AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ಸರಣಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಅಲಭ್ಯ..!

India vs England: ಐರ್ಲೆಂಡ್ ವಿರುದ್ಧದ ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಜುಲೈ 1 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಮೊದಲಿಗೆ 5 ಮ್ಯಾಚ್​ಗಳ ಟಿ20 ಸರಣಿಯನ್ನು ಆಡಲಾಗುತ್ತದೆ. ಇದಾದ ಬಳಿಕ ಭಾರತ ಮತ್ತು ಇಂಗ್ಲೆಂಡ್ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.

ಇಂಗ್ಲೆಂಡ್ ಸರಣಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಅಲಭ್ಯ..!
Team IndiaImage Credit source: BCCI
ಝಾಹಿರ್ ಯೂಸುಫ್
|

Updated on: Jun 20, 2026 | 2:26 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜುಲೈ 1 ರಿಂದ ಶುರುವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗುಳಿಯಲಿದ್ದಾರೆ. ಗಾಯದ ಸಮಸ್ಯೆಯಿಂದ ಸಂಪೂರ್ಣ ಚೇತರಿಸಿಕೊಳ್ಳಲು ಪಾಂಡ್ಯ ಮತ್ತಷ್ಟು ಸಮಯ ತೆಗೆದುಕೊಳ್ಳಲಿದ್ದು, ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಗೆ ಅವರನ್ನು ಆಯ್ಕೆ ಮಾಡದಿರಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿದೆ.

2026ರ ಐಪಿಎಲ್ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಬೆನ್ನುನೋವಿನ ಸಮಸ್ಯೆಗೆ ಒಳಗಾಗಿದ್ದರು. ಈ ಸಮಸ್ಯೆಯ ಕಾರಣ ಅವರು ಮುಂಬೈ ಇಂಡಿಯನ್ಸ್ ತಂಡದ ಕೆಲ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು. ಇದಾಗ್ಯೂ ಅವರನ್ನು ಅಫ್ಘಾನಿಸ್ತಾನ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿತ್ತು.

ಆದರೆ ಸಂಪೂರ್ಣ ಫಿಟ್​ನೆಸ್ ಸಾಧಿಸದ ಕಾರಣ ಅಫ್ಘಾನಿಸ್ತಾನ್ ವಿರುದ್ಧದ ಏಕದಿನ ಸರಣಿಯಿಂದ ಅವರನ್ನು ಕೈ ಬಿಡಲಾಗಿತ್ತು. ಆದಾಗ್ಯೂ ಅವರು ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಅದರಂತೆ ಬೆಂಗಳೂರಿನ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರದಲ್ಲಿ ತರಬೇತಿ ಮತ್ತು ರಿಹ್ಯಾಬ್ ಪ್ರಕ್ರಿಯೆಗೆ ಒಳಗಾಗಿದ್ದರು.

ಆದರೀಗ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್​ನಲ್ಲಿ ನಡೆಸಲಾದ ಫಿಟ್​ನೆಸ್ ಟೆಸ್ಟ್​ನಲ್ಲಿ ಹಾರ್ದಿಕ್ ಪಾಂಡ್ಯ ಮತ್ತೆ ವಿಫಲರಾಗಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಅವರನ್ನು ಪರಿಗಣಿಸದಿರಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

10 ಓವರ್​ ಟಾರ್ಗೆಟ್:

ಮುಂಬರುವ ಏಕದಿನ ವಿಶ್ವಕಪ್​ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ಹಾರ್ದಿಕ್ ಪಾಂಡ್ಯ ಅವರ ಫಿಟ್​ನೆಸ್ ಟೆಸ್ಟ್​ ನಡೆಯುತ್ತಿದೆ. ಇಲ್ಲಿ ಮುಖ್ಯವಾಗಿ ಪಾಂಡ್ಯ ಅವರಿಗೆ 10 ಓವರ್​ಗಳ ಟಾರ್ಗೆಟ್ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಅಂದರೆ ಬೆನ್ನು ನೋವಿನ ಸಮಸ್ಯೆಯ ಕಾರಣ ಹಾರ್ದಿಕ್ ಪಾಂಡ್ಯಗೆ ದೀರ್ಘಾವಧಿಯವರೆಗೆ ಬೌಲಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ. ಇತ್ತೀಚಿನ ತರಬೇತಿ ಅವಧಿಗಳಲ್ಲಿ ಅವರು ಪೂರ್ಣ 10 ಓವರ್‌ಗಳ ಬೌಲಿಂಗ್ ಕೋಟಾವನ್ನು ಪೂರೈಸಲು ವಿಫಲರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ಕಾರಣದಿಂದಾಗಿ ಸಂಪೂರ್ಣ ಫಿಟ್​ನೆಸ್ ಸಾಧಿಸಿದ ಬಳಿಕ ಅವರನ್ನು ಆಲ್​ರೌಂಡರ್ ಆಗಿ ಏಕದಿನ ತಂಡಕ್ಕೆ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಅಂದರೆ ಮುಂಬರುವ ದಿನಗಳಲ್ಲಿ ಹಾರ್ದಿಕ್ ಪಾಂಡ್ಯ ಫಿಟ್​ನೆಸ್ ಸಾಧಿಸಿದರೆ 2027ರ ಏಕದಿನ ವಿಶ್ವಕಪ್ ಆಡುವುದು ಖಚಿತ.

ಇದರ ನಡುವೆ ನಡೆಯುವ ಟಿ20 ಸರಣಿಗಳ ವೇಳೆ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲು ಬಿಸಿಸಿಐ ಆಯ್ಕೆ ಸಮಿತಿ ಪ್ಲ್ಯಾನ್ ರೂಪಿಸಿದೆ. ಇದೇ ಕಾರಣದಿಂದಾಗಿ ಅವರನ್ನು ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಳಿಗೆ ಆಯ್ಕೆ ಮಾಡಲಾಗಿಲ್ಲ.  ಇನ್ನು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಶೀಘ್ರದಲ್ಲೇ ಭಾರತ ತಂಡವನ್ನು ಪ್ರಕಟಿಸಲಾಗುವುದು ಬಿಸಿಸಿಐ ತಿಳಿಸಿದೆ. ಈ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ: Virat Kohli: ಕಿಂಗ್ ಕೊಹ್ಲಿ ಕಂಬ್ಯಾಕ್ ಯಾವಾಗ?

ಇಂಗ್ಲೆಂಡ್ ಟಿ20 ಸರಣಿಗೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ,  ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ.

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್