AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ಕ್ರಿಕೆಟ್ ತಂಡಗಳನ್ನು ಏಕಕಾಲದಲ್ಲಿ ಕಣಕ್ಕಿಳಿಸುವ ಬೆಂಚ್ ಸಾಮರ್ಥ್ಯ ಟೀಂ ಇಂಡಿಯಾದಲ್ಲಿದೆ

Hardik Pandya: ವಿಶ್ವದ ಯಾವುದೇ ಪಂದ್ಯಾವಳಿಯನ್ನು ಗೆಲ್ಲಬಲ್ಲ ಎರಡು ಸ್ಪರ್ಧಾತ್ಮಕ ಅಂತರರಾಷ್ಟ್ರೀಯ ತಂಡಗಳನ್ನು ಆಯ್ಕೆದಾರರು ಆಯ್ಕೆ ಮಾಡಬಹುದು ಎಂದು ಬರೋಡಾ ಕ್ರಿಕೆಟಿಗ ಹೇಳಿಕೊಂಡಿದ್ದಾರೆ.

ನಾಲ್ಕು ಕ್ರಿಕೆಟ್ ತಂಡಗಳನ್ನು ಏಕಕಾಲದಲ್ಲಿ ಕಣಕ್ಕಿಳಿಸುವ ಬೆಂಚ್ ಸಾಮರ್ಥ್ಯ ಟೀಂ ಇಂಡಿಯಾದಲ್ಲಿದೆ
ಟೀಂ ಇಂಡಿಯಾ
TV9 Web
| Edited By: |

Updated on: Jul 24, 2021 | 2:46 PM

Share

ಟೀಂ ಇಂಡಿಯಾ ಅದ್ಭುತ ಬೆಂಚ್ ಸಾಮರ್ಥ್ಯ ಎಲ್ಲರನ್ನು ಅಚ್ಚರಿಗೊಳಿಸಿದೆ. ಪ್ರಸ್ತುತ, ಭಾರತದ ಎರಡು ಕ್ರಿಕೆಟ್ ತಂಡಗಳು ವಿವಿಧ ದೇಶಗಳ ಪ್ರವಾಸದಲ್ಲಿವೆ. ವಿರಾಟ್ ಕೊಹ್ಲಿ ನೇತೃತ್ವದ ತಂಡವು ಡರ್ಹಾಮ್ನಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ತಯಾರಿ ನಡೆಸುತ್ತಿದೆ. ಅದೇ ಸಮಯದಲ್ಲಿ, ಶಿಖರ್ ಧವನ್ ನೇತೃತ್ವದಲ್ಲಿ ಶ್ರೀಲಂಕಾ ತಲುಪಿರುವ ಯುವ ಆಟಗಾರರಿಂದ ತುಂಬಿರುವ ಭಾರತ ತಂಡ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ. ಈಗ ಅವರು ಮೂರು ಪಂದ್ಯಗಳ ಟಿ 20 ಸರಣಿಯಲ್ಲಿ ಶ್ರೀಲಂಕಾ ವಿರುದ್ಧ ಸೆಣಸಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಆಯ್ಕೆದಾರರು ಇನ್ನೂ ಎರಡು ತಂಡಗಳನ್ನು ಆಯ್ಕೆ ಮಾಡಬಹುದು, ಮತ್ತು ಈ ತಂಡಗಳು ವಿಶ್ವದ ಯಾವುದೇ ಪಂದ್ಯಾವಳಿಯನ್ನು ಗೆಲ್ಲುವ ಸಾಮಥ್ಯ್ರವನ್ನು ಹೊಂದಿವೆ ಎಂಬ ಹೇಳಿಕೆ ನೀಡಿದ್ದಾರೆ.

ಶ್ರೀಲಂಕಾಕ್ಕೆ ಭೇಟಿ ನೀಡಿದ ತಂಡದ ಕೆಲವೇ ಅನುಭವಿ ಆಟಗಾರರಲ್ಲಿ ಪಾಂಡ್ಯ ಕೂಡ ಒಬ್ಬರಾಗಿದ್ದಾರೆ. ಟೀಮ್ ಇಂಡಿಯಾದ ಸಾಮರ್ಥ್ಯದ ಬಗ್ಗೆ ಮಾತನಾಡಿದ ಪಾಂಡ್ಯ, ಅದ್ಭುತ ಯುವ ಕ್ರಿಕೆಟಿಗರನ್ನು ಎತ್ತೇಚ್ಚವಾಗಿ ಹೊಂದಿರುವುದರಿಂದ ರಾಷ್ಟ್ರೀಯ ತಂಡವು ಈಗ ಗಳಿಸಿರುವ ಹೆಸರನ್ನು ಎಂದಿಗೂ ಕಳೆದುಕೊಳ್ಳದಂತೆ ನೋಡಿಕೊಳ್ಳುತ್ತದೆ ಎಂದು ಹೇಳಿದರು.

ಆಯ್ಕೆದಾರರು ಇನ್ನೂ ಎರಡು ತಂಡಗಳನ್ನು ಆಯ್ಕೆ ಮಾಡಬಹುದು ವಿಶ್ವದ ಯಾವುದೇ ಪಂದ್ಯಾವಳಿಯನ್ನು ಗೆಲ್ಲಬಲ್ಲ ಎರಡು ಸ್ಪರ್ಧಾತ್ಮಕ ಅಂತರರಾಷ್ಟ್ರೀಯ ತಂಡಗಳನ್ನು ಆಯ್ಕೆದಾರರು ಆಯ್ಕೆ ಮಾಡಬಹುದು ಎಂದು ಬರೋಡಾ ಕ್ರಿಕೆಟಿಗ ಹೇಳಿಕೊಂಡಿದ್ದಾರೆ. ಆದರೆ, ಶ್ರೀಲಂಕಾ ಪ್ರವಾಸವು ಇಲ್ಲಿಯವರೆಗೆ ಹಾರ್ದಿಕ್‌ಗೆ ಲಾಭ ತಂದುಕೊಟ್ಟಿಲ್ಲ. ಇದೀಗ ಭಾರತ ತಂಡವು ಹೊಂದಿರುವ ಯುವ ಪ್ರತಿಭೆಗಳನ್ನು ಗಮನಿಸಿದರೆ, ನಾವು ಇನ್ನೂ ಎರಡು ತಂಡಗಳನ್ನು ಆಯ್ಕೆ ಮಾಡಬಹುದಾಗಿದೆ. ಜೊತೆಗೆ ವಿಶ್ವದ ಯಾವುದೇ ಮೂಲೆಯಲ್ಲಿ ನಡೆಯುವ ಸ್ಪರ್ಧೆಯನ್ನು ಗೆಲ್ಲುವ ಸಾಮಥ್ಯ್ರವನ್ನು ಹೊಂದಿದೆ ಎಂದಿದ್ದಾರೆ.

ಇದು ಬಿ ತಂಡ ಎಂದಿದ್ದ ರಣತುಂಗ ಶಿಖರ್ ಧವನ್ ಅವರ ನೇತೃತ್ವದಲ್ಲಿ ಯುವಜನರ ಮೆಚ್ಚುಗೆ ಪಡೆದ ಭಾರತೀಯ ತಂಡ ಶ್ರೀಲಂಕಾ ತಲುಪಿದಾಗ, ಶ್ರೀಲಂಕಾದ ಮಾಜಿ ನಾಯಕ ಅರ್ಜುನ ರಣತುಂಗ ಮಾತನಾಡಿ, ಸೀಮಿತ ಓವರ್‌ಗಳ ಸರಣಿಗೆ ಎರಡನೇ ದರ್ಜೆಯ ಭಾರತೀಯ ತಂಡವನ್ನು ಆತಿಥ್ಯ ವಹಿಸುವುದು ನಮಗೆ ಅವಮಾನ ಮಾಡಿದಂತೆ ಎಂದಿದ್ದರು. ಇದಾದ ನಂತರ ಅದೇ ತಂಡ ಏಕದಿನ ಸರಣಿಯಲ್ಲಿ ಶ್ರೀಲಂಕಾ ವಿರುದ್ಧ ಜಯಭೇರಿ ಸಾಧಿಸಿತ್ತು.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?