AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಗಂಗೂಲಿ ಮಾತು ಮೀರಿದ್ರಾ ಪಾಂಡ್ಯ: ರಣಜಿ ಕ್ರಿಕೆಟ್​ನಿಂದ ದೂರ ಉಳಿದ ಹಾರ್ದಿಕ್

Hardik Pandya: 28ರ ಹರೆಯದ ಹಾರ್ದಿಕ್ ಪಾಂಡ್ಯ ಸಂಪೂರ್ಣ ಫಿಟ್ ಆಗಿಲ್ಲದ ಕಾರಣ ಬೌಲಿಂಗ್ ನಿಂದ ದೂರ ಉಳಿದಿದ್ದಾರೆ. ಟಿ20 ವಿಶ್ವಕಪ್‌ನಲ್ಲೂ ಅವರು ಆರಂಭಿಕ ಪಂದ್ಯಗಳಲ್ಲಿ ಬೌಲಿಂಗ್ ಮಾಡಿರಲಿಲ್ಲ.

Hardik Pandya: ಗಂಗೂಲಿ ಮಾತು ಮೀರಿದ್ರಾ ಪಾಂಡ್ಯ: ರಣಜಿ ಕ್ರಿಕೆಟ್​ನಿಂದ ದೂರ ಉಳಿದ ಹಾರ್ದಿಕ್
Hardik Pandya
TV9 Web
| Edited By: |

Updated on: Feb 07, 2022 | 3:11 PM

Share

ಹಾರ್ದಿಕ್ ಪಾಂಡ್ಯ 2022 ರ ರಣಜಿ ಟ್ರೋಫಿಯಲ್ಲಿ ಆಡದಿರಲು ನಿರ್ಧರಿಸಿದ್ದಾರೆ . ಫೆಬ್ರವರಿ 10ರಿಂದ ಆರಂಭವಾಗಲಿರುವ ಈ ಟೂರ್ನಿಗೆ ಪ್ರಕಟಿಸಲಾಗಿರುವ ಬರೋಡಾ ತಂಡದಲ್ಲಿ ಅವರ ಹೆಸರಿಲ್ಲ. ಬರೋಡಾ ಕ್ರಿಕೆಟ್ ಸಂಸ್ಥೆ ರಣಜಿ ಟ್ರೋಫಿಗೆ 20 ಮಂದಿಯ ತಂಡವನ್ನು ಪ್ರಕಟಿಸಿದೆ. ಬರೋಡಾ ರಣಜಿ ತಂಡದ ನಾಯಕರಾಗಿ ಕೇದಾರ್ ದೇವಧರ್ ಅವರನ್ನು ನೇಮಿಸಲಾಗಿದೆ. ಹಾಗೆಯೇ ತಂಡದ ಉಪನಾಯಕನಾಗಿ ವಿಷ್ಣು ಸೋಲಂಕಿ ಅವರನ್ನು ಆಯ್ಕೆ ಮಾಡಲಾಗಿದೆ. ಹಾರ್ದಿಕ್ ಪಾಂಡ್ಯ ಬಹಳ ದಿನಗಳಿಂದ ಭಾರತ ತಂಡದಿಂದ ಹೊರಗುಳಿದಿದ್ದರು . ಟಿ20 ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ಟೀಮ್ ಇಂಡಿಯಾದ ಭಾಗವಾಗಿದ್ದರು. ಇದಾದ ಬಳಿಕ ಬೆನ್ನುನೋವು ಹಾಗೂ ಫಿಟ್‌ನೆಸ್‌ನಿಂದಾಗಿ ಆಯ್ಕೆಯಿಂದ ದೂರ ಉಳಿದಿದ್ದರು.

