಡಲಾಗಿದೆ. ಅದರಂತೆ ಈ ಬಾರಿ ಮುಂಬೈ ಇಂಡಿಯನ್ಸ್ ತಂಡವು ಹಾರ್ದಿಕ್ ಪಾಂಡ್ಯ ಸಾರಥ್ಯದಲ್ಲಿ ಕಣಕ್ಕಿಳಿಯಲಿದೆ.

ಇದನ್ನೂ ಓದಿ: IPL 2024: ಹಾರ್ದಿಕ್ ಪಾಂಡ್ಯಗಾಗಿ 100 ಕೋಟಿ ರೂ. ನೀಡಿದ ಮುಂಬೈ ಇಂಡಿಯನ್ಸ್..!

ಮುಂಬೈ ಇಂಡಿಯನ್ಸ್ ತಂಡ​: ಹಾರ್ದಿಕ್ ಪಾಂಡ್ಯ (ನಾಯಕ) ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಎನ್. ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆಂಡಾರ್ಫ್ ,ರೊಮಾರಿಯೋ ಶೆಫರ್ಡ್, ರೊಮಾರಿಯೋ ಶೆಫರ್ಡ್. ಜೆರಾಲ್ಡ್ ಕೋಟ್ಝಿ , ದಿಲ್ಶನ್ ಮಧುಶಂಕ , ಶ್ರೇಯಸ್ ಗೋಪಾಲ್ , ನುವಾನ್ ತುಷಾರ , ನಮನ್ ಧೀರ್ , ಅನ್ಶುಲ್ ಕಾಂಬೋಜ್ , ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್