AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಹಾರ್ದಿಕ್ ಆಲ್ರೌಂಡ್ ಪ್ರದರ್ಶನಕ್ಕೆ ಬೆಚ್ಚಿಬಿದ್ದ ಇಂಗ್ಲೆಂಡ್: ಭಾರತಕ್ಕೆ 50 ರನ್​ಗಳ ಅಮೋಘ ಜಯ

ENG vs IND 1st T20I: ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ಕಂಡಿದೆ. ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಪ್ರದರ್ಶನಕ್ಕೆ ತಬ್ಬಿಬ್ಬಾದ ಆಂಗ್ಲರು ಟೀಮ್ ಇಂಡಿಯಾ ನೀಡಿದ್ದ ಟಾರ್ಗೆಟ್ ಬೆನ್ನಟ್ಟಲು ಸಾಧ್ಯವಾಗದೆ ಸೋಲಿಗೆ ಶರಣಾಗಿದ್ದಾರೆ.

IND vs ENG: ಹಾರ್ದಿಕ್ ಆಲ್ರೌಂಡ್ ಪ್ರದರ್ಶನಕ್ಕೆ ಬೆಚ್ಚಿಬಿದ್ದ ಇಂಗ್ಲೆಂಡ್: ಭಾರತಕ್ಕೆ 50 ರನ್​ಗಳ ಅಮೋಘ ಜಯ
Hardik Pandya IND vs ENG T20
TV9 Web
| Updated By: Vinay Bhat|

Updated on:Jul 08, 2022 | 7:19 AM

Share

ಸೌಥ್‌ಹ್ಯಾಮ್ಟನ್‌ನ ರೋಸ್‌ ಬೌಲ್‌ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ (India vs England) ತಂಡ ಭರ್ಜರಿ ಗೆಲುವು ಕಂಡಿದೆ. ಹಾರ್ದಿಕ್ ಪಾಂಡ್ಯ (Hardik Pandya) ಅವರ ಆಲ್ರೌಂಡ್ ಪ್ರದರ್ಶನಕ್ಕೆ ತಬ್ಬಿಬ್ಬಾದ ಆಂಗ್ಲರು ಟೀಮ್ ಇಂಡಿಯಾ ನೀಡಿದ್ದ ಟಾರ್ಗೆಟ್ ಬೆನ್ನಟ್ಟಲು ಸಾಧ್ಯವಾಗದೆ ಸೋಲಿಗೆ ಶರಣಾಗಿದ್ದಾರೆ. 50 ರನ್​ಗಳ ಅಮೋಘ ಗೆಲುವಿನೊಂದಿಗೆ ರೋಹಿತ್ ಶರ್ಮಾ ಬಳಗ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಬ್ಯಾಟಿಂಗ್​ನಲ್ಲಿ ಆಕರ್ಷಕ ಅರ್ಧಶತಕ ಗಳಿಸಿ ತಂಡಕ್ಕೆ ಆಧಾರವಾಗುವ ಜೊತೆಗೆ 4 ಓವರ್ ಬೌಲಿಂಗ್ ಮಾಡಿ 33 ರನ್ ನೀಡಿ 4 ವಿಕೆಟ್ ಕಿತ್ತ ಹಾರ್ದಿಕ್ ಭಾರತದ ಗೆಲುವಿನಲ್ಲಿ ಮುಖ್ಯ ಪಾತ್ರವಾಹಿಸಿದರು. ಇದಕ್ಕಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ಬಾಜಿಕೊಂಡರು. ಇವರ ಜೊತೆಗೆ ಪದಾರ್ಪಣೆ ಪಂದ್ಯದಲ್ಲಿ ಆರ್ಶ್​​ದೀಪ್ ಸಿಂಗ್ (Arshdeep Singh) 2 ವಿಕೆಟ್ ಪಡೆದು ಭರವಸೆ ಮೂಡಿಸಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಬಿರುಸಿನ ಆರಂಭ ಪಡೆದಿದ್ದ ರೋಹಿತ್‌ ಶರ್ಮಾ ಆಟ ಹೆಚ್ಚುಹೊತ್ತು ನಡೆಯಲಿಲ್ಲ. ಮೊಯೀನ್‌ ಅಲಿ ಬೌಲಿಂಗ್‌ನಲ್ಲಿ 24 ರನ್ ಗಳಿಸಿದ್ದಾಗ ಬಟ್ಲರ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. ತಮ್ಮ ಮುಂದಿನ ಓವರ್‌ನಲ್ಲಿ ಅಲಿ, 8 ರನ್ ಗಳಿಸಿದ್ದ ಇಶಾನ್‌ ವಿಕೆಟ್‌ ಕೂಡ ಪಡೆದರು. ಈ ವೇಳೆ ಜತೆಯಾದ ದೀಪಕ್ ಹೂಡಾ ಮತ್ತು ಸೂರ್ಯಕುಮಾರ್‌ ಯಾದವ್, ಎದುರಾಳಿ ಬೌಲರ್‌ಗಳಿಗೆ ಮೇಲುಗೈ ಸಾಧಿಸಲು ಅವಕಾಶ ನೀಡಲಿಲ್ಲ.

Wimbledon 2022: ಜರ್ಮನಿಯ ಮರಿಯಾರನ್ನು ಮಣಿಸಿ ಚೊಚ್ಚಲ ಗ್ರ್ಯಾಂಡ್ ​ಸ್ಲ್ಯಾಮ್ ಫೈನಲ್ ಪ್ರವೇಶಿಸಿದ ಓನ್ಸ್ ಜಬೇರ್..!

ಇದನ್ನೂ ಓದಿ
Image
IND vs ENG: ಇಂಗ್ಲೆಂಡ ತಂಡವನ್ನು ಕಾಡುತ್ತಿವೆ ಕ್ಯಾಪ್ಟನ್ ರೋಹಿತ್ ಶರ್ಮಾ ದಾಖಲೆಗಳು..!
Image
IND vs SL: 3ನೇ ಏಕದಿನ ಪಂದ್ಯದಲ್ಲೂ ಲಂಕಾಗೆ ಸೋಲು; ಸರಣಿ​ ಕ್ಲೀನ್ ಸ್ವೀಪ್ ಮಾಡಿದ ಭಾರತ ವನಿತಾ ತಂಡ
Image
Happy Birthday MS Dhoni: ಕ್ಲಾಸಿಗೆ ಚಕ್ಕರ್ ಆಟಕ್ಕೆ ಹಾಜರ್; ಧೋನಿ ಸ್ಟಡೀಸ್​ನಲ್ಲಿ ಹೇಗಿದ್ದರು ಗೊತ್ತಾ?
Image
Happy Birthday MS Dhoni: ಬರ್ತ್​ಡೇ ಬಾಯ್ ಧೋನಿ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ 8 ಪ್ರಮುಖ ಸಂಗತಿಗಳು

ಇವರಿಬ್ಬರು ತಂಡದ ಮೊತ್ತವನ್ನು 100ರ ಅಂಚಿಗೆ ತಂದಿಟ್ಟರು. ಭರ್ಜರಿ ಫಾರ್ಮ್​​ನಲ್ಲಿದ್ದ ಹೂಡಾ ಕೇವಲ 17 ಎಸೆತಗಳಲ್ಲಿ 33 ರನ್ ಸಿಡಿಸಿ ಔಟಾದ ಬಳಿಕ ಬಂದ ಹಾರ್ದಿಕ್ ಪಾಂಡ್ಯ ಆಕ್ರಮಣಕಾರಿ ಆಟವಾಡಿದರು. ಸೂರ್ಯಕುಮಾರ್‌ ಜತೆ ನಾಲ್ಕನೇ ವಿಕೆಟ್‌ಗೆ 37 ರನ್‌ ಹಾಗೂ ಐದನೇ ವಿಕೆಟ್‌ಗೆ ಅಕ್ಷರ್‌ ಪಟೇಲ್‌ ಜತೆ 45 ರನ್‌ಗಳ ಜತೆಯಾಟ ನೀಡಿದರು. ಸೂರ್ಯ 19 ಎಸೆತಗಳಲ್ಲಿ 39 ರನ್ ಗಳಿಸಿದರು. ಅಕ್ಷರ್ 17 ಹಾಗೂ ದಿನೇಶ್ ಕಾರ್ತಿಕ್ 11 ರನ್​ಗೆ ಔಟಾದರು.

ಇದರ ನಡುವೆ ಸ್ಫೋಟಕ ಆಟವಾಡಿದ ಹಾರ್ದಿಕ್ ಪಾಂಡ್ಯ 33 ಎಸೆತಗಳಲ್ಲಿ 6 ಫೋರ್ ಹಾಗೂ 1 ಸಿಕ್ಸರ್ ಸಿಡಿಸಿ 51 ರನ್ ಚಚ್ಚಿ ನಿರ್ಗಮಿಸಿದರು. ಆದರೆ, ಕೊನೆಯ ಮೂರು ಓವರ್‌ಗಳಲ್ಲಿ ಭಾರತ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ. 18 ಎಸೆತಗಳಲ್ಲಿ 20 ರನ್‌ ಮಾತ್ರ ಗಳಿಸಿತು. ಇದರಿಂದ ಸ್ಕೋರ್‌ 200ರ ಗಡಿ ದಾಟಲಿಲ್ಲ. ಅಂತಿಮವಾಗಿ ಭಾರತ 20 ಓವರ್​ಗೆ 8 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿತು. ಇಂಗ್ಲೆಂಡ್ ಪರ ಕ್ರಿಸ್ ಜೋರ್ಡನ್ ಹಾಗೂ ಮೊಯೀನ್ ಅಲಿ ತಲಾ 2 ವಿಕೆಟ್ ಪಡೆದರು.

ದೊಡ್ಡ ಟಾರ್ಗೆಟ್ ಬೆನ್ನಟ್ಟಿದ ಇಂಗ್ಲೆಂಡ್ ಆರಂಭದಿಂದಲೇ ವೈಫಲ್ಯ ಅನುಭವಿಸಿತು. 50 ರನ್​ಗು ಮೊದಲೇ 4 ಮುಖ್ಯ ವಿಕೆಟ್ ಕಳೆದುಕೊಂಡಿತು. ಹಾರ್ದಿಕ್ ಹಾಗೂ ಭುವನೇಶ್ವರ್ ಕುಮಾರ್ ಇಂಗ್ಲೆಂಡ್ ಆರಂಭಿಕರ ಮೇಲೆ ದಾಳಿ ಮಾಡಿದರು. ನಾಯಕ ಜೋಸ್ ಬಟ್ಲರ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಸೊನ್ನೆ ಸುತ್ತಿದರೆ, ಜೇಸನ್ ರಾಯ್ 4 ಮತ್ತು ಡೇವಿಡ್ ಮಲನ್ 21 ರನ್​ಗೆ ಔಟಾದರು. ಈ ಸಂದರ್ಭ ಜೊತೆಯಾದ ಹ್ಯಾರಿ ಬ್ರೂಕ್ (28) ಹಾಗೂ ಮೊಯೀನ್ ಅಲಿ (36) ಭರವಸೆ ಮೂಡಿಸಿದರೂ ಚಹಾಲ್ ಸ್ಪಿನ್ ಮೋಡಿಗೆ ಬಲಿಯಾಗಿ ಇಂಗ್ಲೆಂಡ್ ಸೋಲು ಖಚಿತವಾಯಿತು.

ಕೊನೆಯಲ್ಲಿ ಕ್ರಿಸ್ ಜೋರ್ಡನ್ ಅಜೇಯ 26 ರನ್ ಗಳಿಸಿದರೂ ಯಾವುದೆ ಪ್ರಯೋಜನ ಆಗಲಿಲ್ಲ. ಇಂಗ್ಲೆಂಡ್ 19.3 ಓವರ್​​ನಲ್ಲಿ 148 ರನ್​ಗೆ ಆಲೌಟ್ ಆಯಿತು. ಭಾರತ ಪರ ಹಾರ್ದಿಕ್ 4 ವಿಕೆಟ್ ಕಿತ್ತರೆ, ಅರ್ಶ್​​ದೀಪ್ ಹಾಗೂ ಚಹಾಲ್ ತಲಾ 2 ಮತ್ತು ಭುವನೇಶ್ವರ್, ಹರ್ಷಲ್ ಪಟೇಲ್ 1 ವಿಕೆಟ್ ಪಡೆದರು. ದ್ವಿತೀಯ ಟಿ20 ಪಂದ್ಯ ಜುಲೈ 9 ರಂದು ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯಲಿದೆ.

ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ನಲ್ಲಿ ಟೀಂ ಇಂಡಿಯಾದ ಕಳಪೆ ಪ್ರದರ್ಶನ; ಕೋಚ್ ದ್ರಾವಿಡ್‌ಗೆ ಹೆಚ್ಚಿದ ಆತಂಕ

Published On - 7:19 am, Fri, 8 July 22

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