ಈ ಹಿಂದೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಹಾರ್ದಿಕ್ ಪಾಂಡ್ಯ ರಣಜಿ ಟ್ರೋಫಿಯಲ್ಲಿ ಆಡುವ ನಿರೀಕ್ಷೆಯಿದೆ ಎಂದು ಹೇಳಿದ್ದರು. ಗಂಗೂಲಿ ಅವರು, ‘ಹಾರ್ದಿಕ್ ಗಾಯಗೊಂಡಿದ್ದು, ಸಂಪೂರ್ಣ ಚೇತರಿಸಿಕೊಳ್ಳಲು ಅವರಿಗೆ ವಿರಾಮ ನೀಡಲಾಗಿದೆ. ಇದರಿಂದಾಗಿ ಅವರು ದೀರ್ಘಕಾಲದವರೆಗೆ ಭಾರತೀಯ ಕ್ರಿಕೆಟ್‌ಗೆ ಸೇವೆ ಸಲ್ಲಿಸಬಹುದು. ನಾನು ಅವರನ್ನು ರಣಜಿ ಟ್ರೋಫಿಯಲ್ಲಿ ನೋಡುತ್ತೇನೆ ಎಂದು ನನಗೆ ಖಾತ್ರಿಯಿದೆ. ಅವರು ಪರಿಪೂರ್ಣ ಆಲ್​ರೌಂಡರ್ ಆಗಿ ಕಂಬ್ಯಾಕ್ ಮಾಡಲಿದ್ದಾರೆ ಎಂದು ಗಂಗೂಲಿ ಹೇಳಿದ್ದರು. ಆದರೆ ಇದೀಗ ಬರೋಡಾ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಹೆಸರಿಲ್ಲದಿರುವುದು ಅಚ್ಚರಿಗೆ ಕಾರಣವಾಗಿದೆ.

ಐಪಿಎಲ್​ನತ್ತ ಫುಲ್ ಫೋಕಸ್: 28ರ ಹರೆಯದ ಹಾರ್ದಿಕ್ ಪಾಂಡ್ಯ ಸಂಪೂರ್ಣ ಫಿಟ್ ಆಗಿಲ್ಲದ ಕಾರಣ ಬೌಲಿಂಗ್ ನಿಂದ ದೂರ ಉಳಿದಿದ್ದಾರೆ. ಟಿ20 ವಿಶ್ವಕಪ್‌ನಲ್ಲೂ ಅವರು ಆರಂಭಿಕ ಪಂದ್ಯಗಳಲ್ಲಿ ಬೌಲಿಂಗ್ ಮಾಡಲಿಲ್ಲ. ಇದರಿಂದಾಗಿ ಅವರ ಆಯ್ಕೆ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಇದರ ಬೆನ್ನಲ್ಲೇ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು. ಇದೀಗ ಐಪಿಎಲ್ ಮೂಲಕ ಹಾರ್ದಿಕ್ ಪಾಂಡ್ಯ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುವ ಇಂಗಿತದಲ್ಲಿದ್ದಾರೆ. ಅಹಮದಾಬಾದ್ ತಂಡದ ನಾಯಕರಾಗಿ ಆಯ್ಕೆಯಾಗಿರುವ ಪಾಂಡ್ಯ ಈ ಮೂಲಕ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ. ಇದಕ್ಕಾಗಿ ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಬರೋಡಾ ತಂಡ ಇಂತಿದೆ ಕೇದಾರ್ ದೇವಧರ್ (ನಾಯಕ), ವಿಷ್ಣು ವಿನೋದ್, ಪ್ರತ್ಯೂಷ್ ಕುಮಾರ್, ಶಿವಾಲಿಕ್ ಶರ್ಮಾ, ಕೃನಾಲ್ ಪಾಂಡ್ಯ, ಅಭಿಮನ್ಯು ಸಿಂಗ್ ರಜಪೂತ್, ಧ್ರುವ ಪಟೇಲ್, ಮಿತೇಶ್ ಪಟೇಲ್, ಲುಕ್ಮಾನ್ ಮೇರಿವಾಲಾ, ಬಾಬಾ ಸಫೀ ಖಾನ್ ಪಠಾಣ್ (ವಿಕೆಟ್ ಕೀಪರ್), ಅತಿತ್ ಶೇಠ್, ಭಾರ್ಗವ ಭಟ್, ಪಾರ್ಥ್ ಕೊಹ್ಲಿ, ಶಾಶ್ವತ್ ರಾವತ್, ಶಾಶ್ವತ್ ರಾವತ್ ಸೊಪಾರಿಯಾ, ಕಾರ್ತಿಕ್ ಕಾಕಡೆ, ಗುರ್ಜಿಂದರ್ ಸಿಂಗ್ ಮಾನ್, ಜ್ಯೋತಿಸ್ನಿಲ್ ಸಿಂಗ್, ನಿನಾದ್ ರಥ್ವಾ ಮತ್ತು ಅಕ್ಷಯ್ ಮೋರೆ.

ಇದನ್ನೂ ಓದಿ: Yuzvendra Chahal: ವಿಕೆಟ್​ಗಳ ಶತಕ ಪೂರೈಸಿದ ಚಹಾಲ್

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!

(Hardik Pandya skips Ranji Trpohy 2022 ahead of IPL)

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು